ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ.?: ಸಿಎಂ ವ್ಯಂಗ್ಯ

ಬೆಂಗಳೂರು: ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ: ಸಿ.ಎಂ.ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.

ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ‌ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

ಈಗ ಊಹಾ ಪತ್ರಿಕೋದ್ಯಮದ ಪಿಡುಗು ಹೆಚ್ಚಾಗಿದೆ. ಈ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ ಎಂದು ಪ್ರಶ್ನಿಸಿದರು.

ಅವರು ಹಿಂಗೆ ಹೇಳಿದ್ರು, ನೀವೇನು ಹೇಳ್ತೀರಾ?” ಅಂತ ಮುಖಕ್ಕೆ ಮೈ ಹಿಡಿಯೋದೇ ಇವತ್ತಿನ ಪತ್ರಿಕೋದ್ಯಮ ಆಗಿಬಿಟ್ಟಿದೆ. ಇದು ಯಾವ ರೀತಿ ಪತ್ರಿಕೋದ್ಯಮ‌ ನನಗಂತೂ ಅರ್ಥ ಆಗ್ತಾ ಇಲ್ಲ ಎಂದರು.

ಹಿಂದೆಲ್ಲಾ ಪತ್ರಕರ್ತರಿಗೆ ತುಂಬಾ ಘನತೆ ಗೌರವ ಇತ್ತು. ಈಗ ಇದೆಯಾ ಗೊತ್ತಿಲ್ಲ. ಈ ಬಗ್ಗೆ ವಿಶ್ಲೇಷಣೆ ಮಾಡಿದರೆ ಅದನ್ನೇ ದೊಡ್ಡ ವಿವಾದ ಮಾಡಿಬಿಡ್ತಾರೆ. ಹೀಗಾಗಿ ಈ ಊಹಾ ಪತ್ರಿಕೋದ್ಯಮದ ಬಗ್ಗೆ ಹೆಚ್ಚೇನೂ ಹೇಳಲ್ಲ ಎಂದರು.

ಇದನ್ನೂ ಓದಿ: ಭೂ ಚಕ್ರದ ಸುಳಿಯಲ್ಲಿ ಆರ್ ಅಶೋಕ..?: ದಾಖಲೆ ಸಮೇತ ವಾಗ್ದಾಳಿ ನಡೆಸಿದ ಸಚಿವರು

ಗೋಡ್ಸೆಗಳನ್ನು ನಾವು ಸಹಿಸಬಾರದು. ಗಾಂಧಿಯ ಬಗ್ಗೆ ಸುಳ್ಳು ಪ್ರಚಾರ ಮಾಡಿ ಗೋಡ್ಸೆಯಂಥಾ ಖಳನಾಯಕರನ್ನು ಪೂಜಿಸುವ ದುಷ್ಟ ಶಕ್ತಿಗಳನ್ನು ನಾವು ಸೋಲಿಸಬೇಕಿದೆ ಎಂದರು.

ನಾನು ಮೊದಲ ಬಾರಿ ಮುಖ್ಯಮಂತ್ರಿ ಆದ ಬಳಿಕ 2014 ರಲ್ಲಿ ಮಹಾತ್ಮಗಾಂಧಿ ಸೇವಾ ಪ್ರಶಸ್ತಿಯನ್ನು ಆರಂಭಿಸಿದೆ. ಗಾಂಧಿ ತತ್ವಗಳನ್ನು ಅನುಸರಿಸುತ್ತಾ, ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯ ಕಲಿಸುತ್ತಿರುವ ಅತ್ಯಂತ ಅರ್ಹರು ಈ ಬಾರಿಯ ಗಾಂಧಿ ಸೇವಾ ಪ್ರಶಸ್ತಿ ಪಡೆದಿದ್ದಾರೆ ಎಂದು ಶ್ಲಾಘಿಸಿದರು.

ಶಿಕ್ಷಣ ಪಡೆದವರೆಲ್ಲಾ ಮಾನವೀಯತೆ ಇರುವವರು ಎಂದು ಹೇಳಲಾಗುವುದಿಲ್ಲ. ಶಿಕ್ಷಣ ಮನುಷ್ಯರನ್ನು ಮಾನವೀಯಗೊಳಿಸಬೇಕು. ಇಲ್ಲದಿದ್ದರೆ ಅಂತಹ ಶಿಕ್ಷಣಕ್ಕೆ ಮೌಲ್ಯ ಇರುವುದಿಲ್ಲ ಎಂದರು.

ಶಿಕ್ಚಣ ಪಡೆದವರು ಸಮಾಜದ ಆಸ್ತಿ ಆಗಬೇಕು. ಸಮಾಜದ ವಿರೋಧಿ ಆಗಬಾರದು. ಗಾಂಧೀಜಿ ಅವರ ಬದುಕೇ ಸಂದೇಶವಾಗಿತ್ತು. ಸಮಾಜದ ಬದಲಾವಣೆಗಾಗಿ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು. ಹೀಗಾಗಿ ಇವರ ವಿಚಾರಗಳು ಎಂದೆಂದಿಗೂ ಶಾಶ್ವತ ಎಂದರು.

ಗಾಂಧಿಯವರನ್ನು ದೈಹಿಕವಾಗಿ ಕೊಲ್ಲಬಹುದು. ಆದರೆ ಅವರ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲ.

ನಾವು ಗೋಡ್ಸೆ ಭಾರತವನ್ನು ನಿರ್ಮಿಸಲು ಹೊರಟಿರುವವರನ್ನು ಸೋಲಿಸಬೇಕು. ನಾವು ಗಾಂಧಿ ಭಾರತವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಕರೆ ನೀಡಿದರು.

ಟೀಯೆಸ್ಸಾರ್ ಮತ್ತು ಮೊಹರೆ ಹಣಮಂತರಾಯ ಪ್ರಶಸ್ತಿ ಪುರಸ್ಕೃತರು ಇವತ್ತಿನ ಪತ್ರಕರ್ತರಿಗೆ ಮಾದರಿ ಆಗಬೇಕು ಎಂದು ಆಶಿಸಿದರು.

ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನುಂ, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲಾ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾರ್ಯದರ್ಶಿ ತ್ರಿಲೋಕಚಂದ್ರ, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಕಂಠೀರವ ಸ್ಟುಡಿಯೊ ಅಧ್ಯಕ್ಷರಾದ ಅಯೂಬ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]