ದಸರಾ ಉತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ

ಮೈಸೂರು; ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಇಂದು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು.

ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಇಂದು ಬೆಳಗ್ಗೆ 9.15 ರಿಂದ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುವುದು.

ನಾಡೋಜ, ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ ಅವರು ಈ ಬಾರಿಯ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಸೇರಿದಂತೆ ಹಲವು ಗಣ್ಯರು, ರಾಜಕಾರಣಿಗಳು ಉಪಸ್ಥಿತರಿರಲಿದ್ದಾರೆ.

ಅದೇ ದಿನ ಸಂಜೆ 6ಕ್ಕೆ ಮೈಸೂರು ಅರಮನೆ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು, ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಪ್ರಧಾನ ಉದ್ಘಾಟನಾ ಸಮಾರಂಭದ ನಂತರ ಚಲನಚಿತ್ರೋತ್ಸವ, ಆಹಾರಮೇಳ, ವಸ್ತು ಪ್ರದರ್ಶನ, ಕುಸ್ತಿ ಪಂದ್ಯಾವಳಿ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು.

ಅ.12ರಂದು ವಿಜಯದಶಮಿ ಕಾರ್ಯಕ್ರಮ ನಡೆಯಲಿದ್ದು, ಆ ದಿನ ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂ ಸವಾರಿ ನಡೆಯಲಿದೆ. ಹಾಗೆಯೇ ಸಂಜೆ 7ಕ್ಕೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತು ಮೆರವಣಿಗೆಯನ್ನು ಆಯೋಜಿಸಲಾಗಿದೆ.

ಅ.3 ರಿಂದ 12ರವರೆಗೆ ನಡೆಯುವ ದಸರಾ ಮಹೋತ್ಸವಕ್ಕೆ ವ್ಯಾಪಕ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಟ್ಕ‌ರ್ ಅವರು ತಿಳಿಸಿದ್ದಾರೆ. ಒಂಬತ್ತು ದಿನಗಳ ಕಾಲ ನಡೆಯಲಿರುವ ನವರಾತ್ರಿ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಈ ಬಾರಿ 5000ಕ್ಕೂ ಹೆಚ್ಚು ಪೊಲೀಸರನ್ನು ದಸರಾ ವಿಶೇಷ ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.

13,670 ಸಿಸಿ ಕ್ಯಾಮೆರಾ ಕಣ್ಣಾವಲನ್ನು ಮೈಸೂರಿನಾದ್ಯಂತ ಅಳವಡಿಸಲಾಗಿದ್ದು, ಪೊಲೀಸ್ ಸಹಾಯ ಕೇಂದ್ರಗಳನ್ನು ಪ್ರಮುಖ ಸ್ಥಳಗಳಲ್ಲಿ ತೆರೆಯಲಾಗಿದೆ. ಹಾಗೆಯೇ ಪ್ರಮುಖ ಸ್ಥಳಗಳಲ್ಲಿ ವಾಚ್ ಟವರ್‌ಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಮಹಿಳೆಯರ ರಕ್ಷಣೆಗಾಗಿಯೇ ಚಾಮುಂಡಿ ಕಾರ್ಯ ಪಡೆಯನ್ನು ಸಹ ದಸರಾ ಸಂದರ್ಭದಲ್ಲಿ ಆಯೋಜಿಸಲಾಗಿದೆ ಎಂದರು. ದಸರಾ ಮಹೋತ್ಸವದ 2 ಅಂಗವಾಗಿ ಅ. 3ರಿಂದ 12ರವರೆಗೆ ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಅರಮನೆಯಲ್ಲಿ ನವರಾತ್ರಿ ವೇಳೆಯಲ್ಲಿ ಯದು ವಂಶಸ್ಥರಾದ ಯದುವೀರ್ ಅವರು ಖಾಸಗಿ ದರ್ಬಾರನ್ನು ನಡೆಸಲಿದ್ದಾರೆ. ಸಂಸದರಾದ ಬಳಿಕ ಇದೇ ಮೊದಲ ಬಾರಿಗೆ ಯದುವೀರ್ ಅವರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಖಾಸಗಿ ದರ್ಬಾರನ್ನು ನಡೆಸುತ್ತಿದ್ದಾರೆ. (ಸಂಗ್ರಹ ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!