Darshan ಪರ ಸಿವಿ ನಾಗೇಶ್ ಅವರ ಪ್ರಬಲ ವಾದಕ್ಕೆ ಕೆಲ ಖಾಸಗಿ ಸುದ್ದಿ ವಾಹಿನಿಗಳು ಶಾಕ್..!

ಬೆಂಗಳೂರು: ಅಶ್ಲೀಲ ಸಂದೇಶ ಕಳಸಿದ ಕಾರಣ ವ್ಯಕ್ತಿಯೋರ್ವನ ಹತ್ಯೆ ಆರೋಪದ ಅಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ (Darshan) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯ, ನಾಳೆ (ಶನಿವಾರ) ಮಧ್ಯಾಹ್ನ 12-30ಕ್ಕೆ ಮುಂದೂಡಿ ಆದೇಶಿಸಿದೆ.

ದರ್ಶನ್ ಜಾಮೀನು ಅರ್ಜಿಯ ವಿಚಾರಣೆಯ 57ನೇ ಸಿಸಿಹೆಚ್ ಕೋರ್ಟ್‌ನ ನ್ಯಾ.ಜೈಶಂಕರ್ ಅವರು ದರ್ಶನ್ (Darshan) ಪರ ವಕೀಲರ ವಾದ ಆಲಿಸಿ ಈ ಆದೇಶ ನೀಡಿದ್ದಾರೆ.

ದರ್ಶನ್ (Darshan) ಪರ ಪ್ರಬಲ ವಾದ ಮಂಡಿಸಿದ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರು ದರ್ಶನ್ ಅವರೇ ಕೊಲೆ ಮಾಡಿದ್ದಾರೆ ಎಂಬಂತೆ ಬಿಂಬಿಸಿದವರನ್ನು ತಬ್ಬಿಬ್ಬು ಮಾಡುವಂತೆ ಮಾಧ್ಯಮ ವರದಿ ಆಧಾರ ಮೇಲೆ ಕೋರ್ಟ್ ಆದೇಶ ನೀಡುವುದಿಲ್ಲ ಎಂಬ ನಂಬಿಕೆ ಇದೆ ಎಂಬ ಸುಪ್ರೀಂಕೋರ್ಟ್‌ನ ಎರಡು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಮಾಧ್ಯಮಗಳು ದರ್ಶನ್ (Darshan) ಅವರನ್ನು ದೋಷಿ ಎಂದು ತೀರ್ಪು ನೀಡಿ, ಜೀವಾವಧಿ, ಮರಣದಂಡನೆ ಶಿಕ್ಷೆ ವಿಧಿಸುವುದು ಮಾತ್ರ ಬಾಕಿಯಿದೆ ಎಂದು ದರ್ಶನ್ ಪ್ರಕರಣದಲ್ಲಿ ಕೆಲ ಖಾಸಗಿ ಸುದ್ದಿವಾಹಿನಿಗಳ ಅತಿರೇಕದ ವರ್ತನೆ ಕುರಿತು ನಾಗೇಶ್ ಅವರು ವಿವರಿಸಿದರು.

ಅಲ್ಲದೆ ದೋಷಾರೋಪಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಗೂ ಮುನ್ನವೇ ಕೆಲವು ಅಂಶಗಳು ಸೋರಿಕೆಯಾಗಿವೆ. ಹೀಗಾಗಿ, ಕೋರ್ಟ್ ತನಿಖಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಬೇಕು ಎಂದು ಕೋರಿದ್ದಾರೆ.

ನಾಯಿ ಕಚ್ಚಿದ ಗುರುತು

ಪ್ರಕರಣದ ತನಿಖೆ ಸೂಕ್ತ ರೀತಿಯಲ್ಲಿ ಮಾಡಿಲ್ಲ. ಮೃತ ವ್ಯಕ್ತಿಗೆ ನಾಯಿಗಳು ಕಚ್ಚಿ ಆದ ಗಾಯವನ್ನು ಮಾಧ್ಯಮಗಳು ಹಲ್ಲೆ ಎಂದು ಬಿಂಬಿಸುವ ಕೆಲಸ ಮಾಡಲಾಗಿದೆ. ಪೊಲೀಸರೇ ಸಾಕ್ಷ್ಯಾಗಳನ್ನು ಸೃಷ್ಟಿಸಿದಂತಿದೆ. ಪೊಲೀಸರ ತನಿಖಾ ವರದಿ ಸಾಕಷ್ಟು ಲೋಪಗಳಿಂದ ಕೂಡಿದೆ. ರೇಣುಕಾಸ್ವಾಮಿ ಹತ್ಯೆ ಜೂ.8ರಂದು ನಡೆದಿದ್ದು, ಜೂ.9ರಂದು ಪಟ್ಟಣಗೆರೆ ಶೆಡ್‌ಗೆ ಹೋಗಿದ್ದ ಪೊಲೀಸರು ಅಂದೇ ಅನೇಕ ಸಾಕ್ಷಿಗಳನ್ನು ರಿಕವರಿ ಮಾಡಿದ್ದರು.

ಶೆಡ್ ನಲ್ಲಿ ಹಗ್ಗ ನೀರಿನ ಬಾಟಲ್, ಮರದ ಕೊಂಬೆ, ಲಾಠಿ ರಿಕವರಿ ಮಾಡಿದ್ದಾರೆ. ಜೂ.10ರಂದು ಕೆಲ ಆರೋಪಿ, ಪ್ರತ್ಯಕ್ಷದರ್ಶಿಗಳ ಸ್ವಇಚ್ಚಾ ಹೇಳಿಕೆ ದಾಖಲಿಸಲಾಗಿದೆ. ಜೂ.12ರಂದು ರಿಕವರಿ ಅಂತಾ ಚಾರ್ಜ್ ಶೀಟ್‌ನಲ್ಲಿ ತೋರಿಸಿದ್ದಾರೆ. ತನಿಖೆಯ ಪಂಚನಾಮೆ ಒಂದಕ್ಕೊಂದು ಸಾಮ್ಯತೆ ಇಲ್ಲ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದರು.

ಮೂರು ದಿನಗಳ ಕಾಲ ಪೊಲೀಸರು ಸಾಕ್ಷಿಗಳನ್ನು ಯಾಕೆ..?

ಜೂ.11ರಂದು ದರ್ಶನ್ ಪೊಲೀಸರಿಗೆ ಶರಣಾಗಿದ್ದರು. ಪ್ರತ್ಯಕ್ಷದರ್ಶಿಗಳ ಹೇಳಿಕೆ ಪ್ರಕಾರ, ಪೊಲೀಸರು ಶೆಡ್ ಜೂ.9ರಂದು ಬಂದು ಅಂದೇ ಕೆಲ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದರು ಎಂದು ಶೆಡ್ ಸೆಕ್ಯುರಿಟಿ ಗಾರ್ಡ್ CRPC 164 ಹೇಳಿಕೆಯಲ್ಲಿದೆ. ಅಂದು ಮಧ್ಯಾಹ್ನದ ವರೆಗೆ ಯಾವುದೇ ಬೆಳವಣಿಗೆ ಆಗಿರಲಿಲ್ಲ.

ಇನ್ನು ಆರೋಪಿ ಪ್ರದೇಷ್, ಪಿಎಸ್‌ಐ ವಿನಯ್ ನೊಂದಿಗೆ ವಾಟ್ಸಾಪ್ ಕಾಲ್ ಮಾಡಿ ಮಾತನಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಲಾಟೆ ಆಗಿ ಕೊಲೆ ಆಗಿದೆ ಎಂದಿದ್ದಾರೆ. ಪಿಎಸ್ ಐ ಹೇಳಿಕೆಯಲ್ಲಿ ಜೂ.8 ಅಂತಾ ಮಾಹಿತಿ ಇದೆ.

ಜೂ. 12ರಂದು ರಕ್ತದ ಕಲೆ ಇದ್ದ ವಸ್ತುಗಳನ್ನು ರಿಕವರಿ ಮಾಡಲಾಗಿದೆ ಎಂದು ಚಾರ್ಜ್‌ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಹಾಗಿದ್ದರೆ ಜೂ.8 ರಿಂದ ಜೂ. 12ರವರೆಗೂ ಯಾಕೆ ಪೊಲೀಸರು ಸಾಕ್ಷ್ಯಾಗಳನ್ನು ಸೀಜ್ ಮಾಡಿಲ್ಲ? ಮೂರು ದಿನಗಳ ಕಾಲ ಪೊಲೀಸರು ಸಾಕ್ಷಿಗಳನ್ನು ಯಾಕೆ ಮುಟ್ಟಿರಲಿಲ್ಲ.?

ಇದನ್ನೂ ಓದಿ; ದರ್ಶನ್ ಬಿಟ್ರೆ ನಿಮಗೆ ಹಾಕ್ಲಿಕೆ ಬೇರೆ ಸಬ್ಜೆಕ್ಟ್ ಇಲ್ವಾ..? ಟಿವಿ ಚಾನಲ್ ಬಗ್ಗೆನೇ ಅಸಹ್ಯ ಬರುತ್ತೆ; ಕೆಎಸ್ ಈಶ್ವರಪ್ಪ ಗರಂ402519.jpgದರ್ಶನ್ ಬಿಟ್ರೆ ನಿಮಗೆ ಹಾಕ್ಲಿಕೆ ಬೇರೆ ಸಬ್ಜೆಕ್ಟ್ ಇಲ್ವಾ..? ಟಿವಿ ಚಾನಲ್ ಬಗ್ಗೆನೇ ಅಸಹ್ಯ ಬರುತ್ತೆ; ಕೆಎಸ್ ಈಶ್ವರಪ್ಪ ಗರಂ

ಜೂ.11ರಂದು ದರ್ಶನ್ ಬಂಧನವಾಗಿದೆ. ಜೂ.12ರಂದು ದರ್ಶನ್ ಸ್ವಚ್ಛಾ ಹೇಳಿಕೆಯಂತೆ, ರಕ್ತದ ಕಲೆ ಇರುವ ದರ್ಶನ್ ಚಪ್ಪಲಿಯನ್ನು ರಿಕವರಿ ಮಾಡಲಾಗಿದೆ. ಆದರೆ ಪೊಲೀಸರು ಚಾರ್ಜ್ ಶೀಟ್‌ನಲ್ಲಿ ಶೂ ರಿಕವರಿ ಅಂತಾ ಇದೆ. ಜೂ.14 ಮತ್ತು ಜೂ.15 ರಂದು ರಿಕವರಿ ಮಾಡಲಾಗಿದೆ ಎಂದು ದೋಷಾರೋಪಟ್ಟಿಯಲ್ಲಿದೆ. ಅಲ್ಲಿಯವರೆಗೆ ಪೊಲೀಸರು ಯಾಕೆ ರಿಕವರಿ ಮಾಡಿಲ್ಲ? ಬೆಳಗ್ಗೆ ಸಿಗದಿದ್ದು ಪಂಚನಾಮೆ ವೇಳೆ ಸಿಕ್ಕಿತಂತೆ’ ಎಂದು ಲೇವಡಿ ಮಾಡಿದರು ಸಿವಿ ನಾಗೇಶ್. ದರ್ಶನ್ ಅವರ ಸ್ವಇಚ್ಛಾ ಹೇಳಿಕೆಯನ್ನೇ ಚಾರ್ಜ್‌ ಶೀಟ್‌ನಲ್ಲಿ ಬದಲಾಯಿಸಲಾಗಿದೆ. ತನಿಖೆಯಲ್ಲಿ ಹಂತ-ಹಂತವಾಗಿ ಪೊಲೀಸರ ಲೋಪ ಕಂಡುಬರುತ್ತಿದೆ.

ಪೊಲೀಸರ ಮಾಡಿರುವ ತನಿಖೆಯ ಅಂಶಗಳೆಲ್ಲಾ ಮೀಡಿಯಾಗಳಲ್ಲಿ ಟ್ರಯಲ್ ಆಗಿದೆ. ಮೀಡಿಯಾಗಳಿಗೆ ಹೇಗೆ ಮಾಹಿತಿ ಸೋರಿಕೆಯಾಗಿದೆ. ಕೆಲ ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ಮೀಡಿಯಾಗಳಲ್ಲಿ ಡಿಬೇಟ್ ಮಾಡಲಾಗಿದೆ. ಮೀಡಿಯಾಗಳಲ್ಲಿ ಬರುವ ಮಾಹಿತಿಗಳ ಪ್ರಕಾರ ತನಿಖೆ ಮಾಡಲು ಸಾಧ್ಯವಿಲ್ಲ.

ತನಿಖೆ ನಡೆಸದೇ ಒಂದೇ ದಿನದಲ್ಲಿ ಆರೋಪಿಗಳ ಹೇಳಿಕೆಯನ್ನು ದಾಖಲಿಸಿದ್ದು ಹೇಗೆ? ಪೊಲೀಸರೇ ಎಲ್ಲಾ ಸಾಕ್ಷ್ಯಾಗಳನ್ನು ಸೃಷ್ಟಿಸಿದ್ದಾರೆ. ಪೊಲೀಸರ ಪಂಚನಾಮೆ, ಮಹಜರ್, ಕಲೆ ಹಾಕಿರುವ ಸಾಕ್ಷ್ಯಾಗಳು ದಿನಾಂಕಗಳು ಒಂದೊಂಕ್ಕೊಂದು ತಾಳೆ ಆಗುತ್ತಿಲ್ಲ. ದರ್ಶನ್ ತೊಟ್ಟ ಬಟ್ಟೆಯನ್ನು ಕುಕ್ಕಿ ಕುಕ್ಕಿ ಒಗೆಯಲಾಗಿದೆ‌ ಹಾಗಾದರೆ ಸರ್ಪ್ ಹಾಕಿ ಕುಕ್ಕಿ ಕುಕ್ಕಿ ಒಗೆಯಲಾದ ಬಟ್ಟೆಯಲ್ಲಿ ರಕ್ತದ ಕಲೆ ಇರಲು ಸಾಧ್ಯವೆ..? ಎಂದು ಪ್ರಶ್ನಿಸಿರುವ ನಾಗೇಶ್ ಅವರು ತನಿಖೆಯಲ್ಲಿ ಲೋಪ ಅಂತಾ ಎನಿಸುತ್ತಿದೆ. ಇದು ಕ್ಲಾಸಿಕ್ ಇನ್ವೆಸ್ಟಿಗೇಷನ್ ಅಲ್ಲ ಕೆಟ್ಟ ರೀತಿಯ ತನಿಖೆ ಎಂದು ಪ್ರಬಲವಾಗಿ ವಾದಿಸಿದರು.

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ನಡೆದಿದೆ

[ccc_my_favorite_select_button post_id="113869"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!