Darshan ಪರ ಸಿವಿ ನಾಗೇಶ್ ಅವರ ಪ್ರಬಲ ವಾದಕ್ಕೆ ಕೆಲ ಖಾಸಗಿ ಸುದ್ದಿ ವಾಹಿನಿಗಳು ಶಾಕ್..!

ಬೆಂಗಳೂರು: ಅಶ್ಲೀಲ ಸಂದೇಶ ಕಳಸಿದ ಕಾರಣ ವ್ಯಕ್ತಿಯೋರ್ವನ ಹತ್ಯೆ ಆರೋಪದ ಅಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ (Darshan) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯ, ನಾಳೆ (ಶನಿವಾರ) ಮಧ್ಯಾಹ್ನ 12-30ಕ್ಕೆ ಮುಂದೂಡಿ ಆದೇಶಿಸಿದೆ.

ದರ್ಶನ್ ಜಾಮೀನು ಅರ್ಜಿಯ ವಿಚಾರಣೆಯ 57ನೇ ಸಿಸಿಹೆಚ್ ಕೋರ್ಟ್‌ನ ನ್ಯಾ.ಜೈಶಂಕರ್ ಅವರು ದರ್ಶನ್ (Darshan) ಪರ ವಕೀಲರ ವಾದ ಆಲಿಸಿ ಈ ಆದೇಶ ನೀಡಿದ್ದಾರೆ.

ದರ್ಶನ್ (Darshan) ಪರ ಪ್ರಬಲ ವಾದ ಮಂಡಿಸಿದ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರು ದರ್ಶನ್ ಅವರೇ ಕೊಲೆ ಮಾಡಿದ್ದಾರೆ ಎಂಬಂತೆ ಬಿಂಬಿಸಿದವರನ್ನು ತಬ್ಬಿಬ್ಬು ಮಾಡುವಂತೆ ಮಾಧ್ಯಮ ವರದಿ ಆಧಾರ ಮೇಲೆ ಕೋರ್ಟ್ ಆದೇಶ ನೀಡುವುದಿಲ್ಲ ಎಂಬ ನಂಬಿಕೆ ಇದೆ ಎಂಬ ಸುಪ್ರೀಂಕೋರ್ಟ್‌ನ ಎರಡು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಮಾಧ್ಯಮಗಳು ದರ್ಶನ್ (Darshan) ಅವರನ್ನು ದೋಷಿ ಎಂದು ತೀರ್ಪು ನೀಡಿ, ಜೀವಾವಧಿ, ಮರಣದಂಡನೆ ಶಿಕ್ಷೆ ವಿಧಿಸುವುದು ಮಾತ್ರ ಬಾಕಿಯಿದೆ ಎಂದು ದರ್ಶನ್ ಪ್ರಕರಣದಲ್ಲಿ ಕೆಲ ಖಾಸಗಿ ಸುದ್ದಿವಾಹಿನಿಗಳ ಅತಿರೇಕದ ವರ್ತನೆ ಕುರಿತು ನಾಗೇಶ್ ಅವರು ವಿವರಿಸಿದರು.

ಅಲ್ಲದೆ ದೋಷಾರೋಪಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಗೂ ಮುನ್ನವೇ ಕೆಲವು ಅಂಶಗಳು ಸೋರಿಕೆಯಾಗಿವೆ. ಹೀಗಾಗಿ, ಕೋರ್ಟ್ ತನಿಖಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಬೇಕು ಎಂದು ಕೋರಿದ್ದಾರೆ.

ನಾಯಿ ಕಚ್ಚಿದ ಗುರುತು

ಪ್ರಕರಣದ ತನಿಖೆ ಸೂಕ್ತ ರೀತಿಯಲ್ಲಿ ಮಾಡಿಲ್ಲ. ಮೃತ ವ್ಯಕ್ತಿಗೆ ನಾಯಿಗಳು ಕಚ್ಚಿ ಆದ ಗಾಯವನ್ನು ಮಾಧ್ಯಮಗಳು ಹಲ್ಲೆ ಎಂದು ಬಿಂಬಿಸುವ ಕೆಲಸ ಮಾಡಲಾಗಿದೆ. ಪೊಲೀಸರೇ ಸಾಕ್ಷ್ಯಾಗಳನ್ನು ಸೃಷ್ಟಿಸಿದಂತಿದೆ. ಪೊಲೀಸರ ತನಿಖಾ ವರದಿ ಸಾಕಷ್ಟು ಲೋಪಗಳಿಂದ ಕೂಡಿದೆ. ರೇಣುಕಾಸ್ವಾಮಿ ಹತ್ಯೆ ಜೂ.8ರಂದು ನಡೆದಿದ್ದು, ಜೂ.9ರಂದು ಪಟ್ಟಣಗೆರೆ ಶೆಡ್‌ಗೆ ಹೋಗಿದ್ದ ಪೊಲೀಸರು ಅಂದೇ ಅನೇಕ ಸಾಕ್ಷಿಗಳನ್ನು ರಿಕವರಿ ಮಾಡಿದ್ದರು.

ಶೆಡ್ ನಲ್ಲಿ ಹಗ್ಗ ನೀರಿನ ಬಾಟಲ್, ಮರದ ಕೊಂಬೆ, ಲಾಠಿ ರಿಕವರಿ ಮಾಡಿದ್ದಾರೆ. ಜೂ.10ರಂದು ಕೆಲ ಆರೋಪಿ, ಪ್ರತ್ಯಕ್ಷದರ್ಶಿಗಳ ಸ್ವಇಚ್ಚಾ ಹೇಳಿಕೆ ದಾಖಲಿಸಲಾಗಿದೆ. ಜೂ.12ರಂದು ರಿಕವರಿ ಅಂತಾ ಚಾರ್ಜ್ ಶೀಟ್‌ನಲ್ಲಿ ತೋರಿಸಿದ್ದಾರೆ. ತನಿಖೆಯ ಪಂಚನಾಮೆ ಒಂದಕ್ಕೊಂದು ಸಾಮ್ಯತೆ ಇಲ್ಲ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದರು.

ಮೂರು ದಿನಗಳ ಕಾಲ ಪೊಲೀಸರು ಸಾಕ್ಷಿಗಳನ್ನು ಯಾಕೆ..?

ಜೂ.11ರಂದು ದರ್ಶನ್ ಪೊಲೀಸರಿಗೆ ಶರಣಾಗಿದ್ದರು. ಪ್ರತ್ಯಕ್ಷದರ್ಶಿಗಳ ಹೇಳಿಕೆ ಪ್ರಕಾರ, ಪೊಲೀಸರು ಶೆಡ್ ಜೂ.9ರಂದು ಬಂದು ಅಂದೇ ಕೆಲ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದರು ಎಂದು ಶೆಡ್ ಸೆಕ್ಯುರಿಟಿ ಗಾರ್ಡ್ CRPC 164 ಹೇಳಿಕೆಯಲ್ಲಿದೆ. ಅಂದು ಮಧ್ಯಾಹ್ನದ ವರೆಗೆ ಯಾವುದೇ ಬೆಳವಣಿಗೆ ಆಗಿರಲಿಲ್ಲ.

ಇನ್ನು ಆರೋಪಿ ಪ್ರದೇಷ್, ಪಿಎಸ್‌ಐ ವಿನಯ್ ನೊಂದಿಗೆ ವಾಟ್ಸಾಪ್ ಕಾಲ್ ಮಾಡಿ ಮಾತನಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಲಾಟೆ ಆಗಿ ಕೊಲೆ ಆಗಿದೆ ಎಂದಿದ್ದಾರೆ. ಪಿಎಸ್ ಐ ಹೇಳಿಕೆಯಲ್ಲಿ ಜೂ.8 ಅಂತಾ ಮಾಹಿತಿ ಇದೆ.

ಜೂ. 12ರಂದು ರಕ್ತದ ಕಲೆ ಇದ್ದ ವಸ್ತುಗಳನ್ನು ರಿಕವರಿ ಮಾಡಲಾಗಿದೆ ಎಂದು ಚಾರ್ಜ್‌ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಹಾಗಿದ್ದರೆ ಜೂ.8 ರಿಂದ ಜೂ. 12ರವರೆಗೂ ಯಾಕೆ ಪೊಲೀಸರು ಸಾಕ್ಷ್ಯಾಗಳನ್ನು ಸೀಜ್ ಮಾಡಿಲ್ಲ? ಮೂರು ದಿನಗಳ ಕಾಲ ಪೊಲೀಸರು ಸಾಕ್ಷಿಗಳನ್ನು ಯಾಕೆ ಮುಟ್ಟಿರಲಿಲ್ಲ.?

ಇದನ್ನೂ ಓದಿ; ದರ್ಶನ್ ಬಿಟ್ರೆ ನಿಮಗೆ ಹಾಕ್ಲಿಕೆ ಬೇರೆ ಸಬ್ಜೆಕ್ಟ್ ಇಲ್ವಾ..? ಟಿವಿ ಚಾನಲ್ ಬಗ್ಗೆನೇ ಅಸಹ್ಯ ಬರುತ್ತೆ; ಕೆಎಸ್ ಈಶ್ವರಪ್ಪ ಗರಂ402519.jpgದರ್ಶನ್ ಬಿಟ್ರೆ ನಿಮಗೆ ಹಾಕ್ಲಿಕೆ ಬೇರೆ ಸಬ್ಜೆಕ್ಟ್ ಇಲ್ವಾ..? ಟಿವಿ ಚಾನಲ್ ಬಗ್ಗೆನೇ ಅಸಹ್ಯ ಬರುತ್ತೆ; ಕೆಎಸ್ ಈಶ್ವರಪ್ಪ ಗರಂ

ಜೂ.11ರಂದು ದರ್ಶನ್ ಬಂಧನವಾಗಿದೆ. ಜೂ.12ರಂದು ದರ್ಶನ್ ಸ್ವಚ್ಛಾ ಹೇಳಿಕೆಯಂತೆ, ರಕ್ತದ ಕಲೆ ಇರುವ ದರ್ಶನ್ ಚಪ್ಪಲಿಯನ್ನು ರಿಕವರಿ ಮಾಡಲಾಗಿದೆ. ಆದರೆ ಪೊಲೀಸರು ಚಾರ್ಜ್ ಶೀಟ್‌ನಲ್ಲಿ ಶೂ ರಿಕವರಿ ಅಂತಾ ಇದೆ. ಜೂ.14 ಮತ್ತು ಜೂ.15 ರಂದು ರಿಕವರಿ ಮಾಡಲಾಗಿದೆ ಎಂದು ದೋಷಾರೋಪಟ್ಟಿಯಲ್ಲಿದೆ. ಅಲ್ಲಿಯವರೆಗೆ ಪೊಲೀಸರು ಯಾಕೆ ರಿಕವರಿ ಮಾಡಿಲ್ಲ? ಬೆಳಗ್ಗೆ ಸಿಗದಿದ್ದು ಪಂಚನಾಮೆ ವೇಳೆ ಸಿಕ್ಕಿತಂತೆ’ ಎಂದು ಲೇವಡಿ ಮಾಡಿದರು ಸಿವಿ ನಾಗೇಶ್. ದರ್ಶನ್ ಅವರ ಸ್ವಇಚ್ಛಾ ಹೇಳಿಕೆಯನ್ನೇ ಚಾರ್ಜ್‌ ಶೀಟ್‌ನಲ್ಲಿ ಬದಲಾಯಿಸಲಾಗಿದೆ. ತನಿಖೆಯಲ್ಲಿ ಹಂತ-ಹಂತವಾಗಿ ಪೊಲೀಸರ ಲೋಪ ಕಂಡುಬರುತ್ತಿದೆ.

ಪೊಲೀಸರ ಮಾಡಿರುವ ತನಿಖೆಯ ಅಂಶಗಳೆಲ್ಲಾ ಮೀಡಿಯಾಗಳಲ್ಲಿ ಟ್ರಯಲ್ ಆಗಿದೆ. ಮೀಡಿಯಾಗಳಿಗೆ ಹೇಗೆ ಮಾಹಿತಿ ಸೋರಿಕೆಯಾಗಿದೆ. ಕೆಲ ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ಮೀಡಿಯಾಗಳಲ್ಲಿ ಡಿಬೇಟ್ ಮಾಡಲಾಗಿದೆ. ಮೀಡಿಯಾಗಳಲ್ಲಿ ಬರುವ ಮಾಹಿತಿಗಳ ಪ್ರಕಾರ ತನಿಖೆ ಮಾಡಲು ಸಾಧ್ಯವಿಲ್ಲ.

ತನಿಖೆ ನಡೆಸದೇ ಒಂದೇ ದಿನದಲ್ಲಿ ಆರೋಪಿಗಳ ಹೇಳಿಕೆಯನ್ನು ದಾಖಲಿಸಿದ್ದು ಹೇಗೆ? ಪೊಲೀಸರೇ ಎಲ್ಲಾ ಸಾಕ್ಷ್ಯಾಗಳನ್ನು ಸೃಷ್ಟಿಸಿದ್ದಾರೆ. ಪೊಲೀಸರ ಪಂಚನಾಮೆ, ಮಹಜರ್, ಕಲೆ ಹಾಕಿರುವ ಸಾಕ್ಷ್ಯಾಗಳು ದಿನಾಂಕಗಳು ಒಂದೊಂಕ್ಕೊಂದು ತಾಳೆ ಆಗುತ್ತಿಲ್ಲ. ದರ್ಶನ್ ತೊಟ್ಟ ಬಟ್ಟೆಯನ್ನು ಕುಕ್ಕಿ ಕುಕ್ಕಿ ಒಗೆಯಲಾಗಿದೆ‌ ಹಾಗಾದರೆ ಸರ್ಪ್ ಹಾಕಿ ಕುಕ್ಕಿ ಕುಕ್ಕಿ ಒಗೆಯಲಾದ ಬಟ್ಟೆಯಲ್ಲಿ ರಕ್ತದ ಕಲೆ ಇರಲು ಸಾಧ್ಯವೆ..? ಎಂದು ಪ್ರಶ್ನಿಸಿರುವ ನಾಗೇಶ್ ಅವರು ತನಿಖೆಯಲ್ಲಿ ಲೋಪ ಅಂತಾ ಎನಿಸುತ್ತಿದೆ. ಇದು ಕ್ಲಾಸಿಕ್ ಇನ್ವೆಸ್ಟಿಗೇಷನ್ ಅಲ್ಲ ಕೆಟ್ಟ ರೀತಿಯ ತನಿಖೆ ಎಂದು ಪ್ರಬಲವಾಗಿ ವಾದಿಸಿದರು.

ರಾಜಕೀಯ

ಬಿಜೆಪಿಯವರ ಮಾತು ನಂಬಿ ಉದ್ಯೋಗಾಂಕ್ಷಿಗಳು FIR ಹಾಕಿಸಿಕೊಳ್ಳಬೇಡಿ: ಶಾಸಕ ಪ್ರದೀಪ್ ಈಶ್ವರ್

ಬಿಜೆಪಿಯವರ ಮಾತು ನಂಬಿ ಉದ್ಯೋಗಾಂಕ್ಷಿಗಳು FIR ಹಾಕಿಸಿಕೊಳ್ಳಬೇಡಿ: ಶಾಸಕ ಪ್ರದೀಪ್ ಈಶ್ವರ್

ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ಉದ್ಯೋಗ ನೇಮಕಾತಿ ಮಾಡಬೇಕೆಂಬುದು ನೆನಪಿಗೆ ಬರಲಿಲ್ಲ. ಅಶೋಕಣ್ಣ, ಬೆಲ್ಲದ್ ಅವರು ಪ್ರತಿಭಟನೆಗೆ ಹೋಗುತ್ತಾರೆ. ನಿಮ್ಮ ಸರಕಾರ ಇದ್ದಾಗ ಯಾಕೆ ನೇಮಕಾತಿ ಮಾಡಿಕೊಂಡಿಲ್ಲ? ಯಡಿಯೂರಪ್ಪ, ಬೊಮ್ಮಾಯಿ ಇದ್ದಾಗ ಯಾಕೆ ನೇಮಕಾತಿ ಮಾಡಿಲ್ಲ:

[ccc_my_favorite_select_button post_id="119762"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!