Doddaballapura; ಕೃಷಿಯಲ್ಲಿ ಡ್ರೋನ್ ಬಳಕೆ ಕುರಿತು ಪ್ರಾತ್ಯಕ್ಷಿಕೆ..

ದೊಡ್ಡಬಳ್ಳಾಪುರ: ಆಧುನಿಕ ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನವನ್ನು ಬಳಸಿ ಕೀಟನಾಶಕಗಳು ಮತ್ತು ಬೆಳೆ ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಹಾಗು ನಿಖರವಾಗಿ ಸಿಂಪಡಿಸುವಿಕೆಯ ಮೂಲಕ ಉತ್ಪಾದನೆಯನ್ನು ಹೆಚ್ಚಿಸಬಹುದು ಎಂದು Doddaballapura ಸಹಾಯಕ ಕೃಷಿ ನಿರ್ದೇಶಕ ರಾಘವೇಂದ್ರ ತಿಳಿಸಿದರು.

Doddaballapura ತಾಲ್ಲೂಕಿನ ಕಸಬಾ ಹೋಬಳಿಯ ಸೊಣ್ಣಪ್ಪನಹಳ್ಳಿ ಗ್ರಾಮದಲ್ಲಿರುವ ಆಯೋಜಿಸಿದ್ದ ಕೃಷಿ ಇಲಾಖೆ ವತಿಯಿಂದ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆ ಹಾಗೂ ಕೃಷಿಯಲ್ಲಿ ಡ್ರೋನ್ ಬಳಕೆ ಕುರಿತು ತರಬೇತಿ ಮತ್ತು ಪ್ರಾತ್ಯಕ್ಷಿತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಸ್ತುತ ನಮ್ಮ ದೇಶದ ಜನಸಂಖ್ಯೆ 141 ಕೋಟಿಗಳಿದ್ದು, ಏರುತ್ತಿರುವ ಜನಸಂಖ್ಯೆಗೆ ಆಹಾರ ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆಹಾರ ಬೆಳೆಗಳ “ವಿಸ್ತೀರ್ಣ, ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಪ್ರಸ್ತುತ ದಿನಗಳಲ್ಲಿ ಕೃಷಿ ಕಾರ್ಮಿಕರ ಕೊರತೆ ಅತಿ ದೊಡ್ಡ ಸಮಸ್ಯೆಯಾಗಿದೆ. ಸಸ್ಯ ಪೋಷಕಾಂಶಗಳನ್ನು ಸಿಂಪರಣೆ ಮಾಡಲು ಅಧಿಕ ಸಮಯ ಮತ್ತು ಹಣ ವ್ಯಯವಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಕೃಷಿ ಡ್ರೋನ್ ಬಳಸಿ ಸಿಂಪರಣೆ ಮಾಡುವುದು ಒಳ್ಳೆಯ ಮಾರ್ಗವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Darshan ಪರ ಸಿವಿ ನಾಗೇಶ್ ಅವರ ಪ್ರಬಲ ವಾದಕ್ಕೆ ಕೆಲ ಖಾಸಗಿ ಸುದ್ದಿ ವಾಹಿನಿಗಳು ಶಾಕ್..!

ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರ, ವಿಜ್ಞಾನಿಗಳಾದ ಡಾ.ವೆಂಕಟೇಗೌಡ ಜೆ ಮಾತನಾಡಿ, ಯೂರಿಯಾವನ್ನು ಮೇಲುಗೊಬ್ಬರವಾಗಿ ಬೆಳೆಗಳಿಗೆ ಎರಚುವುದು ಪ್ರಸ್ತುತ ಚಾಲ್ತಿಯಲ್ಲಿರುವ ವಿಧಾನವಾಗಿದೆ. ಈ ವಿಧಾನದಿಂದ ಯೂರಿಯಾ ಹರಳುಗಳು ಸಸ್ಯಗಳ ಬೇರುಗಳಿಗೆ ಸೂಕ್ತವಾಗಿ ದೊರೆಯುವುದಿಲ್ಲ. ವಾತವಾರಣದಲ್ಲಿ ತಾಪಮಾನ ಹೆಚ್ಚಾದಂತೆ ಯೂರಿಯಾದಲ್ಲಿನ ಪೋಷಕಾಂಶವು ಆವಿಯಾಗಬಹುದು. ಹೆಚ್ಚಿನ ಮಳೆಂದ ಕೊಚ್ಚಿ ಹೋಗುವ ಸಾಧ್ಯತೆ ಇರುತ್ತದೆ.

ಈ ಸಮಸ್ಯೆಗಳಿಗೆ ಪರಿಹಾರವಾಗಿ ನ್ಯಾನೋ ಯೂರಿಯ ಸಿಂಪರಣೆಯು ಯೋಗ್ಯ ಮಾರ್ಗವಾಗಿದೆ. ನ್ಯಾನೋ ಯೂರಿಯಾದ ಸೂಕ್ಷ್ಮ ಕಣಗಳು ಹೆಚ್ಚಿನ ಸುತ್ತಳತೆ ಹೊಂದಿದ್ದು, ಎಲೆಗಳ ಮೇಲೆ ಸಿಂಪರಣೆ ಮಾಡಿದಾಗ ಶೀರ್ಘವಾಗಿ ಎಲೆಗಳಲ್ಲಿನ ಸೂಕ್ಷ್ಮ ರಂಧ್ರಗಳಾದ ಸ್ಟೋಮ್ಯಾಟ ಮೂಲಕ ಸಸ್ಯದ ಶರೀರದೊಳಗೆ ಸೇರಿ ಪೋಷಕಾಂಶಗಳು ನ್ಯಾಯೋಚಿತವಾಗಿ ಸಸ್ಯದ ಬೆಳವಣಿಗೆಗೆ ದೊರೆಯುವಂತೆ ಮಾಡುತ್ತವೆ. ರೈತರು ಈ ತಂತ್ರಜ್ಞಾನವನ್ನು ಬಳಸಿಕೊಂಡು ಆಹಾರ ಧಾನ್ಯಗಳ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳುವಂತೆ ತಿಳಿಸಿದರು.

ಇಫ್ಕೋ ಸಂಸ್ಥೆಯ ಚೇತನ್ ಮಾತನಾಡಿ, ನ್ಯಾನೋ ಯೂರಿಯಾ ಬಳಕೆಗೆ ರೈತರ ಖರ್ಚು ಕಡಿಮೆಯಾಗುವುದಲ್ಲದೇ ರೈತರು ಹೆಚ್ಚಿನ ಆದಾಯ ಪಡೆಯಬಹುದು. ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿಎಪಿಯನ್ನು ಡ್ರೋನ್ ಮೂಲಕ ಸಿಂಪರಣೆ ಮಾಡುವುದರ ಮೂಲಕ ರೈತರು ಕೃಷಿ ಕಾರ್ಮಿಕರ ಕೊರತೆ ನೀಗಿಸಬಹುದೆಂದು ತಿಳಿಸಿದರು.

ಅಂತಿಮವಾಗಿ Doddaballapura ತಾಲೂಕಿನ ಸೊಣ್ಣೇನಹಳ್ಳಿ ಗ್ರಾಮದ ರೈತ ಸದಾಶಿವಮೂರ್ತಿ ಅವರ ಜಮೀನಿನಲ್ಲಿ ಬೆಳೆಯಲಾಗುತ್ತಿರುವ ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ವನ್ನು ಸಿಂಪರಣೆ ಮಾಡುವ ವಿಧಾನವನ್ನು ಪ್ರಾತ್ಯಕ್ಷಿತೆ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಕೊನ್ನಘಟ್ಟ ಗ್ರಾಮ ಪಂಚಾತಿಯ ಅಧ್ಯಕ್ಷೆ ಮಂಗಳ, ಸದಸ್ಯ ಪ್ರಭಾಕರ್, ಇಪ್ಕೋ ಸಂಸ್ಥೆಯ ಪ್ರತಿನಿಧಿಗಳು, ಪ್ರಗತಿ ಪರ ರೈತರು, ಗ್ರಾಮದ ರೈತರು,ರೈತ ಮಹಿಳೆಯರು, ಕೃಷಿ ಅಧಿಕಾರಿಗಳು ಹಾಗೂ ಆತ್ಮ ಸಿಬ್ಬಂದಿಗಳು ಭಾಗವಸಿದ್ದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]