ನಿಜವಾಗುತ್ತಿದೆ ಅಭಿಮಾನಿಗಳ ನಂಬಿಕೆ.. Darshan ಪರ ವಕೀಲರ ವಾದಕ್ಕೆ ಕೆಲ ಖಾಸಗಿ ಸುದ್ದಿ ವಾಹಿನಿಗಳು ಕಕ್ಕಾಬಿಕ್ಕಿ

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ಕಾರಣ ವ್ಯಕ್ತಿಯೋರ್ವನ ಹತ್ಯೆ ಆರೋಪದಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ (Darshan ) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್ ಅಕ್ಟೋಬರ್.8ಕ್ಕೆ ಮುಂದೂಡಿದೆ.

ಪ್ರಸಾರವಾದ ಕಲಾಪದ ವರದಿಯನ್ವಯ ದರ್ಶನ್ (Darshan) ಪರ ವಾದ ಮಂಡಿಸುತ್ತಿರುವ ಖ್ಯಾತ ವಕೀಲರಾದ ಸಿ.ವಿ.ನಾಗೇಶ್ ಅವರು ಪೊಲೀಸ್ ತನಿಖೆಯಲ್ಲಿ ಮಾಡಲಾಗಿರುವ ಲೋಪ, ವಸ್ತುಗಳ ರಿಕವರಿ, ಸಾಕ್ಷ್ಯಾ ಸಂಗ್ರಹ, ಆರೋಪಿಗಳ ಸ್ವಇಚ್ಚಾ ಹೇಳಿಕೆಗಳ ಗೊಂದಲ, ಮಹಜರು ಪ್ರಕ್ರಿಯೆ, ಪಂಚನಾಮೆ ಇತ್ಯಾದಿ ತನಿಖೆಯ ಹಂತದಲ್ಲಾದ ದಿನಾಂಕಗಳ ಗೊಂದಲ, ಚಾರ್ಜ್‌ ಶೀಟ್‌ನಲ್ಲಿ ಉಲ್ಲೇಖಿಸಿದಂತೆ ತಾಳೆಯಾಗದಿರುವ ಅಂಶಗಳ ಕುರಿತಾಗಿ ಪಟ್ಟಿ ಮಾಡಿ ಉದ್ದೇಶ ಪೂರ್ವಕವಾಗಿ ತಮ್ಮ ಕಕ್ಷಿದಾರ ದರ್ಶನ್ ವಿರುದ್ಧ ಸಾಕ್ಷಾಗಳನ್ನು ಸೃಷ್ಟಿಸಿಲಾಗಿದೆ ಎಂದು ನ್ಯಾಯಾಧೀಶರ ಗಮನಕ್ಕೆ ತಂದಿದ್ದರು.

ನಿನ್ನೆ ಸಮಯದ ಅಭಾವದಿಂದಾಗಿ ಇಂದಿಗೆ ಪ್ರಕರಣ ಮುಂದೂಡಲಾಗಿತ್ತು. ಇಂದು ವಾದ ಮುಂದುವರೆಸಿದ ಸಿವಿ ನಾಗೇಶ್ ಅವರು, ದರ್ಶನ್ (Darshan) ಕೊಲೆ ಮಾಡಿದ್ದಾರೆಂದು ತೀರ್ಪು ಬರೆದು ಪ್ರಸಾರ ಮಾಡಿದ್ದ ಕೆಲ ಮಾಧ್ಯಮಗಳು ಕಕ್ಕಾಬಿಕ್ಕಿಯಾಗಿ ವರದಿ ಮಾಡುವಂತೆ ಇಡೀ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಡುತ್ತಿದ್ದಾರೆ.

ರೇಣುಕಾಸ್ವಾಮಿ ಕೇಸ್‌ನಲ್ಲಿ ದರ್ಶನ್ ವಿರುದ್ಧದ ಸಾಕ್ಷಿಗಳೇ ಸೂಕ್ತವಾಗಿಲ್ಲ. ಇಲ್ಲಿ ರಕ್ತವನ್ನ ತೊಳೆಯಲಾಗಿಲ್ಲ. ಪಂಚನಾಮೆಯಲ್ಲಿ ರಕ್ತದ ಕಲೆ ಬರುತ್ತೆ. ಆದರೆ FSL ವರದಿಯಲ್ಲಿ ರಕ್ತದ ಕಲೆಯೇ ಇಲ್ಲ. ಹಾಗಿದ್ರೆ ಯಾರು ಇಲ್ಲಿ ಸಾಕ್ಷಿಗಳ ಪ್ಲಾಂಟ್ ಮಾಡಿದ್ದು? ಇಂತಹ ಸಾಕ್ಷಿಗಳ ಸೃಷ್ಟಿಗೂ ಮಿತಿ ಇರಬೇಕು. ಇಲ್ಲಿ ನ್ಯಾಯದ ಕಗ್ಗೊಲೆಯಾಗಿದೆ ಎಂದು ಸಿ.ವಿ.ನಾಗೇಶ್ ಅವರು ವಾದ ಮಂಡಿಸಿದ್ದಾರೆ.

ಪಟ್ಟಣಗೆರೆ ಶೆಡ್‌ನ ಸ್ಥಳದಲ್ಲಿ ಸಿಕ್ಕ ಮಣ್ಣನ್ನ ರಿಕವರಿ ಮಾಡಿರುತ್ತಾರೆ. ಅದರಲ್ಲಿ ಯಾವುದೇ ರಕ್ತದ ಕುರುಹುಗಳ ಬಗ್ಗೆ ಹೇಳಿಲ್ಲ. ಇಂದು ಪ್ಯಾಕೆಟ್ ಮಣ್ಣಿನ ಕವರ್ ನೀಡಿದ್ದರು. ಅದನ್ನ ಪರಿಶೀಲನೆ ಮಾಡಿದ್ದಾಗಿ ಹೇಳಿದ್ದಾರೆ. ಆದರೆ ಪಂಚನಾಮೆಯಲ್ಲಿ ಮಣ್ಣನ್ನು ಕಲೆಕ್ಟ್ ಮಾಡಿದ್ದು ಏಕೆ ಹೇಳಿಲ್ಲ. ಅದು ಹೇಗೆ FSLಗೆ ಕಳುಹಿಸಿದ್ದಾರೆ. ಇದು ಇನ್ನೊಂದು ಮಾದರಿ ಸಾಕ್ಷಿಯ ಸೃಷ್ಟಿಯಾಗಿದೆ.

ಪೊಲೀಸರ ಅವರು ಹೇಳ್ತಾರೆ ಆ ಮಣ್ಣು ಅವರ ಶೂನಲ್ಲಿದ್ದ ಮಣ್ಣಿಗೆ ಮ್ಯಾಚ್ ಅಂತಾರೆ. ಪ್ರಕರಣದ 14 ಪ್ರದೂಶ್, ಮೊಬೈಲ್ ತಗೊಂಡು ಡಾಟಾ ಎರೇಸ್ ಮಾಡಿದ್ದಾಗಿ ಹೇಳ್ತಾರೆ. 14ನೇ ಆರೋಪಿ ಮೊಬೈಲ್‌ನಲ್ಲಿ ವಿಡಿಯೋ ಕಳಿಸಿದ್ದಾರೆ. ಅದನ್ನ ಆತನನಿಂದ ನಾನೇ ತರಿಸಿಕೊಂಡೆ ಅಂತಾ ಹೇಳಿದ್ದಾನೆ.

ಮೇಲಿನ ವಿಡಿಯೋ ಬಗ್ಗೆ ಎಫ್ಎಸ್‌ಎಲ್ ವರದಿಯಲ್ಲಿ ಪತ್ತೆಯಾಗಿಲ್ಲ. ಆದರೆ ಈ ವಿಡಿಯೋ FSL ವರದಿಯಲ್ಲಿ ಇಲ್ಲ. ಇಲ್ಲಿ ಪಿಎಸ್ಐ ವಿನಯ್ ಆಳಿಸಿದ್ರೂ ರಿಟ್ರೀವ್ ಮಾಡಬೇಕಿತ್ತು. ಹಾಗಿದ್ದಾಗ ಆತನ ಪೋನ್ ಏಕೆ ಸೀಜ್ ಆಗಿಲ್ಲ. ಆತ 110 ಬಾರಿ ಚಾಟ್ ಮಾಡಿದ್ದಾನೆ. ಆದರೆ ಈ ಕೇಸ್‌ನಲ್ಲಿ ಪಿಎಸ್ಐಯ ಪೋನ್ ಸೀಜ್‌ ಮಾಡಿಲ್ಲ ಎಂದು ಸಿ.ವಿ.ನಾಗೇಶ್ ಪ್ರಶ್ನಿಸಿದ್ದಾರೆ.

ವೈಜ್ಞಾನಿಕವಾಗಿ ತನಿಖೆ ಆಗಬೇಕಾದಾಗ ನಿಯಮಗಳ ಉಲ್ಲಂಘನೆ ಆಗಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಪಂಚನಾಮೆ ಸಾಕ್ಷಿ ಹೇಳ್ತಾರೆ. ನಾವು ಹೋಗಿ ನೋಡಿದಾಗ ಒಂದು ಮರದ ಸಣ್ಣ ರೆಂಬೆ 2 ಅಡಿ ಇದ್ದು, ರಕ್ತದ ಕಲೆ ಇರುತ್ತದೆ. ಅಲ್ಲಿದ್ದ ಎರಡು ರಂಬೆಯಲ್ಲಿ ರಕ್ತದ ಕಲೆ ಇರುತ್ತದೆ. ಹೀಗೆ ಪಂಚನಾಮೆ ಮಾಡಿದಾಗ ಪಂಚ ಸಾಕ್ಷಿ ಹೇಳ್ತಾರೆ. ಆದರೆ ಎಫ್ಎಸ್ಎಲ್ ವರದಿಯಲ್ಲಿ ನೋಡಿ ಅದರಲ್ಲಿ ಹೇಳ್ತಾರೆ, ಮರದ ಕೊಂಬೆಯಲ್ಲಿ ರಕ್ತದ ಕಲೆ ಇಲ್ಲ ಅಂತಾರೆ. ಈ ರೀತಿ ಫ್ಯಾಬ್ರಿಕೇಷನ್‌ಗೂ ಒಂದು ಲಿಮಿಟ್ ಇರಬೇಕು. ಇಷ್ಟರ ಮಟ್ಟಿಗೆ ಮಾಡಬಾರದು ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ದರ್ಶನ್ (Darshan) ಮನೆಯಲ್ಲಿ ಪೊಲೀಸರು ವಶಪಡಿಸಿಕೊಂಡ ಲಕ್ಷಾಂತರ ರೂಪಾಯಿ ಹಣದ ಮೂಲದ ಬಗ್ಗೆ ನ್ಯಾಯಾಲಕ್ಕೆ ಮಾಹಿತಿ ನೀಡಿದರು.

ಜೂ 18ರಂದು ದರ್ಶನ್‌ ಮನೆಯಲ್ಲಿ 37.5 ಲಕ್ಷ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಕುರಿತು ವಾದ ಮಂಡಿಸಿದ ಸಿವಿ ನಾಗೇಶ್, ಹಣದ ಮೂಲದ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಸಾಕ್ಷಿಗಳಿಗೆ ಕೊಡಲೆಂದು ದರ್ಶನ್ ಈ ಹಣ ಇಟ್ಟಿದ್ದಾರೆ ಎಂಬುದಾಗಿ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದಾರೆ. ಆದರೆ ಮೋಹನ್‌ ರಾಜ್ ಎಂಬುವರು ಈ ಹಣವನ್ನು ಮೇ 2ನೇ ತಾರೀಖಿನಂದೇ ದರ್ಶನ್‌ಗೆ (Darshan) ನೀಡಿದ್ದರು. ಅಸಲಿಗೆ ಇವರು ದರ್ಶನ್ ಅವರಿಂದ ಹಣ ಸಾಲ ಪಡೆದಿದ್ದರು. ಆ ಹಣವನ್ನು ಮೇ 2ರಂದೇ ದರ್ಶನ್‌ಗೆ ನೀಡಬೇಕಿದ್ದ ಸಾಲ ವಾಪಸ್ ಮಾಡಿದ್ದರು. ಆಗ ರೇಣುಕಾಸ್ವಾಮಿ ಯಾರೆಂಬುದು ಅವರ ಮನೆಯವರು, ಸಂಬಂಧಿಕರಿಗೆ ಬಿಟ್ಟರೆ ಜಗತ್ತಿಗೇ ಗೊತ್ತಿರಲಿಲ್ಲ.

ಮೋಹನ್ ರಾಜ್ ಪುತ್ರಿಯ ಡ್ಯಾನ್ಸ್ ಆಲ್ಬಂ ಮಾಡಿಸಬೇಕಿತ್ತು, ದರ್ಶನ್ ಈ ಮುಂಚೆ ಮಾಲೀಕರಾಗಿದ್ದ ಡಿ ಬೀಟ್ಸ್‌ ಅವರ ಕಡೆಯವರಿಗೆ ಹೇಳಿ ಈ ಡ್ಯಾನ್ಸ್ ಆಲ್ಬಂ ಮಾಡಿಸಿಕೊಟ್ಟಿದ್ದರು. ಇದಕ್ಕಾಗಿ ದರ್ಶನ್‌ರಿಂದ 40 ಲಕ್ಷ ರೂಪಾಯಿ ಹಣ ಫೆಬ್ರವರಿಯಲ್ಲಿ ಪಡೆದಿದ್ದೆ, ಅದನ್ನು ಮೇ 2ರಂದು ಹಿಂತಿರುಗಿಸಿದ್ದಾಗಿ ಮೋಹನ್ ರಾಜ್ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಹೀಗಿದ್ದಾಗ ರೇಣುಕಾ ಸ್ವಾಮಿ ಕೊಲೆ ಆದ ಬಳಿಕ ದರ್ಶನ್ ಹಣ ಸಂಗ್ರಹಿಸಿದ್ದರೆಂದು ಹೇಳುವುದು ಹೇಗೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ದರ್ಶನ್ ಬಿಟ್ ಬೇರೆ ಇಲ್ವೇನ್ರೀ; ಖಾಸಗಿ ಸುದ್ದಿ ವಾಹಿನಿಗಳ ವಿರುದ್ಧ ಗೃಹಸಚಿವ ಪರಮೇಶ್ವರ್ ಗರಂ

ರೇಣುಕಾ ಸ್ವಾಮಿ ಎಂಬಾತ ಒಬ್ಬ ಮುಂದೊಂದು ದಿನ ಬರುತ್ತಾನೆ, ಅವನನ್ನು ಕೊಲ್ಲುವ ಪ್ರಮೇಯ ಬರುತ್ತದೆ, ನನ್ನ ಮೇಲೆ ಚಾರ್ಜ್‌ಶೀಟ್ ಹಾಕ್ತಾರೆ ಅದಕ್ಕಾಗಿ ನಾನು ಸಾಕ್ಷಿಗಳಿಗೆ ಕೊಡಲು ಹಣ ಪಡೆಯಬೇಕು ಎಂದು ಮೊದಲೇ ಊಹಿಸಲು ಸಾಧ್ಯವೇ? ಎಂದು ಪ್ರಶ್ನಿಸಿರುವ ವಕೀಲ ಸಿ.ವಿ.ನಾಗೇಶ್, ರೇಣುಕಾ ಸ್ವಾಮಿ ಎಂಬ ಒಬ್ಬ ವ್ಯಕ್ತಿ ಇದ್ದಾನೆ ಎಂಬುದು ಗೊತ್ತಾಗಿದ್ದೆ ಜೂನ್ 6 ರಂದು, ಅಲ್ಲಿಯವರೆಗೆ ಆತನನ್ನು ಗೌತಮ್ ಎಂದೇ ನಂಬಲಾಗಿತ್ತು. ಮಲಗುವಾಗ ಓದಬಹುದಾದ ಅರೇಬಿಯನ್ ನೈಟ್ಸ್ ಕಥೆಯಂತಿದೆ ಪೊಲೀಸರ ತನಿಖಾ ವರದಿ ಎಂದು ದರ್ಶನ್ ಪರ ಸಿವಿ ನಾಗೇಶ್ ವ್ಯಂಗ್ಯ ಮಾಡಿದ್ದಾರೆ.

ನಟ ದರ್ಶನ್ ಅವರನ್ನು ಬೇಕು ಅಂತಲೇ ಕೇಸ್‌ನಲ್ಲಿ ಸಿಲುಕಿಸುವ ಹಾಗೂ ದರ್ಶನ್ ವಿರುದ್ಧ ಸಾಕ್ಷಾಗಳನ್ನು ಸೃಷ್ಟಿಸಲಾಗಿದೆ ಸಿ.ವಿ.ನಾಗೇಶ್ ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ವೇಳೆ ಪ್ರಬಲವಾಗಿ ವಾದ ಮಂಡಿಸಿರುವ ನಾಗೇಶ್ ಅವರು, ಪೊಲೀಸರ ತನಿಖೆ ಲೋಪದೋಷಗಳನ್ನು ಉಲ್ಲೇಖಿಸಿದ್ದಾರೆ. ಕೃತ್ಯ ನಡೆದ ಪಟ್ಟಣಗೆರೆ ಶೆಡ್ ಜಾಗದ ಸಿಸಿಟಿವಿ ವಿಡಿಯೋ ನಗರದಿಂದ ಹೊರಗಿದ್ದ ಪಿಎಸ್‌ಐಗೆ ಹೋಗಿತ್ತು.

ಜೂ.9ರಂದು ಆರೋಪಿಗಳೇ ಪಿಎಸ್‌ಐ ವಿನಯ್‌ಗೆ ವಿಡಿಯೋ ಕಳುಹಿಸಿದ್ದಾರೆ. ಮಾಹಿತಿ ಇದ್ದರೂ ಪೊಲೀಸರು ನಟ ದರ್ಶನ್ ಹೇಳಿಕೆ ದಾಖಲಿಸುವ ತನಕ ಸುಮ್ಮನಾಗಿದ್ದರು. ಪ್ರಕರಣದಲ್ಲಿ ದರ್ಶನ್ ಸಿಲುಕಿಸಲು ಪಕ್ಕಾ ಪ್ಲಾನ್ ಇತ್ತು ಎಂದಿರುವ ವಕೀಲರು, ವಿಡಿಯೋ ಮೊಬೈಲ್‌ನಲ್ಲಿದ್ದರೂ ಸೀಜ್ ಯಾಕೆ ಮಾಡಲಿಲ್ಲ. ಮೊಬೈಲ್ FSLಗೆ ಕಳುಹಿಸದೇ ನಿಯಮ ಉಲ್ಲಂಘಿಸಲಾಗಿದೆ.

ಫೋನ್ ಚಾಟ್, ಶೆಟ್ ಸಿಸಿಟಿವಿಯ ಕೆಲ ವಿಡಿಯೋ ಡಿಲೀಟ್ ಯಾರು ಮಾಡಿಸಿದ್ದಾರೆ ಎಂಬ ಪ್ರಶ್ನೆಗಳನ್ನು ದರ್ಶನ್ ಪರ ವಕೀಲರು ಎತ್ತಿದ್ದಾರೆ. ಹೀಗಾಗಿ ಕೇಸ್‌ಗೆ ಫೋನ್ ಚಾಟ್ ವಿಡಿಯೋ ಡಿಲೀಟ್ ಮಾಡಿರುವ ಅಂಶ ಮತ್ತೆ ಟ್ವಿಸ್ಟ್ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!