2ನೇ ದಿನಕ್ಕೆ ಕಾಲಿಟ್ಟ ಗ್ರಾಮಪಂಚಾಯಿತಿ ನೌಕರರ ಧರಣಿ: ಪಂಚಾಯಿತಿಗಳ ಸೇವೆ ಸ್ಥಗಿತ| Grama panchayath

ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ (Grama panchayath) ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ‘ಬಿ’ ದರ್ಜೆಗೆ ಉನ್ನತೀಕರಿಸುವುದು, 7 ವರ್ಷ ಸೇವೆ ಪೂರೈಸಿದ ಪಿಡಿಒಗಳನ್ನು ಬೇರೆ ತಾಲೂಕುಗಳಿಗೆ ವರ್ಗಾವಣೆ ನಿಯಮ ಕೈ ಬಿಡುವುದು ಸೇರಿದಂತೆ ವಿವಿಧ ಬೇಡಿಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಎಲ್ಲ ಪಂಚಾಯಿತಿ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟು, ಗ್ರಾಮಪಂಚಾಯಿತಿ ಸೇವೆಗಳು ಬಹುತೇಕ ಸ್ಥಗಿತಗೊಂಡಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ವೃಂದದ ಸಂಘಗಳು ಹಾಗೂ ಗ್ರಾಮಪಂಚಾಯಿತಿ (Grama panchayath) ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಶುಕ್ರವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಸೇವೆಯಿಂದ ದೂರು ಉಳಿದ ನೌಕರರು ಸಾವಿರಾರು ಸಂಖ್ಯೆಲ್ಲಿ ಸ್ವಾತಂತ್ರ್ಯ ಉದ್ಯಾನವದಲ್ಲಿ ಆಗಮಿಸಿದ್ದಾರೆ‌. ರಾಜ್ಯದ 6 ಸಾವಿರಕ್ಕೂ ಹೆಚ್ಚು ಪಂಚಾಯಿತಿಗಳ ಸೇವೆ ಶುಕ್ರವಾರದಿಂದ ಸ್ಥಗಿತಗೊಂಡಿದೆ. ಕೆಲವು ಪಂಚಾಯಿತಿಗಳನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು.

ವಿವಿಧ ಕೆಲಸಕ್ಕಾಗಿ ಗ್ರಾಪಂ ( Grama panchayath), ತಾಪಂಗಳಿಗೆ ಆಗಮಿಸುವ ಜನಸಾಮಾನ್ಯರು ಪರದಾಡುವಂತಾಯಿತು.

ಇದನ್ನೂ ಓದಿ; Darshan ಪರ ಸಿವಿ ನಾಗೇಶ್ ಅವರ ಪ್ರಬಲ ವಾದಕ್ಕೆ ಕೆಲ ಖಾಸಗಿ ಸುದ್ದಿ ವಾಹಿನಿಗಳು ಶಾಕ್..!

ಗ್ರಾಮ ಸ್ವರಾಜ್‌ ಹಾಗೂ ವಿಕೇಂದ್ರೀಕರಣ ವ್ಯಸ್ಥೆಯಲ್ಲಿ ರಾಜ್ಯದ ಶೇ. 70 ರಷ್ಟು ಜನರಿಗೆ ಸೇವೆ ಒದಗಿಸುತ್ತಿರುವ ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಗಳ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲ.

ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗಳಿಗೂ ಸ್ಪಂದಿಸದೆ, ಎಲ್ಲ ಸಮಸ್ಯೆಗಳಿಗೆ ಪಂಚಾಯತಿ ಅಧಿಕಾರಿಗಳನ್ನು ಹೊಣೆಗಾರನ್ನಾಗಿ ಮಾಡುತಿರುವ ಸರ್ಕಾರ ಮತ್ತು ಇಲಾಖೆ ಧೋರಣೆಯನ್ನು ಖಂಡಿಸುತ್ತೆವೆ. ಪಿಡಿಒಗಳ ಜೇಷ್ಠತಾ ಪಟ್ಟಿಯನ್ನು ಕೂಡಲೇ ಅಂತಿಮಗೊಳಿಸಿ, ಬಡ್ತಿ ನೀಡಲು ಕ್ರಮಕೈಗೊಳ್ಳಬೇಕು.

ಕುಂದು ಕೊರತೆ ಪ್ರಾಧಿಕಾರವನ್ನು ಪೊಲೀಸ್ ಇಲಾಖೆ ಮಾದರಿಯಲ್ಲಿ ಸದೃಢಗೊಳಿಸವುದು. ತಜ್ಞರ ಸಮಿತಿ ನೇಮಿಸುವುದು ಹಾಗೂ ಏಕರೂಪದ ಅಡಿಟ್ ಪದ್ಧತಿ ಜಾರಿಗಳಿಸಬೇಕು. ಸೇವಾ ವಿಷಯಗಳನ್ನು ಸಕಾಲ ವ್ಯಾಪ್ತಿಗೆ ತರಬೇಕು. ತಂತ್ರಾಂಶಗಳಿಗೆ ಏಕರೂಪದ ಸಹಾಯವಾಣಿ ವ್ಯವಸ್ಥೆಗೆ ಜಾರಿಗೊಳಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ.

ವಿವಿಧ ಬೇಡಿಕೆಗಳು

ವಸತಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕ ಹುದ್ದೆ ಸೃಜನೆ ಮಾಡಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಪದೋನ್ನತಿ ನೀಡುವ ಮೂಲಕ ಭರ್ತಿ ಮಾಡಬೇಕು.

ಕರವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ನೀರಘಂಟಿ, ಜವಾನರು ಹಾಗೂ ಸ್ವಚ್ಚತಗಾರರ ವೇತನ ಹಾಗೂ ಸೇವಾ ಹಿರಿತನದ ವೇತನ ಜಾರಿ ಮಾಡಿ ಕಾರ್ಮಿಕ ಇಲಾಖೆಯ ವೇತನವನ್ನು ಹೊರತುಪಡಿಸಿ ಆರ್‌ಡಿಪಿಆ‌ರ್ ಇಲಾಖೆಯಿಂದ ವೇತನ ನಿಗದಿ ಪಡಿಸಬೇಕು.

ಆರೋಗ್ಯ ವಿಮೆ 5 ಲಕ್ಷ ಜಾರಿಮಾಡಬೇಕು. ಗ್ರೇಡ್-1 ಮತ್ತು ಗ್ರೇಡ್-2 ಕಾರ್ಯದರ್ಶಿಗಳ ಪದೋನ್ನತಿ, ಐದು ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾ.ಪಂಗಳನ್ನು ಗ್ರೇಡ್-1 ಗ್ರಾಮ ಪಂಚಾಯಿತಿಯಾಗಿ ಮೇಲ್ದರ್ಜೇಗೆ ಏರಿಸಬೇಕು.

ಕೆ.ಡಿ.ಪಿ ಸಭೆಗೆ ಎಲ್ಲ ಇಲಾಖೆ ಅಧಿಕಾರಿಗಳು ಭಾಗವಹಿಸುವಂತೆ ಮಾಡುವುದು. ಪಂಚಾಯತ್ ರಾಜ್ ಇಲಾಖೆ ಪ್ರತ್ಯೇಕ ಲಾಂಛನ ಸೃಜಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯವಾಗಿದೆ.

ಪಿಡಿಒ, ಕಾರ್ಯದರ್ಶಿಗಳು, ಕರ ವಸೂಲಿಗಾರರು, ಗುಮಾಸ್ತರು ಮತ್ತು ಡಾಟಾ ಎಂಟ್ರಿ ಆಪರೇ ಟರ್, ನೀರಗಂಟಿ, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮ ಪಂ ಚಾಯತ್ ಸದಸ್ಯರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

ವಾಟ್ಸಪ್ ಚಾನೆಲ ಸೇರಲು ಈ ಲಿಂಕ್ ಬಳಸಿ; https://whatsapp.com/channel/0029Va5azA9GufIxBBdKdG0A

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!