ಬೆಳಗಾವಿ: ಜಮೀನಿನಲ್ಲಿ ರಸ್ತೆ ವಿಚಾರವಾಗಿ ಸಹೋದರರ ನಡುವೆ ಉಂಟಾದ ಜಗಳ, ಓರ್ವನ ಕೊಲೆಯಲ್ಲಿ (Murder) ಅಂತ್ಯವಾಗಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಹೊರವಲಯದ ಬಳಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು 45 ವರ್ಷದ ಸುನೀಲ್ ಖೋತ್ ಎಂದು ಗುರುತಿಸಲಾಗಿದೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯ ಸುನೀಲ್ ಖೋತ್ ಸಾವನ್ನಪ್ಪಿದ್ದಾರೆ.
ಹಲವು ವರ್ಷಗಳಿಂದ ಜಮೀನಿನಲ್ಲಿ ರಸ್ತೆ ವಿಚಾರವಾಗಿ ಕಲಹ ಇತ್ತು ಎನ್ನಲಾಗಿದ್ದು, ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ಅಣ್ಣ-ತಮ್ಮಂದಿರನ್ನ ಸಮಾಧಾನ ಮಾಡಿ. ಸಂಜೆ ರಾಜಿ ಪಂಚಾಯಿತಿ ಮಾಡೋಣ ಎಂದು ಪೊಲೀಸರು ಕಳುಹಿಸಿದ್ದರಂತೆ.
ಆದರೆ ಸಂಜೆ ಸಹೋದರರ ನಡುವೆ ಮತ್ತೆ ಗಲಾಟೆ ಪ್ರಾರಂಭವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.
ಪ್ರಕರಣ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.