ಮೂಡಾ ಹಗರಣ ಮುಚ್ಚಿ ಹಾಕಲು ಜಾತಿಗಣತಿ ನಾಟಕ; HDK

ಬೆಂಗಳೂರು: ಮೂಡಾ ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HDK) ಅವರು ದೂರಿದ್ದಾರೆ.

ತಮ್ಮ ನಿವಾಸದ ಸೋಮವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಹೊರಳಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮೂಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಜಾತಿಗಣತಿಯ ವಿಚಾರವನ್ನು ಮುಂದಕ್ಕೆ ತಂದಿದೆ ಎಂದು ಆರೋಪಿಸಿದರು.

ಚುನಾವಣೆಗೆ ಮೊದಲೇ ವರದಿ ಕೊಟ್ಟಿದ್ದರು!!

ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ. ಈಗ ಅ ವರದಿಗೆ 10 ವರ್ಷ ಆಗಿ ಹೋಗಿದೆ. 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಿರಲಿಲ್ಲ? ಎಂದು ಕೇಂದ್ರ ಸಚಿವ ಕುಮಾರಸ್ವಾಮಿ (HDK) ಅವರು ಪ್ರಶ್ನಿಸಿದರು.

ಕುಮಾರಸ್ವಾಮಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ. ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ, ಅಲ್ಲವೇ? ಲೋಕಸಭೆ ‌ಚುನಾವಣೆ ಮೊದಲೇ ವರದಿ ಪಡೆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ, ಯಾಕೆ? ಎಂದು ಖಾರವಾಗಿ ತೀಕ್ಷ್ಣವಾಗಿ ಕೇಳಿದರು.

ಮೂಡಾ ಅಕ್ರಮದಿಂದ ರಕ್ಷಣೆ ಪಡೆಯಲು ಯತ್ನ

ಈಗ ಮೂಡಾ ಹಗರಣದ ಹಿನ್ನಲೆಯಲ್ಲಿ ಜನರನ್ನು ದಾರಿ ತಪ್ಪಿಸಲು ಮತ್ತು ಜಾತಿಗಣತಿ ವರದಿ ಇಟ್ಟುಕೊಂಡು ಮೂಡಾ ಅಕ್ರಮದಿಂದ ರಕ್ಷಣೆ ಪಡೆಯುವ ಕೆಲಸಕ್ಕೆ ಹೊರಟಿದ್ದಾರೆ. 10 ವರ್ಷಗಳ ಹಿಂದೆ ಮಾಡಿರುವ ಈ ಜಾತಿಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನುಕೂಲಗಳು ಆಗುವುದಿಲ್ಲ. ಮೂಡಾ ಹಗರಣವನ್ನು ಮರೆಮಾಚಿಕೊಳ್ಳಲು ಈಗ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ. ಇಷ್ಟು ದಿನ ಇಲ್ಲದೇ ಇರೋದು ಈಗ ಯಾಕೆ ಮುನ್ನಲೆಗೆ ತರಲು ಹೊರಟಿದ್ದಾರೆ ಎಂದು ನೇರ ಆರೋಪ ಮಾಡಿದರು.

ಜಾತಿಗಣತಿ ವರದಿ ಜಾರಿ ಮಾಡದಂತೆ ಸಿದ್ದರಾಮಯ್ಯ ಅವರನ್ನು ಹಿಡಿದುಕೊಂಡವರು ಯಾರು? ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ವರದಿ ಸ್ವೀಕಾರ ಮಾಡಿ ಎಷ್ಟು ದಿನವಾಯಿತು? ಇನ್ನೂ ಯಾಕೆ ಇಟ್ಟುಕೊಂಡು ಕೂತಿದ್ದಾರೆ? ಇಷ್ಟು ದಿನ ಸದ್ದುಗದ್ದಲ ಇರಲಿಲ್ಲ. ಈಗ ಈ ವಿಷಯ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇವರು ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳೋಕೆ‌ ಜಾತಿಯಂತಹ ವಿಷಯಗಳನ್ನು ಮುಂದೆ ಬಿಟ್ಟುಕೊಂಡು ಹೊರಟಿದ್ದಾರೆ ಎಂದು ಸರ್ಕಾರದ ವಿರುದ್ದ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಜಾತಿ ಗಣತಿ ವರದಿ ಇಟ್ಟುಕೊಂಡು ಚುನಾವಣೆಗೆ ಹೋಗಿ

ಜಾತಿಗಣತಿ ವರದಿ ಇಟ್ಟುಕೊಂಡು ರಾಜಕೀಯ ಮಾಡುತ್ತೀರಿ, ಈ ವಿಷಯ ಇಟ್ಟುಕೊಂಡು ಚುನಾವಣೆ ಹೋಗಿ ನೋಡೋಣ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ ಕುಮಾರಸ್ವಾಮಿ ಅವರು; ಸರ್ಕಾರ ಹೋದರೆ ಹೋಗಲಿ ಎನ್ನುವ ಬದಲಿಗೆ ಮುಕ್ತವಾಗಿ ಘೋಷಣೆ ಮಾಡಿ ಚುನಾವಣೆಗೆ ಹೋಗಲಿ ಎಂದರು.

ಸರ್ಕಾರ ಹೋದರೆ ಹೋಗಲಿ, ಜಾತಿಗಣತಿ ಜಾರಿ ಮಾಡಿ ಎಂಬ ಬಿ.ಕೆ. ಹರಿಪ್ರಸಾದ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಜಾತಿಗಣತಿ ವಿಷಯ ಇಟ್ಟುಕೊಂಡು ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗಿ ನೋಡೋಣ. ಹರಿಪ್ರಸಾದ್‌ ಅವರು ಈ ರೀತಿ ಹೇಳುವುದು ಏನಿದೆ? ಅದರ ಬದಲು ವಿಧಾನಸಭೆಯನ್ನು ವಿಸರ್ಜನೆ ಮಾಡಿ ಚುನಾವಣೆಗೆ ಹೋಗಬಹುದಲ್ಲವೆ? ಎಂದು HDK ಸವಾಲು ಹಾಕಿದರು.

ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ನಾಯಕರು ಜಾತಿಗಣತಿ ವರದಿ ಇಟ್ಟುಕೊಂಡು ನಾವು ಅನುಷ್ಠಾನ ಮಾಡುತ್ತೇವೆ, ನಮಗೆ ಇನ್ನೊಂದು ಅವಕಾಶ ಕೊಡಿ ಅಂತ ಜನರ ಮುಂದೆ ಹೋಗಬಹುದು.

ದೆಹಲಿಯಲ್ಲಿ ರಾಹುಲ್ ಗಾಂಧಿ ಒಂದು ಹೇಳುತ್ತಾರೆ.. ಇಲ್ಲಿ ಇವರು ಇನ್ನೊಂದು ಹೇಳುತ್ತಾರೆ. ಸರ್ಕಾರದಲ್ಲಿ ಆಗಿರುವ ಹಲವಾರು ತಪ್ಪುಗಳನ್ನು ಮುಚ್ಚಿಕೊಳ್ಳೋದಕ್ಕೆ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ. ಇದೆಲ್ಲವನ್ನು ಜನರ ಮನಸಿನಿಂದ ಡೈವರ್ಟ್ ಮಾಡೋದಕ್ಕೆ ಈ ಡ್ರಾಮಾಗಳು ಪ್ರಾರಂಭ ಮಾಡಿದ್ದಾರೆ ಎಂದು ಅವರು ದೂರಿದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!