ಜಾತಿಗಣತಿ ವರದಿ ಅನುಷ್ಠಾನಗೊಳಿಸದಂತೆ ಒಕ್ಕಲಿಗರ ಸಂಘ ಒತ್ತಾಯ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಹೆಸರಲ್ಲಿ ನಡೆಸಿರುವ ಜಾತಿಗಣತಿಯನ್ನು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಬಾರದು ಎಂದು ರಾಜ್ಯ ಒಕ್ಕಲಿಗರ ಸಂಘ (vokkaligara sangha) ಒತ್ತಾಯಿಸಿದೆ.

ರಾಜ್ಯ ಎಲ್ಲಾ ಸಮುದಾಯಗಳಿಗೆ ಅನುಕೂಲವಾಗುವಂತೆ ಎಲ್ಲಾ ಜನವಸತಿಗಳಿಗೆ ಭೇಟಿ ನೀಡಿ ಹೊಸದಾಗಿ ಮರು ಸಮೀಕ್ಷೆ ನಡೆಸಬೇಕು ಎಂದು ಮತ್ತೊಮ್ಮೆ ಒತ್ತಾಯ ಮಾಡಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಮತ್ತು ಪದಾಧಿಕಾರಿಗಳು, ಪ್ರತಿ ಮನೆಗೆ ಭೇಟಿ ನೀಡಿ ಅಗತ್ಯವಿರುವ ಮಾಹಿತಿ ಸಂಗ್ರಹಿಸಿ ವರದಿಯನ್ನು ಕಾಲಮಿತಿಯಲ್ಲಿ ಪಡೆಯಬೇಕು ಹಾಗೂ ಸಾರ್ವಜನಿಕವಾಗಿ ಮುಕ್ತ ಚರ್ಚೆಗೆ ಅವಕಾಶ ನೀಡಿದ ಬಳಿಕ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಜಾತಿಗಣತಿ ವರದಿ ಅನುಷ್ಠಾನ ಮಾಡಲು ನಮ್ಮ ಯಾವುದೇ ಆಕ್ಷೇಪವಿಲ್ಲ. ನಾವು (vokkaligara sangha) ಮುಕ್ತವಾಗಿ ಸ್ವಾಗತ ಮಾಡುತ್ತೇವೆ. ಆದರೆ ಎಲ್ಲಾ ಜನಾಂಗಕ್ಕೂ ಅನುಕೂಲವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮರು ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ ಬಹಳಷ್ಟು ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ಮಾಡಿಲ್ಲ ಎಂದು ಸಹಸ್ರಾರು ಪತ್ರಗಳು ಹಾಗೂ ದೂರವಾಣಿ ಕರೆಗಳು ರಾಜ್ಯ ಒಕ್ಕಲಿಗರ ಸಂಘಕ್ಕೆ (vokkaligara sangha) ಬಂದಿವೆ. ಹೀಗಾಗಿ ಈಗಾಗಲೇ ಎರಡು-ಮೂರು ಬಾರಿ ಸರ್ಕಾರಕ್ಕೆ ಹಾಗೂ ಹಿಂದುಳಿದ ವರ್ಗಗಳ ಆಯೋಗಕ್ಕೆ ಮರು ಸಮೀಕ್ಷೆ ನಡೆಸುವಂತೆ ಸಂಘದ ವತಿಯಿಂದ ಮನವಿ ಮಾಡಿದ್ದೇವೆ.

ಇದೇ ರೀತಿಯ ಒತ್ತಾಯವನ್ನು ಅಖಿಲ ಭಾರತ ವೀರಶೈವ ಮಹಾಸಭಾ ಕೂಡ ಮಾಡಿದೆ. ಬೇರೆ ಬೇರೆ ಸಮುದಾಯದವರೂ ಮನವಿ ಮಾಡಿದ್ದಾರೆ. ಈ ಸಂಬಂಧದ ಮನವಿಗಳನ್ನು ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಗಂಭೀರವಾಗಿ ಪರಿಗಣಿಸಿ ಗಮನಹರಿಸಬೇಕು. ಎಲ್ಲಾ ಸಮುದಾಯಗಳ ಏಳಿಗೆಗೆ ಅನುಕೂಲವಾಗುವಂತಹ ಜಾತಿಗಣತಿಯ ವರದಿ ಪಡೆದು ಅನುಷ್ಠಾನಗೊಳಿಸಬೇಕು ಎಂದು ಆಗ್ರಹ ಮಾಡಿದ್ದಾರೆ.

ಕೆಲವರ ಹಾಗೂ ಕೆಲವು ಸಂಘಟನೆಗಳ ಒತ್ತಡಕ್ಕೆ ಸರ್ಕಾರ ಮಣಿಯಬಾರದು. ರಾಜಕೀಯ ದುರುದ್ದೇಶದಿಂದ ಜಾತಿಗಣತಿ ಅನುಷ್ಠಾನವಾಗಬಾರದು. ಸರ್ವಸಮ್ಮತವಾದ ವರದಿ ಅನುಷ್ಠಾನಗೊಳ್ಳಬೇಕು. ಒಂದು ವೇಳೆ ವೈಜ್ಞಾನಿಕ ವರದಿ ಪಡೆಯದೇ ಹಠಕ್ಕೆ ಬಿದ್ದು ಅವೈಜ್ಞಾನಿಕ ಹಾಗೂ ವಾಸ್ತವಕ್ಕೆ ದೂರವಿರುವ ವರದಿ ಅನುಷ್ಠಾನಕ್ಕೆ ಸರ್ಕಾರ ಮುಂದಾದರೆ ನಮ್ಮ ಸಂಘದ ನೇತೃತ್ವದದಲ್ಲಿ ಸಮಾಜದ ಇತರ ಸಂಘ-ಸಂಸ್ಥೆಗಳ ಜೊತೆಗೂಡಿ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ.

ಇಷ್ಟೇ ಅಲ್ಲ, ತಾಲ್ಲೂಕು ಮಟ್ಟದಲ್ಲೂ ತೀವ್ರವಾದ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]