ಜಾತಿಗಣತಿ ವರದಿ ಅನುಷ್ಠಾನಗೊಳಿಸದಂತೆ ಒಕ್ಕಲಿಗರ ಸಂಘ ಒತ್ತಾಯ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಹೆಸರಲ್ಲಿ ನಡೆಸಿರುವ ಜಾತಿಗಣತಿಯನ್ನು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಬಾರದು ಎಂದು ರಾಜ್ಯ ಒಕ್ಕಲಿಗರ ಸಂಘ (vokkaligara sangha) ಒತ್ತಾಯಿಸಿದೆ.

ರಾಜ್ಯ ಎಲ್ಲಾ ಸಮುದಾಯಗಳಿಗೆ ಅನುಕೂಲವಾಗುವಂತೆ ಎಲ್ಲಾ ಜನವಸತಿಗಳಿಗೆ ಭೇಟಿ ನೀಡಿ ಹೊಸದಾಗಿ ಮರು ಸಮೀಕ್ಷೆ ನಡೆಸಬೇಕು ಎಂದು ಮತ್ತೊಮ್ಮೆ ಒತ್ತಾಯ ಮಾಡಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಮತ್ತು ಪದಾಧಿಕಾರಿಗಳು, ಪ್ರತಿ ಮನೆಗೆ ಭೇಟಿ ನೀಡಿ ಅಗತ್ಯವಿರುವ ಮಾಹಿತಿ ಸಂಗ್ರಹಿಸಿ ವರದಿಯನ್ನು ಕಾಲಮಿತಿಯಲ್ಲಿ ಪಡೆಯಬೇಕು ಹಾಗೂ ಸಾರ್ವಜನಿಕವಾಗಿ ಮುಕ್ತ ಚರ್ಚೆಗೆ ಅವಕಾಶ ನೀಡಿದ ಬಳಿಕ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಜಾತಿಗಣತಿ ವರದಿ ಅನುಷ್ಠಾನ ಮಾಡಲು ನಮ್ಮ ಯಾವುದೇ ಆಕ್ಷೇಪವಿಲ್ಲ. ನಾವು (vokkaligara sangha) ಮುಕ್ತವಾಗಿ ಸ್ವಾಗತ ಮಾಡುತ್ತೇವೆ. ಆದರೆ ಎಲ್ಲಾ ಜನಾಂಗಕ್ಕೂ ಅನುಕೂಲವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮರು ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ ಬಹಳಷ್ಟು ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ಮಾಡಿಲ್ಲ ಎಂದು ಸಹಸ್ರಾರು ಪತ್ರಗಳು ಹಾಗೂ ದೂರವಾಣಿ ಕರೆಗಳು ರಾಜ್ಯ ಒಕ್ಕಲಿಗರ ಸಂಘಕ್ಕೆ (vokkaligara sangha) ಬಂದಿವೆ. ಹೀಗಾಗಿ ಈಗಾಗಲೇ ಎರಡು-ಮೂರು ಬಾರಿ ಸರ್ಕಾರಕ್ಕೆ ಹಾಗೂ ಹಿಂದುಳಿದ ವರ್ಗಗಳ ಆಯೋಗಕ್ಕೆ ಮರು ಸಮೀಕ್ಷೆ ನಡೆಸುವಂತೆ ಸಂಘದ ವತಿಯಿಂದ ಮನವಿ ಮಾಡಿದ್ದೇವೆ.

ಇದೇ ರೀತಿಯ ಒತ್ತಾಯವನ್ನು ಅಖಿಲ ಭಾರತ ವೀರಶೈವ ಮಹಾಸಭಾ ಕೂಡ ಮಾಡಿದೆ. ಬೇರೆ ಬೇರೆ ಸಮುದಾಯದವರೂ ಮನವಿ ಮಾಡಿದ್ದಾರೆ. ಈ ಸಂಬಂಧದ ಮನವಿಗಳನ್ನು ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಗಂಭೀರವಾಗಿ ಪರಿಗಣಿಸಿ ಗಮನಹರಿಸಬೇಕು. ಎಲ್ಲಾ ಸಮುದಾಯಗಳ ಏಳಿಗೆಗೆ ಅನುಕೂಲವಾಗುವಂತಹ ಜಾತಿಗಣತಿಯ ವರದಿ ಪಡೆದು ಅನುಷ್ಠಾನಗೊಳಿಸಬೇಕು ಎಂದು ಆಗ್ರಹ ಮಾಡಿದ್ದಾರೆ.

ಕೆಲವರ ಹಾಗೂ ಕೆಲವು ಸಂಘಟನೆಗಳ ಒತ್ತಡಕ್ಕೆ ಸರ್ಕಾರ ಮಣಿಯಬಾರದು. ರಾಜಕೀಯ ದುರುದ್ದೇಶದಿಂದ ಜಾತಿಗಣತಿ ಅನುಷ್ಠಾನವಾಗಬಾರದು. ಸರ್ವಸಮ್ಮತವಾದ ವರದಿ ಅನುಷ್ಠಾನಗೊಳ್ಳಬೇಕು. ಒಂದು ವೇಳೆ ವೈಜ್ಞಾನಿಕ ವರದಿ ಪಡೆಯದೇ ಹಠಕ್ಕೆ ಬಿದ್ದು ಅವೈಜ್ಞಾನಿಕ ಹಾಗೂ ವಾಸ್ತವಕ್ಕೆ ದೂರವಿರುವ ವರದಿ ಅನುಷ್ಠಾನಕ್ಕೆ ಸರ್ಕಾರ ಮುಂದಾದರೆ ನಮ್ಮ ಸಂಘದ ನೇತೃತ್ವದದಲ್ಲಿ ಸಮಾಜದ ಇತರ ಸಂಘ-ಸಂಸ್ಥೆಗಳ ಜೊತೆಗೂಡಿ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ.

ಇಷ್ಟೇ ಅಲ್ಲ, ತಾಲ್ಲೂಕು ಮಟ್ಟದಲ್ಲೂ ತೀವ್ರವಾದ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದರ್ಗಾಜೋಗಿಹಳ್ಳಿಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಬಸವ ಜಯಂತಿ ಅಂಗವಾಗಿ ಸಿದ್ದೇಶ್ವರ ದೇವಾಲಯದ 15ನೇ ವಾರ್ಷಿಕೋತ್ಸವ ಹಾಗೂ ಶ್ರೀ ಸಿದ್ದೇಶ್ವರ ಭವನದ (Sri Siddeshwara Bhavan) ಉದ್ಘಾಟನಾ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

[ccc_my_favorite_select_button post_id="121189"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!