akka cafe: ದೇವನಹಳ್ಳಿಯಲ್ಲಿ ಅಕ್ಕ ಬೇಕರಿ/ಕೆಫೆಗೆ ಚಾಲನೆ: ರಾಜ್ಯಾದ್ಯಂತ 50 ಅಕ್ಕ ಬೇಕರಿ/ಕೆಫೆ ಸ್ಥಾಪನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ; ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ (akka cafe) ಸಹಕಾರಿಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹೇಳಿದರು.

Guarantee scheme
ಎನ್ ವಿಶ್ವನಾಥ್

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನಿರ್ಮಿತಗೊಂಡಿರುವ ಅಕ್ಕ – ಬೇಕರಿ/ ಕೆಫೆ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಉಪಕ್ರಮದ ಅಡಿಯಲ್ಲಿ ʼಅಕ್ಕ ಕೆಫೆʼಯನ್ನು (akka cafe) ಪ್ರಾರಂಭಿಸಲಾಯಿತು.

ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(NRLM), ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಮೊದಲ ಅಕ್ಕ ಕೆಫೆಯನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಲಾಗಿದ್ದು, ದೇವನಹಳ್ಳಿಯಲ್ಲಿ 2ನೇ ಅಕ್ಕ ಕೆಫೆ/ ಬೇಕರಿ ಪ್ರಾರಂಭಿಸಲಾಗಿದೆ.

ರಾಜ್ಯಾದ್ಯಂತ 50 ಅಕ್ಕ ಕೆಫೆ (akka cafe) ತೆರೆಯಲಾಗುವುದು ಎಂದರು. ಹಾಗೇಯೇ ಮಹಿಳೆಯರ ಸಬಲೀಕರಣಕ್ಕೆ ರಾಜ್ಯಾದ್ಯಂತ 2500 ಕಾಫಿ ಕೆಫೆ ಸ್ಥಾಪನೆ ಮಾಡುವ ಉದ್ದೇಶವಿದೆ. 3500 ಮಹಿಳೆಯರು ತರಬೇತಿ ಪಡೆದುಕೊಂಡು ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೆ ತಂದಿದ್ದೇವೆ ಎಂದರು.

ಸ್ವಸಹಾಯ ಗುಂಪಿಗೆ ಸೇರಿದ 12 ಮಹಿಳೆಯರ ತಂಡವು ಈ ಕೆಫೆಯನ್ನು ನಡೆಸುತ್ತದೆ. ಅಕ್ಕ ಕೆಫೆ ಬೆಳಗ್ಗೆ 09 ರಿಂದ ರಾತ್ರಿ 09 ರ ವರೆಗೆ ವಾರವಿಡಿ ಕಾರ್ಯನಿರ್ಹಿಸಲಿದೆ. ಮತ್ತು ಇಲ್ಲಿ ಆರೋಗ್ಯಕರ, ಸ್ವಾದಿಷ್ಟಕರವಾದ ಆಹಾರ ಲಭ್ಯವಿದ್ದು, ಶುಚಿ-ರುಚಿಯ ಜೊತೆಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ಆಹಾರವನ್ನು ಪೂರೈಸಲಾಗುತ್ತದೆ.
ಸರ್ಕಾರ ಬಜೆಟ್​​ನಲ್ಲಿ ಘೋಷಣೆ ಮಾಡಿದಂತೆ ಅಕ್ಕ ಕೆಫೆಯು ಕಾರ್ಯರೂಪಕ್ಕೆ ಬಂದಿದೆ.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರನ್ನು ಬಲಗೊಳಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮಹಿಳೆಯರು ಸದುಪಯೋಗ ಪಡಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು. ಅಕ್ಕ ಕೆಫೆಯು ಒಂದು ಉತ್ತಮ ವೇದಿಕೆಯಾಗಿದ್ದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಲಿದೆ ಎಂದರು.

ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪನೆಗೆ ಮನವಿ

ಜಿಲ್ಲೆಯಲ್ಲಿ ನಿರುದ್ಯೋಗಿಗಳಿಗೆ ಕೌಶಲ್ಯ ಆಧಾರಿತ ತರಬೇತಿ ಅವಶ್ಯಕತೆ ಇದ್ದು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಸಚಿವರಾದ ಮುನಿಯಪ್ಪ ಅವರು ಮನವಿ ಮಾಡಿದರು. ಇದಕ್ಕೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಐಟಿಐ, ಜಿಟಿಟಿಸಿ ಕೇಂದ್ರಗಳನ್ನು ಮೇಲ್ದರ್ಜೆ ಏರಿಸಿ, ಮುಂದಿನ ದಿನಗಳಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಅದು ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ನಾರಾಯಣಸ್ವಾಮಿ, ತಾಲ್ಲೂಕು ಅಧ್ಯಕ್ಷ ಜಗನ್ನಾಥ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರಾದ ಪಿ.ಶ್ರೀವಿದ್ಯಾ, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿ.ಪಂ ಸಿ.ಇ.ಒ ಅನುರಾಧ, ತಾಪಂ ಇಒ ಶ್ರೀನಾಥ್ ಗೌಡ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಅಧಿಕಾರಿಗಳು ಸ್ವಸಹಾಯ ಗುಂಪುಗಳ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!