ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಸ್ವಾಗತ..!

ದೊಡ್ಡಬಳ್ಳಾಪುರ: ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥ ದೊಡ್ಡಬಳ್ಳಾಪುರ ನಗರಕ್ಕೆ ಆಗಮಿಸಿತು.

ನಗರದ ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ ಜ್ಯೋತಿ ರಥವನ್ನು ಕಲಾತಂಡಗಳೊಂದಿಗೆ ಸ್ವಾಗತಿಸಲಾಯಿತು.

ದೊಡ್ಡಬಳ್ಳಾಪುರಕ್ಕೆ ಆಗಮಿಸಿದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ  ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ,  ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ದ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಸಿರುವ ಹಿನಲ್ಲೆಯಲ್ಲಿ  ರಾಜ್ಯಾದ್ಯಂತ ನಡೆಯುವ ಕಿತ್ತೂರು ರಾಣಿ ಚೆನ್ನಮ್ಮ ವಿಜಯಯಾತ್ರೆ ನಡೆಯುತ್ತಿದೆ.

1824 ಅಕ್ಟೋಬರ್ 23 ರಂದು  ಕಿತ್ತೂರು  ರಾಣಿ ಚೆನ್ನಮ್ಮ  ಸೈನ್ಯದೊಂದಿಗೆ ಕಿತ್ತೂರು ಕೋಟೆಯ ಹೊರಗೆ ಈಸ್ಟ್ ಇಂಡಿಯಾ ಕಂಪನಿಯ ಸೈನಿಕರನ್ನು ಸೋಲಿಸಿದ ದಿನವಾಗಿದೆ. 

ಬ್ರಿಟಿಷರ ವಿರುದ್ದ ಮೊದಲ ಮಹಿಳಾ  ಹೋರಾಟಗಾರ್ತಿಗೆ 1824ರಲ್ಲಿ ದೊರೆತ ವಿಜಯವಾಗಿದೆ. 

1857 ರಲ್ಲಿ ನಡೆದ ಸಿಪಾಯಿ ದಂಗೆಗೂ  ಮೊದಲೇ 1824ರಲ್ಲಿ ಬ್ರಿಟಿಷರ ವಿರುದ್ದ  ಹೋರಾಟ ನಡೆಸಿ ಗೆಲುವು ಸಾಧಿಸಿದ  ಕಿತ್ತೂರು ರಾಣಿ ಚೆನ್ನಮ್ಮನ ಧೀರತ್ವ ಮತ್ತು ದೇಶಪ್ರೇಮ, ದಕ್ಷ ಆಡಳಿತ ವಿಧಾನ ಎಲ್ಲರಿಗೂ ಆದರ್ಶಪ್ರಾಯ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ತೆರಿಗೆ ಕೊಡುವುದಿಲ್ಲ ಎಂದು ಹೇಳುವ ಮೂಲಕ ನಮಗೆ ಸ್ವಾಭಿಮಾನ ಪ್ರದರ್ಶನ ಮಾಡಿದರು. ಸಂಗೊಳ್ಳಿ ರಾಯಣ್ಣ ಅಂತಹ ಸ್ವಾತಂತ್ರ್ಯ ಸೇನಾನಿ ಕಿತ್ತೂರು ರಾಣಿ ಚೆನ್ನಮ್ಮನ ರಾಜ್ಯದಲ್ಲಿ ಇದ್ದರು.

ಮಹಿಳೆಯರು ಘನತೆ ಮತ್ತು ನ್ಯಾಯವನ್ನು ಕಾಪಾಡುವುದರಲ್ಲಿ  ಮುಂಚೂಣಿಯಲ್ಲಿರಬಹುದು  ಎಂಬುದನ್ನು ತೋರಿಸಿಕೊಟ್ಟರು. ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ದೇಶದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಇಂತಹ  ವೀರ ಮಹಿಳೆಯ ನೆನಪಿನಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಪ್ರತಿವರ್ಷ ಕಿತ್ತೂರು ಉತ್ಸವ ನಡೆಯುತ್ತದೆ.

ಈ ವರ್ಷ ಕಿತ್ತೂರು ವಿಜಯಕ್ಕೆ 200 ವರ್ಷ ಆಗಿರುವ ಪ್ರಯುಕ್ತ ಅಕ್ಟೋಬರ್ 23, 24, 25ರಂದು ಕಿತ್ತೂರಿನಲ್ಲಿ ವಿಜಯೋತ್ಸವ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾಲ್ಲೂಕು ಪಂಚಾಯಿತಿ  ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು, ನಗರಸಭೆ  ಪೌರಾಯುಕ್ತ ಕಾರ್ತಿಕ್ ಈಶ್ವರ್, ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಸಫೀರ್,  ಕಾಡನೂರು ಗ್ರಾಮಪಂಚಾಯಿತಿ ಅಧ್ಯಕ್ಷ ಮಧುಸೂದನ್, ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು  ಭಾಗವಹಿಸಿದ್ದರು.

ದೊಡ್ಡಬಳ್ಳಾಪುರದಿಂದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥವನ್ನು  ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿಗೆ ಕಳುಹಿಸಿ ಕೊಡಲಾಯಿತು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!