ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಸ್ವಾಗತ..!

ದೊಡ್ಡಬಳ್ಳಾಪುರ: ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥ ದೊಡ್ಡಬಳ್ಳಾಪುರ ನಗರಕ್ಕೆ ಆಗಮಿಸಿತು.

ನಗರದ ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ ಜ್ಯೋತಿ ರಥವನ್ನು ಕಲಾತಂಡಗಳೊಂದಿಗೆ ಸ್ವಾಗತಿಸಲಾಯಿತು.

ದೊಡ್ಡಬಳ್ಳಾಪುರಕ್ಕೆ ಆಗಮಿಸಿದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ  ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ,  ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ದ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಸಿರುವ ಹಿನಲ್ಲೆಯಲ್ಲಿ  ರಾಜ್ಯಾದ್ಯಂತ ನಡೆಯುವ ಕಿತ್ತೂರು ರಾಣಿ ಚೆನ್ನಮ್ಮ ವಿಜಯಯಾತ್ರೆ ನಡೆಯುತ್ತಿದೆ.

1824 ಅಕ್ಟೋಬರ್ 23 ರಂದು  ಕಿತ್ತೂರು  ರಾಣಿ ಚೆನ್ನಮ್ಮ  ಸೈನ್ಯದೊಂದಿಗೆ ಕಿತ್ತೂರು ಕೋಟೆಯ ಹೊರಗೆ ಈಸ್ಟ್ ಇಂಡಿಯಾ ಕಂಪನಿಯ ಸೈನಿಕರನ್ನು ಸೋಲಿಸಿದ ದಿನವಾಗಿದೆ. 

ಬ್ರಿಟಿಷರ ವಿರುದ್ದ ಮೊದಲ ಮಹಿಳಾ  ಹೋರಾಟಗಾರ್ತಿಗೆ 1824ರಲ್ಲಿ ದೊರೆತ ವಿಜಯವಾಗಿದೆ. 

1857 ರಲ್ಲಿ ನಡೆದ ಸಿಪಾಯಿ ದಂಗೆಗೂ  ಮೊದಲೇ 1824ರಲ್ಲಿ ಬ್ರಿಟಿಷರ ವಿರುದ್ದ  ಹೋರಾಟ ನಡೆಸಿ ಗೆಲುವು ಸಾಧಿಸಿದ  ಕಿತ್ತೂರು ರಾಣಿ ಚೆನ್ನಮ್ಮನ ಧೀರತ್ವ ಮತ್ತು ದೇಶಪ್ರೇಮ, ದಕ್ಷ ಆಡಳಿತ ವಿಧಾನ ಎಲ್ಲರಿಗೂ ಆದರ್ಶಪ್ರಾಯ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ತೆರಿಗೆ ಕೊಡುವುದಿಲ್ಲ ಎಂದು ಹೇಳುವ ಮೂಲಕ ನಮಗೆ ಸ್ವಾಭಿಮಾನ ಪ್ರದರ್ಶನ ಮಾಡಿದರು. ಸಂಗೊಳ್ಳಿ ರಾಯಣ್ಣ ಅಂತಹ ಸ್ವಾತಂತ್ರ್ಯ ಸೇನಾನಿ ಕಿತ್ತೂರು ರಾಣಿ ಚೆನ್ನಮ್ಮನ ರಾಜ್ಯದಲ್ಲಿ ಇದ್ದರು.

ಮಹಿಳೆಯರು ಘನತೆ ಮತ್ತು ನ್ಯಾಯವನ್ನು ಕಾಪಾಡುವುದರಲ್ಲಿ  ಮುಂಚೂಣಿಯಲ್ಲಿರಬಹುದು  ಎಂಬುದನ್ನು ತೋರಿಸಿಕೊಟ್ಟರು. ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ದೇಶದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಇಂತಹ  ವೀರ ಮಹಿಳೆಯ ನೆನಪಿನಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಪ್ರತಿವರ್ಷ ಕಿತ್ತೂರು ಉತ್ಸವ ನಡೆಯುತ್ತದೆ.

ಈ ವರ್ಷ ಕಿತ್ತೂರು ವಿಜಯಕ್ಕೆ 200 ವರ್ಷ ಆಗಿರುವ ಪ್ರಯುಕ್ತ ಅಕ್ಟೋಬರ್ 23, 24, 25ರಂದು ಕಿತ್ತೂರಿನಲ್ಲಿ ವಿಜಯೋತ್ಸವ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾಲ್ಲೂಕು ಪಂಚಾಯಿತಿ  ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು, ನಗರಸಭೆ  ಪೌರಾಯುಕ್ತ ಕಾರ್ತಿಕ್ ಈಶ್ವರ್, ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಸಫೀರ್,  ಕಾಡನೂರು ಗ್ರಾಮಪಂಚಾಯಿತಿ ಅಧ್ಯಕ್ಷ ಮಧುಸೂದನ್, ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು  ಭಾಗವಹಿಸಿದ್ದರು.

ದೊಡ್ಡಬಳ್ಳಾಪುರದಿಂದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥವನ್ನು  ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿಗೆ ಕಳುಹಿಸಿ ಕೊಡಲಾಯಿತು.

ರಾಜಕೀಯ

ದೊಡ್ಡಬಳ್ಳಾಪುರ: ತೀವ್ರವಾದ ರೈತರ ಪ್ರತಿಭಟನೆ.. ಡಿಸಿ ಬರಬೇಕೆಂದು ಪಟ್ಟು, ರಸ್ತೆ ತಡೆಯ ವಾರ್ನಿಂಗ್| Video

ದೊಡ್ಡಬಳ್ಳಾಪುರ: ತೀವ್ರವಾದ ರೈತರ ಪ್ರತಿಭಟನೆ.. ಡಿಸಿ ಬರಬೇಕೆಂದು ಪಟ್ಟು, ರಸ್ತೆ ತಡೆಯ ವಾರ್ನಿಂಗ್|

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ (KIADB) ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿ ಉದ್ದೇಶಿಸಿರುವ 2100 ಎಕರೆ ಭೂ ಸ್ವಾಧೀನದ ವಿರುದ್ಧ ರೈತರು ಕೆರಳಿದ್ದು, ಬಿರು ಬಿಸಿಲಿನಲ್ಲಿಯೂ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

[ccc_my_favorite_select_button post_id="120432"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!