ನ.1 ರಂದು ಅದ್ದೂರಿ‌ ರಾಜ್ಯೋತ್ಸವ; ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಡಿಸಿ

ಬೆಳಗಾವಿ; ಪ್ರತಿ ವರ್ಷದಂತೆ ಈ ಬಾರಿಯೂ ನ.1 ರಂದು ಕರ್ನಾಟಕ‌ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು; ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಬೆಳಗಾವಿ ಜಿಲ್ಲಾ‌ ಪಂಚಾಯತ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನ.1 ರಂದು ದೀಪಾವಳಿ ಹಬ್ಬದ ದಿನವೇ ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲಾಗುವದು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ‌ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನ.1 ರಂದು ದೀಪಾವಳಿ ಇರುವ ಹಿನ್ನಲೆಯಲ್ಲಿ‌ ಅದೇ ದಿನ ರಾಜ್ಯೋತ್ಸವ ಆಚರಣೆ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಿದ ಬಳಿಕ ನ.1 ರಂದೇ ರಾಜ್ಯೋತ್ಸವ ಆಚರಿಸಲು ತೀರ್ಮಾನಿಸಲಾಯಿತು.

ರಾಜ್ಯೋತ್ಸವದ ಹಿನ್ನೆಲೆಯಲ್ಲಿ‌ ಕನ್ನಡ‌ ನಾಡು ನುಡಿಗಾಗಿ ಶ್ರಮಿಸಿದ ಕನ್ನಡ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು. ಅಲ್ಲದೇ ಈ ಬಾರಿ‌ ಕನ್ನಡ ಪರ ಹೋರಾಟಗಾರರು ಹಾಗೂ ಮಾಧ್ಯಮ ಪ್ರತಿನಿಧಿಗಳನ್ನು ಸನ್ಮಾನಿಸಲು ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುವುದು. ಈ ಬಾರಿ ರಾಜ್ಯೋತ್ಸವ ಮೆರವಣಿಗೆಗೆ ಆಗಮಿಸುವ ಮಹಿಳೆಯರಿಗಾಗಿ ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಬೆಳಗಾವಿ ಜಿಲ್ಲೆ ಕರ್ನಾಟಕದಲ್ಲಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಡಿದ ಮಹನೀಯರ ಭಾವಚಿತ್ರಗಳನ್ನು ಮೆರವಣಿಗೆ ಮಾರ್ಗದುದ್ದಕ್ಕೂ ಅಳವಡಿಸಬೇಕು ಎಂದು ಮೆಹಬೂಬ್ ಮಕಾನದಾರ ಅವರು ನೀಡಿದ ಸಲಹೆಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಈ ಬಾರಿಯ ಮೆರವಣಿಗೆಯಲ್ಲಿ ಇದನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ರೂಪಕಗಳಿಗೆ ಪ್ರಶಸ್ತಿ ನೀಡುವುದರ ಜತೆಗೆ ರಾಣಿ ಚನ್ನಮ್ಮನ ಮೂರ್ತಿಗೆ ಆಕಾಶದಿಂದ ಪುಷ್ಪವೃಷ್ಟಿ‌ ಮಾಡಲು ಪ್ರಯತ್ನಿಸಲಾಗುವದು ಎಂದರು.

ಕರಾಳ ದಿನಾಚರಣೆಗೆ ವಿರೋಧ:

ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂಬ ಕನ್ನಡ ಪರ ಸಂಘಟನೆಗಳ ಒಕ್ಕೊರಲಿನ ಮನವಿಗೆ‌ ಸ್ಪಂಧಿಸಿದ ಜಿಲ್ಲಾಧಿಕಾರಿಗಳು, ಈ ಬಾರಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಸಭೆಗೆ ತಿಳಿಸಿದರು.

ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ರಾಜ್ಯಮಟ್ಟದ ಪ್ರಶಸ್ತಿಗಾಗಿ ಕನ್ನಡ ಪರ ಹೋರಾಟಗಾರರಾದ ಅಶೋಕ ಚಂದರಗಿ ಅವರ ಹೆಸರನ್ನು ಶಿಫಾರಸ್ಸು ಮಾಡಬೇಕು ಎಂಬ ಕನ್ನಡ ಪರ ಸಂಘಟನೆಗಳ ಒಕ್ಕೊರಲಿನ ಒತ್ತಾಯದಂತೆ ಅವರ ಹೆಸರನ್ನು ರಾಜ್ಯೋತ್ಸವ ಪ್ರಶಸ್ತಿಗಾಗಿ ಶಿಫಾರಸ್ಸು ಮಾಡಲಾಗುವುದು ಎಂದು ಸಭೆಗೆ ತಿಳಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿರುವ ವೇದಿಕೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ‌ ವೇದಿಕೆ‌ ಸಿದ್ಧತೆ, ಧ್ವಜಾರೋಹಣ, ಆಂತ್ರಣ ಪತ್ರಿಕೆ, ಪಥಸಂಚಲನ, ಸಾಧಕರಿಗೆ ಸನ್ಮಾನ, ಮೆರವಣಿಗೆ, ರೂಪಕ‌ ವಾಹನಗಳಿಗೆ ಅನುಮತಿ, ಸಾಂಸಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಲಾಯಿತು.

ಕನ್ನಡ ಪರ ಹೋರಾಟಗಾರರಾದ ಶ್ರಿನಿವಾಸ ತಾಳೂಕರ ಅವರು ಮಾತನಾಡಿ, ಕರ್ನಾಟಕ ರಾಜ್ಯೋತ್ಸವದ ಸುವರ್ಣ ಸಂಭ್ರಮ ಆಚರಿಸಲಾಗುತ್ತಿದೆ ಈ ಹಿನ್ನಲೆಯಲ್ಲಿ ಹೆಚ್ಚಿನ ಕನ್ನಡ ಪರ ಹೋರಾಟಗಾರರಿಗೆ ಸನ್ಮಾನಿಸಲು ಸಲಹೆ ನೀಡಿದ ಅವರು ರಾಜ್ಯೊತ್ಸವದ ಮೆರವಣಿಗೆಯಲ್ಲಿ ವಿವಾದಾತ್ಮಕ ಧ್ವಜಗಳಿಗೆ ಅನುಮತಿ ನೀಡಬಾರದು ಎಂದರು.

ದೀಪಕ ಗುಡಗನಟ್ಟಿ ಮಾತನಾಡಿ, ಕಳೆದ ಬಾರಿಯಂತೆಯೇ ಈ ಬಾರಿಯು ಚನ್ನಮ್ಮ‌ ವೃತ್ತದ ಪುಷ್ಪಾಲಂಕಾರವನ್ನು ಮಾಡಬೇಕು. ರಾಜ್ಯೋತ್ಸವ ವೀಕ್ಷಣೆಗೆ ಬರುವ ಸಾರ್ವಜನಿಕರ ವಾಹನಗಳಿಗೆ ಸೂಕ್ತ ನಿಲುಗಡೆಗೆ ವ್ಯವಸ್ಥೆ, ರೂಪಕ‌ ವಾಹನಗಳಿಗೆ ಗೌರವ ಧನ ನೀಡಲು ಹಾಗೂ ರೂಪಕ‌ ವಾಹನಗಳ ಮೆರವಣಿಗೆಗೆ ಹೆಚ್ಚಿನ‌ ಸಮಯವಕಾಶ ನೀಡಲು ಮನವಿ ಮಾಡಿದರು.

ಮಹದೇವ ತಳವಾರ ಅವರು, ಸಾಧಕರ‌ ಸನ್ಮಾನದಲ್ಲಿ ಕೇವಲ‌ ಕನ್ನಡ ಪರ ಹೋರಾಟಗಾರರನ್ನು‌ ಮಾತ್ರ ಸನ್ಮಾನಿಸಬೇಕು. ಸನ್ಮಾನ ಸಂದರ್ಭದಲ್ಲಿ ಶಾಶ್ವತವಾಗಿ ಇರುವಂತಹ ಪ್ರಶಸ್ತಿ ಪತ್ರ ಹಾಗೂ ನೆನಪಿನ‌ ಕಾಣಿಕೆಗಳನ್ನು ನೀಡಲು‌ ಸಲಹೆ ನೀಡಿದರು.

ಮೆಹಬೂಬ ಮಕಾನದಾರ ಅವರು, “ಸನ್ಮಾನಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಹೋರಾಟಗಾರರನ್ನು, ಸಾಧಕರನ್ನು ಗುರುತಿಸಲು ಪ್ರತ್ಯೇಕ ಸಮಿತಿಯನ್ನು ರಚಿಸಬೇಕು. ಈ ಸಮಿತಿ‌ ಪ್ರತಿವರ್ಷ ಪುನರ್ ರಚನೆಯಾಗಬೇಕು. ಕಳೆದ ಬಾರಿ ರಾಜ್ಯೋತ್ಸವಕ್ಕಿಂತ ಈ ಬಾರಿ ವಿಜೃಂಭಣೆಯಿಂದ ಆಚರಣೆಯಾಗಬೇಕು. ಮೆರವಣಿಗೆ ಸಂದರ್ಭದಲ್ಲಿ ಮಹಿಳೆಯರಿಗೆ ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ ಮಾಡಬೇಕು. ಮೆರವಣಿಗೆ ಸಾಗುವ ದಾರಿಯಲ್ಲಿ ಕನ್ನಡ ನಾಡಿನ ಮಹನೀಯರ ಭಾವಚಿತ್ರಗಳನ್ನು ಪ್ರದರ್ಶಿಸಬೇಕು. ಅಲ್ಲದೇ ರಾಣಿ ಚನ್ನಮ್ಮನ ಮೂರ್ತಿಗೆ ಹೆಲಿಕ್ಯಾಪ್ಟರ್ ಮೂಲಕ‌ ಪುಷ್ಪ ವೃಷ್ಟಿ ಮಾಡಬೇಕು” ಎಂದು ಸಲಹೆ ನೀಡಿದರು.

ರಾಜೀವ ಟೋಪಣ್ಣವರ ಅವರು ಮಾತನಾಡಿ, ಈ ಬಾರಿ ರಾಜ್ಯೊತ್ಸವ ಮೆರವಣಿಗೆಯಲ್ಲಿ ಬೇರೆ ಬೇರೆ ಕಲಾವಿದರಿಗೆ ಅವಕಾಶ ಮಾಡಿಕೊಡಬೇಕು. ಮೈಸೂರು ದಸರಾ ಮಾದರಿ ರೀತಿ ಮೆರವಣಿಗೆ ಜರುಗಿಸಲು ಸಲಹೆ ನೀಡಿದರು.
ಸಂಘಟನೆಗಳ ಮುಖಂಡ ಮಲ್ಲೇಶ್ ಚೌಗಲೆ, ಮಹೇಶ್ ಶೀಗಿಹಳ್ಳಿ, ರಾಜೇಂದ್ರ ಸೊಂಟಕ್ಕಿ ಸೇರಿದಂತೆ ವಿವಿಧ ಪದಾಧಿಕಾರಿಗಳು ರಾಜ್ಯೋತ್ಸವ ಆಚರಣೆ ಕುರಿತು ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ನಗರ ಪೋಲಿಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ‌ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ‌ ಗುಳೇದ, ಜಿಲ್ಲಾ‌ ಪಂಚಾಯತ ಸಿ.ಇ.ಓ ರಾಹುಲ ಶಿಂಧೆ
ಪ್ರಶಿಕ್ಷಣಾರ್ಥಿ ಆಯ್.ಎ.ಎಸ್. ಅಧಿಕಾರಿ ದಿನೇಶಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೆಶಕಿ ವಿದ್ಯಾವತಿ ಭಜಂತ್ರಿ, ಇಲಾಖೆಗಳ ಅಧಿಕಾರಿಗಳು, ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!