ಅಮೆರಿಕದಲ್ಲಿ ದೊಡ್ಡಬಳ್ಳಾಪುರ ಸಮೀಪದ ʼಕ್ವಿನ್‌ ಸಿಟಿʼ ಕೇಂದ್ರಿತ ಹೂಡಿಕೆ ಚರ್ಚೆ; ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ

ಬೆಂಗಳೂರು: ʼರಾಜ್ಯ ಸರ್ಕಾರ ಇತ್ತೀಚೆಗೆ ಚಾಲನೆ ನೀಡಿರುವ ಮಹತ್ವಾಕಾಂಕ್ಷಿ ಜ್ಞಾನ, ಆರೋಗ್ಯ ಮತ್ತು ನಾವೀನ್ಯತಾ ನಗರ (ಕ್ವಿನ್‌ ಸಿಟಿ) ಯೋಜನೆಯು, ಅಮೆರಿಕದಲ್ಲಿನ ಜಾಗತಿಕ ಉದ್ಯಮ ದಿಗ್ಗಜರ ಜೊತೆಗಿನ ಸಮಾಲೋಚನೆಗಳಲ್ಲಿ ಚರ್ಚೆಯ ಕೇಂದ್ರಬಿಂದು ಆಗಿದೆʼ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ತಿಳಿಸಿದ್ದಾರೆ.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಅಮೆರಿಕದ ದೈತ್ಯ ಉದ್ಯಮಗಳಿಗೆ ಆಹ್ವಾನ ನೀಡಲು ಅಮೆರಿಕ ಪ್ರವಾಸದಲ್ಲಿ ಇರುವ ಸಚಿವ ಪಾಟೀಲರು, ನ್ಯೂಯಾರ್ಕ್‌ನಲ್ಲಿ ಫಿಡೆಲಿಟಿ, ಕೊಲಂಬಿಯಾ ವಿಶ್ವವಿದ್ಯಾಲಯ, ಆ್ಯಕ್ಸಿಯಂ ಸ್ಪೇಸ್‌, ಬೇಟಾ ಟೆಕ್ನಾಲಜಿ ಕಂಪನಿಗಳ ಪ್ರಮುಖರ ಜೊತೆಗೆ ನಡೆಸಿದ ಸಭೆಗಳಲ್ಲಿ ʼಕ್ವಿನ್‌ ಸಿಟಿʼ ಯೋಜನೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

ಅಮೆರಿಕದಲ್ಲಿ ದೊಡ್ಡಬಳ್ಳಾಪುರ ಸಮೀಪದ ʼಕ್ವಿನ್‌ ಸಿಟಿʼ ಕೇಂದ್ರಿತ ಹೂಡಿಕೆ ಚರ್ಚೆ; ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ

ರಾಜ್ಯದಲ್ಲಿ ಸಮತೋಲನದ ಕೈಗಾರಿಕಾ ಬೆಳವಣಿಗೆ ಸಾಧಿಸಲು ದಾಬಸ್‌ಪೇಟೆ ಬಳಿ 5,800 ಎಕರೆ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ʼಕ್ವಿನ್‌ ಸಿಟಿʼ ಯೋಜನೆಯಲ್ಲಿ ಭಾಗಿಯಾಗುವ ಬಗ್ಗೆ ಅಮೆರಿಕದ ವಿವಿಧ ಕಂಪನಿಗಳು ತೀವ್ರ ಆಸಕ್ತಿ ತೋರಿಸಿವೆ.
ಫಿಡೆಲಿಟಿ ಸೆಂಟರ್‌ ಫಾರ್‌ ಅಪ್ಲೈಡ್‌ ಟೆಕ್ನಾಲಜಿಯ ಹಿರಿಯ ಉಪಾಧ್ಯಕ್ಷ ಬಿಜು ಕೆಕೆ ಅವರು, ʼಕ್ವಿನ್‌ ಸಿಟಿʼಯಲ್ಲಿ ವಹಿವಾಟು ವೃದ್ಧಿ ಹಾಗೂ ಬೆಳವಣಿಗೆ ಸಾಧ್ಯತೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.


ʼಕ್ವಿನ್‌ ಸಿಟಿ”ಯಲ್ಲಿನ ಹೊಸ ಶಿಕ್ಷಣ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಲು ಇರುವ ಅವಕಾಶಗಳ ಬಗ್ಗೆ ಕೊಲಂಬಿಯಾ ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳು ಪ್ರಮುಖವಾಗಿ ಚರ್ಚಿಸಿದ್ದಾರೆ. ಕೊಲಂಬಿಯಾ ವಿಶ್ವವಿದ್ಯಾಲಯದ ಪಾಲ್ಗೊಳ್ಳುವಿಕೆಯು ರಾಜ್ಯದಲ್ಲಿನ ಉನ್ನತ ಶಿಕ್ಷಣದ ಭವಿಷ್ಯ ರೂಪಿಸಲು ನೆರವಾಗಲಿದೆ.


ಆ್ಯಕ್ಸಿಯಂ ಸ್ಪೇಸ್‌ನ ಮುಖ್ಯ ರೆವಿನ್ಯೂ ಅಧಿಕಾರಿ ತೇಜ್‌ಪೌಲ್‌ ಭಾಟಿಯಾ ಅವರ ಜೊತೆಗೆ ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಬಾಹ್ಯಾಕಾಶ ಕ್ಷೇತ್ರದಲ್ಲಿ ವಹಿವಾಟು ವಿಸ್ತರಣೆಗೆ ಇರುವ ವಿಪುಲ ಅವಕಾಶಗಳನ್ನು ವಿಸ್ತೃತವಾಗಿ ಚರ್ಚಿಸಲಾಗಿದೆ.

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಅವಕಾಶ ಕುರಿತು ಸಚಿವರು ಬೀಕನ್‌ ಇಂಡಸ್ಟ್ರೀಸ್‌ನ ಸುರೇಶ್‌ ಮೀರಚಂದಾನಿ ಜೊತೆಗೆ ವಿವರವಾಗಿ ಚರ್ಚಿಸಿದ್ದಾರೆ.


ಬೇಟಾ ಟೆಕ್ನಾಲಜಿಸ್‌ನ ಬ್ಲೇಕ್‌ ಒಪ್ಸಾಹ್ಲ್ ಮತ್ತು ಹಂಚ್‌ ಮೊಬಿಲಿಟಿಯ ಪವನ್‌ ಬಕ್ಷಿ ಅವರನ್ನು ಭೇಟಿಯಾಗಿರುವ ಸಚಿವ ಪಾಟೀಲ ಅವರು. ನಗರ ವಾಯು ಸಂಚಾರ ಕ್ಷೇತ್ರದಲ್ಲಿನ ಅವಕಾಶಗಳ ಬಗ್ಗೆ ಚರ್ಚಿಸಿದ್ದಾರೆ. ರಾಜ್ಯದಲ್ಲಿ ತನ್ನ ತಯಾರಿಕಾ ಘಟಕ ಸ್ಥಾಪಿಸಬೇಕು ಎಂದು ಸಚಿವರು ಬೇಟಾ ಟೆಕ್ನಾಲಜಿಸ್‌ಗೆ ಆಹ್ವಾನ ನೀಡಿದ್ದಾರೆ.

ದುಂಡುಮೇಜಿನ ಸಭೆ:

ನ್ಯೂಯಾರ್ಕ್‌ನಲ್ಲಿನ ಭಾರತದ ಕಾನ್ಸುಲೇಟ್‌ ಜನರಲ್‌, ಅಮೆರಿಕ – ಭಾರತ ಕಾರ್ಯತಂತ್ರ ಪಾಲುದಾರಿಕೆ ವೇದಿಕೆ (ಯುಎಸ್‌ಐಎಸ್‌ಪಿ) ಸಹಯೋಗದಲ್ಲಿ ದುಂಡುಮೇಜಿನ ಸಭೆ ಆಯೋಜಿಸಿತ್ತು. ಅಂತರರಾಷ್ಟ್ರೀಯ ಸಹಯೋಗ ಮತ್ತು ಆರ್ಥಿಕ ಪಾಲುದಾರಿಕೆಗೆ ಕರ್ನಾಟಕವು ಸನ್ನದ್ಧ ಸ್ಥಿತಿಯಲ್ಲಿ ಇರುವುದನ್ನು ಸಭೆಯಲ್ಲಿ ಪ್ರಸ್ತುತಪಡಿಸಲಾಯಿತು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಅಮೆರಿಕಾದ ಉದ್ಯಮಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

ರಾಜಕೀಯ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ ಮತ್ತು ವಿಧಾಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇರಿಸಿರುವ ಹೆಜ್ಜೆ ಐತಿಹಾಸಿಕ ಎಂದು ಬಣ್ಣಿಸಿದ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy); ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ

[ccc_my_favorite_select_button post_id="121061"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!