Mysuru Dasara ಸ್ತಬ್ದ ಚಿತ್ರದಲ್ಲಿ ಕಡೆಗಣನೆ.. ದೊಡ್ಡಬಳ್ಳಾಪುರ ಶಾಪಗ್ರಸ್ತ ತಾಲೂಕೇ..?: ರಾಜಘಟ್ಟರವಿ ಕಿಡಿ

ದೊಡ್ಡಬಳ್ಳಾಪುರ: ಮೈಸೂರಿನ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ತಬ್ದ ಚಿತ್ರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಕಡೆಗಣಿಸಲಾಗಿದೆ ಎಂಬ ಆಕ್ರೋಶ ತಾಲೂಕಿನಾಧ್ಯಂತ ಬುಗಿಲೆದ್ದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ, ದೊಡ್ಡಬಳ್ಳಾಪುರ ಒಂದು ಶಾಪಗ್ರಸ್ತ ತಾಲೂಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲಾ ಅರ್ಹತೆ ಇದ್ದರು ಕೂಡ ಪ್ರತಿ ಸೌಲಭ್ಯಕ್ಕೂ ಪ್ರತಿಯೊಂದು ಸೇವೆಗೂ ಪ್ರತಿಭಟನೆ ಹೋರಾಟ ಮಾಡಿ ನ್ಯಾಯ ಪಡೆಯುವ ದೈನೇಸಿ ಸ್ಥಿತಿ ನಮ್ಮದು.
ನಮ್ಮ ತಾಲೂಕನ್ನು ಕಂಡರೆ ಯಾವುದೇ ಪಕ್ಷದ ಉಸ್ತುವಾರಿ ಸಚಿವರಾದರೂ ಮಲತಾಯಿ ಮಕ್ಕಳಂತೆ ಕಾಣುತ್ತಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ನಾವು (ದೊಡ್ಡಬಳ್ಳಾಪುರ ತಾಲೂಕು) ಈ ದೇಶದವರೆ ಅಲ್ಲವೇನೊ ಎನ್ನುವಂತೆ ವರ್ತಿಸುತ್ತದೆ. ಹಲವಾರು ದಶಕಗಳ ಹಿಂದಿನಿಂದ ನಮ್ಮದೆ ಉಪವಿಭಾಗ ಇದ್ದರೂ ಕೂಡ ಹಲವಾರು ಭಾರಿ ಮನವಿ ಹೋರಾಟ ನಡೆದರೂ ಇಂದಿಗೂ ಒಂದು ಭಾರಿಯಾದರೂ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳು ಬಂದು ಇಲ್ಲಿ ಧ್ವಜಾರೋಹಣ ಮಾಡಿಲ್ಲ ಎಂದು ಕಿಡಿಕಾರಿದರು.

ಯಾವುದೇ ಮಾನದಂಡದಿಂದ ನೋಡಿದರೂ ಜಿಲ್ಲಾ ಕೇಂದ್ರವಾಗಲೂ ಅರ್ಹತೆ ಇರುವ ತಾಲ್ಲೂಕು ಕೂಡ ನಮ್ಮದೇ. ಆದರೂ ನಮ್ಮ ತಾಲೂಕಿನ ಜನತೆಯ ಕೂಗು ಅರಣ್ಯ ರೋಧನ.

ಈಗ ತಾಜ ಉದಾಹರಣೆ ವಿಶ್ವ ವಿಖ್ಯಾತ. ಮೈಸೂರು ದಸರಾ ಜಂಬೂ ಸವಾರಿಯ ಸ್ತಬ್ಧ ಚಿತ್ರ ಗಳಲ್ಲಿ ನಮ್ಮ ತಾಲೂಕು ಕಾಣೆಯಾಗಿದೆ..! ಯಾಕೆ ನಮ್ಮ ತಾಲೂಕಿಗೆ ಇತಿಹಾಸವೆ ಇಲ್ಲವೆ ಅಥವಾ ನಾವು ಗ್ರಾಮಾಂತರ ಜಿಲ್ಲೆಯವರಲ್ಲವೆ..? ಎಂದು ಪ್ರಶ್ನಿಸಿರುವ ಅವರು, ಈ ರೀತಿಯ ತಾರತಮ್ಯ, ನಿರ್ಲಕ್ಷ್ಯ, ಕಡೆಗಣನೆ, ಮಲತಾಯಿ ಧೋರಣೆ ನಮಗೆ ಪದೇ ಪದೇ ಆಗುತ್ತಿದೆ.

ಇದನ್ನು ಎಷ್ಟು ದಿನ ಅಂತಾ ಸಹಿಸುವುದು ದೊಡ್ಡಬಳ್ಳಾಪುರ ತಾಲೂಕಿನ ಶಾಸಕರು ಕೂಡಲೇ ಇದರ ಬಗ್ಗೆ ಗಮನ ಹರಿಸಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳ ಬಳಿ ಕಾರಣ ಕೇಳಬೇಕು, ಸೂಕ್ತ ಎಚ್ಚರಿಕೆ ನೀಡಬೇಕು, ನಮ್ಮ ತಾಲೂಕಿನ ವಿರೋಧ ದಾಖಲಿಸಬೇಕು, ನಿರ್ಲಕ್ಷ್ಯದ ವಿರುದ್ಧ ಉಸ್ತುವಾರಿ ಸಚಿವರಿಗೆ ಹಾಗೂ ಸರ್ಕಾರಕ್ಕೆ ಪತ್ರ ಬರೆದು ಖಂಡಿಸಬೇಕು ಮುಂದೆ ಪುನರಾವರ್ತನೆ ಆಗದಂತೆ ಗಮನ ಹರಿಸಬೇಕು ಎಂದು ರಾಜಘಟ್ಟರವಿ ಒತ್ತಾಯಿಸಿದ್ದಾರೆ‌.

ಅಲ್ಲದೆ ದೊಡ್ಡಬಳ್ಳಾಪುರ ಕಡೆಗಣನೆ ಇದೊಂದು ಅಕ್ಷಮ್ಯ ನಡವಳಿಕೆ ಇದಕ್ಕೆ ತಾಲೂಕಿನ ಎಲ್ಲಾ ಜನತೆ ಧಿಕ್ಕಾರ ಕೂಗುತ್ತಾರೆ ಎಂದಿದ್ದಾರೆ.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]