Mysuru Dasara: ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ..

ಬೆಂಗಳೂರು: ಜಗತ್ಪ್ರಸಿದ್ಧ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರವು ಪ್ರಥಮ ಬಹುಮಾನ ಗಳಿಸಿದೆ ಎಂದು ದಸರಾ ಸ್ತಬ್ಧಚಿತ್ರ ಉಪಸಮಿತಿಯ ವಿಶೇಷಾಧಿಕಾರಿಗಳು ಪ್ರಕಟಿಸಿದ್ದಾರೆ.

ಸ್ತಬ್ಧಚಿತ್ರ ವಿಶೇಷತೆ

1924ರ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಐತಿಹಾಸಿಕ 39ನೇ ಅಧಿವೇಶನ ನಡೆದಿತ್ತು.ಈ ವರ್ಷ ಅಧಿವೇಶನಕ್ಕೆ 100 ವರ್ಷಗಳು ತುಂಬುತ್ತಿದೆ.

ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು “ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ” ಎಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾ ಜಂಬೂ ಸವಾರಿಯ ಸ್ತಬ್ದ ಚಿತ್ರ ಮೆರವಣಿಗೆಯಲ್ಲಿ ಈ ಎರಡು ಮಹತ್ವದ ಘಟನೆಗಳನ್ನು ಆಕರ್ಷಕವಾಗಿ ಬಿಂಬಿಸುವ ಸ್ತಬ್ದಚಿತ್ರವನ್ನು ವಿನ್ಯಾಸಗೊಳಿಸಲಾಗಿತ್ತು.

ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದರು. ಅಸ್ಪೃಶ್ಯತೆ ವಿರುದ್ಧ ಚಳುವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕರೆನಿಸಿಕೊಂಡರು.

ಬಸವಣ್ಣನವರ ತತ್ವಗಳಲ್ಲಿ ನಂಬಿಕೆ ಇಟ್ಟುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು “ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ”ಎಂದು ಘೋಷಿಸಿ ಮಹತ್ವದ ಹೆಜ್ಜೆಯನ್ನಿಟ್ಟರು. ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಲು ಆದೇಶಿಸಿದರು.

ಈ ಮಹತ್ವದ ಘಟನೆಗೆ ಸಾಕ್ಷಿಯೆಂಬಂತೆ ಸ್ತಬ್ದಚಿತ್ರದ ಮುಂಭಾಗದಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರ ಮಾದರಿ ಪ್ರತಿಕೃತಿಯನ್ನು ಚಿತ್ರಿಸಲಾಗಿತ್ತು. ಬಸವಣ್ಣನವರು ಕುಳಿತ ಪೀಠದ ಕೆಳಭಾಗದಲ್ಲಿ ಕೂಡಲಸಂಗಮದ ಮುಖ್ಯದ್ವಾರದ ಮಾದರಿಯನ್ನು ಚಿತ್ರಿಸಲಾಗಿತ್ತು.

ರಾಷ್ಟ್ರೀಯ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನವು ಒಂದು ಮಹತ್ವದ ಘಟನೆಯಾಗಿದೆ. ಇದು ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನವಾಗಿತ್ತು. ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಏಕತೆಯನ್ನು ಪುನಃಸ್ಥಾಪಿಸುವುದು.

ಅಸ್ಪೃಶ್ಯತೆ ಮತ್ತು ಇತರ ವಿಷಯಗಳ ಜೊತೆಗೆ ಚರಕ ಮತ್ತು ಖಾದಿಯ ಪ್ರಾಮುಖ್ಯತೆಯನ್ನು ಒತ್ತಿಹೇಳುವುದು ಅವರ ಪ್ರಾಥಮಿಕ ಉದ್ದೇಶವಾಗಿತ್ತು. ರಾಷ್ಟ್ರೀಯ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ಸಂಪೂರ್ಣ ಆವರಣವನ್ನು ವಿಜಯನಗರ ಎಂದು ಹೆಸರಿಸಲಾಗಿತ್ತು.

ಬಿಳಿ, ಹಸಿರು, ಕೇಸರಿ ಮತ್ತು ಧ್ವಜದ ಮಧ್ಯ ಭಾಗದಲ್ಲಿ ಚರಕ ಇರುವ ತ್ರಿವರ್ಣ ಧ್ವಜವನ್ನು ಇಲ್ಲಿ ಮೊದಲಬಾರಿಗೆ ಹಾರಿಸಿದರು. ಇದರ ಮಾದರಿ ಪ್ರತಿಕೃತಿಯನ್ನು ಮಧ್ಯ ಭಾಗದಲ್ಲಿ ತೋರಿಸಲಾಗಿದೆ.

ಅಧಿವೇಶನವು ಮರದ ಚೌಕಟ್ಟುಗಳಿಂದ ಸುತ್ತುವರಿದ ಎತ್ತರದ ವೇದಿಕೆಯಲ್ಲಿ ಮಹಾತ್ಮ ಗಾಂಧಿಯವರು ತಮ್ಮ ಅಧ್ಯಕ್ಷೀಯ ಭಾಷಣವನ್ನು ಮಾಡಿದ್ದರು. ಹಾಗೂ ಸಾರ್ವಜನಿಕರು ಈ ಭಾಷಣವನ್ನು ವೀಕ್ಷಿಸುತ್ತಿರುವ ಮಾದರಿ ಪ್ರತಿಕೃತಿಯನ್ನು ಮಧ್ಯ ಹಾಗೂ ಹಿಂಭಾಗದಲ್ಲಿ ವಿನ್ಯಾಸಗೊಳಿಸಲಾಗಿತ್ತು.

ಸ್ತಬ್ಧಚಿತ್ರದ ಕೆಳಭಾಗದ ಎರಡು ಕಡೆಗಳಲ್ಲಿ ಅಹಿಂಸೆ, ಸತ್ಯಾಗ್ರಹ, ಸ್ವರಾಜ್ಯ ಬಿಂಬಿಸುವ ಧ್ವಜವನ್ನು ಕೈಯಲ್ಲಿ ಹಿಡಿದಿರುವ ಮಾದರಿಯನ್ನು ಚಿತ್ರಿಸಲಾಗಿತ್ತು.

ಗಾಂಧೀಜಿ ಕನಸು ಕರ್ನಾಟಕದಲ್ಲಿ ನನಸು ಧೈಯವಾಕ್ಯದೊಮಾಹಿತಿ ಆರಂಭಗೊಂಡ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿಯ ಬಗ್ಗೆ ಮಾಹಿತಿ ಫಲಕ‌ ಅಳವಡಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರ ಪರಿಕಲ್ಪನೆಯಂತೆ, ಕ್ಷೇತ್ರ ಪ್ರಚಾರ ಶಾಖೆ ಜಂಟಿ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ.ಅವರು ಸ್ತಬ್ಧಚಿತ್ರ ನಿರ್ಮಾಣಕ್ಕೆ ಶ್ರಮಿಸಿದ್ದರು, ಪ್ರತಿರೂಪಿ ಕಲಾತಂಡದ ಶಶಿಧರ ಅಡಪ ಮತ್ತು ತಂಡದ ಕಲಾವಿದರು ಸ್ತಬ್ಧಚಿತ್ರ ತಯಾರಿಸಿದ್ದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]