ಯಲಹಂಕ: ನಗರದ ಹೊರವಲಯದಲ್ಲಿರುವ ರಾಜಾಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗನಾಯಕನಹಳ್ಳಿ ಬಳಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ (suicide) ಶರಣಾಗಿರುವ ಘಟನೆ ವರದಿಯಾಗಿದೆ.
ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ನೆಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಗುಲಬುರ್ಗಾ ಮೂಲದ ಕ್ಯಾಬ್ ಚಾಲಕ ಅವಿನಾಶ್ (35 ವರ್ಷ) ಪತಿ, ಮಮತಾ (32 ವರ್ಷ) ಪತ್ನಿ, ಅಧಿರಾ (04 ವರ್ಷ) ಮಗಳು, ಅನಯ್ (02 ವರ್ಷ) ಮಗ ಮೃತ ದುರ್ದೈವಿಗಳು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.