ಹೊಟ್ಟೆಪಾಡಿಗೆ ಜೊತೆಗಿರುವವರ ವಿಷಕಾರಿ ಮಾತು ನಂಬಬೇಡಿ: ಶಾಸಕ ಧೀರಜ್ ಮುನಿರಾಜುಗೆ ಕಾಂಗ್ರೆಸ್ ಮುಖಂಡರ ಸಲಹೆ

ದೊಡ್ಡಬಳ್ಳಾಪುರ; ಬಿಜೆಪಿಯಿಂದ ನಗರಸಭೆಯಲ್ಲಿ ಎರಡು ಬಾರಿ ಸದಸ್ಯನಾಗಿ, ಬಿಜೆಪಿ ನಗರ ಘಟಕದ ಅಧ್ಯಕ್ಷನಾಗಿ ಶ್ರಮವಹಿಸಿ ಪಕ್ಷವನ್ನು ಸಂಘಟಿಸಿದ್ದೇನೆ. ನಾವುಗಳು ಕಟ್ಟಿರುವ ಹುತ್ತದಲ್ಲಿ (ಮನೆಯಲ್ಲಿ) ಹಣ ಬಲದೊಂದಿಗೆ ಬಂದು ಸೇರಿಕೊಂಡು ಪಕ್ಷದಲ್ಲಿ ಹಾಗೂ ನಗರಸಭೆ ಸದಸ್ಯರಲ್ಲಿ ವಿಷ ಬೀಜ ಬಿತ್ತುವ ಮೂಲಕ ಶಾಸಕ ಧೀರಜ್ ಮುನಿರಾಜು ತಾರತಮ್ಯ ದೋರಣೆ ಮಾಡುತ್ತಿದ್ದಾರೆ ಎಂದು ನಗರಸಭೆ ಸದಸ್ಯ ಎಚ್.ಎಸ್.ಶಿವಶಂಕರ್ ದೂರಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆ ಚುನಾವಣೆ ವೇಳೆ ಈಗಿನ ಬಿಜೆಪಿಯ ಶಾಸಕರು ಸೇರಿದಂತೆ ಘಟಾನುಘಟಿ ಮುಖಂಡರು ನನ್ನನ್ನು ಸೋಲಿಸಲು ಶ್ರಮವಹಿಸಿದರು. ಆದರೆ ಜನರ ವಿಶ್ವಾಸದಿಂದ ಎರಡು ಬಾರಿ ಸದಸ್ಯನಾಗಿ ಆಯ್ಕೆಯಾಗಿದ್ದೇನೆ. ನಾವು ಎಂದಿಗೂ ವಿಷ ಇಟ್ಟಿಲ್ಲ. ಆದರೆ ಹೊಟ್ಟೆ ಪಾಡಿಗಾಗಿ ಮಾನ್ಯ ಶಾಸಕರ ಜೊತೆ ಸೇರಿರುವವರು ಇಲ್ಲ ಸಲ್ಲದ ವಿಷವನ್ನು ಹೇಳಿ ಶಾಸಕರ ದಾರಿ ತಪ್ಪಿಸುತ್ತಿದ್ದಾರೆ.

ಶಾಸಕರು ಆಯ್ಕೆಯಾಗಿ ಒಂದುವರೆ ವರ್ಷ ಕಳೆದರು ಸಹ ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ನಡೆದಿದಲ್ಲ.. ಕನಿಷ್ಠ ರಸ್ತೆಗಳಲ್ಲಿ ಬಿದ್ದಿರುವ ಒಂದು ಗುಂಡಿಯನ್ನು ಮುಚ್ಚಿಸಲು ಸಾಧ್ಯವಾಗಿಲ್ಲ.

ನಗರಸಭೆ ವ್ಯಾಪ್ತಿಯಲ್ಲಿ ಕಾಮಗಾರಿಗಳ ಕ್ರಿಯಾ ಯೋಜನೆ ಸಿದ್ದಪಡಿಸುವಾಗ ಸ್ಥಳೀಯ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಶಾಸಕ ಧೀರಜ್ ಮುನಿರಾಜು ಅವರು ಕೆಲವರ ಮಾತು ಕೇಳಿ ಸರ್ವಾಧಿಕಾರಿಯಂತೆ ಏಕಪಕ್ಷೀಯವಾಗಿ ಕ್ರಿಯಾಯೋಜನೆಗಳನ್ನು ರೂಪಿಸುವ ಮೂಲಕ ಸದಸ್ಯರನ್ನು ಕಡೆಗಣಿಸಿ, ಬಿಜೆಪಿ, ಜೆಡಿಎಸ್ ಸದಸ್ಯರು ಇರುವ ವಾರ್ಡ್ಗಳಿಗೆ ಮಾತ್ರ ಅನುದಾನ ನೀಡಿದ್ದಾರೆ. ಶಾಸಕರು ಯುವಕರಿದ್ದೀರಿ, ಇನ್ನೂ ಅನೇಕ ವರ್ಷ ರಾಜಕಾರಣ ಮಾಡಬೇಕಿದೆ.. ವಾಸ್ತವ ತಿಳಿದುಕೊಳ್ಳಿ.

ಅಲ್ಪಸಂಖ್ಯಾತರು ವಾಸ ಮಾಡುವ ಪ್ರದೇಶದಲ್ಲಿ ಮಾತ್ರ ಕಾಮಗಾರಿ ಕೈಗೊಳ್ಳಲು ನೀಡಲಾಗಿದ್ದ ಅನುದಾನವನ್ನು ಶಾಸಕರು ಕೆಲವರ ಮಾತು ಕೇಳಿ ತಾರತಮ್ಯ ನೀತಿ ಅನುಸರಿಸುವ ಮೂಲಕ ತಮಗೆ ಇಷ್ಟ ಬಂದ ವಾರ್ಡ್ಗಳಲ್ಲಿ ಅಲ್ಪಸಂಖ್ಯಾತರು ಇಲ್ಲದೇ ಇರುವಲ್ಲೂ ಕಾಮಗಾರಿಗಳನ್ನು ಮಾಡಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಅಲ್ಪಸಂಖ್ಯಾತರ ವಾರ್ಡ್ಗಳಿಗು ಸಹ ಹಣ ನೀಡಿಲ್ಲ ಎಂದು ದೂರಿದರು.

ನಗರಸಭೆಯಿಂದ ನಿರ್ಮಾಣ ಹಂತದಲ್ಲಿರುವ ವಿದ್ಯುತ್ ಚಿತಾಗಾರವನ್ನು ರಿಯಲ್ ಎಸ್ಟೇಟ್ ಮಾಫಿಯಾಗೆ ಮಣಿದು ನಗರದಿಂದ ದೂರದ ಓಬದೇನಹಳ್ಳಿ ಬಳಿ ನಿರ್ಮಿಸಲು ಷಡ್ಯಂತ್ರ ನಡೆದಿದೆ ಇದಕ್ಕೆ ಕಾರಣ ಯಾರು..?

ಕಾಂಗ್ರೆಸ್ ಸರ್ಕಾರ ಬಿಜಿಪಿ ಶಾಸಕರು ಇರುವ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುತ್ತಿದೆ‌. ಇದು ಶಾಸಕರದ್ದೇ ಮಾತು. ಆದರೆ ಕಾಂಗ್ರೆಸ್ ಸದಸ್ಯರು ಇರುವ ವಾರ್ಡ್ಗೆ ಅನುದಾನ ನೀಡದೆ ರಾಜಕೀಯ ಮಾಡ್ತಾ ಇರೋದು ಯಾರು‌‌..?

ನಗರಸಭೆಯಿಂದ ಅಳವಡಿಸಲು ಸಿದ್ದವಾಗಿದ್ದ ಹೋರ್ಡಿಂಗ್ ಬಿಚ್ಚಿಸಿದವರು ಯಾರು..? ಪ್ರತಿಭಟನೆ ವೇಳೆ ನಾವ್ ಮಾತಾಡಿದ್ ಏನು..? ನಮ್ಮ ಒತ್ತಾಯ ಏನು..? ಯಾರದೋ ಮಾತು ಕೇಳಿ ಸುದ್ದಿಗೋಷ್ಠಿ ಮಾಡಿ ಶಾಸಕರು ಆರೋಪಿಸಿದ್ ಏನು..? ಕಾಮಾಗಾರಿ ಆರಂಭಕ್ಕು ಮುನ್ನಾ ಶಿಷ್ಟಾಚಾರ ಪಾಲನೇ ಮಾಡಿ, ಕಾನೂನನಾತ್ಮಕವಾಗಿ ಕಾಮಗಾರಿ ಮಾಡಿ ಯುವಕರಿದ್ದೀರಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ದೊಡ್ಡಬಳ್ಳಾಪುರ ಅಭಿವೃದ್ಧಿ ಮಾಡಿ ಎಂಬುದು ಅಭಿವೃದ್ಧಿಗೆ ಅಡ್ಡಿಯೇ..?

ಸರ್ವಾಧಿಕಾರಿ ಧೋರಣೆ ಬಿಟ್ಟು, ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಳ್ಳಿ. ಹೊಟ್ಟೆ ಪಾಡಿಗಾಗಿ ನಿಮ್ ಸುತ್ತ ಸೇರಿರುವವರ ವಿಷದ ಮಾತು ನಂಬಬೇಡಿ. ನೀವು ಆಳವಾಗಿ ಇಳಿದರೆ. ನಾವು ಆಳವಾಗಿ ಹೋಗಲು ಸಿದ್ದರಿದ್ದೇವೆ ಎಂದು ಶಿವಶಂಕರ್ ಸವಾಲು ಎಸೆದರು.

ಕೆಪಿಸಿಸಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಟಿ.ವೆಂಕಟರಣಯ್ಯ ಅವರ ಅವಧಿಯಲ್ಲಿ ನಡೆದಿರುವ ಕೆಲಸಗಳನ್ನು ಹೇಳಿಕೊಂಡು ಕ್ಷೇತ್ರದಲ್ಲಿ ಅಭಿವೃದ್ದಿಯಾಗಿದೆ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಒಂದುವರೆ ವರ್ಷದ ಇವರ ಸಾಧನೆ ಶೂನ್ಯವಾಗಿದೆ. ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಿಡುಗಡೆ ಮಾಡಿರುವ 3 ಕೋಟಿ ಅನುದಾನದ ಕಾಮಗಾರಿಗಳಲ್ಲಿ ಸರ್ಕಾರದ ಎಲ್ಲಾ ನಿಯಮಗಳನ್ನು ಮೀರಲಾಗಿದೆ.

ಕಪ್ಪುಪಟ್ಟಿಯಲ್ಲಿರುವ ಕೆಆರ್ಡಿಎಲ್ ಸಂಸ್ಥೆ ವತಿಯಿಂದ ಕಾಮಗಾರಿ ಮಾಡಿಸಲಾಗುತ್ತಿದೆ. ಕಾಮಗಾರಿ ಗುತ್ತಿಗೆ ಪಡೆದಿರುವ ಗುತ್ತಿಗೆದಾರ ಮಾಡಿಸುತ್ತಿರುವ ಕಳಪೆ ಕೆಲಸಗಳನ್ನು ಪ್ರಶ್ನಿಸುವ ದಲಿತ ಸಮುದಾಯದ ಸದಸ್ಯರನ್ನೇ ನಿಂಧಿಸುವ ಕೆಲಸ ಮಾಡಿದ್ದಾರೆ. ಗುತ್ತಿಗೆದಾರ ಸದಸ್ಯರ ಪರವಾಗಿ ಬಹಿರಂಗವಾಗಿ ಕ್ಷಮೆ ಕೇಳದೇ ಇದ್ದರೆ ಎಸ್ಸಿ,ಎಸ್ಟಿ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಲಾಗುವುದು ಎಂದರು.

ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಪ್ರಾರಂಭಿಸಲಾದ 100 ಹಾಸಿಗೆ ಸಾಮರ್ಥ್ಯದ ಇಎಸ್ಐ ಆಸ್ಪತ್ರೆ ಕಟ್ಟಡ ಕಾಮಗಾರಿ ಮುಕ್ತಾಯವಾಗಿ ಒಂದುವರೆ ವರ್ಷಗಳು ಕಳೆದಿದ್ದರು ಉದ್ಘಾಟನೆ ಮಾಡಿಸಿಲ್ಲ. ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಬರುವ ಈ ಆಸ್ಪತ್ರೆಯನ್ನು ಉದ್ಘಾಟಿಸಿ ಕಾರ್ಮಿಕರ ಸೇವೆ ಲಭ್ಯವಾಗುವಂತೆ ಮಾಡುವಲ್ಲಿ ಕ್ಷೇತ್ರದ ಬಿಜೆಪಿ ಶಾಸಕರು ವಿಫಲರಾಗಿದ್ದಾರೆ ಎಂದು ದೂರಿದರು.

ದೊಡ್ಡಬಳ್ಳಾಪುರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ ಮಾತನಾಡಿ, ಶಾಸಕರಾಗಿ ಅಭಿವೃದ್ಧಿ ಮಾಡಲಾಗದೆ ಮತ್ತೊಬ್ಬರ ಬಗ್ಗೆ ಆರೋಪ ಮಾಡ್ತಾ ಇದ್ದಾರೆ. ಚುನಾವಣೆಯಲ್ಲಿ ತಾಲೂಕಿನ ಜನರ ತೀರ್ಪನ್ನು ನಾವು ಒಪ್ಪಿದ್ದೇವೆ. ಅದರಂತೆ ನೂತನ ಶಾಸಕರು ಕಾರ್ಯನಿರ್ವಹಿಸಲಿ. ಅದು ಬಿಟ್ಟು ಅಭಿವೃದ್ಧಿ ಮಾಡಲಾಗದೆ ಮತ್ತೊಬ್ಬರ ಮೇಲೆ ಆರೋಪ ಮಾಡುವುದು ಸಲ್ಲದು.

ತಾಲೂಕಿನ ಅಭಿವೃದ್ಧಿ ಮಾಡುವುದು ಶಾಸಕರ ಜವಾಬ್ದಾರಿ, ತಾಲೂಕಿಗೆ ಶಾಸಕರ ಕೊಡುಗೆ ಏನು..? ನಗರಸಭೆ, ಗ್ರಾಪಂ ವ್ಯಾಪ್ತಿಯಲ್ಲಿ, ಎಸ್‌ಟಿಪಿ, ಟಿಎಸ್ಪಿ ಸೇರಿದಂತೆ ಯಾವ ಯೋಜನೆಯನ್ನು ತಾಲೂಕಿಗೆ ತಂದಿದ್ದೀರಿ ಹೇಳಿ ಎಂದರು.

ಸುದ್ದಿಗೋಷ್ಠಿಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆಪಿ ಜಗನಾಥ್, ಕೆಪಿಸಿಸಿ ಸದಸ್ಯ ಹೇಮಂತ್ ರಾಜ್, ನಗರಸಭೆ ಸದಸ್ಯರಾದ ಆನಂದ್ ಕುಮಾರ್, ಅಲ್ತಾಪ್, ಶಿವಣ್ಣ, ರೂಪಿಣಿ ಮಂಜುನಾಥ್, ಅಖಿಲೇಶ್, ನಾಗವೇಣಿ, ರಜಿನಿ ಸುಬ್ರಮಣಿ, ನಾಗರಾಜ್ ಮುಖಂಡರಾದ ಶ್ರೀನಿವಾಸ್, ಜನಪರ ಮಂಜು, ರಘುನಂದನ್ ಮತ್ತಿತರರಿದ್ದರು.

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಯುವಕ ಆತ್ಮಹತ್ಯೆ..! ಕಾರಣ ನಿಗೂಢ

ದೊಡ್ಡಬಳ್ಳಾಪುರ: ಯುವಕ ಆತ್ಮಹತ್ಯೆ..! ಕಾರಣ ನಿಗೂಢ

22ವರ್ಷದ ಯುವಕ ನೋರ್ವ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ** ಬುಧವಾರ ರಾತ್ರಿ ನಡೆದಿದೆ.

[ccc_my_favorite_select_button post_id="113770"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!