ಹೊಟ್ಟೆಪಾಡಿಗೆ ಜೊತೆಗಿರುವವರ ವಿಷಕಾರಿ ಮಾತು ನಂಬಬೇಡಿ: ಶಾಸಕ ಧೀರಜ್ ಮುನಿರಾಜುಗೆ ಕಾಂಗ್ರೆಸ್ ಮುಖಂಡರ ಸಲಹೆ

ದೊಡ್ಡಬಳ್ಳಾಪುರ; ಬಿಜೆಪಿಯಿಂದ ನಗರಸಭೆಯಲ್ಲಿ ಎರಡು ಬಾರಿ ಸದಸ್ಯನಾಗಿ, ಬಿಜೆಪಿ ನಗರ ಘಟಕದ ಅಧ್ಯಕ್ಷನಾಗಿ ಶ್ರಮವಹಿಸಿ ಪಕ್ಷವನ್ನು ಸಂಘಟಿಸಿದ್ದೇನೆ. ನಾವುಗಳು ಕಟ್ಟಿರುವ ಹುತ್ತದಲ್ಲಿ (ಮನೆಯಲ್ಲಿ) ಹಣ ಬಲದೊಂದಿಗೆ ಬಂದು ಸೇರಿಕೊಂಡು ಪಕ್ಷದಲ್ಲಿ ಹಾಗೂ ನಗರಸಭೆ ಸದಸ್ಯರಲ್ಲಿ ವಿಷ ಬೀಜ ಬಿತ್ತುವ ಮೂಲಕ ಶಾಸಕ ಧೀರಜ್ ಮುನಿರಾಜು ತಾರತಮ್ಯ ದೋರಣೆ ಮಾಡುತ್ತಿದ್ದಾರೆ ಎಂದು ನಗರಸಭೆ ಸದಸ್ಯ ಎಚ್.ಎಸ್.ಶಿವಶಂಕರ್ ದೂರಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆ ಚುನಾವಣೆ ವೇಳೆ ಈಗಿನ ಬಿಜೆಪಿಯ ಶಾಸಕರು ಸೇರಿದಂತೆ ಘಟಾನುಘಟಿ ಮುಖಂಡರು ನನ್ನನ್ನು ಸೋಲಿಸಲು ಶ್ರಮವಹಿಸಿದರು. ಆದರೆ ಜನರ ವಿಶ್ವಾಸದಿಂದ ಎರಡು ಬಾರಿ ಸದಸ್ಯನಾಗಿ ಆಯ್ಕೆಯಾಗಿದ್ದೇನೆ. ನಾವು ಎಂದಿಗೂ ವಿಷ ಇಟ್ಟಿಲ್ಲ. ಆದರೆ ಹೊಟ್ಟೆ ಪಾಡಿಗಾಗಿ ಮಾನ್ಯ ಶಾಸಕರ ಜೊತೆ ಸೇರಿರುವವರು ಇಲ್ಲ ಸಲ್ಲದ ವಿಷವನ್ನು ಹೇಳಿ ಶಾಸಕರ ದಾರಿ ತಪ್ಪಿಸುತ್ತಿದ್ದಾರೆ.

ಶಾಸಕರು ಆಯ್ಕೆಯಾಗಿ ಒಂದುವರೆ ವರ್ಷ ಕಳೆದರು ಸಹ ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ನಡೆದಿದಲ್ಲ.. ಕನಿಷ್ಠ ರಸ್ತೆಗಳಲ್ಲಿ ಬಿದ್ದಿರುವ ಒಂದು ಗುಂಡಿಯನ್ನು ಮುಚ್ಚಿಸಲು ಸಾಧ್ಯವಾಗಿಲ್ಲ.

ನಗರಸಭೆ ವ್ಯಾಪ್ತಿಯಲ್ಲಿ ಕಾಮಗಾರಿಗಳ ಕ್ರಿಯಾ ಯೋಜನೆ ಸಿದ್ದಪಡಿಸುವಾಗ ಸ್ಥಳೀಯ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಶಾಸಕ ಧೀರಜ್ ಮುನಿರಾಜು ಅವರು ಕೆಲವರ ಮಾತು ಕೇಳಿ ಸರ್ವಾಧಿಕಾರಿಯಂತೆ ಏಕಪಕ್ಷೀಯವಾಗಿ ಕ್ರಿಯಾಯೋಜನೆಗಳನ್ನು ರೂಪಿಸುವ ಮೂಲಕ ಸದಸ್ಯರನ್ನು ಕಡೆಗಣಿಸಿ, ಬಿಜೆಪಿ, ಜೆಡಿಎಸ್ ಸದಸ್ಯರು ಇರುವ ವಾರ್ಡ್ಗಳಿಗೆ ಮಾತ್ರ ಅನುದಾನ ನೀಡಿದ್ದಾರೆ. ಶಾಸಕರು ಯುವಕರಿದ್ದೀರಿ, ಇನ್ನೂ ಅನೇಕ ವರ್ಷ ರಾಜಕಾರಣ ಮಾಡಬೇಕಿದೆ.. ವಾಸ್ತವ ತಿಳಿದುಕೊಳ್ಳಿ.

ಅಲ್ಪಸಂಖ್ಯಾತರು ವಾಸ ಮಾಡುವ ಪ್ರದೇಶದಲ್ಲಿ ಮಾತ್ರ ಕಾಮಗಾರಿ ಕೈಗೊಳ್ಳಲು ನೀಡಲಾಗಿದ್ದ ಅನುದಾನವನ್ನು ಶಾಸಕರು ಕೆಲವರ ಮಾತು ಕೇಳಿ ತಾರತಮ್ಯ ನೀತಿ ಅನುಸರಿಸುವ ಮೂಲಕ ತಮಗೆ ಇಷ್ಟ ಬಂದ ವಾರ್ಡ್ಗಳಲ್ಲಿ ಅಲ್ಪಸಂಖ್ಯಾತರು ಇಲ್ಲದೇ ಇರುವಲ್ಲೂ ಕಾಮಗಾರಿಗಳನ್ನು ಮಾಡಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಅಲ್ಪಸಂಖ್ಯಾತರ ವಾರ್ಡ್ಗಳಿಗು ಸಹ ಹಣ ನೀಡಿಲ್ಲ ಎಂದು ದೂರಿದರು.

ನಗರಸಭೆಯಿಂದ ನಿರ್ಮಾಣ ಹಂತದಲ್ಲಿರುವ ವಿದ್ಯುತ್ ಚಿತಾಗಾರವನ್ನು ರಿಯಲ್ ಎಸ್ಟೇಟ್ ಮಾಫಿಯಾಗೆ ಮಣಿದು ನಗರದಿಂದ ದೂರದ ಓಬದೇನಹಳ್ಳಿ ಬಳಿ ನಿರ್ಮಿಸಲು ಷಡ್ಯಂತ್ರ ನಡೆದಿದೆ ಇದಕ್ಕೆ ಕಾರಣ ಯಾರು..?

ಕಾಂಗ್ರೆಸ್ ಸರ್ಕಾರ ಬಿಜಿಪಿ ಶಾಸಕರು ಇರುವ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುತ್ತಿದೆ‌. ಇದು ಶಾಸಕರದ್ದೇ ಮಾತು. ಆದರೆ ಕಾಂಗ್ರೆಸ್ ಸದಸ್ಯರು ಇರುವ ವಾರ್ಡ್ಗೆ ಅನುದಾನ ನೀಡದೆ ರಾಜಕೀಯ ಮಾಡ್ತಾ ಇರೋದು ಯಾರು‌‌..?

ನಗರಸಭೆಯಿಂದ ಅಳವಡಿಸಲು ಸಿದ್ದವಾಗಿದ್ದ ಹೋರ್ಡಿಂಗ್ ಬಿಚ್ಚಿಸಿದವರು ಯಾರು..? ಪ್ರತಿಭಟನೆ ವೇಳೆ ನಾವ್ ಮಾತಾಡಿದ್ ಏನು..? ನಮ್ಮ ಒತ್ತಾಯ ಏನು..? ಯಾರದೋ ಮಾತು ಕೇಳಿ ಸುದ್ದಿಗೋಷ್ಠಿ ಮಾಡಿ ಶಾಸಕರು ಆರೋಪಿಸಿದ್ ಏನು..? ಕಾಮಾಗಾರಿ ಆರಂಭಕ್ಕು ಮುನ್ನಾ ಶಿಷ್ಟಾಚಾರ ಪಾಲನೇ ಮಾಡಿ, ಕಾನೂನನಾತ್ಮಕವಾಗಿ ಕಾಮಗಾರಿ ಮಾಡಿ ಯುವಕರಿದ್ದೀರಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ದೊಡ್ಡಬಳ್ಳಾಪುರ ಅಭಿವೃದ್ಧಿ ಮಾಡಿ ಎಂಬುದು ಅಭಿವೃದ್ಧಿಗೆ ಅಡ್ಡಿಯೇ..?

ಸರ್ವಾಧಿಕಾರಿ ಧೋರಣೆ ಬಿಟ್ಟು, ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಳ್ಳಿ. ಹೊಟ್ಟೆ ಪಾಡಿಗಾಗಿ ನಿಮ್ ಸುತ್ತ ಸೇರಿರುವವರ ವಿಷದ ಮಾತು ನಂಬಬೇಡಿ. ನೀವು ಆಳವಾಗಿ ಇಳಿದರೆ. ನಾವು ಆಳವಾಗಿ ಹೋಗಲು ಸಿದ್ದರಿದ್ದೇವೆ ಎಂದು ಶಿವಶಂಕರ್ ಸವಾಲು ಎಸೆದರು.

ಕೆಪಿಸಿಸಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಟಿ.ವೆಂಕಟರಣಯ್ಯ ಅವರ ಅವಧಿಯಲ್ಲಿ ನಡೆದಿರುವ ಕೆಲಸಗಳನ್ನು ಹೇಳಿಕೊಂಡು ಕ್ಷೇತ್ರದಲ್ಲಿ ಅಭಿವೃದ್ದಿಯಾಗಿದೆ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಒಂದುವರೆ ವರ್ಷದ ಇವರ ಸಾಧನೆ ಶೂನ್ಯವಾಗಿದೆ. ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಿಡುಗಡೆ ಮಾಡಿರುವ 3 ಕೋಟಿ ಅನುದಾನದ ಕಾಮಗಾರಿಗಳಲ್ಲಿ ಸರ್ಕಾರದ ಎಲ್ಲಾ ನಿಯಮಗಳನ್ನು ಮೀರಲಾಗಿದೆ.

ಕಪ್ಪುಪಟ್ಟಿಯಲ್ಲಿರುವ ಕೆಆರ್ಡಿಎಲ್ ಸಂಸ್ಥೆ ವತಿಯಿಂದ ಕಾಮಗಾರಿ ಮಾಡಿಸಲಾಗುತ್ತಿದೆ. ಕಾಮಗಾರಿ ಗುತ್ತಿಗೆ ಪಡೆದಿರುವ ಗುತ್ತಿಗೆದಾರ ಮಾಡಿಸುತ್ತಿರುವ ಕಳಪೆ ಕೆಲಸಗಳನ್ನು ಪ್ರಶ್ನಿಸುವ ದಲಿತ ಸಮುದಾಯದ ಸದಸ್ಯರನ್ನೇ ನಿಂಧಿಸುವ ಕೆಲಸ ಮಾಡಿದ್ದಾರೆ. ಗುತ್ತಿಗೆದಾರ ಸದಸ್ಯರ ಪರವಾಗಿ ಬಹಿರಂಗವಾಗಿ ಕ್ಷಮೆ ಕೇಳದೇ ಇದ್ದರೆ ಎಸ್ಸಿ,ಎಸ್ಟಿ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಲಾಗುವುದು ಎಂದರು.

ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಪ್ರಾರಂಭಿಸಲಾದ 100 ಹಾಸಿಗೆ ಸಾಮರ್ಥ್ಯದ ಇಎಸ್ಐ ಆಸ್ಪತ್ರೆ ಕಟ್ಟಡ ಕಾಮಗಾರಿ ಮುಕ್ತಾಯವಾಗಿ ಒಂದುವರೆ ವರ್ಷಗಳು ಕಳೆದಿದ್ದರು ಉದ್ಘಾಟನೆ ಮಾಡಿಸಿಲ್ಲ. ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಬರುವ ಈ ಆಸ್ಪತ್ರೆಯನ್ನು ಉದ್ಘಾಟಿಸಿ ಕಾರ್ಮಿಕರ ಸೇವೆ ಲಭ್ಯವಾಗುವಂತೆ ಮಾಡುವಲ್ಲಿ ಕ್ಷೇತ್ರದ ಬಿಜೆಪಿ ಶಾಸಕರು ವಿಫಲರಾಗಿದ್ದಾರೆ ಎಂದು ದೂರಿದರು.

ದೊಡ್ಡಬಳ್ಳಾಪುರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ ಮಾತನಾಡಿ, ಶಾಸಕರಾಗಿ ಅಭಿವೃದ್ಧಿ ಮಾಡಲಾಗದೆ ಮತ್ತೊಬ್ಬರ ಬಗ್ಗೆ ಆರೋಪ ಮಾಡ್ತಾ ಇದ್ದಾರೆ. ಚುನಾವಣೆಯಲ್ಲಿ ತಾಲೂಕಿನ ಜನರ ತೀರ್ಪನ್ನು ನಾವು ಒಪ್ಪಿದ್ದೇವೆ. ಅದರಂತೆ ನೂತನ ಶಾಸಕರು ಕಾರ್ಯನಿರ್ವಹಿಸಲಿ. ಅದು ಬಿಟ್ಟು ಅಭಿವೃದ್ಧಿ ಮಾಡಲಾಗದೆ ಮತ್ತೊಬ್ಬರ ಮೇಲೆ ಆರೋಪ ಮಾಡುವುದು ಸಲ್ಲದು.

ತಾಲೂಕಿನ ಅಭಿವೃದ್ಧಿ ಮಾಡುವುದು ಶಾಸಕರ ಜವಾಬ್ದಾರಿ, ತಾಲೂಕಿಗೆ ಶಾಸಕರ ಕೊಡುಗೆ ಏನು..? ನಗರಸಭೆ, ಗ್ರಾಪಂ ವ್ಯಾಪ್ತಿಯಲ್ಲಿ, ಎಸ್‌ಟಿಪಿ, ಟಿಎಸ್ಪಿ ಸೇರಿದಂತೆ ಯಾವ ಯೋಜನೆಯನ್ನು ತಾಲೂಕಿಗೆ ತಂದಿದ್ದೀರಿ ಹೇಳಿ ಎಂದರು.

ಸುದ್ದಿಗೋಷ್ಠಿಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆಪಿ ಜಗನಾಥ್, ಕೆಪಿಸಿಸಿ ಸದಸ್ಯ ಹೇಮಂತ್ ರಾಜ್, ನಗರಸಭೆ ಸದಸ್ಯರಾದ ಆನಂದ್ ಕುಮಾರ್, ಅಲ್ತಾಪ್, ಶಿವಣ್ಣ, ರೂಪಿಣಿ ಮಂಜುನಾಥ್, ಅಖಿಲೇಶ್, ನಾಗವೇಣಿ, ರಜಿನಿ ಸುಬ್ರಮಣಿ, ನಾಗರಾಜ್ ಮುಖಂಡರಾದ ಶ್ರೀನಿವಾಸ್, ಜನಪರ ಮಂಜು, ರಘುನಂದನ್ ಮತ್ತಿತರರಿದ್ದರು.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!