ವಿದ್ಯಾರ್ಥಿಗಳಿಗೆ ಶಾಸಕ ಪ್ರದೀಪ್ ಈಶ್ವರ್ ಬಂಪರ್ ಗಿಫ್ಟ್ ಘೋಷಣೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ಕಾಲರ್‌ಶಿಪ್ ಸ್ಕೀಂ (ವಿದ್ಯಾರ್ಥಿವೇತನ ಯೋಜನೆ)ಯನ್ನು ಶಾಸಕ ಪ್ರದೀಪ್ ಈಶ್ವರ್ ಘೋಷಣೆ ಮಾಡಿದರು.

ನಗರ ಹೊರವಲಯದ ತಮ್ಮ ಗೃಹಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಎಸ್‌ಎಸ್‌ಎಲ್‌ಸಿ, ದ್ವೀತಿಯ ಪಿಯುಸಿ, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು, ಅಂತಿಮ ವರ್ಷದ ಪಿಜಿ, ಐಟಿಐ, ಡಿಪ್ಲೋಮಾ, ಡಿಎಡ್, ಬಿಎಡ್, ಇಂಜನಿಯರಿಂಗ್ ಮತ್ತು ವೈದ್ಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಮುಂದಾಗಿರುವುದಾಗಿ ತಿಳಿಸಿದರು.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ತಲಾ 1,000 ರೂ , ಡಿಪ್ಲೋಮೋ-ಐಟಿಐ ವಿದ್ಯಾರ್ಥಿಗಳಿಗೆ ತಲಾ 1,500 ರೂ, ದ್ವೀತಿಯ ಪಿಯುಸಿ, ಡಿಎಡ್ ವಿದ್ಯಾರ್ಥಿಗಳಿಗೆ ತಲಾ 2,000 ರೂ , ಪದವಿ,ಬಿಎಡ್, ಪಿಜಿ, ಇಂಜನಿಯರಿಂಗ್ ಮತ್ತು ವೈದ್ಯ ವಿದ್ಯಾರ್ಥಿಗಳಿಗೆ ತಲಾ 3,000 ರೂ. ವಿದ್ಯಾರ್ಥಿವೇತನ ನೀಡಲು ತೀರ್ಮಾನಿಸಿದ್ದಾರೆ.

ಹೀಗಾಗಿ ವಿದ್ಯಾರ್ಥಿಗಳ ವಿದ್ಯಾರ್ಥಿಗಳು ಶಾಸಕ ಪ್ರದೀಪ್ ಈಶ್ವರ್ ವೆಬ್ ಸೈಟ್‌ನಲ್ಲಿ ತಮ್ಮ ಹೆಸರನ್ನ ನೊಂದಾಯಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದಕ್ಕಾಗಿ ಕ್ಯೂಆರ್ ಕೋಡ್ ಇರುವ ಸ್ಕ್ಯಾನರ್ ಸಿದ್ದಪಡಿಸಲಾಗಿದೆ, ವಿದ್ಯಾರ್ಥಿಗಳು ತಮ್ಮ ಮೊಬೈಲ್ ಮೂಲಕವೇ ಸ್ಕ್ಯಾನ್ ಮಾಡಿ ನೊಂದಣಿ ಮಾಡಿಕೊಳ್ಳಿ, ಯಾವುದೇ ಭೌತಿಕ ದಾಖಲಾತಿಗಳನ್ನು ನೀಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಅಕ್ಟೋಬರ್ 15 ರಿಂದ ನವೆಂಬರ್ 15 ರವರೆಗೂ ನೊಂದಣಿಗೆ ಅವಕಾಶ ಕಲ್ಪಿಸಲಾಗಿದೆ. 10 ಸಾವಿರಕ್ಕೂ ಹೆಚ್ಚು ವಿಧ್ಯಾರ್ಥಿಗಳಿಗೆ ಈ ಸೌಲಭ್ಯ ಸಿಗಲಿದೆ ಎಂದು ಮಾಹಿತಿ ಹಂಚಿಕೊಂಡರು.

ಬ್ಯಾಂಕಿನ ಬ್ಯಾಲೆನ್ಸ್ ನೋಡಿದಾಗ ಸಿಗುವ ಖುಷಿಗಿಂತ, ಬಡ ಮಕ್ಕಳ ಮುಖದಲ್ಲಿ ಮಂದಹಾಸ ಕಂಡಾಗ ಸಿಗುವ ಖುಷಿಗೆ ವ್ಯಾಲಿಡಿಟಿ ಜಾಸ್ತಿ. ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥನಾಗಿ ಬೆಳೆದವನು ನಾನು. ಅನ್ನ ಮತ್ತು ಅಕ್ಷರದ ಬೆಲೆ ಅರಿತವನು, ಕ್ಷೇತ್ರದ ಜನತೆಯ ಅಶೀರ್ವಾದದಿಂದ ವಿಧಾನಸೌಧ ತಲುಪಿದವನು. ಆಸ್ತಿ – ಅಂತಸ್ತಿನ ಮೇಲೆ ವ್ಯಾಮೋಹ ಕಡಿಮೆ. ನನಗೇನೂ ಹಣ ಹೆಚ್ಚಾಗಿ ಈ ಕಾರ್ಯಗಳನ್ನು ಮಾಡುತ್ತಿಲ್ಲಾ. ಇಂದಿಗೂ ನಾನು ತಿಂಗಳಾದರೆ ನನ್ನ ಕಾರಿನ ಇಎಂಐ ಕಟ್ಟಬೇಕು ಎಂದರು.

ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ತಲುಪದೆ ಜೀವ ಕಳೆದುಕೊಂಡವರು ನನ್ನ ತಂದೆ ಈಶ್ವರ್ ಮತ್ತು ನನ್ನ ಹೆತ್ತ ದೇವತೆ ಮಂಜುಳ. ನನ್ನ ಕುಟುಂಬಕ್ಕೆ ಬಂದ ಸ್ಥಿತಿ, ಯಾರಿಗೂ ಬರಬಾರದೆಂದು, “24×7” ಹತ್ತು ‘ಅಮ್ಮ ಆ್ಯಂಬುಲೆನ್ಸ್’ ಗಳು ಕ್ಷೇತ್ರದಲ್ಲಿ ಉಚಿತವಾಗಿ ಕಾರ್ಯನಿರ್ವಹಿಸುತ್ತಿವೆ.

ಕಳೆದ ಎರಡು ವರ್ಷಗಳಿಂದ ವರಮಹಾಲಕ್ಷ್ಮಿ ಹಬ್ಬಕ್ಕೆ ನನ್ನ ತಾಯಂದಿರಿಗೆ ಅರಿಶಿನ-ಕುಂಕುಮ,ಬಳೆ, ಸೀರೆಗಳನ್ನು ಕೊಟ್ಟಿದ್ದೇನೆ. ಸರ್ಕಾರಿ ಶಾಲೆಯ 25,000 ಮಕ್ಕಳಿಗೆ ಮತ್ತು 5,000 ಅಂಗನವಾಡಿ ಮಕ್ಕಳಿಗೆ ಹಬ್ಬಕ್ಕೆ ಬಟ್ಟೆ ವಿತರಿಸಿದ್ದೇನೆ. ಮತ್ತೆ ದೀಪಾವಳಿಗೆ ಸರ್ಕಾರಿ ಶಾಲೆಯ 25,000 ಮಕ್ಕಳಿಗೆ ಮತ್ತು ಅಂಗನವಾಡಿಯ ಐದು ಸಾವಿರ ಮಕ್ಕಳಿಗೆ ಶಿವರಾತ್ರಿ ಹಬ್ಬಕ್ಕೆ ಬಟ್ಟೆ ವಿತರಿಸಲಿದ್ದೇನೆ ಎಂದರು.

ಕಳೆದ ಸಾಲಿನಲ್ಲಿ ಸರ್ಕಾರಿ ಶಾಲೆಯ ಎಸ್‌ಎಸ್‌ಎಲ್‌ಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ತಲಾ 1,000 ರೂ, ಇಂಜನಿಯರಿಂಗ್ ಮತ್ತು ವೈದ್ಯ ವಿದ್ಯಾರ್ಥಿಗಳಿಗೆ ತಲಾ 5,000 ರೂ. ಹಂಚಿಕೆ ಮಾಡಿದ್ದೇನೆ. ಈಗ ಮತ್ತೆ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಸಮಯ ಇದಾಗಿದೆ. ಇದು ಪ್ರತಿ ವರ್ಷ ಹೀಗೆ ಮುಂದುವರೆಯಲಿದೆ.

ಸಾಧ್ಯವಾದರೆ ಜನತೆಯ ಆಶೀರ್ವಾದ ಹೀಗೆ ಮುಂದುವರಿಯಲಿ ಎಂದರು.

ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಯಾರು ಅಂತ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಿಲ್ಲ ಅದರೆ ಶಾಸಕ ಪ್ರದೀಪ್ ಈಶ್ವರ್ ಮಾತ್ರ ಡಿಕೆ ಸುರೇಶ್ ಅವರೇ ಸ್ಪರ್ಧಿಸಲಿ ಎನ್ನುತ್ತಿದ್ದಾರೆ. ಸುರೇಶ್ ಸ್ಪರ್ಧಿಸಿದರೆ ತಾನು ಮನೆ ಮನೆಗೆ ತೆರಳಿ ಅವರ ಪರ ಪ್ರಚಾರ ಮಾಡುವುದಾಗಿ ಹೇಳಿದರು.

ಡಿಕೆ ಸುರೇಶ್ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಬಹುದು ಇಲ್ಲದಿದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಬಹುದು. ಆದರೆ ಹೈಕಮಾಂಡ್ ಯಾರನ್ನೆ ಅಭ್ಯರ್ಥಿಯಾಗಿಸಲಿ ಅವರ ಗೆಲುವು ನಿಶ್ಚಿತ. ಏಕೆಂದರೆ ಜೆಡಿಎಸ್ ಬಿಜೆಪಿ ಒಳ ಜಗಳ ನಮಗೆ ಈ ಬಾರಿ ಅನುಕೂಲ ಆಗಲಿದೆ. ಸಿಪಿ ಯೋಗೇಶ್ವರ್ ವರ್ಸಸ್ ಎಚ್ ಡಿ ಕುಮಾರಸ್ವಾಮಿ ಒಳ ಜಗಳ ನಮಗೆ ಅನುಕೂಲ ಆಗಲಿದೆ.

ಚನ್ನಪಟ್ಟಣ ಕ್ಷೇತ್ರ ದಿಂದ ಹೆಚ್.ಡಿ.ಕುಮಾರಸ್ವಾಮಿಯರ ಪತ್ನಿ ಅನಿತಾ ಕುಮಾರಸ್ವಾಮಿ ಅಥವಾ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಯಾದರೆ, ಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಕೆಲಸ ಮಾಡಲ್ಲ. ಸಿ.ಪಿ.ಯೋಗೇಶ್ವರ್ ಅಭ್ಯರ್ಥಿಯಾದರೆ ಹೆಚ್.ಡಿ.ಕುಮಾರಸ್ವಾಮಿಯವರು ಕೆಲಸ ಮಾಡಲ್ಲ. ಕಾಂಗ್ರೆಸ್ ವಿರುದ್ಧ ಇವರಲ್ಲಿ ಯಾರೇ ಅಭ್ಯರ್ಥಿ ಯಾದರೂ ಕಾಂಗ್ರೆಸ್ ಗೆ ಲಾಭವಾಗಲಿದೆ ಎಂದರು. ಜೆಡಿಎಸ್ ಬಿಜೆಪಿ ಒಳ ಜಗಳ ನಮಗೆ ಈ ಬಾರಿ ಅನುಕೂಲ ಆಗಲಿದೆ.

ಚನ್ನಪಟ್ಟಣ ಉಪಚುನಾವಣೆಗೆ ನನಗೂ ಉಸ್ತುವಾರಿ ಕೊಟ್ಟಿದ್ದಾರೆ. ಈ ಬಾರಿ ಚನ್ನಪಟ್ಟಣದಲ್ಲಿ ಡಿಕೆ ಸುರೇಶ್ ಗೆಲ್ಲಲಿದ್ದಾರೆ. ಅವರೇ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ಆಗುವ ಎಲ್ಲಾ ಸಾಧ್ಯತೆಗಳಿವೆ. ಡಿಕೆ ಸುರೇಶಣ್ಣ ನಮ್ಮ ಜೊತೆ ವಿಧಾನಸೌಧಕ್ಕೆ ಬರ್ತಾರೆ ಎಂಬ ವಿಶ್ವಾಸವಿದೆ. ಅವರೇ ಅಭ್ಯರ್ಥಿಯಾದರೆ ಸೂಕ್ತ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದರು.

ರಾಜಕೀಯ

ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಿಎಂ ಕುರ್ಚಿ ಮೇಲೆ JDU ಟವೆಲ್, ಆದರೆ ಟ್ವೀಟ್ ಡಿಲೀಟ್ ಮಾಡಿದ್ದೇಕೆ..?!

ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಿಎಂ ಕುರ್ಚಿ ಮೇಲೆ JDU ಟವೆಲ್, ಆದರೆ

ಮಹಿಳೆಯರ ಖಾತೆಗೆ 10 ಸಾವಿರ, ಮನೆಗೊಂದು ಸರ್ಕಾರಿ ನೌಕರಿ ಘೋಷಣೆ, ವೋಟ್ ಚೋರಿ ಆರೋಪ, ನಿರುದ್ಯೋಗ ಸಮಸ್ಯೆ ಆರೋಪ ಸೇರಿದಂತೆ ತೀವ್ರ ಜಿದ್ದಾಜಿದ್ದಿಯಿಂದ ನಡೆದ ಬಿಹಾರ ವಿಧಾನಸಭಾ ಚುನಾವಣೆ (Bihar election)ಯಲ್ಲಿ NDA ಮೈತ್ರಿಕೂಟ

[ccc_my_favorite_select_button post_id="116212"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!