ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ ನಾಳೆ, ನಾಡಿದ್ದು 2 ದಿನಗಳ ಬೃಹತ್ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಸುಮಾರು 150ಕ್ಕೂ ಹೆಚ್ಚು ಉದ್ಯೋಗದಾತ ಕಂಪನಿಗಳು ಭಾಗಿಯಾಗಲಿವೆ.

ಈ ಬಗ್ಗೆ ಸ್ವತಃ ಕೇಂದ್ರ ಸಚಿವರೇ ಮಾಹಿತಿ ನೀಡಿದ್ದು; ದೇಶದ ಉದ್ದಗಲಕ್ಕೂ ಇರುವ 150ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳಕ್ಕೆ ಬರಲಿದ್ದು, ಈ ಭಾಗದ ಮೂರು ಸಾವಿರಕ್ಕೂ ಹೆಚ್ಚು ನಿರುದ್ಯೋಗಿ ಯುವ ಜನರಿಗೆ ಉದ್ಯೋಗ ಕೊಡಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.

ಮಂಡ್ಯ ಟೂ ಇಂಡಿಯಾ ಎನ್ನುವ ಘೋಷವಾಕ್ಯದೊಂದಿಗೆ ಉದ್ಯೋಗ ಮೇಳ ನಡೆಯುತ್ತಿದ್ದು, ಮಂಡ್ಯದ ಇತಿಹಾಸದಲ್ಲಿಯೇ ಇದೊಂದು ಮೈಲುಗಲ್ಲು ಆಗಲಿದೆ. ರೈತಾಪಿ ಜನರ ಮಕ್ಕಳಿಗೆ ಉದ್ಯೋಗ ಕಲ್ಪಿಸಬೇಕು ಎನ್ನುವುದು ನನ್ನ ಮಹದಾಸೆ ಆಗಿದ್ದು, ಈ ಮೂಲಕ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ನಾಳೆ ಹಾಗೂ ನಾಡಿದ್ದು (ಅಕ್ಟೋಬರ್ 18-19) ಮಂಡ್ಯ ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಆಸಕ್ತ ಯುವಜನರು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವರು ಮನವಿ ಮಾಡಿದ್ದಾರೆ.

ಪ್ರತಿದಿನವೂ ನನ್ನ ಮನೆಗೆ ಬರುವ ಅಸಂಖ್ಯಾತ ನಿರುದ್ಯೋಗಿ ಯುವ ಜನರು ಉದ್ಯೋಗ ಕೊಡಿಸಿ ಎಂದು ಕೇಳುತ್ತಾರೆ. ಅವರ ತಂದೆತಾಯಿ ಮಕ್ಕಳ ಭವಿಷ್ಯಕ್ಕಾಗಿ ಕನಸು ಕಟ್ಟಿಕೊಂಡಿದ್ದಾರೆ. ನಿತ್ಯವೂ ನೂರಾರು ಜನರು ನನ್ನ ಮನೆಯ ಬಳಿಗೆ ಬಂದಾಗ ನನ್ನ ಕೈಲಾದ ಸಹಾಯ ಮಾಡಿದ್ದೇನೆ. ಆದರೆ, ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಉದ್ಯೋಗ ಮೇಳದ ಮೂಲಕ ಸಾವಿರಾರು ಸಂಖ್ಯೆಯಷ್ಟು ಯುವ ಜನರಿಗೆ ಕೆಲಸ ಸಿಗಲಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಾನ್ವಿತ ಯುವ ಜನರಿಗೆ ಕೊರತೆ ಇಲ್ಲ. ಉತ್ತಮ ವಿದ್ಯಾ ಸಂಸ್ಥೆಗಳು ಇದ್ದು, ಪ್ರತಿವರ್ಷ ಸಾಕಷ್ಟು ಯುವಜನರು ಉತ್ತೀರ್ಣರಾಗಿ ಕಾಲೇಜುಗಳಿಂದ ಹೊರಗೆ ಬರುತ್ತಿದ್ದಾರೆ. ಇವರಿಗೆ ಆದಷ್ಟು ಉದ್ಯೋಗಾವಕಾಶ ಕಲ್ಪಿಸಬೇಕು ಎನ್ನುವುದು ನನ್ನ ಸಂಕಲ್ಪವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಮೇಕಾನ್, ಭಾರತೀಯ ಉಕ್ಕು ಪ್ರಾಧಿಕಾರ (SAIL), ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ (NMDC), ಲೈಲೋಡ್ಸ್ ಮೆಟಲ್ಸ್, ಭಾರತ್ ಹೆವಿ ಎಲೆಕ್ಟ್ರಿಕಲ್ (BHEL), ಜಿಂದಾಲ್ ಸ್ಟೀಲ್ ಸೇರಿದಂತೆ 150ಕ್ಕೂ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ನೇರ ನೇಮಕಾತಿ ಮಾಡಿಕೊಳ್ಳುತ್ತಿವೆ. ದೇಶಾದ್ಯಂತ ಉದ್ಯೋಗ ಅವಕಾಶಗಳು ಲಭ್ಯ ಇದ್ದು, ಈ ಅವಕಾಶವನ್ನು ಯುವ ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವರು ಕೋರಿದ್ದಾರೆ.

ನನ್ನ ಸಚಿವಾಲಯದ ಉನ್ನತ ಅಧಿಕಾರಿಗಳು, ಮಂಡ್ಯ ಜಿಲ್ಲೆಯ ಉನ್ನತ ಹಾಗೂ ಎಲ್ಲಾ ಶ್ರೇಣಿಯ ಅಧಿಕಾರಿಗಳು ಉದ್ಯೋಗ ಮೇಳ ಯಶಸ್ಸಿಗೆ ಕೆಲಸ ಮಾಡುತ್ತಿದ್ದು, ಉದ್ಯೋಗ ಅರಸಿ ಬರುವ ಅಭ್ಯರ್ಥಿಗಳಿಗೆ ನಮ್ಮ ಸ್ವಯಂ ಸೇವಕರು, ಅಧಿಕಾರಿಗಳು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. ಕಂಪನಿಗಳ ಅಧಿಕಾರಿಗಳು ಅಭ್ಯರ್ಥಿಗಳ ವಿವರಗಳನ್ನು ಗಮನಿಸಿದ ನಂತರ ಅವರಿಗೆ ಸೂಕ್ತವಾದ, ಅರ್ಹವಾದ ಹುದ್ದೆಯನ್ನು ನೀಡುವ ವ್ಯವಸ್ಥೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಪ್ರತಿಭೆಗೆ ಬರವಿಲ್ಲ. ಉತ್ತಮ ವಿದ್ಯಾಸಂಸ್ಥೆಗಳು ಜಿಲ್ಲೆಯಲ್ಲಿ ಇದ್ದು, ಪ್ರತಿವರ್ಷ ಸಾಕಷ್ಟು ಯುವಜನರು ಉತ್ತೀರ್ಣರಾಗಿ ಕಾಲೇಜುಗಳಿಂದ ಹೊರಗೆ ಬರುತ್ತಿದ್ದಾರೆ. ಇವರಿಗೆ ಆದಷ್ಟು ಉದ್ಯೋಗಾವಕಾಶ ಕಲ್ಪಿಸಬೇಕು ಎನ್ನುವುದು ನನ್ನ ದೃಢ ಸಂಕಲ್ಪವಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಮಹಿಳೆ ನೋಡಲು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ ಯುವಕನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

[ccc_my_favorite_select_button post_id="117343"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]