ನವದೆಹಲಿ: ಈಶಾ ಪ್ರತಿಷ್ಠಾನದಲ್ಲಿ ತನ್ನ ಇಬ್ಬರು ಪುತ್ರಿಯರನ್ನು ಅಕ್ರಮವಾಗಿ ಬಂಧಿಸಿಡಲಾಗಿದೆ ಎಂದು ವ್ಯಕ್ತಿಯೊಬ್ಬರು ದಾಖಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಕ್ತಾಯ ಗೊಳಿಸಿದೆ.
ವ್ಯಕ್ತಿಯಇಬ್ಬರು ಪುತ್ರಿ ಯರು ವಯಸ್ಕರಾ ಗಿದ್ದು, ಸ್ವಯಂ ಪ್ರೇರಣೆಯಿಂದ ಆಶ್ರಮದಲ್ಲಿ ನೆಲೆಸಿದ್ದಾಗಿ ಸ್ವತಃ ಅವರೇ ಹೇಳಿದ್ದಾರೆ.
ಮಣಿ ಮದ್ರಾಸ್ ಹೈಕೋರ್ಟ್ನಲ್ಲಿ ಈ ಕುರಿತು ಈ ಮೊದಲೇ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆಯಾಗಿದ್ದರಿಂದ, ಅದನ್ನು ಸುಪ್ರೀಂ ಕೋರ್ಟ್ ಮುಂದುವರಿಸುವುದು ಅನಗತ್ಯ ಎಂದು ಅಭಿಪ್ರಾಯಪಟ್ಟಿದೆ.
ಭವಾನಿ ರೇವಣ್ಣಗೆ ರಿಲೀಫ್: ಅತ್ಯಾಚಾರ ಸಂತ್ರಸ್ತೆಯ ಅಪಹರಣದ ಸಂಬಂಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ನಿರಾಕರಿಸಿದೆ.
ಸುಪ್ರೀಂ ಕೋರ್ಟ್ನ ಕ್ರಮದಿಂದ ಭವಾನಿ ರೇವಣ್ಣ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾಜ್ಶೀಟ್ ಸಲ್ಲಿಸಲಾಗಿದೆ. ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು.
ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಎಸ್ಐಟಿ ವಕೀಲರ ವಾದವೇನು?: ಮೈಸೂರು ಜಿಲ್ಲೆ ಕೆಆರ್ ನಗರ ಮಹಿಳೆ ಅಪಹರಣ ಪ್ರಕರಣದ ಆರೋಪ ಸಂಬಂಧ ಭವಾನಿ ರೇವಣ್ಣಗೆ ಜಾಮೀನು ನೀಡಬಾರದು ಎಂದು ಎಸ್ಐಟಿ ಪರ ವಕೀಲರು ವಾದ ಮಂಡಿಸಿದ್ದಾರೆ.
ಆರೋಪಿ ಮಹಿಳೆ ಪ್ರಕರಣದಲ್ಲಿ ನೇರವಾಗಿ ಸಂಬಂಧ ಹೊಂದಿದ್ದಾರೆ. ಅತ್ಯಾಚಾರ ಎಸಗಿದ ಆರೋಪಿಯ ತಾಯಿ ಕೂಡ ಆಗಿದ್ದಾರೆ. ಆರೋಪಿಗಳು ಪ್ರತಿಷ್ಠಿತ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದವರು. ನಿರೀಕ್ಷಣಾ ಜಾಮೀನು ರದ್ದು ಮಾಡಬೇಕು. ಹೈಕೋರ್ಟ್ ನೀಡಿರುವ ನಿರೀಕ್ಷಣಾ ಜಾಮೀನು ರದ್ದು ಮಾಡಬೇಕು ಎಂದು ಸುಪ್ರೀಂ ಕೋಟ್ ರ್ನಲ್ಲಿ ಎಸ್ಐಟಿ ಅಧಿಕಾರಿಗಳ ಪರ ವಕೀಲರು ವಾದ ಮಂಡಿಸಿದ್ದಾರೆ.
ಪ್ರಕರಣದ ಪ್ರಮುಖರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಆರೋಪಿ ಮಗ ಮತ್ತು ಪತಿಯನ್ನು ಬಂಧಿಸಿ. ವಿಚಾರಣೆ ನಡೆಸಲಾಗಿದೆ. ಜಾಮೀನು ರದ್ದು ಮಾಡಲು ಯಾವುದೇ ಸಕಾರಣ ಕಾಣುತ್ತಿಲ್ಲ. ಪ್ರತಿಷ್ಠಿತ ರಾಜಕೀಯ ಕುಟುಂಬ ಎಂದು ಜಾಮೀನು ರದ್ದು ಮಾಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.