ಪ್ರಲ್ಹಾದ್ ಜೋಷಿಯವರ ರಾಜೀನಾಮೆ ಕೇಳುವುದು ಸೇಡಿನ ರಾಜಕಾರಣ; ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಕಳೆದುಕೊಳ್ಳುವ ಭಯದಿಂದ ಜಾತಿ ಗಣತಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಮೊದಲು ಅದನ್ನು ಬಹಿರಂಗ ಪಡೆಸಲಿ, ಸಾರ್ವಜನಿಕ ಚರ್ಚೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ಕುರಿತು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಮ್ಮನ್ನು ಭೇಟಿ ಮಾಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ.

ಇದು ಜಾತಿ ಗಣತಿಯಲ್ಲ. ಸಾಮಾಜಿಕ ಆರ್ಥಿಕ ಸಮೀಕ್ಷೆ, ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಜಾತಿ ಗಣತಿ ಮಾಡುವ ಅಧಿಕಾರವಿದೆ. ಬಿಹಾರ ಸರ್ಕಾರದ ಜಾತಿ ಗಣತಿಗೂ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇವರು ಯಾವುದೋ ಸಮೀಕ್ಷೆ ಮಾಡಿ ಅದಕ್ಕೆ ಜಾತಿ ಗಣತಿಯ ಲೇಪನ ಮಾಡುತ್ತಿದ್ದಾರೆ ಎಂದು ಹೇಳಿದರು.

ಇನ್ನು ಈ ವರದಿ ವೈಜ್ಞಾನಿಕವಾಗಿಯೂ ಇಲ್ಲ, ಅಂಕಿ‌ ಅಂಶ ಸಮರ್ಪಕವಾಗಿಲ್ಲ. ಹಲವು ಸಮುದಾಯಗಳಿಂದ ಆಕ್ಷೇಪಣೆ ಬಂದಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ಸಿದ್ದಪಡಿಸಿದ್ದ ವರದಿ ಸಮರ್ಪಕವಾಗಿಲ್ಲ ಎಂದು ಅಂದಿನ ಆಯೋಗದ ಕಾರ್ಯದರ್ಶಿ ಹಾಗೂ ಸದಸ್ಯರು ಸಹಿ ಹಾಕಿರಲಿಲ್ಲ. ನಂತರ ಬಂದ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗಡೆ ಅವರು, ಯಾವುದೇ ಸಮೀಕ್ಷೆ ನಡೆಸದೇ ಹಿಂದಿನ ಆಯೋಗದ ಅಧ್ಯಕ್ಷರು ಸಿದ್ದಪಡಿಸಿದ್ದ ವರದಿಯನ್ನೇ ಪರಿಷ್ಕರಿಸಿ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ.

ಈ ವರದಿಯನ್ನು ಒಕ್ಕಲಿಗ ಸಮುದಾಯದವರು ವಿರೋಧಿಸಿದ್ದಾರೆ. ಸ್ವತ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಇದನ್ನು ವಿರೋಧಿಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭೆ ಕೂಡ ವಿರೋಧಿಸಿದೆ.

ಎಲ್ಲ ಸಮುದಾಯಗಳ ಅನುಮಾನ ದೂರ‌ ಮಾಡುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡುತ್ತಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚರ್ಚಿಸಲಿ. ಇಷ್ಟೆಲ್ಲ ವಿರೋಧ ಇದ್ದರೂ ಜಾರಿ ಮಾಡುತ್ತೇವೆ ಅಂತಿದ್ದಾರೆ.

ಮೊದಲು ವರದಿ ಬಹಿರಂಗಪಡಿಸಲಿ, ಸಾರ್ವಜನಿಕವಾಗಿ ಚರ್ಚೆ ಆಗಲಿ. ಸಿದ್ದರಾಮಯ್ಯನವರು ವರದಿಯಲ್ಲಿ ಏನಿದೆ ಅಂತ ನೋಡಿಲ್ಲ ಅಂತಿದ್ದಾರೆ, ಆದರೆ ವರದಿ ರೆಡಿ ಮಾಡಿಸಿದವರೇ ಸಿದ್ದರಾಮಯ್ಯ. ದಿವಂಗತ ವಿ.ಪಿ.ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅಧಿಕಾರ ಹೋಗುವ ಸಂದರ್ಭದಲ್ಲಿ ಮಂಡಲ್ ವರದಿ ಜಾರಿ ಮಾಡಿದ್ದರು. ಅದೇ ರೀತಿ ಇವರು ಈಗ ಜಾತಿ ಗಣತಿ ಜಾರಿ ಮಾಡುವುದಾಗಿ ಹೇಳುತ್ತಿದ್ದಾರೆ ಎಂದು ಹೇಳಿದರು.

ಸಂವಿಧಾನಬದ್ಧ ತೀರ್ಮಾನ

ಪರಿಶಿಷ್ಟ ಜಾತಿ, ಪಂಗಡಗಳ ಮೀಸಲು ಪ್ರಮಾಣ ಹೆಚ್ಚಳ, ಎಸ್ ಸಿ ಮೀಸಲು ವರ್ಗೀಕರಣ, ಪಂಚಮಸಾಲಿ ಸಮುದಾಯದವರಿಗೆ ಪ್ರವರ್ಗ 2ಡಿಗೆ ಸೇರ್ಪಡೆ, ಮುಸ್ಲಿಮರಿಗೆ ಪ್ರತ್ಯೇಕ ಮೀಸಲು ರದ್ದು ಸೇರಿ ಎಲ್ಲವನ್ನು ನನ್ನ ಅವಧಿಯಲ್ಲಿ ಸಂವಿಧಾನಬದ್ಧವಾಗಿ ತೀರ್ಮಾನ ಮಾಡಲಾಗಿತ್ತು. ಬಿಜೆಪಿ ಸರ್ಕಾರ ಕೈಗೊಂಡ ಈ ನಿರ್ಧಾರಗಳನ್ನು ಪ್ರಶ್ನಿಸಿ ಕಾಂಗ್ರೆಸ್ ನ ಕೆಲವರು ಸುಪ್ರೀಂ ಕೋರ್ಟ್ ಗೆ ಮೊರೆ ಹೋದರು.

ವಿಧಾನಸಭೆ ಚುನಾವಣೆ ಹತ್ತಿರವಾಗಿದ್ದರಿಂದ ಮುಂದಿನ ವಿಚಾರಣೆವರೆಗೆ ಜಾರಿಗೊಳಿಸುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದ್ದನ್ನು ಸುಪ್ರೀಂ ಕೋರ್ಟ್ ಒಪ್ಪಿದೆಯೇ ಹೊರತು ತಡೆಯಾಜ್ಞೆ ನೀಡಿಲ್ಲವೆಂದು ಬೊಮ್ಮಾಯಿ ಹೇಳಿದರು.

ಎಸ್ ಸಿ, ಎಸ್ ಟಿ ಮೀಸಲು ಹೆಚ್ಚಳ, ಎಸ್ ಸಿ ಒಳಮೀಸಲು, ಪಂಚಮಸಾಲಿ ಸಮುದಾಯಕ್ಕೆ ಪ್ರತ್ಯೇಕ ಮೀಸಲು ಕೊಡುವ ಬಗ್ಗೆ ಕಾಂಗ್ರೆಸ್‌ ಸರ್ಕಾರಕ್ಕೆ ನೈಜ ಕಾಳಜಿಯಿದ್ದರೆ ಈ ನಿಟ್ಟಿನಲ್ಲಿ ಮುಂದುವರಿಯಬೇಕು. ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂಬ ತಪ್ಪು ಮಾಹಿತಿ ನೀಡಿ ವಿವಿಧ ಸಮುದಾಯಗಳಿಗೆ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ವಾಗ್ದಾಳಿ ಮಾಡಿದರು.

ಇನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರ ಸಹೋದರ ಗೋಪಾಲ್ ಜೋಷಿ ಬಂಧನವಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷದವರು ಪ್ರಲ್ಹಾದ್ ಜೋಷಿಯವರ ರಾಜೀನಾಮೆ ಕೇಳುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಹ್ಲಾದ್ ಜೋಷಿಯವರು ಅವರ ಸೋದರ‌ನ ಜತೆ ಯಾವುದೇ ವ್ಯವಹಾರಿಕ ಹಾಗೂ ಕೌಟುಂಬಿಕ ಸಂಬಂಧ ಇಟ್ಟುಕೊಂಡಿಲ್ಲ ನನಗೆ ಅವರ ಕುಟುಂಬದ ಬಗ್ಗೆ ಚೆನ್ನಾಗಿ ಗೊತ್ತಿದೆ.

ಕಾಂಗ್ರೆಸ್ ನವರು ಸೇಡಿನ‌ ರಾಜಕೀಯ ಮಾಡುತ್ತಿದ್ದಾರೆ. ಅವರ ವಿರುದ್ದ ಯಾರು ಮಾತನಾಡುತ್ತಾರೆ ಅವರ ವಿರುದ್ದ ಸೇಡಿಗಾಗಿ ಕಾಂಗ್ರೆಸ್ ನವರು ಎಫ್ಐಆರ್ ಹಾಕಿಸುತ್ತಿದ್ದಾರೆ ಎಂದು ಹೇಳಿದರು.

ರಾಜಕೀಯ

ರೈತರ ಕೃಷಿ ಕಾರ್ಯಕ್ಕೆ ಅನುಕೂಲವಾಗುವಂತೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ; ಸಚಿವ ಸಂತೋಷ ಲಾಡ್ ಕಟ್ಟುನಿಟ್ಟಿನ ಸೂಚನೆ

ರೈತರ ಕೃಷಿ ಕಾರ್ಯಕ್ಕೆ ಅನುಕೂಲವಾಗುವಂತೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ; ಸಚಿವ

ಕೃಷಿ ಪಂಪ್‍ಸೆಟ್‍ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ, ರೈತರಿಗೆ ಅನುಕೂಲವಾಗುವಂತೆ ಆದಷ್ಟು ಹಗಲು ಹೊತ್ತಿನಲ್ಲಿ ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh lad)

[ccc_my_favorite_select_button post_id="119603"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!