ಸತತ ಮಳೆ; ಬೆಂ.ನಗರ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ : ಡಿಸಿ ಜಗದೀಶ್

ಬೆಂಗಳೂರು ನಗರ ಜಿಲ್ಲೆ: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆ ದಿನಾಂಕ 23.10.2024 ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ರವರು ಆದೇಶಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ.

ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.

ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.

ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ರಾಜಕೀಯ

ಜಾತಿಗಣತಿಗೆ ಮುಂದಾದ ಕೇಂದ್ರ ಸರ್ಕಾರ; ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹವೇನು ಗೊತ್ತಾ..?

ಜಾತಿಗಣತಿಗೆ ಮುಂದಾದ ಕೇಂದ್ರ ಸರ್ಕಾರ; ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹವೇನು ಗೊತ್ತಾ..?

ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="105939"]
ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ: ಸಿಎಂ ಸಿದ್ದರಾಮಯ್ಯ

ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ: ಸಿಎಂ ಸಿದ್ದರಾಮಯ್ಯ

ನ್ಯಾಯ ಪಡೆಯುವುದು ಈಗ ದುಬಾರಿಯಾಗಿದ್ದು, ಅನೇಕರಿಗೆ ಹಣವಿಲ್ಲದೆ ನ್ಯಾಯ ಪಡೆಯಲು ಸಾಧ್ಯವಾಗುತ್ತಿಲ್ಲ. ಅಂಥವರಿಗೆ ಅನ್ಯಾಯವಾಗುತ್ತದೆ. ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ Cmsiddaramaiah

[ccc_my_favorite_select_button post_id="105901"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಪೊಲೀಸ್‌ ವಾಹನದಿಂದ ಜಿಗಿದು ಆರೋಪಿ ಸಾವು..!

ಪೊಲೀಸ್‌ ವಾಹನದಿಂದ ಜಿಗಿದು ಆರೋಪಿ ಸಾವು..!

ಕಳ್ಳತನ ಮತ್ತು ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳನ್ನು ಕರೆದುಕೊಂಡು ಹೋಗುವಾಗ ಪರಾರಿಯಾಗುವ ಭರದಲ್ಲಿ ವಾಹನದಿಂದ ಜಿಗಿದು ಒಬ್ಬ ಸಾವನ್ನಪ್ಪಿರುವ (dies)

[ccc_my_favorite_select_button post_id="105926"]
ದೊಡ್ಡಬಳ್ಳಾಪುರ: ಅಪರಿಚಿತ ವಾಹನ ಡಿಕ್ಕಿ ಕೂಲಿ ಕಾರ್ಮಿಕನಿಗೆ ಪೆಟ್ಟು

ದೊಡ್ಡಬಳ್ಳಾಪುರ: ಅಪರಿಚಿತ ವಾಹನ ಡಿಕ್ಕಿ ಕೂಲಿ ಕಾರ್ಮಿಕನಿಗೆ ಪೆಟ್ಟು

ಅಪರಿಚಿತ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ ಕೂಲಿ ಕಾರ್ಮಿಕ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಗರದ ಎಪಿಎಂಸಿ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="105861"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!