ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ರಾಜ್ಯದ ಜನತೆ ಪ್ರಶ್ನಿಸಬೇಕು: ಸಿಎಂ ಕರೆ

ವರುಣಾ: ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹರದರಲ್ಲ. ಎಲ್ಲಾ ಷಡ್ಯಂತ್ರ ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದರು.

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ಕ್ಷೇತ್ರದ ಮತದಾರರಿಗೆ ಅನಂತ ಅನಂತ ಧನ್ಯವಾದ ಅರ್ಪಿಸಿದರು.

ವರುಣಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ಕೊಡಲಾಗುತ್ತಿದೆ. ನಾನು ಉಪಕಾರ ಮಾಡುತ್ತಿಲ್ಲ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಮಾಡುವ ನನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ ಎಂದರು.

ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೆಲ್ಲಾ ವರುಣ ಕ್ಷೇತ್ರ ಮಾತ್ರವಲ್ಲದೆ ರಾಜ್ಯದ ಎಲ್ಲ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇನೆ. ಹತ್ತು ಹಲವು ಭಾಗ್ಯಗಳನ್ನು ಕೊಡುವ ಜೊತೆಗೆ ಹಲವು ನಿಗಮಗಳ ಸಾಲ ಮನ್ನಾ ಮಾಡಿದ್ದೇನೆ. ಅಂಬೇಡ್ಕರ್ ಅವರ ಆಶಯದಂತೆ ಬಡವರಿಗೆ ಆರ್ಥಿಕ‌ ಶಕ್ತಿ ಕೊಡುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇನೆ.

ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ, ಮಧ್ಯಮ ವರ್ಗದವರ ಬದುಕಿಗೆ ಆಸರೆ ಆಗುವ ಐದೂ ಗ್ಯಾರಂಟಿ ಯೋಜನೆಗಳನ್ನು ಜನಪರವಾಗಿ ರೂಪಿದಿ ಜಾರಿ ಮಾಡಿದ್ದೇವೆ. ಪ್ರತೀ ವರ್ಷ ಈ ಗ್ಯಾರಂಟಿಗಳ ಮೂಲಕ 56 ಸಾವಿರ ಕೋಟಿ ರೂಪಾಯಿಗಳನ್ನು ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗೆ ದೇಶದಲ್ಲಿ ನುಡಿದಂತೆ ನಡೆದುಕೊಂಡಿರುವ ಪಕ್ಷ ನಿಮ್ಮ ಪಕ್ಷ. ನಿಮ್ಮದೇ ಕಾಂಗ್ರೆಸ್ ಪಕ್ಷ ಎಂದರು.

ಕೇಂದ್ರದಲ್ಲಿರುವ ಮೋದಿ ಸರ್ಕಾರವಾಗಲಿ, ರಾಜ್ಯದಲ್ಲಿದ್ದ ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಜನರ ಕಲ್ಯಾಣ ಮಾಡದೆ ಲೂಟಿ ಮಾಡಿ ಹೋದರು ಎಂದರು.

ಬಿಜೆಪಿ ಸಾಮಾಜಿಕ ನ್ಯಾಯದ, ಬಡವರ ವಿರೋಧಿ

ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ. ಬಡವರ ವಿರೋಧಿ. ಮೂರು ಬಾರಿ ಪ್ರಧಾನಿ ಆಗಿರುವ ಮೋದಿ ಕೊಟ್ಟ ಮಾತಿನಂತೆ ನಡೆದ ಉದಾಹರಣೆ ಇದೆಯಾ ಹೇಳಿ.‌ ಇಷ್ಟು ವರ್ಷ ಪ್ರಧಾನಿಯಾಗಿ ಮೋದಿ ಬಡಪರ ಪರವಾಗಿ ಒಂದೇ ಒಂದು ಯೋಜನೆ ಜಾರಿ ಮಾಡಿದ್ದಾರಾ ಹೇಳಿ ಅಂದರು.

ಕೇಂದ್ರದಿಂದ ರಾಜ್ಯಕ್ಕೆ ನಿರಂತರ ದ್ರೋಹ

ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವವರು ನಾವು. ನಾವು ನಮ್ಮ ಪಾಲಿನ ತೆರಿಗೆ ಪಡೆಯಲು ಭಿಕ್ಷೆ ಬೇಡಬೇಕಾ? ಮೊನ್ನೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳಿಗೆ ಅತಿ ಹೆಚ್ಚು ತೆರಿಗೆ ಪಾಲು ಕೊಟ್ಟಿರುವ ಕೇಂದ್ರಕ್ಕೆ ರಾಜ್ಯಕ್ಕೆ ಮಾತ್ರ ಕೇವಲ ಆರು ಸಾವಿರ ಕೋಟಿ ಕೊಟ್ಟು ಭಯಾನಕ ಅನ್ಯಾಯ ಮಾಡಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಅನ್ಯಾಯದ ವಿರುದ್ದ ದೆಹಲಿಗೇ ಹೋಗಿ ನಾವು ಪ್ರತಿಭಟನೆ ಮಾಡಿದೆವು. ಬಿಜೆಪಿ-ಜೆಡಿಎಸ್ ಒಬ್ಬೇ ಒಬ್ಬ ಲೋಕಸಭಾ ಸದಸ್ಯ ರಾಜ್ಯದ ಪಾಲನ್ನು ಕೇಳುವ ಧೈರ್ಯ ಮಾಡಿಲ್ಲ. ಮಾಡುವುದೂ ಇಲ್ಲ. ಆದ್ದರಿಂದ ಕೇಂದ್ರದ ದ್ರೋಹದ ವಿರುದ್ಧ ರಾಜ್ಯದ ಜನತೆ ಮಾತನಾಡಬೇಕು ಎಂದು ಕರೆ ನೀಡಿದರು.

ರಾಜ್ಯಕ್ಕೆ ವಿಶೇಷ ಅನುದಾನದ ಜೊತೆಗೆ ನೀರಾವರಿ ಯೋಜನೆಗೆ 5495 ಕೋಟಿ ನೀಡಲು ಶಿಫಾರಸ್ಸು ಮಾಡಿದ್ದ ನಿರ್ಮಲಾ ಸೀತಾರಾಮನ್ ಈ ಹಣವನ್ನೂ ಕೊಡಲಿಲ್ಲ. ರಾಜ್ಯದ ಫೆರಿಫೆರಲ್ ರಸ್ತೆಗೆ, ಕೆರೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ಕೊಡ್ತೀವಿ ಅಂದು ಘೋಷಿಸಿದರು. ಆದರೆ ನಯಾಪೈಸೆ ಕೊಡಲಿಲ್ಲ. ಈ ಅನ್ಯಾಯಗಳ ವಿರುದ್ಧ ರಾಜ್ಯದ ಜನತೆ ಮಾತನಾಡಿದರೆ ತಪ್ಪಾ, ನಾವು ಪ್ರತಿಭಟಿಸಿದರೆ ತಪ್ಪಾ ಎಂದು ಗುಡುಗಿದರು.

ಲೋಕಸಭಾ ಯೋಜನೆ ಬಳಿಕ ನಮ್ಮ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎಂದು ದೆಹಲಿಯ ಮೋದಿಯಿಂದ, ಇಲ್ಲಿನ ಆರ್.ಅಶೋಕ್ ವರೆಗೂ ಸುಳ್ಳುಗಳ ಮೇಲೆ ಸುಳ್ಳು ಹೇಳಿದರು. ಇದುವರೆಗೂ ಗ್ಯಾರಂಟಿಗಳು ನಿಂತಿಲ್ಲ. ನಿಲ್ಲುವುದೂ ಇಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ನಿಲ್ಲಲ್ಲ ಎಂದು ಘೋಷಿಸಿದರು.‌

ಸಿದ್ದರಾಮಯ್ಯ ಒಂದೇ ಒಂದು ರೂಪಾಯಿ ಲಂಚ ಪಡೆದ ಉದಾಹರಣೆ ಇದೆಯಾ: ನನ್ನ ಮೇಲಿನ ಸುಳ್ಳು ಆರೋಪ ಸಹಿಸ್ತೀರಾ ಎಂದು ಪ್ರಶ್ನಿಸಿದರು.

ನಾನು ಮಂತ್ರಿಯಾಗಿ 45 ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ಹಿಂದುಳಿದ ವರ್ಗದ ನಾನು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿಗೆ ಹೊಟ್ಟೆಕಿಚ್ಚು. ಇದನ್ನು ನೀವು ಸಹಿಸ್ತೀರಾ ಎಂದು ಮರು ಪ್ರಶ್ನಿಸಿದರು.

ನಾನು ಎರಡು ಬಾರಿ ಸಿಎಂ ಆಗಿ ಮೈಸೂರಲ್ಲಿ ಒಂದೂ ಮನೆ ಇಲ್ಲ. ಮರಿಸ್ವಾಮಿ ಮನೇಲಿ ಇದೀನಿ. ಕುವೆಂಪು ರಸ್ತೇಲಿ 3 ವರ್ಷದಿಂದ ಮನೆ ಕಟ್ಟುತ್ತಲೇ ಇದ್ದೀನಿ. ಇದುವರೆಗೂ ಪೂರ್ತಿ ಆಗಿಲ್ಲ. ನನಗೆ ವರ್ಚಸ್ಸು ಕೊಡುವವರು ನೀವು. ನಿಮ್ಮ ಎದುರಿಗೆ ಪ್ರಾಮಾಣಿಕವಾಗಿ ಇದ್ದೇನೆ ಎಂದರು.

ಇದನ್ನೂ ಓದಿ; ಜಕ್ಕಲಮೊಡಗು ಜಲಾಶಯ ಭರ್ತಿ..!: ದೊಡ್ಡಬಳ್ಳಾಪುರ – ಚಿಕ್ಕಬಳ್ಳಾಪುರ ನಗರಗಳಿಗೆ ನೆಮ್ಮದಿ| Video

ನೀವೇ ನನ್ನ ಮಾಲೀಕರು. ನೀವೇ ನನ್ನ ಯಜಮಾನರು. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದರು.

ಬಿಜೆಪಿ-ಜೆಡಿಎಸ್ ನಾಯಕರ ಹೊಟ್ಟೆಕಿಚ್ಚಿನಿಂದ ನನ್ನ ವರ್ಚಸ್ಸು ಕಡಿಮೆ ಆಗಲ್ಲ. ನನ್ನ ವರ್ಚಸ್ಸು ವರುಣಾ ಜನತೆ, ನನ್ನ ವರ್ಚಸ್ಸು ರಾಜ್ಯದ ಜನತೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಸಚಿವರುಗಳಾದ ಕೆ.ವೆಂಕಟೇಶ್, ರಹೀಂಖಾನ್, ಬೋಸ್ ರಾಜ್, ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್,
ವಿಧಾನಸಭೆ ಮತ್ತು ವಿಧಾನ‌ ಪರಿಷತ್ ಶಾಸಕರುಗಳಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ದ್ರುವನಾರಾಯಣ್, ತಿಮ್ಮಯ್ಯ, ವರುಣಾ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು, ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಸೇರಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು (ಏ.15) ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಿರ್ಮಾಣ ವಾಗಿರುವ ಮಂದಿರದ ಭೈರವೈಕ್ಯ ಉದ್ಘಾಟನೆ ಮಾಡಲಿದ್ದಾರೆ.

[ccc_my_favorite_select_button post_id="120962"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]