ಹರಿತಲೇಖನಿ ದಿನಕ್ಕೊಂದು ಕಥೆ: ಹೆಗ್ಗಣ ಕಲಿಸಿದ ಪಾಠ

ಒಂದು ದಟ್ಟ ಕಾಡಿತ್ತು. ಅ ಕಾಡಿನಲ್ಲಿ ಒಂದು ದೊಡ್ಡ ಮರವಿತ್ತು. ಅ ಮರ ಬಹಳ ವರ್ಷಗಳಿಂದ ಜೀವಿಸಿದ್ದರಿಂದ ಹಿರಿಯನಂತೆ ವರ್ತಿಸುತ್ತಿತ್ತು. ಅದೇ ವಿಷಯವಾಗಿ ಅದಕ್ಕೆ ತುಂಬಾ ಜಂಬವಿತ್ತು. ಕಾಡಿಗೆ ತಾನೇ ಹಿರಿದಾದ ಮರ, ತನ್ನಷ್ಟು ಹಿರಿಯ ಮರ ಎಲ್ಲೂ ಇಲ್ಲ, ಆದ್ದರಿಂದ ಎಲ್ಲರೂ ತನ್ನ ಮಾತು ಕೇಳಬೇಕು ಎಂದು ಮೆರೆಯುತ್ತಿತ್ತು.

ತನ್ನ ನೆರಳಿನ ಆಶ್ರಯಕ್ಕೆ ಬಂದ ಪ್ರಾಣಿಗಳ ಬಳಿ “ಇಷ್ಟು ವಯಸ್ಸಾಗಿದ್ದರೂ ನನ್ನ ರೆಂಬೆ ಕೊಂಬೆಗಳು ಹಸಿರಿನಿಂದ ನಳನಳಿಸುತ್ತಿದೆ ನೋಡಿ’ ಎಂದು ನಲಿಯುತ್ತಿತ್ತು.

ಒಂದು ದಿನ ಪುಟ್ಟ ಗುಬ್ಬಿ ಮರದ ಮೇಲೆ ಕುಳಿತಿತು. ಹಿರಿಯ ಮರ ಮಾತ್ರ ಮಾತಾಡಲೇ ಇಲ್ಲ. ಯಾವತ್ತೂ ತಾನಾಗಿಯೇ ಮಾತು ಶುರುಮಾಡುತ್ತಿದ್ದ ಮರ ಇವತ್ತೇಕೆ ಸುಮ್ಮನಿದೆ ಎಂದು ಗುಬ್ಬಿ ಆಶ್ಚರ್ಯ ವ್ಯಕ್ತಪಡಿಸಿತು.

ತುಂಬಾ ಹೊತ್ತು ಸುಮ್ಮನಿದ್ದ ಗುಬ್ಬಿ “ನೀನು ಯಾವಾಗಲೂ ಸಂತೋಷದಿಂದ ಇರುತ್ತಿದ್ದೆಯಲ್ಲಾ. ಇಂದು ಯಾಕೆ ಬೇಸರದಿಂದ ಇದ್ದೀಯಾ?’ ಎಂದು ಕೇಳಿತು. ಮರ “ನನ್ನ ಬೇರು ನೋಡಿದ್ದೀಯ? ಎಷ್ಟು ಕೊಳಕಾಗಿದೆ. ನನ್ನ ಎತ್ತರ, ನನ್ನ ಸೌಂದರ್ಯ ಇಷ್ಟು ಬೃಹತ್ತಾಗಿದ್ದರೂ ಬೇರುಗಳು ಮಾತ್ರ ಕೊಳಕಾಗಿದ್ದರೆ ಏನು ಚೆನ್ನ?!’.

ಅದನ್ನು ಕೇಳಿ ಪುಟ್ಟ ಗುಬ್ಬಿ ನಕ್ಕು “ಅಯ್ಯೋ ಮರವೇ… ನಿನ್ನ ಎತ್ತರ, ಸೌಂದರ್ಯ ಇವೆಲ್ಲವಕ್ಕೂ ಮುಖ್ಯ ಕಾರಣ ಇವೇ ಇದೇ ಕೆಸರು ಮೆತ್ತಿದ ಬೇರು. ಅದಿಲ್ಲದೇ ಇರುತ್ತಿದ್ದರೆ ನೀನು ಬೆಳೆಯುವುದಕ್ಕೆ ಪೋಷಕಾಂಶ ಎಲ್ಲಿಂದ ಬರಬೇಕು? ಈಗ ಅದನ್ನೇ ದೂಷಿಸುತ್ತಿರುವೆಯಲ್ಲ. ಇದು ಸರಿಯೇ?’ ಎಂದು ಕೇಳಿತು.

ಆದರೆ ಮರಕ್ಕೆ ಅದು ನಾಟಲಿಲ್ಲ. ಅದು ತನ್ನ ಮೊಂಡುವಾದವನ್ನೇ ಹಿಡಿಯಿತು. “ಆದರೂ ಈ ಬೇರುಗಳು ಮಣ್ಣು ಮೆತ್ತಿಕೊಂಡಿರದೇ ಇದ್ದರೇ ಚೆಂದವಿತ್ತು’ ಎಂದು ಮತ್ತೆ ಬೇಸರಪಟ್ಟುಕೊಂಡಿತು. ಇದಕ್ಕೆ ಎಷ್ಟು ಹೇಳಿದರೂ ಅಷ್ಟೆ ಎಂದು ಅರಿತ ಗುಬ್ಬಿ ಮತ್ತೆ ಏನನ್ನೂ ಹೇಳದೆ ಅಲ್ಲಿಂದ ಹಾರಿಹೋಯಿತು.

ಕೆಲವು ದಿನಗಳ ನಂತರ ಕಾಡಿನಲ್ಲಿ ಹೊಸದೊಂದು ಸಮಸ್ಯೆ ಪ್ರಾರಂಭವಾಗಿತ್ತು. ಅದೆಲ್ಲಿಂದಲೋ ಹೆಗ್ಗಣದ ಸೈನ್ಯ ಕಾಡಿಗೆ ನುಗ್ಗಿಬಿಟ್ಟಿತು. ಸಿಕ್ಕ ಸಿಕ್ಕ ಮರಗಳನ್ನೆಲ್ಲಾ ಕಡಿದು ಹಾಕುತ್ತಿದ್ದವು. ಅವು ಕಾಡಿನ ನೆಲದಲ್ಲಿ ಬಿಲ ತೋಡಲು ಸೂಕ್ತವಾದ ಮರವನ್ನು ಹುಡುಕುತ್ತಿದ್ದವು. ಅದೇ ಸಮಯಕ್ಕೆ ಹಿರಿಯ ಮರ ಹೆಗ್ಗಣಗಳನ್ನು ತನ್ನ ಬಳಿಗೆ ಕರೆಯಿತು. ಅವುಗಳಿಂದ ತನ್ನ ಬೇರನ್ನು ಸ್ವತ್ಛ ಮಾಡಿಸಿಕೊಳ್ಳುವುದು ಅದರ ಉದ್ದೇಶವಾಗಿತ್ತು.

ಆ ಹಿರಿಯ ಮರದ ಎತ್ತರ ಮತ್ತು ಬೃಹತ್‌ ಗಾತ್ರ ನೋಡಿದ ಹೆಗ್ಗಣಗಳ ಸೈನ್ಯದ ಮುಖಂಡ “ಈ ಮರದ ಕೆಳಗೆ ಬಿಲ ತೋಡಿದರೆ ತಮ್ಮ ಸೈನ್ಯದ ಸದಸ್ಯರೆಲ್ಲರೂ ವಾಸಿಸಬಹುದು’ ಎಂದಿತು. ತಮ್ಮ ಮುಖಂಡ ಹಾಗೆ ಹೇಳಿದ್ದೇ ತಡ ಹೆಗ್ಗಣಗಳು ಮರದ ಬುಡದ ಮೇಲೆ ಮುಗಿಬಿದ್ದವು.

ಸ್ವಲ್ಪ ಹೊತ್ತಿನಲ್ಲಿ ಮರಕ್ಕೆ ನೋವಾಗತೊಡಗಿತು. ಬಹಳ ಬೇಗ ಹೆಗ್ಗಣಗಳು ಹಿರಿಯ ಮರದ ಬೇರನ್ನು ಕಡಿದು ಕಡಿದು ಸಡಿಲ ಮಾಡಿದವು. ಮರ ದೊಪ್ಪನೆ ಉರುಳಿಬಿತ್ತು. ತನ್ನ ಬೆಳವಣಿಗೆಗೆ ಕಾರಣವಾದ ಬೇರನ್ನೇ ದ್ವೇಷಿಸಿದ ಮರಕ್ಕೆ ತಕ್ಕ ಶಾಸ್ತಿಯಾಗಿತ್ತು.

ಕೃಪೆ: ಯುಎಚ್‌ಎಮ್ ಗಾಯತ್ರಿ (ಸಾಮಾಜಿಕ ಜಾಲತಾಣ)

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!