ಬೆಂಗಳೂರು; ಬಿಜೆಪಿಗೆ ಸಿಪಿ ಯೋಗೇಶ್ವರ್ ರಾಜೀನಾಮೆ ಕೊಟ್ಟಿರುವುದು ಆಶ್ಚರ್ಯ ಪಡುವಂತದ್ದು ಏನೂ ಇಲ್ಲ , ಗಾಳಿಯಲ್ಲಿ ಗುಂಡು ಹೊಡೆಯುವಂತ ಆರೋಪ ಅಲ್ಲ, ಯಾವಾಗ ತರಾತುರಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ರೋ ಅವತ್ತೇ ಗೊತ್ತಿತ್ತು ಇದರಲ್ಲಿ ಆಶ್ಚರ್ಯ ಏನು ಇಲ್ಲ ಎಂದರು. (channapatna by election)
ಜೆಪಿ ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು
ಚನ್ನಪಟ್ಟಣ ಉಪಚುನಾವಣೆ (channapatna by election) ಟಿಕೆಟ್ ವಿಚಾರದಲ್ಲಿ ಕಳೆದ ಎರಡು ತಿಂಗಳಿಂದ ನಿರಂತರವಾಗಿ ನನ್ನ ಹೆಸರು ಚಾಲ್ತಿಯಲ್ಲಿದೆ. ಜೆಡಿಎಸ್ ಕಾರ್ಯಕರ್ತರು ನಿಖಿಲ್ ಗೆ ಟಿಕೆಟ್ ಕೊಟ್ರೆ ನಾವು ಕೆಲಸ ಮಾಡ್ತೀವಿ ಅಂದಿದ್ರು, ಇಲ್ಲಿ ಯಾವುದೇ ತೀರ್ಮಾನಗಳು ಅಂತಿಮ ಆಗಬೇಕಾದ್ರೆ NDA ಕಡೆಯಿಂದ ಘೋಷಣೆ ಆಗಬೇಕು. ನಿನ್ನೇ ಕುಮಾರಣ್ಣ ಅವರು ಇದನ್ನೇ ಹೇಳಿದರೆ ತಾಳಿದವನು ಬಾಳಿಯಾನು ಅಂತ. ಅಂತಿಮವಾಗಿ ನಮ್ಮ ನಾಯಕರು ಮತ್ತು ಬಿಜೆಪಿ ನಾಯಕರು ಅಭ್ಯರ್ಥಿಯನ್ನ ಘೋಷಣೆ ಮಾಡುತ್ತಾರೆ.
ಕಾಂಗ್ರೆಸ್ ಗೆ ಕುಮಾರಣ್ಣನೇ ಟಾರ್ಗೆಟ್
ಕಾಂಗ್ರೆಸ್ ಗೆ ಕುಮಾರಸ್ವಾಮಿಯೇ ಟಾರ್ಗೆಟ್ ಮಾಧ್ಯಮ ಪ್ರಶ್ನೆಗೆ ಉತ್ತರಿಸಿ ಅವರು, ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ 14 ಲೋಕಸಭೆ ಕ್ಷೇತ್ರಗಳಲ್ಲಿ 12 ಕ್ಷೇತ್ರವನ್ನು
ಗೆದ್ದಿದ್ದೇವೆ. ಅದ್ರಲ್ಲಿ ಪ್ರಾಮುಖ ಪಾತ್ರ ನಮ್ಮ ಕಾರ್ಯಕರ್ತರು, ಕುಮಾರಣ್ಣನ ನಾಯಕತ್ವ ಈ ವಿಚಾರಕ್ಕೆ ಕುಮಾರಣ್ಣ ಟಾರ್ಗೆಟ್ ಮಾಡುತ್ತಿದ್ದಾರೆ ಎಂದರು.
ಬಿಜೆಪಿಯ ರಾಜ್ಯಮಟ್ಟದ ಒಕ್ಕಲಿಗರನ್ನು ಕುಮಾರಣ್ಣ ಅವರು ತುಳಿತಾರೆ ಅನ್ನೋ ಮಾತಿಗೆ ಭವಿಷ್ಯ ಇದರ ಹಿಂದೆ ಕುಮ್ಮಕ್ಕು ಕೊಟ್ಟವರು ಯಾರು ಅನ್ನುವವುದು ಪ್ರಸ್ತುತ ಬೆಳವಣಿಗೆ ನೋಡಿದರೆ ರಾಜ್ಯದ ಜನಕ್ಕೆ ಗೊತ್ತಾಗುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು.