Doddaballapura: ಶಾಲೆ ಆವರಣಕ್ಕೆ ನುಗ್ಗಿದ ಮಳೆ ನೀರು.. ವಿದ್ಯಾರ್ಥಿಗಳ ಪರದಾಟ| Video ನೋಡಿ

ದೊಡ್ಡಬಳ್ಳಾಪುರ; ತಾಲೂಕಿನಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಯಿಂದಾಗಿ ಮಧುರೆ ಹೋಬಳಿಯ ಕೆಂಜಿಗನಹಳ್ಳಿ ಶಾಲೆ ಆವರಣಕ್ಕೆ ನೀರು ನುಗ್ಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಪರದಾಡುವಂತಾಗಿತ್ತು.

ಚಂಡಮಾರುತದ ಪರಿಣಾಮವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಪರಿಸ್ಥಿತಿ ಮುಂದುವರಿದಿದೆ. ಕರಾವಳಿ, ಮಲೆನಾಡಿನಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದ 15 ಜಿಲ್ಲೆಗಳಲ್ಲಿ ಹಿಂಗಾರು ಮಳೆಯ ಅಬ್ಬರದಿಂದ ಜನಜೀವನ ಅಸ್ತ ವ್ಯಸ್ತವಾಗಿದೆ.

ಅಂತೆಯೇ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳೆದ ಸೋಮವಾರದಿಂದ ಸುರಿಯುತ್ತಿರುವ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸುತ್ತಿದ್ದು, ರಾಗಿ ಜೋಳದ ಬೆಳೆಗಳು ನೆಲ ಕಚ್ಚಲಾರಂಭಿಸಿವೆ.

ಮಳೆಯ ಕಾರಣ ಬೆಂಗಳೂರು ನಗರ ಜಿಲ್ಲೆಯಲ್ಲಿ ಮಾತ್ರ ರಜೆ ಘೋಷಿಸಲಾಗಿದ್ದು, ಸತತ ಮಳೆಯಾಗುತ್ತಿದ್ದರು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸದ ಕಾರಣ ವಿದ್ಯಾರ್ಥಿಗಳು ಶಿಕ್ಷಕರು ಮಳೆಯಲ್ಲಿಯೇ ಪರದಾಡಬೇಕಿದೆ.

ಮಂಗಳವಾರ ಮಧ್ಯಾಹ್ನ ಸುರಿದ ಧಾರಾಕಾರ ಮಧುರೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕೆಂಜಿಗನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣಕ್ಕೆ ಮಳೆ ನೀರು ಹರಿದಿದ್ದು, ಶಾಲೆಯ ಕಟ್ಟಡ ಒಳಗೆ ನೀರು ನುಗ್ಗುವ ಆತಂಕ ವಿದ್ಯಾರ್ಥಿಗಳಿಗೆ ಎದುರಾಗಿತ್ತು.

ದೊಡ್ಡಬಳ್ಳಾಪುರ ತಾಲೂಕಿನ ಆನೇಕ ಶಾಲೆಗಳ ಕಟ್ಟಡಗಳು ಶಿಥಿಲವಾಗಿದ್ದು, ಮಳೆಯಿಂದ ಸೋರಲಾರಂಭಿಸಿವೆ. ಇದರಿಂದಾಗಿ ವಿದ್ಯಾರ್ಥಿಗಳು ಶಾಲೆಯ ಮೂಲೆಯಲ್ಲಿ ಕುಳಿತುಕೊಳ್ಳುವ ಅನಿವಾರ್ಯತೆ ಉಂಟಾಗಿದೆ ಎಂದು ತಿಳಿದುಬಂದಿದೆ.

ಉಳಿದಂತೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯಲ್ಲಿ ಸೋಮವಾರ ರಾತ್ರಿ 72.05 ಮಿ.ಮೀ ದಾಖಲೆ ಮಳೆ ಸುರಿದಿದ್ದು, ತೋಟಗಾರಿಕೆ ಬೆಳೆಗಳನ್ನು ಬೆಳೆದಿದ್ದ ರೈತರನ್ನು ಸಂಕಷ್ಟಕ್ಕೆ ಒಳಾಗಗುವಂತೆ ಮಾಡಿದ್ದು, ಹೂವಿನ ತೋಟಗಳಿಂದ ನೀರನ್ನು ಹೊರಹಾಕಬೇಕಾದ ಅನಿವಾರ್ಯತೆ ಸೃಷ್ಟಿಯಾಗಿತ್ತು.

ಇನ್ನೂ ಗುಡುಗು, ಸಿಡಿಲಿನ ಜೊತೆ ದೊಡ್ಡಬಳ್ಳಾಪುರ ತಾಲೂಕಿನ ಧಾರಾಕಾರವಾಗಿ ಮಳೆ ಕಸಬಾ ಹೋಬಳಿಯಲ್ಲಿ 53.07 ಮಿ.ಮೀ, ದೊಡ್ಡಬೆಳವಂಗಲ ಹೋಬಳಿಯಲ್ಲಿ 33.05 ಮಿ.ಮೀ, ಮಧುರೆ ಹೋಬಳಿಯಲ್ಲಿ 32.05 ಮಿ.ಮೀ ಹಾಗೂ ಸಾಸಲು ಹೋಬಳಿಯಲ್ಲಿ 34.08 ಮಿ.ಮೀ ಒಟ್ಟು 46.14 ಮಿ.ಮೀ ದಾಖಲಾಗಿದೆ.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!