ಕಟ್ಟಡ ಕುಸಿತ; ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ – ಸಿಎಂ

ಬೆಂಗಳೂರು: ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಗಾಯಗೊಂಡವರಿಗೆ ಚಿಕಿತ್ಸೆ ಜೊತೆಗೆ ಪರಿಹಾರ ನೀಡಲು ಸರ್ಕಾರದ ಚಿಂತನೆ

ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರು ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದ್ದು, ಉಳಿದಂತೆ 8 ಜನರನ್ನು ರಕ್ಷಣೆ ಮಾಡಲಾಗಿದೆ. ಅವರಲ್ಲಿ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ರಕ್ಷಣೆ ಮಾಡಿರುವವರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತಿದೆ. ಸಾವನ್ನಪ್ಪಿರುವ 8 ಜನರಿಗೆ ತಲಾ 2 ಲಕ್ಷ ಕಾರ್ಮಿಕ ಇಲಾಖೆಯಿಂದ , 3 ಲಕ್ಷ ಬಿಬಿಎಂಪಿಯಿಂದ , ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ.

ಇದು ರೆವಿನ್ಯೂ ಬಡಾವಣೆಯಾಗಿದ್ದು, ಈ ಕಟ್ಟಡವನ್ನು ಅನಧಿಕೃತವಾಗಿ ಪರವಾನಗಿ ಪಡೆಯದೇ ನಿರ್ಮಿಸಲಾಗಿದೆ. ಅನಧಿಕೃತ ಕಾಮಗಾರಿ ಎಂದು ನೋಟೀಸು ನೀಡಲಾಗಿದ್ದರೂ, ನಿರ್ಮಾಣ ಮಾಡಿರುವುದರಿಂದ, ಸಂಬಂಧಪಟ್ಟ ಎಇಇ ಯನ್ನು ಅಮಾನತುಗೊಳಿಸಲಾಗಿದೆ.

ಈ ಪ್ರದೇಶದ ವ್ಯಾಪ್ತಿಗೆ ಬರುವ ವಿಭಾಗೀಯ ಅಧಿಕಾರಿಗೂ ಹಾಗೂ ಎಕ್ಸಿಕ್ಯೂಟಿವ್ ಇಂಜಿನಿಯರ್ ಅವರಿಗೂ ನೋಟೀಸು ಜಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಪ್ರಕರಣದಲ್ಲಿ ಗಾಯಗೊಂಡವರಿಗೆ ಚಿಕಿತ್ಸಾ ವೆಚ್ಚ ಭರಿಸುವ ಜೊತೆಗೆ ಪರಿಹಾರವನ್ನೂ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು.

ಅನಧಿಕೃತ ಕಾಮಗಾರಿ ಕೈಗೊಳ್ಳದಂತೆ ಜನರಲ್ಲಿ ಸಿಎಂ ಮನವಿ

ಜನರು ಕಾನೂನಿನ ಪ್ರಕಾರ ಮನೆಗಳನ್ನು ನಿರ್ಮಿಸಬೇಕೇ ಹೊರತು ಕಾನೂನು ಬಾಹಿರವಾಗಿ ಮನೆಗಳನ್ನು ಕಟ್ಟಬಾರದೆಂದು ಜನರಲ್ಲಿ ಸಿಎಂ ಮನವಿ ಮಾಡಿದರು. ಕಾಮಗಾರಿ ನಿಲ್ಲಿಸುವಂತೆ ನೋಟೀಸು ನೀಡಿದ ನಂತರವೂ ಕಟ್ಟಡ ಮಾಲೀಕರು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನು ನಿಲ್ಲಿಸದ ಕಾರಣ, ಈ ದುರಾದೃಷ್ಟರ ಘಟನೆ ನಡೆದಿದೆ.

ಇಂತಹ ಘಟನೆಗಳು ಮರುಕಳಿಸದಿರಲು , ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಮುಂಚಿತವಾಗಿ ಅನುಮತಿ ಪಡೆಯಬೇಕು ಮತ್ತು ಎಇಇ ನಿಂದ ಸೂಕ್ತ ಪರಿಶೀಲನೆಯಾಗಬೇಕು. ಇದರ ಜೊತೆಗೆ ಕಳಪೆ ಕಾಮಗಾರಿ ಮಾಡದೇ ಕಟ್ಟಡದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು.

ಈ ಕಟ್ಟಡ ಕುಸಿತ ಕಳಪೆ ಕಾಮಗಾರಿಯಿಂದಾಗಿದೆಯೇ ಹೊರತು ಮಳೆಯ ಕಾರಣದಿಂದಲ್ಲ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಅನಧಿಕೃತ ಕಟ್ಟಡಗಳಿಗೆ ಅನುಮತಿ ನೀಡಬಾರದು. ಒಂದು ವೇಳೆ ನಿರ್ಮಿಸಿದರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಇನ್ನುಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ರಕ್ಷಣಾ ಕಾರ್ಯ ಕೈಗೊಳ್ಳಲಾಗಿದೆ

ಸರ್ಕಾರ ಮಳೆ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುತ್ತಿಲ್ಲ ಎಂದು ಪ್ರತಿಪಕ್ಷದವರ ಮಾತು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಟೀಕೆಗಳನ್ನು ಮಾಡುವುದು ಸುಲಭ. ಹಿಂದಿನ ಸರ್ಕಾರದ ಅವಧಿಯಲ್ಲೂ ಮಳೆ ಸಂಭವಿಸಿದ್ದು , ಪ್ರತಿಪಕ್ಷದ ನಾಯಕನಾಗಿ ನಾನು ದೋಣಿಯಲ್ಲಿ ಕುಳಿತು ಸ್ಥಳ ವೀಕ್ಷಣೆ ಮಾಡಿದ್ದೆ. ನೂರಾರು ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನ 170 ಮಿ.ಮೀ. ಮಳೆ ಬಿದ್ದಿದೆ.

ಈ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ಸರ್ಕಾರಕ್ಕೆ ಇರಬೇಕಾಗುತ್ತದೆ. ಆ ಭಾಗದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಗಳನ್ನು ಮಾಡಲಾಗುತ್ತಿದೆ.

ಈ ವರ್ಷ ಮಳೆ ಜಾಸ್ತಿ ಆಗಿದ್ದು, ಇನ್ನೂ ಹೆಚ್ಚು ಮೂಲಸೌಕರ್ಯಗಳ ಅಭಿವೃದ್ಧಿ ಆಗಬೇಕಿದೆ. ರಾಜಕಾಲುವೆಗಳಲ್ಲಿ ಒತ್ತುವರಿ ಕ್ಲಿಯರ್ ಮಾಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವಿಪತ್ತುನಿರ್ವಹಣೆಗಾಗಿ 3 ಸಾವಿರ ಕೋಟಿರೂ.ಗಳ ಸಾಲವನ್ನು ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನಧಿಕೃತ ಕಟ್ಟಡಗಳ ಸಮೀಕ್ಷೆ ನಡೆಸಲಾಗಿದ್ದರ ವಸ್ತುಸ್ಥಿತಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಯಾವುದೇ ಸರ್ಕಾರವಿದ್ದರೂ , ಇಂತಹ ವಿಷಯಗಳು ಪ್ರಸ್ತುತವಾಗಿರುತ್ತವೆ. ಕೆಲವರು ಈ ಬಗ್ಗೆ ಕಾನೂನು ಮೊರೆ ಹೋಗಿದ್ದಾರೆ. ಈ ವಿಷಯದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ , ಚನ್ನಪಟ್ಟಣ ಕ್ಷೇತ್ರಕ್ಕೆ ನಾಮಿನೇಷನ್ ಮಾಡಲು ಸಿಪಿ ಯೋಗೇಶ್ವರ್, ಡಿಸಿಎಂನೊಂದಿಗೆ ಚನ್ನಪಟ್ಟಣಕ್ಕೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು ಎಂದರು.

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!