ಧರ್ಮವೇ ಸತ್ಯವಾಗಿದ್ದೆಂಬ ಸತ್ಯಾಂಶ ಹೊರ ಬರಲೇಬೇಕು; ಜಗದ್ಗುರು ವಿಧುಶೇಖರ ಭಾರತೀ ಸ್ವಾಮೀಜಿ ಆಶೀರ್ವಚನ

ದೊಡ್ಡಬಳ್ಳಾಪುರ: ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಗಳ ಬಗ್ಗೆ ದೃಢವಾದ ತಿಳುವಳಿಕೆ ಇದ್ದಾಗ ಮಾತ್ರ ನಮ್ಮನ್ನು ಯಾರೂ ದಾರಿ ತಪ್ಪಿಸಲು ಸಾಧ್ಯವಿಲ್ಲ. ಧರ್ಮವೇ ಸತ್ಯವಾಗಿದ್ದೆಂಬ ಸತ್ಯಾಂಶ ಒಂದಲ್ಲ ಒಂದು ದಿನ ಹೊರ ಬರಲೇಬೇಕು ಎಂದು ಶೃಂಗೇರಿ ಶಾರದಾ ಪೀಠದ ಜಗದ್ಗುರು ವಿಧುಶೇಖರ ಭಾರತೀ ಸ್ವಾಮೀಜಿ ಪ್ರತಿಪಾದಿಸಿದರು.

ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಹಿಸಿ ಅವರು ಆಶೀರ್ವಚನ ನೀಡಿದರು.

ಇಂದು ಸಮಾಜದಲ್ಲಿ ನಡೆಯುತ್ತಿರುವ ಹಲವು ಅಕ್ರಮಗಳು,ವೈರುಧ್ಯಗಳ ನಡುವೆಯೂ ಧರ್ಮ ತನ್ನದೇ ಆದ ಅಸ್ತಿತ್ವ ಹೊಂದಿದೆ ಎನ್ನುವುದಕ್ಕೆ ಆಸ್ತಿಕ ಸಮಾಜದ ಈ ಸಮಾಗಮ ನಿದರ್ಶನವಾಗಿದೆ. ಆದಿಗುರು ಶಂಕರಾಚಾರ್ಯರು ಪ್ರತಿಪಾದಿಸಿದ ಧರ್ಮ ಸಿದ್ದಾಂತಗಳು ಆಳವಾಗಿ ಬೇರೂರಿವೆ. ಭಗವಂತ ಒಬ್ಬನೇ ಆಗಿದ್ದು, ಆತ ಬೇರೆ ಬೇರೆ ರೂಪಗಳನ್ನು ಅವತರಿಸಿ, ಭಕ್ತನನ್ನು ಕಾಪಾಡುತ್ತಿದ್ದಾನೆ ಎನ್ನುವುದನ್ನು ಶಂಕರಾಚಾರ್ಯರು ನಿರೂಪಿಸಿದ್ದಾರೆ.

ಪ್ರಾಣಿಗಳಿಗಿಂತ ಭಿನ್ನವಾಗಿ ಬದುಕುವ ಮನುಷ್ಯ ಅವುಗಳಿಂದ ಹೊರತಾಗಿ ಬದುಕದಿದ್ದರೆ, ನಮಗೂ ಪ್ರಾಣಿಗಳಿಗೂ ವ್ಯತ್ಯಾಸ ಇರುವುದಿಲ್ಲ. ಈ ದಿಸೆಯಲ್ಲಿ ಧರ್ಮಾಚರಣೆ ಪ್ರಮುಖ ಪಾತ್ರ ವಹಿಸುತ್ತದೆ.

ಮಾನವನ ಆಯುಷ್ಯ 100 ವರ್ಷಗಳು ಎಂದಿಟ್ಟುಕೊಂಡರೆ ಆತ ಮೋಕ್ಷ ಪಡೆಯಲು ಹಲವಾರು ಜನ್ಮಗಳನ್ನು ತಾಳಿ ಬರಬೇಕಿದೆ. ಪ್ರತಿ ಜನ್ಮದಲ್ಲಿಯೂ ಧರ್ಮಾಚರಣೆ ಹಾಗೂ ಪರೋಪಕಾರಗಳನ್ನು ಮಾಡಿದಾಗ ಮಾತ್ರ, ಜನ್ಮ ಸಾರ್ಥಕತೆ ಪಡೆಯುತ್ತದೆ. ಇಲ್ಲವಾದಲ್ಲಿ ಮಾನವ ಜನ್ಮಕ್ಕೆ ಯಾವುದೇ ಅರ್ಥವಿರುವುದಿಲ್ಲ.

ಬದುಕಿನಲ್ಲಿ ಸಂಪಾದನೆಯೊಂದೇ ಮುಖ್ಯವಲ್ಲ. ಅದರೊಂದಿಗೆ ನಮ್ಮ ಬದುಕಿನ ಸ್ವರೂಪ ಮುಖ್ಯವಾಗುತ್ತದೆ. ದುಃಖ, ಕಷ್ಟಗಳು ಬರಬಾರದು ಎಂದರೆ ನಾವು ಕಷ್ಟಪಡಬೇಕು. ಅದಕ್ಕಾಗಿ ಪ್ರಯತ್ನ ಪಡಬೇಕು. ಸಾಧನೆ ಮಾಡಬೇಕು. ಹಲವು ಜನ್ಮಗಳ ಆಚರಣೆಯೇ ಕೊನೆಗೆ ಮೋಕ್ಷ ರೂಪ ಪಡೆಯುತ್ತದೆ.

ಭಗವಂತ ನಾನಾ ಅವತಾರಗಳನ್ನು ಎತ್ತಿರುವುದು ಸಹ ಅಧರ್ಮವನ್ನು ಅಳಿಸಿ, ಧರ್ಮವನ್ನು ಉಳಿಸಬೇಕು ಎನ್ನುವ ಉದ್ದೇಶಕ್ಕಾಗಿಯೇ. ಶಂಕರಾಚಾರ್ಯರು ಆತ್ಮ ಮತ್ತು ಪರಮಾತ್ಮ ಎಂಬುದು ಎರಡು ಬೇರೆ ಬೇರೆ ಅಂಶಗಳಲ್ಲ. ಇರುವುದು ಒಂದೇ. ಆತ್ಮನೇ ಪರಮಾತ್ಮನು. ಪರಮಾತ್ಮನೇ ಆತ್ಮನು ಎಂದು ಅದ್ವೈತ ಸಿಧ್ಧಾಂತದ ಮೂಲ ಸಾರವನ್ನು ಸಾರಿದರು. ನಮ್ಮ ಗುರು ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದು ಧರ್ಮಾಚರಣೆ ಮಾಡುವ ಮೂಲಕ ನಮ್ಮ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳಬೇಕು. ನಮ್ಮ ಧರ್ಮ ಪರಂಪರೆಗಳ ಬಗ್ಗೆ ಇಂದಿನ ಮಕ್ಕಳಿಗೆ ತಿಳಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ದರ್ಮದರ್ಶಿ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ಮತ್ತಿತರರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ನಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎನ್.ಎಮ್. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="119997"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ಆದರೆ ಹೊಸಹಳ್ಳಿ ಠಾಣೆಯ ಪೊಲೀಸರು ಅವರ ವ್ಯಾಪ್ತಿಯಲ್ಲಿನ ಗುಂಡಿ ಬಿದ್ದ ರಸ್ತೆಯಲ್ಲಿ ಎದ್ದು, ಬಿದ್ದು ಬರುವ ವಾಹನಗಳನ್ನು ತಡೆದು, ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಎಂದು ವಾಹನ ಸವಾರರ ದಂಡ ವಿಧಿಸಲು ಮಾತ್ರ

[ccc_my_favorite_select_button post_id="120010"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!