ಧರ್ಮವೇ ಸತ್ಯವಾಗಿದ್ದೆಂಬ ಸತ್ಯಾಂಶ ಹೊರ ಬರಲೇಬೇಕು; ಜಗದ್ಗುರು ವಿಧುಶೇಖರ ಭಾರತೀ ಸ್ವಾಮೀಜಿ ಆಶೀರ್ವಚನ

ದೊಡ್ಡಬಳ್ಳಾಪುರ: ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಗಳ ಬಗ್ಗೆ ದೃಢವಾದ ತಿಳುವಳಿಕೆ ಇದ್ದಾಗ ಮಾತ್ರ ನಮ್ಮನ್ನು ಯಾರೂ ದಾರಿ ತಪ್ಪಿಸಲು ಸಾಧ್ಯವಿಲ್ಲ. ಧರ್ಮವೇ ಸತ್ಯವಾಗಿದ್ದೆಂಬ ಸತ್ಯಾಂಶ ಒಂದಲ್ಲ ಒಂದು ದಿನ ಹೊರ ಬರಲೇಬೇಕು ಎಂದು ಶೃಂಗೇರಿ ಶಾರದಾ ಪೀಠದ ಜಗದ್ಗುರು ವಿಧುಶೇಖರ ಭಾರತೀ ಸ್ವಾಮೀಜಿ ಪ್ರತಿಪಾದಿಸಿದರು.

ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಹಿಸಿ ಅವರು ಆಶೀರ್ವಚನ ನೀಡಿದರು.

ಇಂದು ಸಮಾಜದಲ್ಲಿ ನಡೆಯುತ್ತಿರುವ ಹಲವು ಅಕ್ರಮಗಳು,ವೈರುಧ್ಯಗಳ ನಡುವೆಯೂ ಧರ್ಮ ತನ್ನದೇ ಆದ ಅಸ್ತಿತ್ವ ಹೊಂದಿದೆ ಎನ್ನುವುದಕ್ಕೆ ಆಸ್ತಿಕ ಸಮಾಜದ ಈ ಸಮಾಗಮ ನಿದರ್ಶನವಾಗಿದೆ. ಆದಿಗುರು ಶಂಕರಾಚಾರ್ಯರು ಪ್ರತಿಪಾದಿಸಿದ ಧರ್ಮ ಸಿದ್ದಾಂತಗಳು ಆಳವಾಗಿ ಬೇರೂರಿವೆ. ಭಗವಂತ ಒಬ್ಬನೇ ಆಗಿದ್ದು, ಆತ ಬೇರೆ ಬೇರೆ ರೂಪಗಳನ್ನು ಅವತರಿಸಿ, ಭಕ್ತನನ್ನು ಕಾಪಾಡುತ್ತಿದ್ದಾನೆ ಎನ್ನುವುದನ್ನು ಶಂಕರಾಚಾರ್ಯರು ನಿರೂಪಿಸಿದ್ದಾರೆ.

ಪ್ರಾಣಿಗಳಿಗಿಂತ ಭಿನ್ನವಾಗಿ ಬದುಕುವ ಮನುಷ್ಯ ಅವುಗಳಿಂದ ಹೊರತಾಗಿ ಬದುಕದಿದ್ದರೆ, ನಮಗೂ ಪ್ರಾಣಿಗಳಿಗೂ ವ್ಯತ್ಯಾಸ ಇರುವುದಿಲ್ಲ. ಈ ದಿಸೆಯಲ್ಲಿ ಧರ್ಮಾಚರಣೆ ಪ್ರಮುಖ ಪಾತ್ರ ವಹಿಸುತ್ತದೆ.

ಮಾನವನ ಆಯುಷ್ಯ 100 ವರ್ಷಗಳು ಎಂದಿಟ್ಟುಕೊಂಡರೆ ಆತ ಮೋಕ್ಷ ಪಡೆಯಲು ಹಲವಾರು ಜನ್ಮಗಳನ್ನು ತಾಳಿ ಬರಬೇಕಿದೆ. ಪ್ರತಿ ಜನ್ಮದಲ್ಲಿಯೂ ಧರ್ಮಾಚರಣೆ ಹಾಗೂ ಪರೋಪಕಾರಗಳನ್ನು ಮಾಡಿದಾಗ ಮಾತ್ರ, ಜನ್ಮ ಸಾರ್ಥಕತೆ ಪಡೆಯುತ್ತದೆ. ಇಲ್ಲವಾದಲ್ಲಿ ಮಾನವ ಜನ್ಮಕ್ಕೆ ಯಾವುದೇ ಅರ್ಥವಿರುವುದಿಲ್ಲ.

ಬದುಕಿನಲ್ಲಿ ಸಂಪಾದನೆಯೊಂದೇ ಮುಖ್ಯವಲ್ಲ. ಅದರೊಂದಿಗೆ ನಮ್ಮ ಬದುಕಿನ ಸ್ವರೂಪ ಮುಖ್ಯವಾಗುತ್ತದೆ. ದುಃಖ, ಕಷ್ಟಗಳು ಬರಬಾರದು ಎಂದರೆ ನಾವು ಕಷ್ಟಪಡಬೇಕು. ಅದಕ್ಕಾಗಿ ಪ್ರಯತ್ನ ಪಡಬೇಕು. ಸಾಧನೆ ಮಾಡಬೇಕು. ಹಲವು ಜನ್ಮಗಳ ಆಚರಣೆಯೇ ಕೊನೆಗೆ ಮೋಕ್ಷ ರೂಪ ಪಡೆಯುತ್ತದೆ.

ಭಗವಂತ ನಾನಾ ಅವತಾರಗಳನ್ನು ಎತ್ತಿರುವುದು ಸಹ ಅಧರ್ಮವನ್ನು ಅಳಿಸಿ, ಧರ್ಮವನ್ನು ಉಳಿಸಬೇಕು ಎನ್ನುವ ಉದ್ದೇಶಕ್ಕಾಗಿಯೇ. ಶಂಕರಾಚಾರ್ಯರು ಆತ್ಮ ಮತ್ತು ಪರಮಾತ್ಮ ಎಂಬುದು ಎರಡು ಬೇರೆ ಬೇರೆ ಅಂಶಗಳಲ್ಲ. ಇರುವುದು ಒಂದೇ. ಆತ್ಮನೇ ಪರಮಾತ್ಮನು. ಪರಮಾತ್ಮನೇ ಆತ್ಮನು ಎಂದು ಅದ್ವೈತ ಸಿಧ್ಧಾಂತದ ಮೂಲ ಸಾರವನ್ನು ಸಾರಿದರು. ನಮ್ಮ ಗುರು ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದು ಧರ್ಮಾಚರಣೆ ಮಾಡುವ ಮೂಲಕ ನಮ್ಮ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳಬೇಕು. ನಮ್ಮ ಧರ್ಮ ಪರಂಪರೆಗಳ ಬಗ್ಗೆ ಇಂದಿನ ಮಕ್ಕಳಿಗೆ ತಿಳಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ದರ್ಮದರ್ಶಿ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ಮತ್ತಿತರರಿದ್ದರು.

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]