ಉತ್ತಮ ಗುಣಮಟ್ಟದ ಮೇವುನ್ನು ಜಾನುವಾರುಗಳಿಗೆ ನೀಡಿದರೆ ರೈತರಿಗೆ ಅಧಿಕ ಲಾಭ

ಬೆಂಗಳೂರು: ಉತ್ತಮ ಗುಣಮಟ್ಟದ ಮೇವುನ್ನು ಜಾನುವಾರುಗಳಿಗೆ ನೀಡುವುದರಿಂದ ಹಾಲು ಉತ್ಪಾದನೆ ಹೆಚ್ಚಾಗಲಿದ್ದು,ಇದರಿಂದ ರೈತರ ಆದಾಯವೂ ಕೂಡ ಅಧಿಕವಾಗಲಿದೆ ಎಂದು ಬೀದರ, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಕುಪಪತಿಗಳಾದ ಪ್ರೊ.ಕೆ.ಸಿ.ವೀರಣ್ಣ ಅವರು ರೈತರಿಗೆ ತಿಳಿದರು.

ಇಂದು ನಗರದ ಹೆಬ್ಬಾಳದಲ್ಲಿರುವ ಪಶುವೈದ್ಯಕೀಯ ಕಾಲೇಜು,ಬಾಲಕರ ಹಾಸ್ಟೆಲ್ ಮೈದಾನದಲ್ಲಿ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್. ಪಶುವೈದ್ಯಕೀಯ ಮಹಾವಿದ್ಯಾಲಯ, ಹೆಬ್ಬಾಳ ಮತ್ತು ಭಾರತೀಯ ಡೈರಿ ಅಸೋಸಿಯೇಷನ್-ದಕ್ಷಿಣ ವಲಯ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ “ಮೇವು ಮೇಳ” ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತಾನಾಡಿದರು.

ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶವು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ರೈತರು ವಿವಿಧ ಮೇವಿನ ಬೆಳೆಗಳನ್ನು ಬೆಳೆದು ಜಾನುವಾರುಗಳಿಗೆ ಪೋಷಕಾಂಶದ ಮೇವನ್ನು ನೀಡಬೇಕು. ಒಣ ಮೇವುಗಳನ್ನು ಸಂಗ್ರಹಿ ಇಟ್ಟುಕೊಳ್ಳಬೇಕು. ಪ್ರೋಟಿನ್ ಯುಕ್ತ ಮೇವಿನ ಬೆಳೆಗಳ ಮಾಹಿತಿ ಮತ್ತು ಬೀಜಗಳ ಲಭ್ಯವಿದ್ದು ಇದನ್ನು ಎಲ್ಲಾ ರೈತಪಿ ವರ್ಗದವರು ಸದುಪಯೋಗ ಪಡಿಸಿಕೊಳ್ಳಬೇಕೆಂದು ರೈತರಿಗೆ ಸಲಹೆ ನೀಡಿದರು.

ಬಹಳಷ್ಟು ರೈತರು ಮಾವಿನ ತೋಟ, ಚಿಕ್ಕು ತೋಟ, ತೆಂಗಿನ ತೋಟ, ಹೊಂದಿರುತ್ತಾರೆ, ಗಿಡಗಳು ದೊಡ್ಡದಾದ ಮೇಲೆ ಗಿಡಗಳ ಮಧ್ಯದ ಪ್ರದೇಶವನ್ನು ಉಪಯೋಗಿಸುವುದಿಲ್ಲ ಇಂತಹ ಪ್ರದೇಶದಲ್ಲಿ ಮೇವಿನ ಬೆಳೆಯುವುದರಿಂದ ಹೈನುಗಾರಿಕೆ ಖರ್ಚನ್ನು ಕಡಿಮೆ ಮಾಡಿ ಜಾನುವಾರುಗಳಿಗೆ ಮೇವಿ ಉತ್ತಾದನೆ ಮಾಡಿಕೊಂಡು, ಅಧಿಕ ಲಾಭವನ್ನು ಪಡೆಯಬಹುದು ಎಂದು ಅವರು ತಿಳಿಸಿದರು.

ಮೇಳದಲ್ಲಿ ಹೆಚ್ಚಿನ ಖನಿಜಾಂಶ ಇರುವ, ಬೇಸಿಗೆ–ಮಳೆಗಾಲ ಎರಡೂ ಋತುಗಳಲ್ಲಿ ಹಸಿರು ಮೇವು ನೀಡುವ ‘ಮೇವಿನ ಸಜ್ಜೆ’, ನೆಲ–ಹೊಲದ ಅಗತ್ಯವೇ ಇಲ್ಲದಂತೆ ಮನೆ ಮಹಡಿಯಲ್ಲಿಯೂ ಬೆಳೆಯಬಹುದಾದ ಜಲಕೃಷಿ ಮೇವಿನ ಬೆಳೆ, ಹಲವು ಬಾರಿ ಕಟಾವ್ ಮಾಡಬಹುದಾದ ಹೈಬ್ರಿಡ್ ನೇಪಿಯರ್ ಹುಲ್ಲು, ರೇಷ್ಮೆಗೂ ಮೇವಿಗೂ ಬಳಸಬಹುದಾದ ಹಿಪ್ಪು ನೇರಳೆ (ಮಲ್ಬೆರಿ), ನೇಪಿಯರ್ ಮತ್ತು ಜೋಳವನ್ನು ಕಸಿ ಮಾಡಿದ ಪುಲೆ ಜೈವಂತ್ ಹುಲ್ಲುಗಳು ಗಮನ ಸೆಳೆದವು.

ಮೇವು ಸಹಿತ ವಿವಿಧ ಕೃಷಿಗೆ ಬಳಸುವ ಅಡಿಕೆ ಹಾಳೆ ಗೊಬ್ಬರ, ಹಲಸಿನ ಹಣ್ಣಿನ ಗೊಬ್ಬರ, ಎರೆಹುಳು ಗೊಬ್ಬರ ಸಹಿತ ವಿವಿಧ ತರಹದ ಗೊಬ್ಬರಗಳನ್ನು ಪ್ರದರ್ಶಿಸಲಾಯಿತು.

ಪಾಚಿ ರೀತಿಯಲ್ಲಿ ಬೆಳೆಯುವ ಅಜೋಲ, ಏಕ ಕಟಾವ್ ದ್ವಿದಳ ಮೇವಿನ ಬೆಳೆಗಳಾದ ಗೋವಿನ ಜೋಳ, ಮೇವಿನ ಜೋಳ, ಮೇವಿನ ಅಲಸಂದಿ, ಹುರುಳಿ, ಸೋಯಾ ಅವರೆ, ಬಹುಕಟಾವು/ ಬಹು ವಾರ್ಷಿಕ ದ್ವಿದಳ ಮೇವಿನ ಬೆಳೆಗಳಾದ ಕುದುರೆ ಮಸಾಲೆ, ದಶರಥ ಹುಲ್ಲು, ಬೇಲಿ ಮೆಂತೆ, ನೇಪಿಯರ್ ಹುಲ್ಲು, ಉತ್ತಮವಾಗಿ ಇಳುವರಿ ನೀಡುವ ಗಿರಿಮೇವು, ಗಿನಿ ಹುಲ್ಲು, ರೋಡ್ಸ್ ಹುಲ್ಲು, ಬ್ರೆಕೇರಿಯ ಹುಲ್ಲು, ಕುದುರೆಮೆಂತೆ, ಸ್ಟೈಲೊ, ಸೂಪರ್ ನೇಪಿಯರ್, ಪ್ಯಾರಾ ಹುಲ್ಲು, ಬರ್ಸಿಮ, ಲೂಸರ್ನ್, ಚವಳಿ, ಮರ ಹುಲ್ಲುಗಳಾದ ಸುಬಾಬುಲ್, ಚೊಗಚಿಗಳು ಪ್ರದರ್ಶನಗೊಂಡವು.

ಇದನ್ನು ಓದಿ; ಆಹಾರ ಗುಣಮಟ್ಟದಲ್ಲಿ ಪಾರದರ್ಶಕತೆ ತರಲು ಸ್ಪಾಟ್ ಟೆಸ್ಟ್ ಕಿಯಾಸ್ಕ್ ಸಹಕಾರಿ: ದಿನೇಶ್ ಗುಂಡೂರಾವ್

ಈ ಮೇವು ಮೇಳದಲ್ಲಿ ಮುಖ್ಯ ಅತಿಥಿಗಳಾಗಿ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ನಿರ್ದೇಶಕರಾದ ಡಾ. ಮಂಜುನಾಥ್ ಎಸ್ ಪಾಳೇಗಾರ್, ಬೆಂಗಳೂರಿನ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ .ಎನ್ ಕೆ ಎಸ್ ಗೌಡ, ಕರ್ನಾಟಕ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಪದ್ಮ ಪ್ರಕಾಶ್, ಕಪಮೀವಿವಿಯ ವ್ಯವಸ್ಥಾಪಕ ಮಂಡಳಿ ಸದಸ್ಯರು, ಸೇರಿದಂತೆ ಇತರೆ ಅಧಿಕಾರಿಗಳು, ರೈತಾಪಿ ವರ್ಗದವರು, ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!