ಆಹಾರ ಗುಣಮಟ್ಟದಲ್ಲಿ ಪಾರದರ್ಶಕತೆ ತರಲು ಸ್ಪಾಟ್ ಟೆಸ್ಟ್ ಕಿಯಾಸ್ಕ್ ಸಹಕಾರಿ: ದಿನೇಶ್ ಗುಂಡೂರಾವ್

ಬೆಂಗಳೂರು: ಮಾರುಕಟ್ಟೆಯಲ್ಲಿ ಖರೀದಿಸುವ ವಿವಿಧ ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ಅಳವಡಿಸಿಕೊಳ್ಳಲು ಮ್ಯಾಜಿಕ್ ಬಾಕ್ಸ್ ಆಹಾರ ಪರೀಕ್ಷಾ ಕಿಯಾಸ್ಕ್ ಗಳು ಸಹಕಾರಿಯಾಗಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಅಭಿಪ್ರಾಯಪಟ್ಟರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ದೇಶದಲ್ಲೇ ಪ್ರಪ್ರಥಮ ಬಾರಿಗೆ ವಿನುತನ ಪ್ರಯತ್ನವಾಗಿ ಬೆಂಗಳೂರು ನಗರದ ಫೀನಿಕ್ಸ್ ಮಾಲ್ ಆಫ್ ಏಷಿಯಾದಲ್ಲಿ ಆಹಾರ ಪದಾರ್ಥಗಳ ತ್ವರಿತ ಪರೀಕ್ಷೆಗಾಗಿ ಪ್ರಾಯೋಗಿಕವಾಗಿ ನಿರ್ಮಿಸಿರುವ ‘ಮ್ಯಾಜಿಕ್ ಬಾಕ್ಸ್’ ಆಹಾರ ಪರೀಕ್ಷಾ ಕೇಂದ್ರವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಮನೆಯಲ್ಲಿ ಅಡುಗೆ ಮಾಡುವಾಗ ನಾವು ಎಚ್ಚರಿಕೆವಹಿಸಿ ನೈಸರ್ಗಿಕ ಹಾಗೂ ಒಳ್ಳೆಯ ಗುಣಮಟ್ಟದ ಕಲಬೆರಕೆ ಇಲ್ಲದ ಉತ್ತಮ ಆಹಾರ ಉತ್ಪನ್ನಗಳನ್ನು ಬಳಸುತ್ತೇವೆ. ಆದರೆ ಹೊರಗೆ ತಿನ್ನುವ ಆಹಾರಗಳಲ್ಲಿ ನೋಡಲು ಆಕರ್ಷಕವಾಗಿರುವಂತೆ ರಾಸಾಯನಿಕ ಬಣ್ಣಗಳನ್ನು ಮತ್ತು ರುಚಿಯನ್ನು ಹೆಚ್ಚಿಸುವ ಟೇಸ್ಟ್ ಮೇಕರ್ ಗಳನ್ನು ಬಳಸಲಾಗುತ್ತದೆ. ಆರ್ಥಿಕವಾಗಿ ಲಾಭದಾಯಕ ಮಾಡಿಕೊಳ್ಳಲು ಕಲಬೆರಕೆ ವಸ್ತುಗಳನ್ನು ಇಲ್ಲಿ ಬಳಸಲಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಬದಲಾದ ಜೀವನಶೈಲಿ, ಆಹಾರ ಪದ್ಧತಿಗಳು ಮತ್ತು ಮಲಿನಗೊಂಡ ಪರಿಸರದಲ್ಲಿ ಬದುಕುತ್ತಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸಣ್ಣ ವಯಸ್ಸಿನಲ್ಲಿಯೇ ಮಧುಮೇಹ, ಹೃದಯಘಾತ ಮತ್ತು ಮಾರಕ ಕ್ಯಾನ್ಸರ್ ಗಳಿಗೆ ತುತ್ತಾಗುತ್ತಿದ್ದಾರೆ. ಹಾಗಾಗಿ ನಾವು ಸೇವಿಸುವ ಆಹಾರ ಒಳ್ಳೆಯ ಗುಣಮಟ್ಟ ಹಾಗೂ ನೈಸರ್ಗಿಕ ವಸ್ತುಗಳಿಂದ ಕೂಡಿರುವುದನ್ನು ನಾವು ಖಾತರಿ ಪಡಿಸಿಕೊಳ್ಳಬೇಕು.

ಈ ನಿಟ್ಟಿನಲ್ಲಿ ಸಾರ್ವಜನಿಕರೇ ಖುದ್ದು ಪರೀಕ್ಷಿಸಿಕೊಳ್ಳಬಹುದಾದಂತಹ ಮ್ಯಾಜಿಕ್ ಬಾಕ್ಸ್ ಆಹಾರ ಪರೀಕ್ಷಾ ಕೇಂದ್ರಗಳು ಅತ್ಯಂತ ಸಹಕಾರಿಯಾಗಲಿವೆ ಎಂದ ಅವರು ಈ ವ್ಯವಸ್ಥೆಯು ಆಹಾರ ಉತ್ಪನ್ನ ಹಾಗೂ ಮಾರುಕಟ್ಟೆದಾರರಲ್ಲಿ ಹೆಚ್ಚು ಪಾರದರ್ಶಕತೆ ಹಾಗೂ ಉತ್ತರದಾಯಿತ್ವವನ್ನು ರೂಪಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಅಲ್ಲದೆ ಜನಸಾಮಾನ್ಯರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.

ಇಲಾಖೆಯು ನಗರದ ವಿವಿಧ ಭಾಗಗಳಲ್ಲಿ ಸತತ ಆಹಾರ ಉತ್ಪನ್ನಗಳ ಗುಣಮಟ್ಟದ ಪರೀಕ್ಷೆಯನ್ನು ನಡೆಸುತ್ತಾ ಬಂದಿದೆ. ತೀವ್ರ ವಿವಾದಕ್ಕೆ ತುಪ್ಪದ ಸ್ಯಾಂಪಲ್ ಗಳನ್ನು ಕೂಡ ಇಲಾಖೆ ಪರೀಕ್ಷಿಸಿದೆ. ಒಟ್ಟು 230 ಸ್ಯಾಂಪಲ್ ಗಳನ್ನು ಪರೀಕ್ಷಿಸಿದಾಗ ಅವುಗಳಲ್ಲಿ 224 ಸ್ಯಾಂಪಲ್ ಗಳು ಸೇವನೆಗೆ ಸುರಕ್ಷಿತವಾಗಿದೆ ಎಂದು ಕಂಡು ಬಂದಿದೆ. ಐದು ಸ್ಯಾಂಪಲ್ ಗಳು ಅಸುರಕ್ಷಿತ ಎಂದು ಕಂಡುಬಂದಿದ್ದು ಒಂದು ಸ್ಯಾಂಪಲ್ ಮಾತ್ರ ಕಳಪೆ ಗುಣಮಟ್ಟದ್ದಾಗಿದೆ ಎಂದು ವರದಿಯಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: 113 ಕೋಟಿ ರೂ. ಒಡೆಯ ನಿಖಿಲ್ ಕುಮಾರಸ್ವಾಮಿ: ಸಾಲ ಎಷ್ಟು ಗೊತ್ತಾ..?

ರಾಜ್ಯಾದ್ಯಂತ ರೈಲ್ವೆ ನಿಲ್ದಾಣದಲ್ಲಿರುವ ಆಹಾರ ಮಳಿಗೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ನಿಯಮಾವಳಿಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದರ ಕುರಿತು ಖಚಿತಪಡಿಸಿಕೊಳ್ಳಲು ವಿಶೇಷ ಆಂದೋಲನವನ್ನು ಕೈಗೊಳ್ಳುವ ಮೂಲಕ ಕಳೆದ ಸೆಪ್ಟೆಂಬರ್ ಮಾಹೆಯಲ್ಲಿ 142 ಆಹಾರ ಮಳಿಗೆಗಳನ್ನು ತಪಾಸಣೆ ಮಾಡಲಾಗಿದ್ದು, ಕಂಡು ಬಂದಿರುವ ಲೋಪಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ಪ್ರಮುಖ ಪ್ರವಾಸಿ, ತಾಣಗಳಲ್ಲಿ ಸ್ಥಾಪಿಸಿರುವ 35 ಹೋಟೆಲ್ ಘಟಕಗಳಲ್ಲಿ ಗ್ರಾಹಕರುಗಳಿಗೆ ಸರಬರಾಜು ‘ಮಾಡಲಾಗುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಕುರಿ/ಮೇಕೆ ಮಾಂಸದ 184 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು ಅವುಗಳಲ್ಲಿ 179 ಮಾದರಿಗಳು ಸುರಕ್ಷಿತ ಎಂದು, 05 ಮಾದರಿಗಳು ಕಳಪೆ ಎಂದು, ಮೊಟ್ಟೆಯ 81 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು ಅವುಗಳಲ್ಲಿ 80 ಮಾದರಿಗಳು ಸುರಕ್ಷಿತ ಎಂದು, 01 ಮಾದರಿಯು ಕಳಪೆ ಎಂದು ಹಾಗೂ ಕೋಳಿ ಮಾಂಸದ 246 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು ಅವುಗಳಲ್ಲಿ 236 ಮಾದರಿಗಳು ಸುರಕ್ಷಿತ ಎಂದು, 10 ಮಾದರಿಗಳು ಕಳಪೆ ಗುಣಮಟ್ಟದ್ದಾಗಿದೆ ಎಂದು ವರದಿಯಾಗಿರುತ್ತದೆ ಎಂದವರು ತಿಳಿಸಿದರು.

10 ಮಾಲ್ ಗಳಲ್ಲಿ ಕೇಂದ್ರಗಳ ಸ್ಥಾಪನೆ

ಇಲಾಖೆಯ ಆಯುಕ್ತರಾದ ಕೆ ಶ್ರೀನಿವಾಸ್ ಅವರು ಮಾತನಾಡಿ, ಬೆಂಗಳೂರು ನಗರಾದ್ಯಂತ ಒಟ್ಟು 10 ಮಾಲ್ ಗಳಲ್ಲಿ ಈ ಆಹಾರ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು. ತುಮಕೂರು ರಸ್ತೆಯ ವೈಷ್ಣವಿ ಸಫಾಯರ್ ಮಾಲ್, ಥಣಿಸಂದ್ರದ ಎಲಿಮೆಂಟ್ಸ್ ಮಾಲ್, ಬನ್ನೇರುಘಟ್ಟ ರಸ್ತೆಯ ಮೀನಾಕ್ಷಿ ಮಾಲ್, ಚರ್ಚ್ ಸ್ಟ್ರೀಟ್ ಒನ್ ಶೋಭಾ ಮಾಲ್, ಬೆಳ್ಳಂದೂರಿನಲ್ಲಿರುವ ಸೆಂಟ್ರಲ್ ಮಾಲ್, ಬೆನ್ನಿಗಾನಹಳ್ಳಿಯಲ್ಲಿರುವ ಗೋಪಾಲನ್ ಸಿಗ್ನೇಚರ್ ಮಾಲ್, ಕೋರಮಂಗಲದಲ್ಲಿರುವ ನೆಕ್ಸಸ್ ಫೋರಮ್ ಮಾಲ್.

ಥಣಿಸಂದ್ರ ದಲ್ಲಿರುವ ಭಾರತೀಯ ಮಾಲ್ ಆಫ್ ಬೆಂಗಳೂರು ಹಾಗೂ ಮಾಗಡಿ ರಸ್ತೆಯಲ್ಲಿರುವ ಜಿ ಟಿ ವರ್ಲ್ಡ್ ಮಾಲ್ ಗಳಲ್ಲಿ ಈ ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ತಿಳಿಸಿದರು.

ಸಾರ್ವಜನಿಕರಲ್ಲಿ ಆಹಾರ ಗುಣಮಟ್ಟ ಆಹಾರ ಕಲಬೆರಿಕೆ ಬಗ್ಗೆ ಅರಿವು ಮೂಡಿಸುವುದೇ ಈ ಪ್ರಯತ್ನದ ಉದ್ದೇಶ ಎಂದು ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮಾಲ್ ಆಫ್ ಏಷ್ಯಾದ ಜನರಲ್ ಮ್ಯಾನೇಜರ್ ರಾದ ಸತೀಶ್ ಸೇರಿದಂತೆ ಅಹಾರ ಸುರಕ್ಷತೆ ಮತ್ತು ಗುಣಮಟ್ಟಿಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!