Murder: ಕುಡಿಯಲು ಹಣ ನೀಡದ ತಂದೆಯನ್ನ ಕೊಂದೇ ಬಿಟ್ಟ ಪಾಪಿ ಮಗ

ಬೆಳಗಾವಿ: ಮದ್ಯಪಾನ ಮಾಡಲು ಹಣ ನೀಡದ್ದಕ್ಕೆ ಕೋಪಗೊಂಡ ಮಗ ನೋರ್ವ ಹೆತ್ತ ತಂದೆಯನ್ನೇ ಹೊಡೆದು ಕೊಂದಿರುವ (Murder) ದಾರುಣ ಘಟನೆ ಅಥಣಿ ತಾಲ್ಲೂಕಿನ ಮದಬಾವಿ ಗ್ರಾಮದಲ್ಲಿ ನಡೆದಿದೆ.

ಮಲ್ಲು ತುಕಾರಾಮ ವನಖಂಡೆ (89) ಮೃತ ತಂದೆ. ಕುಡಿಯುವ ಚಟ ಬೆಳೆಸಿಕೊಂಡಿದ್ದ ಮಗ ಬಾಳಾಸಾಬ(49) ಅಪ್ಪನಲ್ಲಿ ಹಣ ಕೇಳಿ ಕಾಡಿದ್ದಾನೆ. ಹಣ ಕೊಡುವುದಿಲ್ಲ ಎಂದು ಅವರು ಮಗನಿಗೆ, ಕುಡಿತದ ಚಟ ಬಿಟ್ಟುಬಿಡುವಂತೆ ಬುದ್ಧಿಮಾತು ಹೇಳಿದ್ದಾರೆ.

ಇದರಿಂದ ಕೆರಳಿದ ಬಾಳಾಸಾಬ ಮಾರಣಾಂತಿಕವಾಗಿ ಅಪ್ಪನ ಮೇಲೆ ಹಲ್ಲೆ ಮಾಡಿ, ದುಡ್ಡು ಬೇಡ ನೀನೂ ಬೇಡ ಎಂದು ಹೋಗಿದ್ದಾನೆ.

ತಕ್ಷಣವೇ ಮನೆಯಲ್ಲಿದ್ದವರು ಅಕ್ಕಪಕ್ಕದವರ ನೆರವಿನಿಂದ ತೀವ್ರ ಗಾಯಗೊಂಡಿದ್ದ ಮಲ್ಲುವನ್ನು ಮೀರಜ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದು, ಅಥಣಿ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಆತ್ಮಹತ್ಯೆಗೆ ಮುಂದಾದವನ ರಕ್ಷಿಸಿದ ಪೊಲೀಸರು: ಕೊನೆಯ ಕ್ಷಣದ ಕಾರ್ಯಾಚರಣೆ ರೋಚಕ.. ವ್ಯಾಪಕ ಪ್ರಶಂಸೆ

Murder: ಥಳಿಸಿ ತಂದೆಯನ್ನೇ ಕೊಂದ

ಊಟದ ವಿಷಯದಲ್ಲಿ ಉಂಟಾದ ತಂದೆ, ಮಗನ ಜಗಳ ಕೊಲೆಯಲ್ಲಿ (Murder) ಅಂತ್ಯವಾದ ಘಟನೆ ನಡೆದಿದೆ.

ಹಿರಿಯೂರು ತಾಲ್ಲೂಕಿನ ಕುಂದಲಪುರ ಗ್ರಾಮದ ರಂಗಸ್ವಾಮಿ (50) ಕೊಲೆಗೀಡಾದ ದುರ್ದೈವಿ ತಂದೆ. ಮಗ ದೇವರಾಜ (27) ಕೊಲೆ ಆರೋಪಿ.

ಇಬ್ಬರೂ ಮನೆಯಲ್ಲಿ ಊಟ ಮಾಡುವ ಸಂದರ್ಭದಲ್ಲಿ ಊಟದ ವಿಚಾರಕ್ಕೆ ಸಂಬಂಧಿಸಿದಂತೆ ಮಗ ಕೆಲ ಬೇಡಿಕೆ ಇಟ್ಟಿದ್ದಾನೆ. ಇದಕ್ಕೆ ತಂದೆ ಆಕ್ಷೇಪ ವ್ಯಕ್ತಪಡಿಸಿದಾಗ ಜಗಳ ಉಂಟಾಗಿದೆ.

ರೊಚ್ಚಿಗೆದ್ದ ಮಗ ತಂದೆಯನ್ನು ಕೈ ಕಾಲಿನಿಂದ ಹಿಗ್ಗಾ ಮುಗ್ಗ ಥಳಿಸಿದ್ದಾನೆ. ಮನೆಯಲ್ಲಿದ್ದ ತಾಯಿ, ತಂಗಿ ದೇವರಾಜನನ್ನು ತಡೆಯಲು ಯತ್ನಿಸಿದರೂ ಪ್ರಯೋಜನ ಆಗಿಲ್ಲ. ಕೊನೆಗೆ ತಂದೆ ಕೊನೆಯುಸಿರೆಳೆದಿದ್ದಾರೆ.

ಅಬ್ಬಿನಹೊಳೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಕ್ಕನ ಮಗುವನ್ನೇ ಅಪಹರಿಸಿದ್ದ ಯುವಕ ಪೊಲೀಸರ ವಶಕ್ಕೆ

ದಾವಣಗೆರೆ: ಯುವಕನೊಬ್ಬ ತನ್ನ ಅಕ್ಕನ ಮಗುವನ್ನೇ ಅಪಹರಿಸಿ, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಗ್ಗೆ ದೊರೆತ ಮಾಹಿತಿ ಆಧರಿಸಿ, ದಾವಣಗೆರೆ ರೈಲ್ವೆ ಪೊಲೀಸರು ಮಗು ಹಾಗೂ ಆತನನ್ನು ವಶಕ್ಕೆ ಪಡೆದ ಘಟನೆ ಭಾನುವಾರ ನಡೆದಿದೆ.

ಬೆಂಗಳೂರಿನಿಂದ ತನ್ನ ಅಕ್ಕನ ಮೂರು ವರ್ಷದ ಗಂಡು ಮಗುವನ್ನು ಅಪಹರಿಸಿ. ನಿಜಾಮುದ್ದೀನ್ ರೈಲಿನಲ್ಲಿ ಹೊರಟಿದ್ದ 17 ವರ್ಷದ ಯುವಕನ ಬಗ್ಗೆ ದಾವಣಗೆರೆ ರೈಲ್ವೆ ಪೊಲೀಸರಿಗೆ ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದರು. ನಿಜಾಮುದ್ದೀನ್ ರೈಲು ದಾವಣಗೆರೆ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಮಗುವಿನ ಸಮೇತ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಹಾರ ಮೂಲದ ಅವನ ಅಕ್ಕ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಳು. ಆಕೆ ಅಕ್ರಮ ಸಂಬಂಧ ಇಟ್ಟು ಕೊಂಡು, ಬೇರೊಬ್ಬ ವ್ಯಕ್ತಿಯೊಂದಿಗೆ ವಾಸಿಸುತ್ತಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ಅಪ್ರಾಪ್ತ ಸಹೋದರ ಸಾಕಷ್ಟು ತಿಳಿ ಹೇಳಿ, ಬುದ್ದಿ ಹೇಳಿದರೂ ಅಕ್ರಮ ಸಂಬಂಧ ಬಿಡಲು ಆಕೆ ಒಪ್ಪಲಿಲ್ಲ. ಹೀಗಾಗಿ ಆಕೆಯ 3 ವರ್ಷದ ಮಗುವನ್ನು ಅಪಹರಿಸಿ ಬಿಹಾರ ರಾಜ್ಯಕ್ಕೆ ಹೊರಟ್ಟಿದ್ದ.

ದಾವಣಗೆರೆ ರೈಲ್ವೆ ಪೊಲೀಸ್ ಇನ್ಸ್‌ಪೆಕ್ಟರ್ ಎ.ಕೆ.ರೆಡ್ಡಿ, ಸಿಬ್ಬಂದಿ ಶಿವಾನಂದ, ಅಮಿತ್, ಬಿಂದು, ಮಾಧುರಿ, ಸತೀಶ್ ಬೆಂಕಿಕೆರೆ ತಂಡವು ಅಪಹರಣಕ್ಕೊಳಗಾದ ಮಗುವನ್ನು

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವಕ್ಕೆ ಚಾಲನೆ: ಕೆಂಪೇಗೌಡ ಪ್ರಶಸ್ತಿ ಪ್ರಕಟ

ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವಕ್ಕೆ ಚಾಲನೆ: ಕೆಂಪೇಗೌಡ ಪ್ರಶಸ್ತಿ ಪ್ರಕಟ

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ (Nadaprabhu Kempegowda) 516ನೇ ಜಯಂತಿಯನ್ನು 27ನೇ ಜೂನ್ 2025ರ (ಶುಕ್ರವಾರ) ಆಚರಿಸಲಾಗುತ್ತಿದೆ.

[ccc_my_favorite_select_button post_id="110037"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]