Murder: ಕುಡಿಯಲು ಹಣ ನೀಡದ ತಂದೆಯನ್ನ ಕೊಂದೇ ಬಿಟ್ಟ ಪಾಪಿ ಮಗ

ಬೆಳಗಾವಿ: ಮದ್ಯಪಾನ ಮಾಡಲು ಹಣ ನೀಡದ್ದಕ್ಕೆ ಕೋಪಗೊಂಡ ಮಗ ನೋರ್ವ ಹೆತ್ತ ತಂದೆಯನ್ನೇ ಹೊಡೆದು ಕೊಂದಿರುವ (Murder) ದಾರುಣ ಘಟನೆ ಅಥಣಿ ತಾಲ್ಲೂಕಿನ ಮದಬಾವಿ ಗ್ರಾಮದಲ್ಲಿ ನಡೆದಿದೆ.

ಮಲ್ಲು ತುಕಾರಾಮ ವನಖಂಡೆ (89) ಮೃತ ತಂದೆ. ಕುಡಿಯುವ ಚಟ ಬೆಳೆಸಿಕೊಂಡಿದ್ದ ಮಗ ಬಾಳಾಸಾಬ(49) ಅಪ್ಪನಲ್ಲಿ ಹಣ ಕೇಳಿ ಕಾಡಿದ್ದಾನೆ. ಹಣ ಕೊಡುವುದಿಲ್ಲ ಎಂದು ಅವರು ಮಗನಿಗೆ, ಕುಡಿತದ ಚಟ ಬಿಟ್ಟುಬಿಡುವಂತೆ ಬುದ್ಧಿಮಾತು ಹೇಳಿದ್ದಾರೆ.

ಇದರಿಂದ ಕೆರಳಿದ ಬಾಳಾಸಾಬ ಮಾರಣಾಂತಿಕವಾಗಿ ಅಪ್ಪನ ಮೇಲೆ ಹಲ್ಲೆ ಮಾಡಿ, ದುಡ್ಡು ಬೇಡ ನೀನೂ ಬೇಡ ಎಂದು ಹೋಗಿದ್ದಾನೆ.

ತಕ್ಷಣವೇ ಮನೆಯಲ್ಲಿದ್ದವರು ಅಕ್ಕಪಕ್ಕದವರ ನೆರವಿನಿಂದ ತೀವ್ರ ಗಾಯಗೊಂಡಿದ್ದ ಮಲ್ಲುವನ್ನು ಮೀರಜ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದು, ಅಥಣಿ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಆತ್ಮಹತ್ಯೆಗೆ ಮುಂದಾದವನ ರಕ್ಷಿಸಿದ ಪೊಲೀಸರು: ಕೊನೆಯ ಕ್ಷಣದ ಕಾರ್ಯಾಚರಣೆ ರೋಚಕ.. ವ್ಯಾಪಕ ಪ್ರಶಂಸೆ

Murder: ಥಳಿಸಿ ತಂದೆಯನ್ನೇ ಕೊಂದ

ಊಟದ ವಿಷಯದಲ್ಲಿ ಉಂಟಾದ ತಂದೆ, ಮಗನ ಜಗಳ ಕೊಲೆಯಲ್ಲಿ (Murder) ಅಂತ್ಯವಾದ ಘಟನೆ ನಡೆದಿದೆ.

ಹಿರಿಯೂರು ತಾಲ್ಲೂಕಿನ ಕುಂದಲಪುರ ಗ್ರಾಮದ ರಂಗಸ್ವಾಮಿ (50) ಕೊಲೆಗೀಡಾದ ದುರ್ದೈವಿ ತಂದೆ. ಮಗ ದೇವರಾಜ (27) ಕೊಲೆ ಆರೋಪಿ.

ಇಬ್ಬರೂ ಮನೆಯಲ್ಲಿ ಊಟ ಮಾಡುವ ಸಂದರ್ಭದಲ್ಲಿ ಊಟದ ವಿಚಾರಕ್ಕೆ ಸಂಬಂಧಿಸಿದಂತೆ ಮಗ ಕೆಲ ಬೇಡಿಕೆ ಇಟ್ಟಿದ್ದಾನೆ. ಇದಕ್ಕೆ ತಂದೆ ಆಕ್ಷೇಪ ವ್ಯಕ್ತಪಡಿಸಿದಾಗ ಜಗಳ ಉಂಟಾಗಿದೆ.

ರೊಚ್ಚಿಗೆದ್ದ ಮಗ ತಂದೆಯನ್ನು ಕೈ ಕಾಲಿನಿಂದ ಹಿಗ್ಗಾ ಮುಗ್ಗ ಥಳಿಸಿದ್ದಾನೆ. ಮನೆಯಲ್ಲಿದ್ದ ತಾಯಿ, ತಂಗಿ ದೇವರಾಜನನ್ನು ತಡೆಯಲು ಯತ್ನಿಸಿದರೂ ಪ್ರಯೋಜನ ಆಗಿಲ್ಲ. ಕೊನೆಗೆ ತಂದೆ ಕೊನೆಯುಸಿರೆಳೆದಿದ್ದಾರೆ.

ಅಬ್ಬಿನಹೊಳೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಕ್ಕನ ಮಗುವನ್ನೇ ಅಪಹರಿಸಿದ್ದ ಯುವಕ ಪೊಲೀಸರ ವಶಕ್ಕೆ

ದಾವಣಗೆರೆ: ಯುವಕನೊಬ್ಬ ತನ್ನ ಅಕ್ಕನ ಮಗುವನ್ನೇ ಅಪಹರಿಸಿ, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಗ್ಗೆ ದೊರೆತ ಮಾಹಿತಿ ಆಧರಿಸಿ, ದಾವಣಗೆರೆ ರೈಲ್ವೆ ಪೊಲೀಸರು ಮಗು ಹಾಗೂ ಆತನನ್ನು ವಶಕ್ಕೆ ಪಡೆದ ಘಟನೆ ಭಾನುವಾರ ನಡೆದಿದೆ.

ಬೆಂಗಳೂರಿನಿಂದ ತನ್ನ ಅಕ್ಕನ ಮೂರು ವರ್ಷದ ಗಂಡು ಮಗುವನ್ನು ಅಪಹರಿಸಿ. ನಿಜಾಮುದ್ದೀನ್ ರೈಲಿನಲ್ಲಿ ಹೊರಟಿದ್ದ 17 ವರ್ಷದ ಯುವಕನ ಬಗ್ಗೆ ದಾವಣಗೆರೆ ರೈಲ್ವೆ ಪೊಲೀಸರಿಗೆ ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದರು. ನಿಜಾಮುದ್ದೀನ್ ರೈಲು ದಾವಣಗೆರೆ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಮಗುವಿನ ಸಮೇತ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಹಾರ ಮೂಲದ ಅವನ ಅಕ್ಕ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಳು. ಆಕೆ ಅಕ್ರಮ ಸಂಬಂಧ ಇಟ್ಟು ಕೊಂಡು, ಬೇರೊಬ್ಬ ವ್ಯಕ್ತಿಯೊಂದಿಗೆ ವಾಸಿಸುತ್ತಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ಅಪ್ರಾಪ್ತ ಸಹೋದರ ಸಾಕಷ್ಟು ತಿಳಿ ಹೇಳಿ, ಬುದ್ದಿ ಹೇಳಿದರೂ ಅಕ್ರಮ ಸಂಬಂಧ ಬಿಡಲು ಆಕೆ ಒಪ್ಪಲಿಲ್ಲ. ಹೀಗಾಗಿ ಆಕೆಯ 3 ವರ್ಷದ ಮಗುವನ್ನು ಅಪಹರಿಸಿ ಬಿಹಾರ ರಾಜ್ಯಕ್ಕೆ ಹೊರಟ್ಟಿದ್ದ.

ದಾವಣಗೆರೆ ರೈಲ್ವೆ ಪೊಲೀಸ್ ಇನ್ಸ್‌ಪೆಕ್ಟರ್ ಎ.ಕೆ.ರೆಡ್ಡಿ, ಸಿಬ್ಬಂದಿ ಶಿವಾನಂದ, ಅಮಿತ್, ಬಿಂದು, ಮಾಧುರಿ, ಸತೀಶ್ ಬೆಂಕಿಕೆರೆ ತಂಡವು ಅಪಹರಣಕ್ಕೊಳಗಾದ ಮಗುವನ್ನು

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!