ಹಾಸನಾಂಬ ದೇವಿ ದರ್ಶನ ಪಡೆದ ವಿ.ಸೋಮಣ್ಣ

ಹಾಸನ: ಕೇಂದ್ರ ರಾಜ್ಯ ರೈಲ್ವೆ ಹಾಗೂ ಜಲ ಶಕ್ತಿ ಸಚಿವರಾದ ವಿ.ಸೋಮಣ್ಣ ಅವರು ಇಂದು ಕುಟುಂಬ ಸಮೇತರಾಗಿ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದರು.

ನಂತರ ಮಾತನಾಡಿದ ಸಚಿವರು ಜಿಲ್ಲಾಡಳಿತದಿಂದ ಬಹಳ ಅಚ್ಚುಕಟ್ಟಾಗಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಉತ್ತಮ ವ್ಯವಸ್ಥೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಅಭಿನಂದನೆಗಳನ್ನು ತಿಳಿಸಿದರು.

ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.

ಮಂಗಳೂರಿಗೆ ಹೆಚ್ಚುವರಿ ರೈಲು ಜೊತೆಗೆ ಚಿಕ್ಕಮಗಳೂರು- ಬೇಲೂರು-ಆಲೂರಿಗೆ 585 ಎಕರೆ ಜಾಗವನ್ನು ಭೂಸ್ವಾಧಿನಕ್ಕೆ ಜಿಲ್ಲಾಧಿಕಾರಿ 11 ನೋಟಿಫಿಕೇಷನ್ೈ ಮಾಡಿದ್ದಾರೆ. ಶೀಘ್ರದಲ್ಲೇ ನಮಗೆ ಹಸ್ತಾಂತರ ಮಾಡಲಿದ್ದು, ಮೂರು ವರ್ಷದಲ್ಲಿ ಈ ಯೋಜನೆ ಮುಗಿಯಲಿದೆ ಎಂದು ತಿಳಿಸಿದರು.

ನಾನು ಸಚಿವನಾದ ಮೇಲೆ ಕರ್ನಾಟಕ ರಾಜ್ಯದಲ್ಲಿ 11 ಯೋಜನೆಗಳು, 1800 ಹೊಸ ಲೈನ್‌ಗಳನ್ನು ಹಾಕಲು ಚಾಲನೆ ಕೊಟ್ಟಿದ್ದೇವೆ. ಈಗಾಗಲೇ ತುಮಕೂರು, ರಾಯದುರ್ಗ, ದಾವಣಗೆರೆ, ಗದಗ ಹತ್ತು ಹಲವಾರು ಕಡೆ ಕೆಲಸ ನಡೆಯುತ್ತಿದೆ. ಅಲ್ಲದೆ ರಾಜ್ಯದಲ್ಲಿ ನೆನಗುದಿಗೆ ಬಿದ್ದಿರುವ 43 ಸಾವಿರ ಕೋಟಿ ರೂಪಾಯಿಗಳ‌ ನಾನಾ ರೈಲ್ವೆ ಯೋಜನೆಗಳನ್ನು ಕೈಗೆತ್ತೆಕೊಳ್ಳಲಾಗಿದೆ ಎಂದು ತಿಳಿಸಿದರು.

44 ಸಾವಿರ ಡಬಲ್ ಲೈನ್‌ ರೈಲು ಮಾರ್ಗ , ಶೇ.98 ರಷ್ಟು ಎಲೆಕ್ಟ್ರಿಫಿಕೇಷನ್ ನೊಂದಿಗೆ ಹೊಸಲೈನ್‌ಗಳನ್ನ ತ್ವರಿತಗತಿಯಲ್ಲಿ ಮಾಡಲು ಕ್ರಮ ತೆಗೆದುಕೊಂಡಿದ್ದೇವೆ.

104 ವಂದೇಭಾರತ್ ರೈಲುಗಳು ಇಡೀ ದೇಶದ 24 ರಾಜ್ಯಗಳಲ್ಲಿ 294 ಜಿಲ್ಲಾ ಕೇಂದ್ರಗಳಲ್ಲಿ ಸುತ್ತಾಡುತ್ತಿವೆ.

ಕರ್ನಾಟಕ ರಾಜ್ಯದಲ್ಲೆ 10 ರೈಲುಗಳು ಓಡಾಡುತ್ತಿವೆ.

ಹೊಸದಾಗಿ 30 ಸಾವಿರ ಹೊಸ ಬೋಗಿಗಳನ್ನು ಅಳವಡಿಕೆ ಪ್ರಾರಂಭವಾಗಿದ್ದು, ಒಂದೊಂದು ಪ್ಯಾಸೆಂಜರ್ ರೈಲುಗಳಿಗೆ ಮೂರು, ನಾಲ್ಕು ಬೋಗಿಗಳನ್ನು ಅಳವಡಿಸಲಾಗುತ್ತಿದೆ ಎಂದರು.

ತುಮಕೂರಿನಿಂದ ಬೆಂಗಳೂರಿಗೆ ಹೊಸದಾಗಿ ಮೆಮೊ ಟ್ರೈನ್ ಮಾಡಿದ್ದೇವೆ. ಅದೇ ರೈಲು ಹಾಸನದಿಂದ ಬೆಂಗಳೂರಿಗೆ ಸಂಚರಿಸಲು ಕೇಂದ್ರದ ಶೇ. 60 ದರಲ್ಲಿ ಓಡಾಡಲು ವ್ಯವಸ್ಥೆ ಮಾಡಲು ಚಿಂತನೆ ಮಾಡುತ್ತಿದ್ದೇವೆ .

ಭಾರತದಲ್ಲಿ ರೈಲ್ವೆ ಇಲಾಖೆ ಇಡೀ ವಿಶ್ವದ ಭೂಪಟದಲ್ಲಿ ಐದನೇ ಸ್ಥಾನದಲ್ಲಿತ್ತು. ಅದನ್ನು ಮೂರನೇ ಸ್ಥಾನಕ್ಕೆ ತರಲು ತೀರ್ಮಾನ ಆಗಿದೆ. ನ.1-2 ರಂದು ಪ್ರಧಾನಮಂತ್ರಿಗಳು ಇಲಾಖೆ ಪ್ರಗತಿ ಪರಿಶೀಲನೆ ಮಾಡಲಿದ್ದಾರೆ.

ಪತ್ರಕರ್ತರಿಗೆ, ಹಿರಿಯ ನಾಗರೀಕರಿಗೆ ನೀಡುತ್ತಿದ್ದ ರೈಲ್ವೆ ಪಾಸ್ ನಿಂತಿದೆ. ಶ್ರೀಮಂತರು ಇದರ ಲಾಭ ಪಡೆಯತ್ತಿದ್ದರು ಆದ್ದರಿಂದ ಅರ್ಹರಿಗೆ ಮಾತ್ರ ಪಾಸ್ ನ ಸೌಲಭ್ಯ ದೊರೆಯಬೇಕು ಎಂಬುದು ನಮ್ಮ ಆಶಯವಾಗಿದೆ ಆದ್ದರಿಂದ ಮತ್ತೆ ರೈಲ್ವೆ ಪಾಸ್ ನ ಅವಕಾಶ ಕೊಡಲು ನನ್ನದೂ ಒತ್ತಾಯವಿದೆ. ಪ್ರಧಾನಮಂತ್ರಿ ಅವರು ಆ ಕೆಲಸ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕರಾದ ಹೆಚ್.ಕೆ.ಸುರೇಶ್, ಮಂಜುನಾಥ್ ಎಸ್ (ಸಿಮೆಂಟ್ ಮಂಜು) ಮತ್ತಿತರರು ಹಾಜರಿದ್ದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]