ಹಾಸನಾಂಬ ದೇವಿ ದರ್ಶನ ಪಡೆದ ವಿ.ಸೋಮಣ್ಣ

ಹಾಸನ: ಕೇಂದ್ರ ರಾಜ್ಯ ರೈಲ್ವೆ ಹಾಗೂ ಜಲ ಶಕ್ತಿ ಸಚಿವರಾದ ವಿ.ಸೋಮಣ್ಣ ಅವರು ಇಂದು ಕುಟುಂಬ ಸಮೇತರಾಗಿ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದರು.

ನಂತರ ಮಾತನಾಡಿದ ಸಚಿವರು ಜಿಲ್ಲಾಡಳಿತದಿಂದ ಬಹಳ ಅಚ್ಚುಕಟ್ಟಾಗಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಉತ್ತಮ ವ್ಯವಸ್ಥೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಅಭಿನಂದನೆಗಳನ್ನು ತಿಳಿಸಿದರು.

ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.

ಮಂಗಳೂರಿಗೆ ಹೆಚ್ಚುವರಿ ರೈಲು ಜೊತೆಗೆ ಚಿಕ್ಕಮಗಳೂರು- ಬೇಲೂರು-ಆಲೂರಿಗೆ 585 ಎಕರೆ ಜಾಗವನ್ನು ಭೂಸ್ವಾಧಿನಕ್ಕೆ ಜಿಲ್ಲಾಧಿಕಾರಿ 11 ನೋಟಿಫಿಕೇಷನ್ೈ ಮಾಡಿದ್ದಾರೆ. ಶೀಘ್ರದಲ್ಲೇ ನಮಗೆ ಹಸ್ತಾಂತರ ಮಾಡಲಿದ್ದು, ಮೂರು ವರ್ಷದಲ್ಲಿ ಈ ಯೋಜನೆ ಮುಗಿಯಲಿದೆ ಎಂದು ತಿಳಿಸಿದರು.

ನಾನು ಸಚಿವನಾದ ಮೇಲೆ ಕರ್ನಾಟಕ ರಾಜ್ಯದಲ್ಲಿ 11 ಯೋಜನೆಗಳು, 1800 ಹೊಸ ಲೈನ್‌ಗಳನ್ನು ಹಾಕಲು ಚಾಲನೆ ಕೊಟ್ಟಿದ್ದೇವೆ. ಈಗಾಗಲೇ ತುಮಕೂರು, ರಾಯದುರ್ಗ, ದಾವಣಗೆರೆ, ಗದಗ ಹತ್ತು ಹಲವಾರು ಕಡೆ ಕೆಲಸ ನಡೆಯುತ್ತಿದೆ. ಅಲ್ಲದೆ ರಾಜ್ಯದಲ್ಲಿ ನೆನಗುದಿಗೆ ಬಿದ್ದಿರುವ 43 ಸಾವಿರ ಕೋಟಿ ರೂಪಾಯಿಗಳ‌ ನಾನಾ ರೈಲ್ವೆ ಯೋಜನೆಗಳನ್ನು ಕೈಗೆತ್ತೆಕೊಳ್ಳಲಾಗಿದೆ ಎಂದು ತಿಳಿಸಿದರು.

44 ಸಾವಿರ ಡಬಲ್ ಲೈನ್‌ ರೈಲು ಮಾರ್ಗ , ಶೇ.98 ರಷ್ಟು ಎಲೆಕ್ಟ್ರಿಫಿಕೇಷನ್ ನೊಂದಿಗೆ ಹೊಸಲೈನ್‌ಗಳನ್ನ ತ್ವರಿತಗತಿಯಲ್ಲಿ ಮಾಡಲು ಕ್ರಮ ತೆಗೆದುಕೊಂಡಿದ್ದೇವೆ.

104 ವಂದೇಭಾರತ್ ರೈಲುಗಳು ಇಡೀ ದೇಶದ 24 ರಾಜ್ಯಗಳಲ್ಲಿ 294 ಜಿಲ್ಲಾ ಕೇಂದ್ರಗಳಲ್ಲಿ ಸುತ್ತಾಡುತ್ತಿವೆ.

ಕರ್ನಾಟಕ ರಾಜ್ಯದಲ್ಲೆ 10 ರೈಲುಗಳು ಓಡಾಡುತ್ತಿವೆ.

ಹೊಸದಾಗಿ 30 ಸಾವಿರ ಹೊಸ ಬೋಗಿಗಳನ್ನು ಅಳವಡಿಕೆ ಪ್ರಾರಂಭವಾಗಿದ್ದು, ಒಂದೊಂದು ಪ್ಯಾಸೆಂಜರ್ ರೈಲುಗಳಿಗೆ ಮೂರು, ನಾಲ್ಕು ಬೋಗಿಗಳನ್ನು ಅಳವಡಿಸಲಾಗುತ್ತಿದೆ ಎಂದರು.

ತುಮಕೂರಿನಿಂದ ಬೆಂಗಳೂರಿಗೆ ಹೊಸದಾಗಿ ಮೆಮೊ ಟ್ರೈನ್ ಮಾಡಿದ್ದೇವೆ. ಅದೇ ರೈಲು ಹಾಸನದಿಂದ ಬೆಂಗಳೂರಿಗೆ ಸಂಚರಿಸಲು ಕೇಂದ್ರದ ಶೇ. 60 ದರಲ್ಲಿ ಓಡಾಡಲು ವ್ಯವಸ್ಥೆ ಮಾಡಲು ಚಿಂತನೆ ಮಾಡುತ್ತಿದ್ದೇವೆ .

ಭಾರತದಲ್ಲಿ ರೈಲ್ವೆ ಇಲಾಖೆ ಇಡೀ ವಿಶ್ವದ ಭೂಪಟದಲ್ಲಿ ಐದನೇ ಸ್ಥಾನದಲ್ಲಿತ್ತು. ಅದನ್ನು ಮೂರನೇ ಸ್ಥಾನಕ್ಕೆ ತರಲು ತೀರ್ಮಾನ ಆಗಿದೆ. ನ.1-2 ರಂದು ಪ್ರಧಾನಮಂತ್ರಿಗಳು ಇಲಾಖೆ ಪ್ರಗತಿ ಪರಿಶೀಲನೆ ಮಾಡಲಿದ್ದಾರೆ.

ಪತ್ರಕರ್ತರಿಗೆ, ಹಿರಿಯ ನಾಗರೀಕರಿಗೆ ನೀಡುತ್ತಿದ್ದ ರೈಲ್ವೆ ಪಾಸ್ ನಿಂತಿದೆ. ಶ್ರೀಮಂತರು ಇದರ ಲಾಭ ಪಡೆಯತ್ತಿದ್ದರು ಆದ್ದರಿಂದ ಅರ್ಹರಿಗೆ ಮಾತ್ರ ಪಾಸ್ ನ ಸೌಲಭ್ಯ ದೊರೆಯಬೇಕು ಎಂಬುದು ನಮ್ಮ ಆಶಯವಾಗಿದೆ ಆದ್ದರಿಂದ ಮತ್ತೆ ರೈಲ್ವೆ ಪಾಸ್ ನ ಅವಕಾಶ ಕೊಡಲು ನನ್ನದೂ ಒತ್ತಾಯವಿದೆ. ಪ್ರಧಾನಮಂತ್ರಿ ಅವರು ಆ ಕೆಲಸ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕರಾದ ಹೆಚ್.ಕೆ.ಸುರೇಶ್, ಮಂಜುನಾಥ್ ಎಸ್ (ಸಿಮೆಂಟ್ ಮಂಜು) ಮತ್ತಿತರರು ಹಾಜರಿದ್ದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!