ದೊಡ್ಡಬಳ್ಳಾಪುರ: ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿಂದು ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಒಪಿಡಿ ಬ್ಲಾಕ್, ಡಯಾಲಿಸಿಸ್ ಕೇಂದ್ರ ಹಾಗೂ ಬ್ಲಡ್ ಬ್ಯಾಂಕ್ ಕೇಂದ್ರಗಳನ್ನೊಳಗೊಂಡ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಅಹಾರ ನಾಗರೀಕ ಸರಬರಾಜು ಹಾಗೂ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಉಧ್ಘಾಟಿಸಿದರು.
ಸಮಾರಂಭನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಕುಟುಂಬ Shorts ಇಲಾಖಾ ಸಚಿವರು ಉತ್ಕ್ರಷ್ಟ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಎಲ್ಲಾ ವಿಧವಾದ ಚಿಕಿತ್ಸೆ ಹಾಗೂ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ದೊರೆಯುವಂತೆ ನೋಡಿಕೊಳ್ಳಲಾಗುವುದೆಂದರು. ಈ ಹಿಂದೆ 250 ರಿಂದ 300 ಅಗತ್ಯ ಔಷಧಿಗಳು ದೊರೆಯುತಿದ್ದು, ಅವುಗಳ ಸಂಖ್ಯೆಯನ್ನು 1 ಸಾವಿರಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.
ದೊಡ್ಡಬಳ್ಳಾಪುರ ನೂತನ ಡಯಾಲಿಸಿಸ್ ಕೇಂದ್ರಕ್ಕೆ 1.5 ಕೋಟಿ ವೆಚ್ಚದ ಉಪಕರಣಗಳು ಹಾಗೂ ಪ್ರತಿ ವರ್ಷ ಮಾನವ ಸಂಪನ್ಮೂಲಗಳಿಗೆ 50 ಲಕ್ಷ ಒದಗಿಸಲಾಗುವುದೆಂದರು. ಈಗಾಗಲೇ ನೆಲಮಂಗಲ ತಾಲೂಕು ಕೇಂದ್ರಕ್ಕೆ ತಾಲೂಕು ಆಸ್ಪತ್ರೆ ಮಂಜೂರಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಪೂರ್ಣ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಾಗುವುದೆಂದರು.
ಇತ್ತೀಚೆಗೆ ಬಿಪಿ,ಶುಗರ್ ಪ್ರಕರಣಗಳಲ್ಲಿ ಹೆಚ್ಚಳವಾಗುತಿದ್ದು, ಮನೆ ಮನೆಗೆ ತೆರಳಿ ಪರೀಕ್ಷಿಸುವ ಯೋಜನೆ ಜಾರಿಗೆತರಲಾಗುತ್ತಿದೆ. ಈ ಖಾಯಿಲೆಗಳು ಮುಂದಿನ ದಿನಗಳಲ್ಲಿ ಬೇರೆ ಬೇರೆ ಖಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ.
ರಾಜ್ಯಾದ್ಯಂತ 8 ಸಾವಿರ ಡಯಾಲಿಸಿಸ್ ಯಂತ್ರಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂದರು.