ಹರಿತಲೇಖನಿ ದಿನಕ್ಕೊಂದು ಕಥೆ: ಚಾಡಿಕೋರ ನರಿ

A story: ಕಾಡಿನಲ್ಲಿದ್ದ ಮೃಗರಾಜ ಸಿಂಹಕ್ಕೆ ಆರೋಗ್ಯ ತುಂಬಾ ಹದಗೆಟ್ಟಿತ್ತು. ಅದು ಬೇಟೆಯಾಡುವುದಿರಲಿ ತನ್ನ ಗುಹೆಯಿಂದ ಹೊರಗೆ ಕೂಡ ಬರಲಾರದಷ್ಟು ನಿತ್ರಾಣಗೊಂಡಿತ್ತು.

ಹಾಗಾಗಿ ಅನಾರೋಗ್ಯ ಪೀಡಿತ ಮೃಗರಾಜ ಸಿಂಹಕ್ಕೆ ಆಹಾರ ಕೊಡುವುದರಿಂದ ಹಿಡಿದು ಅದರ ಬೇಕು-ಬೇಡಗಳನ್ನೆಲ್ಲಾ ನರಿಯೊಂದು ನೋಡಿಕೊಳ್ಳುತ್ತಿತ್ತು. ಮೃಗರಾಜನ ಅನಾರೋಗ್ಯದ ವಿಷಯ ಇಡೀ ಕಾಡಿಗೆ ಗೊತ್ತಾಗಿತ್ತು.

‘ನಮ್ಮ ರಾಜನಿಗೆ ಆರೋಗ್ಯ ಸರಿಯಿಲ್ಲವಂತೆ. ಬನ್ನಿ ಬನ್ನಿ ನಾವೆಲ್ಲಾ ನೋಡಿಕೊಂಡು ಬರೋಣ. ಏನಾಗಿದೆ ಎಂದು ವಿಚಾರಿಸೋಣ. ಸಾಧ್ಯವಾದರೆ ನಮ್ಮ ರಾಜನನ್ನು ಗುಣಪಡಿಸುವ ದಾರಿ ಹುಡುಕೋಣ’ ಎನ್ನುತ್ತಾ ಕಾಡಿನ ಇತರ ಪ್ರಾಣಿಗಳೆಲ್ಲಾ ಸಿಂಹದ ಗುಹೆಯತ್ತ ಧಾವಿಸಿ ಬರುತ್ತಿದ್ದವು. ಹೀಗೆ ಕಾಡಿನ ಪ್ರಾಣಿಗಳೆಲ್ಲಾ ಬಂದು ಮೃಗರಾಜನನ್ನು ನೋಡಿಕೊಂಡು ಅದರ ಆರೋಗ್ಯ ವಿಚಾರಿಸಿ ಹೋಗುತ್ತಿದ್ದವು. ಕೆಲವು ಪ್ರಾಣಿಗಳು ತಮಗೆ ತಿಳಿದಮಟ್ಟಿಗೆ ಸಲಹೆ ನೀಡುತ್ತಿದ್ದವು.

ಸಿಂಹವನ್ನು ನೋಡಿಕೊಳ್ಳುತ್ತಿದ್ದ ನರಿಗೆ ಅದೇ ಕಾಡಿನಲ್ಲಿದ್ದ ಕರಡಿಯನ್ನು ಕಂಡರೆ ಆಗುತ್ತಿರಲಿಲ್ಲ. ಕರಡಿ ಬಗ್ಗೆ ಮೃಗರಾಜನಲ್ಲಿ ಚಾಡಿ ಹೇಳಲು ಒಳ್ಳೆಯ ಸಮಯಕ್ಕಾಗಿ ನರಿ ಕಾಯುತ್ತಿತ್ತು. ಅಂತಹ ಸಮಯ ಈಗ ನರಿಗೆ ತಾನೇ ತಾನಾಗಿ ಒದಗಿ ಬಂದಿತ್ತು.

ಎಲ್ಲ ಪ್ರಾಣಿಗಳೂ ಮೃಗರಾಜನನ್ನು ನೋಡಿಕೊಂಡು ಹೋಗಲು ಗುಹೆಯ ಬಳಿ ಬಂದಿದ್ದವು. ಆದರೆ ಕರಡಿ ಮಾತ್ರ ಬಂದಿರಲಿಲ್ಲ. ನರಿಗೆ ಇದಿಷ್ಟು ಸಾಕಾಗಿತ್ತು ಕರಡಿ ಮೇಲೆ ಚಾಡಿ ಹೇಳಲು. ಕೂಡಲೇ ಅದು ಮೃಗರಾಜನ ಬಳಿ ಹೋಗಿ ಅದರ ಕಿವಿಯಲ್ಲಿ ತನ್ನ ಮೂತಿಯನ್ನಿಟ್ಟು ಹೇಳಿತು, ‘ನೋಡು ಮೃಗರಾಜ, ಕರಡಿಗೆ ರಾಜಭಕ್ತಿಯಿಲ್ಲ. ನಿಮ್ಮ ಬಗ್ಗೆ ಭಯವಂತೂ ಇಲ್ಲವೇ ಇಲ್ಲ. ಮೇಲಾಗಿ ಗೌರವವನ್ನಂತೂ ಕರಡಿಯಿಂದ ಬಯಸಲೇಬೇಡಿ. ಇದೆಲ್ಲಾ ಅದಕ್ಕೆ ಇದ್ದಿದ್ದರೆ ನಿಮ್ಮನ್ನು ನೋಡಲು ಬಂದೇ ಬರುತ್ತಿತ್ತು’ ಎಂದು ಒಂದೇ ಸಮನೆ ಕರಡಿಯ ಬಗ್ಗೆ ಚಾಡಿ ಹೇಳಿತು.

ಜೊತೆಗೆ, ‘ಮೃಗರಾಜ ಸಿಂಹದ ಆರೋಗ್ಯ ಕೆಟ್ಟಿದ್ದು ಅದಕ್ಕೆ ವಯಸ್ಸೂ ಆಗಿದೆ. ಅದರ ಕೈನಲ್ಲಿ ಈಗ ಏನೂ ಆಗುವುದಿಲ್ಲ. ಆದ್ದರಿಂದ ಈ ಕಾಡಿನ ರಾಜನಾಗಿ ಎಲ್ಲರನ್ನೂ ರಕ್ಷಿಸಲು ತಾನೇ ಸೂಕ್ತ ಎಂದು ಕರಡಿಯು ಕಾಡಿನಲ್ಲೆಲ್ಲಾ ಹೇಳಿಕೊಂಡು ತಿರುಗುತ್ತಿದೆ…’ ಎಂದು ಸಿಂಹಕ್ಕೆ ಕೋಪ ಬರುವ ರೀತಿಯಲ್ಲಿ ಇಲ್ಲ ಸಲ್ಲದ್ದನ್ನೆಲ್ಲಾ ಹೇಳಿತು ನರಿ.

ಮೃಗರಾಜ ಇತರರು ಹೇಳಿದ್ದನ್ನೆಲ್ಲ ನಂಬುವ ಪ್ರಾಣಿಯಾಗಿತ್ತು. ಹಾಗಾಗಿ, ನರಿಯ ಮಾತನ್ನೂ ತಕ್ಷಣಕ್ಕೆ ನಂಬಿತು. ಕೋಪೋದ್ರೇಕದಿಂದ ‘ಎಲೈ ಕೇಡಿ ಕರಡಿಯೇ, ರಾಜದ್ರೋಹಿಯಾದ ನಿನಗೆ ತಕ್ಕ ಶಾಸ್ತಿ ಮಾಡುತ್ತೇನೆ’ ಎಂದು ಕುಂತಲ್ಲೇ ಗುಹೆ ನಡುಗುವಂತೆ ಘರ್ಜಿಸಿತು.

ಮರೆಯಲ್ಲಿ ನಿಂತಿದ್ದ ಕರಡಿ

ಅಷ್ಟರಲ್ಲಿ ಕರಡಿ ಅಲ್ಲಿಗೆ ಬಂದಿತ್ತು. ಹಾಗೆಯೇ ಮರೆಯಲ್ಲಿ ನಿಂತು ನರಿಯ ಮಾತುಗಳನ್ನು ಕೇಳಿಸಿಕೊಂಡಿತ್ತು. ತನ್ನ ಮೇಲೆ ಮೃಗರಾಜನಿಗೆ ಬಂದಿರುವ ಕೋಪವನ್ನೂ ಅದು ಗಮನಿಸಿತ್ತು. ಆದರೂ ಕರಡಿ ಯಾವ ಭಯವನ್ನೂ ತೋರಿಸದೆ ಮೃಗರಾಜನ ಹತ್ತಿರ ಹೋಗಿ ಆರೋಗ್ಯ ವಿಚಾರಿಸಿತು.

ಜೊತೆಗೆ ಚಾಡಿಕೋರ ನರಿಯ ಮಾತು ಕೇಳಿ ತನ್ನ ಮೇಲೆ ಮುನಿಸಿಕೊಂಡಿರುವ ಮೃಗರಾಜನನ್ನು ಸಮಾಧಾನಪಡಿಸುತ್ತಾ ಕರಡಿ ಹೇಳಿತು, ‘ಮೃಗರಾಜ, ನಿಮ್ಮ ಬಗ್ಗೆ ನನಗಿರುವಷ್ಟು ರಾಜಭಕ್ತಿ ಮತ್ತು ಪ್ರೀತಿ ಈ ಪ್ರಪಂಚದಲ್ಲಿ ಬೇರೆ ಯಾರಿಗೂ ಇಲ್ಲ. ಬಹಳ ದೂರ ಹೋಗಿ ಕಾಡು-ಮೇಡು ಅಲೆದು ನಿಮ್ಮ ಅನಾರೋಗ್ಯಕ್ಕೆ ಸೂಕ್ತ ಮದ್ದನ್ನು ತಿಳಿದುಕೊಂಡು ಬಂದಿರುವೆ. ಇದರಿಂದಾಗಿ ನಿಮ್ಮ ಬಳಿಗೆ ನಾನು ಬರಲು ಇಷ್ಟು ತಡವಾಯಿತು’ ಎಂದಿತು.

ಕರಡಿ ಬಾಯಲ್ಲಿ ತನ್ನ ರೋಗ ನಿವಾರಣೆಗಾಗಿ ‘ಮದ್ದು’ ಎಂಬ ಮಾತು ಬಂದದ್ದೇ ತಡ ಮೃಗರಾಜನ ಕಿವಿಗಳು ನೆಟ್ಟಗಾದವು. ‘ಎಲೈ ಕರಡಿಯೇ, ಏನದು ಮದ್ದು? ಕೂಡಲೇ ತಿಳಿಸಿ ಹೇಳು’ ಎಂದು ಕರಡಿಯತ್ತ ದೃಷ್ಟಿಸಿ ಘರ್ಜಿಸಿತು. ಆಗ ಕರಡಿ ಚಾಡಿಕೋರ ನರಿಗೆ ಸರಿಯಾದ ಪಾಠವನ್ನು ಕಲಿಸಬೇಕೆಂದು ಮನಸ್ಸಿನಲ್ಲೇ ಅಂದುಕೊಂಡು, ಬಹಳ ಜಾಣತನದಿಂದ ಬಾಯಿಬಿಟ್ಟಿತು.

‘ಮೃಗರಾಜ ಸಿಂಹ ಪ್ರಭುವೇ, ನೀವು ನರಿಯ ರಕ್ತವನ್ನು ಹೊಟ್ಟೆ ತುಂಬಾ ಕುಡಿದರೆ ಅನಾರೋಗ್ಯದಿಂದ ಕೂಡಲೇ ಗುಣಮುಖರಾಗುತ್ತೀರಿ. ತಡಮಾಡದೆ ಈ ಮದ್ದು ತೆಗೆದುಕೊಳ್ಳಿ’ ಎಂದು ನರಿ ಅಲ್ಲಿ ಅಡಗಿ ಕುಳಿತಿರುವುದು ತನಗೆ ಗೊತ್ತೇ ಇಲ್ಲವೆಂಬಂತೆ ಹೇಳಿತು. ಕರಡಿ ಇಷ್ಟು ಹೇಳಿದ್ದೇ ತಡ ಮೃಗರಾಜ ಅಲ್ಲಿಯೇ ಅಡಗಿದ್ದ ನರಿಯ ಮೇಲೆರಗಿ ಅದರ ರಕ್ತ ಹೀರಿತು.

ಒಂದೇ ಗಳಿಗೆಯಲ್ಲಿ ನರಿಯ ಕತೆ ಮುಗಿಯಿತು. ಚಾಡಿಕೋರ ನರಿಗೆ ತಕ್ಕ ಶಾಸ್ತಿಯಾಯಿತು. ಇನ್ನು ತಾನು ಅಲ್ಲಿರುವುದು ಸರಿಯಲ್ಲವೆಂದುಕೊಂಡು ಜಾಣ ಕರಡಿ ಮೆಲ್ಲಗೆ ಅಲ್ಲಿಂದ ಜಾಗ ಖಾಲಿ ಮಾಡಿತು. ತನ್ನ ಪ್ರಾಣ ಉಳಿಯಿತೆಂದು ನಿಟ್ಟುಸಿರು ಬಿಡುತ್ತ ತನ್ನ ಬುದ್ಧಿವಂತಿಕೆಗೆ ಹೆಮ್ಮೆಪಟ್ಟಿತು.

ಕೃಪೆ: ಬನ್ನೂರು ಕೆ. ರಾಜು

ರಾಜಕೀಯ

ಕುರ್ಚಿ ಕಿತ್ತಾಟದಿಂದ ಸಂಪದ್ಭರಿತ ರಾಜ್ಯ ಬಡವಾಗುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

ಕುರ್ಚಿ ಕಿತ್ತಾಟದಿಂದ ಸಂಪದ್ಭರಿತ ರಾಜ್ಯ ಬಡವಾಗುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

ಇಂದಿನ ಸಿಎಂ ಆಡಳಿತದಲ್ಲಿ ಪ್ರತಿ ವರ್ಷ ಒಂದು ಲಕ್ಷ ಕೋಟಿ ಸಾಲ ಆಗಿದೆ. ದಿನಕ್ಕೆ 300 ಕೋಟಿ ಸಾಲ ಆಗ್ತಿದೆ . ಈ ಸರ್ಕಾರ ಪ್ರತಿನಿತ್ಯ ಕುರ್ಚಿ ಕಿತ್ತಾಟದಿಂದಲೇ ಕಾಲ‌ ಕಳೆಯುತ್ತಿದ್ದಾರೆ. ಇದರಿಂದಾಗಿ ಸಂಪದ್ಭರಿತ

[ccc_my_favorite_select_button post_id="119448"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!