Doddaballapura: ಶ್ರೀ ಸೂರ್‍ಯ ಪಿಯು ವಿಶ್ವ ಪಾರ್ಶ್ವವಾಯು ದಿನಾಚರಣೆ

ದೊಡ್ಡಬಳ್ಳಾಪುರ: ಹೃದಯ ಸಂಬಂಧಿಸಿದ ರೋಗಗಳ ನಂತರ ಅತಿ ಹೆಚ್ಚು ನರಳುತ್ತಿರುವ ಹಾಗೂ ಸಾವಿಗೀಡಾಗುತ್ತಿರುವ ರೋಗಗಳಲ್ಲಿ ಪಾರ್ಶ್ವವಾಯು ಇರುವುದು ಆತಂಕಕಾರಿ. ಪಾರ್ಶ್ವವಾಯು ಲಕ್ಷಣಗಳು ಗೋಚರಿಸಿದ ಕ್ಷಣ ಸಕಾಲದಲ್ಲಿ ಚಿಕಿತ್ಸೆ ನೀಡಿದರೆ ರೋಗವನ್ನು ಗುಣಪಡಿಸಬಹುದಾಗಿದೆ ಎಂದು ಜಿ ಮಾನಸಿಕ ಆರೋಗ್ಯಕಾರ್ಯಕ್ರಮಾಧಿಕಾರಿ ಡಾ.ಡಿ.ಪಿ.ಗಿರೀಶ್ ಕುಮಾರ್ ತಿಳಿಸಿದರು.

ನಗರದ ಶ್ರೀರಾಮ ನರ್ಸಿಂಗ್ ಕಾಲೇಜು ಮತ್ತು ಶ್ರೀ ಸೂರ್‍ಯ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಡಿಯಲ್ಲಿ ಆಯೋಜಿಸಿದ ವಿಶ್ವ ಪಾರ್ಶ್ವವಾಯು ದಿನಾಚರಣೆ ಕಾರ್‍ಯಕ್ರಮದಲ್ಲಿ ಅವರು ಮಾತನಾಡಿದರು.

ಪಾರ್ಶ್ವವಾಯುನಲ್ಲಿ ಹಲವಾರು ವಿಧಾನಗಳಿವೆ. ಮುಖ್ಯವಾಗಿ ಕೈ ಕಾಲು ಬಲಹೀನವಾಗುವುದು, ಮಾತು ತೊದಲುವುದು, ಆಹಾರ ಸೇವನೆಗೆ ತೊಡಕು, ದೃಷ್ಟಿ ದೋಷ, ಬಾಯಿ ಸೊಟ್ಟಗಾಗುವುದು ಈ ರೋಗದ ಪ್ರಮುಖ ಲಕ್ಷಣಗಳಾಗಿವೆ.

ರಕ್ತದೊತ್ತಡ, ಮಧುಮೇಹ, ಅಕ ಕೊಬ್ಬಿನಂಶ, ಸ್ಥೂಲಕಾಯ, ಇವುಳು ನಿಯಂತ್ರಣದಲ್ಲಿಲ್ಲದೇ ಇರುವುದು, ಮುಖ್ಯವಾಗಿ ಅಧಿಕ ರಕ್ತದೊತ್ತಡ, ಪಾರ್ಶ್ವವಾಯುಗೆ ಪ್ರಮುಖ ಕಾರಣ. ಇದಲ್ಲದೇ ಧೂಮಪಾನ, ಮದ್ಯಪಾನದಂತಹ ಚಟಗಳು ಸಹ ಕಾರಣವಾಗಿವೆ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ಪಡೆದು ಇವುಗಳನ್ನು ನಿಯಂತ್ರಿಸದಿದ್ದರೆ ಅದು ಪಾರ್ಶ್ವವಾಯುಗೆ ತಿರುಗುವ ಲಕ್ಷಣಗಳಿವೆ.

ಅನಿಯಮಿತ ಹಾಗೂ ದೇಹಕ್ಕೆ ಪೂರಕವಲ್ಲದ ಆಹಾರ ಸೇವನೆ, ಅತಿಯಾದ ಉಪ್ಪು ಸೇವನೆಗಳಿಂದ ದೂರ ಇರಬೇಕು. ಪುಡಿ ಉಪ್ಪಿಗಿಂತ ಕಲ್ಲು ಉಪ್ಪು ಬಳಕೆ ಉತ್ತಮ. ಪಾರ್ಶ್ವವಾಯು ನರಮಂಡಲದ ಮೇಲೆ ಪ್ರಬಾವ ಬೀರುವ ರೋಗವಾಗಿದ್ದು, ಇದು ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ.

ಅತಿಯಾದ ಒತ್ತಡದ ಜೀವನ ಹಾಗೂ ಮಾನಸಿಕ ಸ್ಥಿಮಿತ ಕಳೆದುಕೊಳ್ಳುವಿಕೆ ಸಹ ಪಾರ್ಶ್ವವಾಯು ಲಕ್ಷಣಗಳಲ್ಲಿ ಒಂದಾಗಿದ್ದು, ಇದಕ್ಕೆ ತಜ್ಞರೊಂದಿಗೆ ಸೂಕ್ತ ಸಮಾಲೋಚನೆ ನಡೆಸಬೇಕಾಗುತ್ತದೆ ಎಂದರು.

ಕಾರ್‍ಯಕ್ರಮ ಉದ್ಘಾಟಿಸಿದ ಜಿ ಮಾನಸಿಕ ಆರೋಗ್ಯಕಾರ್ಯಕ್ರಮಾಧಿಕಾರಿ ಡಾ.ಬಿ.ಎನ್.ಶಾಂತಲಾ ಮಾತನಾಡಿ, ವಿಶ್ವ ಪಾರ್ಶ್ವವಾಯು ಸಂಸ್ಥೆ ಪ್ರತಿ ವರ್ಷ ಅ.29ರಂದು ಪಾರ್ಶ್ವವಾಯು ದಿನಾಚರಣೆ ಆಚರಿಸುತ್ತಿದ್ದು, ಪಾರ್ಶ್ವವಾಯು ರೋಗದ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದ್ದು, ಆರೋಗ್ಯ ಇಲಾಖೆಯಿಂದ ಪಾರ್ಶ್ವವಾಯು ಹಾಗೂ ಮಾನಸಿಕ ಆರೋಗ್ಯ ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಯೋಗ ಗುರು ರಾಮಕೃಷ್ಣ ಮಾತನಾಡಿ, ಯೋಗದಿಂದ ಹಲವಾರು ಕಾಯಿಲೆಗಳನ್ನು ಗುಣಪಡಿಸಬಹುದಾಗಿದ್ದು,ಪಾರ್ಶ್ವವಾಯು ಪೀಡಿತರು ಯೋಗ ಥೆರಫಿಯಿಂದ ಗುಣವಾಗಿರುವ ನಿದರ್ಶನಗಳಿವೆ ಎಂದು ಯೋಗದ ಮಹತ್ವ ಕುರಿತು ಮಾಹಿತಿ ನೀಡಿದರು.

ಶ್ರೀ ಸೂರ್ಯ ಎಜುಕೇಷನ್ ಟ್ರಸ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಜಿ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ರಕ್ತದೊತ್ತಡ ಹಾಗೂ ಮಧುಮೇಹ ನಿಯಂತ್ರಣ, ನಿಯಮಿತ ವ್ಯಾಯಮ, ಆರೋಗ್ಯಕರ ಆಹಾರ ಪದ್ದತಿಗಳಿಂದ ಪಾರ್ಶ್ವವಾಯು ಬರದಂತೆ ತಡೆಗಟ್ಟಬಹುದು. ಪಾರ್ಶ್ವವಾಯು ಪೀಡಿತರಿಗೆ ಕಾಳಜಿ ಹಾಗೂ ಸಕಾರಾತ್ಮಕ ಸ್ಪಂಧನೆ ದೊರೆತರೆ ಬಹುಬೇಗ ಗುಣಮುರಾಗುತ್ತಾರೆ ಎಂದರು.

ಕಾರ್‍ಯಕ್ರಮದಲ್ಲಿ ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಬ್ರೈನ್ ಹೆಲ್ತ ಸಂಯೋಜಕರಾದ ಅನುಷಾ, ಮೋನಿಕಾ, ಧೃತಿ ಮೊದಲಾದವರು ಭಾಗವಹಿಸಿದ್ದರು.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]