Doddaballapura: ಶ್ರೀ ಸೂರ್‍ಯ ಪಿಯು ವಿಶ್ವ ಪಾರ್ಶ್ವವಾಯು ದಿನಾಚರಣೆ

ದೊಡ್ಡಬಳ್ಳಾಪುರ: ಹೃದಯ ಸಂಬಂಧಿಸಿದ ರೋಗಗಳ ನಂತರ ಅತಿ ಹೆಚ್ಚು ನರಳುತ್ತಿರುವ ಹಾಗೂ ಸಾವಿಗೀಡಾಗುತ್ತಿರುವ ರೋಗಗಳಲ್ಲಿ ಪಾರ್ಶ್ವವಾಯು ಇರುವುದು ಆತಂಕಕಾರಿ. ಪಾರ್ಶ್ವವಾಯು ಲಕ್ಷಣಗಳು ಗೋಚರಿಸಿದ ಕ್ಷಣ ಸಕಾಲದಲ್ಲಿ ಚಿಕಿತ್ಸೆ ನೀಡಿದರೆ ರೋಗವನ್ನು ಗುಣಪಡಿಸಬಹುದಾಗಿದೆ ಎಂದು ಜಿ ಮಾನಸಿಕ ಆರೋಗ್ಯಕಾರ್ಯಕ್ರಮಾಧಿಕಾರಿ ಡಾ.ಡಿ.ಪಿ.ಗಿರೀಶ್ ಕುಮಾರ್ ತಿಳಿಸಿದರು.

ನಗರದ ಶ್ರೀರಾಮ ನರ್ಸಿಂಗ್ ಕಾಲೇಜು ಮತ್ತು ಶ್ರೀ ಸೂರ್‍ಯ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಡಿಯಲ್ಲಿ ಆಯೋಜಿಸಿದ ವಿಶ್ವ ಪಾರ್ಶ್ವವಾಯು ದಿನಾಚರಣೆ ಕಾರ್‍ಯಕ್ರಮದಲ್ಲಿ ಅವರು ಮಾತನಾಡಿದರು.

ಪಾರ್ಶ್ವವಾಯುನಲ್ಲಿ ಹಲವಾರು ವಿಧಾನಗಳಿವೆ. ಮುಖ್ಯವಾಗಿ ಕೈ ಕಾಲು ಬಲಹೀನವಾಗುವುದು, ಮಾತು ತೊದಲುವುದು, ಆಹಾರ ಸೇವನೆಗೆ ತೊಡಕು, ದೃಷ್ಟಿ ದೋಷ, ಬಾಯಿ ಸೊಟ್ಟಗಾಗುವುದು ಈ ರೋಗದ ಪ್ರಮುಖ ಲಕ್ಷಣಗಳಾಗಿವೆ.

ರಕ್ತದೊತ್ತಡ, ಮಧುಮೇಹ, ಅಕ ಕೊಬ್ಬಿನಂಶ, ಸ್ಥೂಲಕಾಯ, ಇವುಳು ನಿಯಂತ್ರಣದಲ್ಲಿಲ್ಲದೇ ಇರುವುದು, ಮುಖ್ಯವಾಗಿ ಅಧಿಕ ರಕ್ತದೊತ್ತಡ, ಪಾರ್ಶ್ವವಾಯುಗೆ ಪ್ರಮುಖ ಕಾರಣ. ಇದಲ್ಲದೇ ಧೂಮಪಾನ, ಮದ್ಯಪಾನದಂತಹ ಚಟಗಳು ಸಹ ಕಾರಣವಾಗಿವೆ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ಪಡೆದು ಇವುಗಳನ್ನು ನಿಯಂತ್ರಿಸದಿದ್ದರೆ ಅದು ಪಾರ್ಶ್ವವಾಯುಗೆ ತಿರುಗುವ ಲಕ್ಷಣಗಳಿವೆ.

ಅನಿಯಮಿತ ಹಾಗೂ ದೇಹಕ್ಕೆ ಪೂರಕವಲ್ಲದ ಆಹಾರ ಸೇವನೆ, ಅತಿಯಾದ ಉಪ್ಪು ಸೇವನೆಗಳಿಂದ ದೂರ ಇರಬೇಕು. ಪುಡಿ ಉಪ್ಪಿಗಿಂತ ಕಲ್ಲು ಉಪ್ಪು ಬಳಕೆ ಉತ್ತಮ. ಪಾರ್ಶ್ವವಾಯು ನರಮಂಡಲದ ಮೇಲೆ ಪ್ರಬಾವ ಬೀರುವ ರೋಗವಾಗಿದ್ದು, ಇದು ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ.

ಅತಿಯಾದ ಒತ್ತಡದ ಜೀವನ ಹಾಗೂ ಮಾನಸಿಕ ಸ್ಥಿಮಿತ ಕಳೆದುಕೊಳ್ಳುವಿಕೆ ಸಹ ಪಾರ್ಶ್ವವಾಯು ಲಕ್ಷಣಗಳಲ್ಲಿ ಒಂದಾಗಿದ್ದು, ಇದಕ್ಕೆ ತಜ್ಞರೊಂದಿಗೆ ಸೂಕ್ತ ಸಮಾಲೋಚನೆ ನಡೆಸಬೇಕಾಗುತ್ತದೆ ಎಂದರು.

ಕಾರ್‍ಯಕ್ರಮ ಉದ್ಘಾಟಿಸಿದ ಜಿ ಮಾನಸಿಕ ಆರೋಗ್ಯಕಾರ್ಯಕ್ರಮಾಧಿಕಾರಿ ಡಾ.ಬಿ.ಎನ್.ಶಾಂತಲಾ ಮಾತನಾಡಿ, ವಿಶ್ವ ಪಾರ್ಶ್ವವಾಯು ಸಂಸ್ಥೆ ಪ್ರತಿ ವರ್ಷ ಅ.29ರಂದು ಪಾರ್ಶ್ವವಾಯು ದಿನಾಚರಣೆ ಆಚರಿಸುತ್ತಿದ್ದು, ಪಾರ್ಶ್ವವಾಯು ರೋಗದ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದ್ದು, ಆರೋಗ್ಯ ಇಲಾಖೆಯಿಂದ ಪಾರ್ಶ್ವವಾಯು ಹಾಗೂ ಮಾನಸಿಕ ಆರೋಗ್ಯ ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಯೋಗ ಗುರು ರಾಮಕೃಷ್ಣ ಮಾತನಾಡಿ, ಯೋಗದಿಂದ ಹಲವಾರು ಕಾಯಿಲೆಗಳನ್ನು ಗುಣಪಡಿಸಬಹುದಾಗಿದ್ದು,ಪಾರ್ಶ್ವವಾಯು ಪೀಡಿತರು ಯೋಗ ಥೆರಫಿಯಿಂದ ಗುಣವಾಗಿರುವ ನಿದರ್ಶನಗಳಿವೆ ಎಂದು ಯೋಗದ ಮಹತ್ವ ಕುರಿತು ಮಾಹಿತಿ ನೀಡಿದರು.

ಶ್ರೀ ಸೂರ್ಯ ಎಜುಕೇಷನ್ ಟ್ರಸ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಜಿ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ರಕ್ತದೊತ್ತಡ ಹಾಗೂ ಮಧುಮೇಹ ನಿಯಂತ್ರಣ, ನಿಯಮಿತ ವ್ಯಾಯಮ, ಆರೋಗ್ಯಕರ ಆಹಾರ ಪದ್ದತಿಗಳಿಂದ ಪಾರ್ಶ್ವವಾಯು ಬರದಂತೆ ತಡೆಗಟ್ಟಬಹುದು. ಪಾರ್ಶ್ವವಾಯು ಪೀಡಿತರಿಗೆ ಕಾಳಜಿ ಹಾಗೂ ಸಕಾರಾತ್ಮಕ ಸ್ಪಂಧನೆ ದೊರೆತರೆ ಬಹುಬೇಗ ಗುಣಮುರಾಗುತ್ತಾರೆ ಎಂದರು.

ಕಾರ್‍ಯಕ್ರಮದಲ್ಲಿ ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಬ್ರೈನ್ ಹೆಲ್ತ ಸಂಯೋಜಕರಾದ ಅನುಷಾ, ಮೋನಿಕಾ, ಧೃತಿ ಮೊದಲಾದವರು ಭಾಗವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!