ಪ್ರಧಾನಿ ನರೇಂದ್ರ ಮೋದಿಯವರು ಭೂ ಕಬಳಿಕೆ ತಪ್ಪಿಸಲು ಪ್ರತ್ಯೇಕ ಕಾನೂನು ತರುತ್ತಿದ್ದಾರೆ: ಆರ್‌.ಅಶೋಕ

ಚನ್ನಪಟ್ಟಣ; ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಚನ್ನಪಟ್ಟಣದ ಮನೆ ಮಗ ಎನ್ನುವುದಾದರೆ ಇಲ್ಲಿನ ಜಿಲ್ಲಾ ಉಸ್ತುವಾರಿಯ ಹೊಣೆ ಹೊತ್ತುಕೊಳ್ಳಲಿ. ಚುನಾವಣೆ ಬಂದಾಗ ನಾಟಕ ಮಾಡಲು ಮಾತ್ರ ಈ ರೀತಿಯ ಭಾವನಾತ್ಮಕ ಮಾತು ಆಡುತ್ತಾರೆ ಎಂದು ಪ್ರತಿಪಕ್ಷ ಆರ್‌.ಅಶೋಕ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್‌ ಕುಮಾರಸ್ವಾಮಿ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಎರಡೂ ಪಕ್ಷ ಇರುವುದರಿಂದ ಗೆಲುವು ಸಮೀಪದಲ್ಲಿದೆ. ಎಚ್‌.ಡಿ.ಕುಮಾರಸ್ವಾಮಿ ಅವರು ಈ ಹಿಂದೆ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿ ಬಿಜೆಪಿಯ ಸಾಂಪ್ರದಾಯಿಕ ಮತಗಳೂ ಸಿಗುವುದರಿಂದ ಗೆಲ್ಲುವ ಸಾಧ್ಯತೆ ಹೆಚ್ಚು. ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ, ಮುಡಾ ಹಗರಣ, ದಲಿತರ ಹಣವನ್ನು ಬೇರೆಡೆ ವರ್ಗಾಯಿಸಿರುವುದು ಮೊದಲಾದ ಕಾರಣಗಳಿಂದ ಜನರಿಗೆ ಕಾಂಗ್ರೆಸ್‌ ಮೇಲೆ ವಿಶ್ವಾಸವಿಲ್ಲ ಎಂದರು.

ಈ 16 ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚನ್ನಪಟ್ಟಣಕ್ಕಾಗಲೀ, ರಾಮನಗರಕ್ಕಾಗಲೀ ಭೇಟಿ ನೀಡಿಲ್ಲ. ಭೇಟಿ ನೀಡಲು ಕೂಡ ಸಮಯವಿಲ್ಲವೆಂದಾದರೆ ಅಭಿವೃದ್ಧಿ ಹೇಗೆ ಮಾಡುತ್ತಾರೆ? ಡಿಸಿಎಂ ಡಿಕೆ ಶಿವಕುಮಾರ್‌ ನಾನು ಮನೆ ಮಗ ಎಂದು ಜನರ ಕಿವಿ ಮೇಲೆ ಹೂ ಇಡಲು ನೋಡಿದ್ದರು. ನಂತರ ತಾಯಿ ಜಿಲ್ಲೆಯನ್ನು ಬಿಟ್ಟು ಬೆಂಗಳೂರಿನ ಉಸ್ತುವಾರಿ ಪಡೆದುಕೊಂಡರು.

ರಾಮಲಿಂಗಾರೆಡ್ಡಿ ಅವರನ್ನು ಇಲ್ಲಿನ ಜಿಲ್ಲಾ ಉಸ್ತುವಾರಿ ಮಾಡಿದ್ದರೂ, ಅವರಿಗೆ ಇಲ್ಲಿಗೆ ಬರಲು ಇಷ್ಟವಿಲ್ಲ. ಚುನಾವಣೆ ಬಂದಿರುವುದರಿಂದ ನಾಟಕ ಮಾಡಲು ಇಲ್ಲಿಗೆ ಬಂದಿದ್ದಾರೆ.

ಡಿಕೆ ಶಿವಕುಮಾರ್‌ ಅವರಿಗೆ ಅಷ್ಟೊಂದು ಪ್ರೀತಿ ಇದ್ದರೆ ಅವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಬೇಕಿತ್ತು. ಬೆಂಗಳೂರಿನಲ್ಲಿ ಸಮೃದ್ಧಿ ಮಾಡಲು ಹೊರಟಿದ್ದಾರೆ. ಆದರೆ ಚನ್ನಪಟ್ಟಣ ಅಭಿವೃದ್ಧಿಗೆ ಹತ್ತು ಪೈಸೆ ಹಣವಿಲ್ಲ ಎಂದು ದೂರಿದರು.

ಸರ್ಕಾರದಲ್ಲಿ ಸಂಬಳ ಕೊಡಲು ಕೂಡ ದುಡ್ಡಿಲ್ಲ. ರಾಮನಗರ ಜಿಲ್ಲೆಗೆ ಇವರೇನು ಮಾಡಿದ್ದಾರೆಂದು ತಿಳಿಸಬೇಕು. ಬಿಜೆಪಿ ಸರ್ಕಾರವಿದ್ದಾಗ ಇಲ್ಲಿಗೆ ವಿಶ್ವವಿದ್ಯಾಲಯ ತರಲಾಯಿತು. ನೀರಾವರಿ ಯೋಜನೆಗಳನ್ನು ತರಲಾಯಿತು.

ಸಿ.ಪಿ.ಯೋಗೇಶ್ವರ್‌ ತಾವೇ ನೀರಾವರಿ ಯೋಜನೆ ತಂದಿದ್ದೇನೆಂದು ಹೇಳಿಕೊಂಡರು ಕೂಡ, ಅನುದಾನ ಮಂಜೂರು ಮಾಡಿದ್ದು ಬಿಜೆಪಿ ಸರ್ಕಾರವೇ ಹೊರತು ಶಾಸಕರಲ್ಲ. ಅದಕ್ಕಿಂತ ಹೆಚ್ಚಾಗಿ ಇಲ್ಲಿ ಎಂಜಿನಿಯರ್‌ ಆಗಿದ್ದ ವೆಂಕಟೇಗೌಡ ನಮ್ಮ ಬಳಿ ಬಂದು ಅನುದಾನ ಮಂಜೂರು ಮಾಡಿಸಿಕೊಂಡಿದ್ದರು. ಯಾವುದೇ ಯೋಜನೆ ಬರಬೇಕೆಂದರೂ ಅದಕ್ಕೆ ಸರ್ಕಾರ ಕಾರಣ ಎಂದರು.

ಪಕ್ಷವನ್ನು ಬಿಟ್ಟು ಹೋಗುವವರು ಒಂದೇ ಡೈಲಾಗ್‌ ಹೊಡೆಯುತ್ತಾರೆ. ಬಿಜೆಪಿ ಜೊತೆ ಕಾರ್ಯಕರ್ತರ ಪಡೆ ಇದೆ. ಸಂಘಟನೆಯನ್ನು ಇನ್ನಷ್ಟು ಗಟ್ಟಿಯಾಗಿ ಬೆಳೆಸುತ್ತೇವೆ ಎಂದರು.

ಓಡಿಹೋದ ಡಿಕೆಶಿ

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ ಪಾಲ್ಗೊಂಡು ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಬಂದು 16 ತಿಂಗಳಾಗಿದೆ. ಮನಸ್ಸು ಮಾಡಿದರೆ ಸಿಎಂ ಸಿದ್ದರಾಮಯ್ಯನವರಿಗೆ ಎಲ್ಲ ಜಿಲ್ಲೆಗೆ ಹೋಗಬಹುದು. ಆದರೆ ಅವರು ಚನ್ನಪಟ್ಟಣಕ್ಕೆ ಬಂದು 500 ದಿನಗಳು ಕಳೆದಿವೆ. ಈಗಾಗಲೇ ಮುಡಾ ಹಗರಣದ ತನಿಖೆ ನಡೆಯುತ್ತಿದ್ದು, ಅದರ ಫಲಿತಾಂಶ ಬಂದರೆ ಶಾಶ್ವತವಾಗಿ ಈ ಕಡೆ ಬರುವುದಿಲ್ಲ. ಡಿಕೆ ಶಿವಕುಮಾರ್ ಇಲ್ಲಿ ಅಭ್ಯರ್ಥಿಯಾಗುತ್ತೇನೆಂದು ಹೇಳಿ ಓಡಿಹೋದರು.

ಮುಡಾ ಹಗರಣದ ತನಿಖೆಯ ವರದಿ ಬಂದರೆ ಸರ್ಕಾರವೇ ಬಿದ್ದು ಹೋಗಬಹುದು. ಹೀಗೆ ಮುಳುಗುವ ಪಕ್ಷಕ್ಕೆ ಮತ ಹಾಕಿದರೆ ಲಾಭವಿಲ್ಲ ಎಂದು ಜನರಿಗೆ ತಿಳಿಸಬೇಕು ಎಂದರು.

ಎಚ್.ಡಿ.ಕುಮಾರಸ್ವಾಮಿ ಅವರು ಭಾವನಾತ್ಮಕ ಜೀವಿ ಆದರೆ ಕಾಂಗ್ರೆಸ್ ನಾಯಕರು ಕಟುಕರು. ಕುಮಾರಸ್ವಾಮಿ ಕಾರಿನಲ್ಲಿ ಹೋಗುತ್ತಿರುವಾಗ ಬಡ ವ್ಯಕ್ತಿ ಕಂಡರೆ ಅವನ ಬಳಿ ಹೋಗಿ ಸಹಾಯ ಮಾಡುತ್ತಾರೆ. ಆದರೆ ಕಾಂಗ್ರೆಸ್ ನವರು ಈ ಭಾವನೆಯನ್ನೇ ತಮಾಷೆ ಮಾಡುತ್ತಾರೆ‌. ಜೊತೆಗೆ ದೇವೇಗೌಡರ ವಯಸ್ಸಿನ ಬಗ್ಗೆಯೂ ಟೀಕೆ ಮಾಡುತ್ತಾರೆ‌. ಯಾರಿಗೂ ರೋಗ ಬರುವುದಿಲ್ಲವೇ? ಔಷಧಿ ಸೇವಿಸುವುದಿಲ್ಲವೇ? ಎಂದು ಪ್ರಶ್ನಿಸಿದರು‌.

ರೈತರ ಆಸ್ತಿ ಲೂಟಿ

ರೈತರ ಸಾವಿರಾರು ಎಕರೆ ಭೂಮಿಯನ್ನು ವಕ್ಫ್ ಗೆ ಬರೆದುಕೊಟ್ಟಿದ್ದಾರೆ. ಜಮೀರ್ ಅಹ್ಮದ್ ಸಚಿವರಾದ ಬಳಿಕ ಲಕ್ಷಾಂತರ ಜಮೀನುಗಳನ್ನು ವಕ್ಫ್ ಗೆ ಸೇರಿಸಲು ಕ್ರಮ ವಹಿಸಲಾಗುತ್ತಿದೆ. ಆದರೆ ರೈತರು ಈ ವಿವಾದವನ್ನು ಕೋರ್ಟ್ ಗೆ ತೆಗೆದುಕೊಂಡು ಹೋಗಲು ಸಾಧ್ಯವಾಗುವುದಿಲ್ಲ. ಅದು ವಕ್ಫ್ ಬೋರ್ಡ್ ನಲ್ಲೇ ತೀರ್ಮಾನವಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿಯವರು ಈ ಕಬಳಿಕೆ ತಪ್ಪಿಸಲು ಪ್ರತ್ಯೇಕ ಕಾನೂನು ತರುತ್ತಿದ್ದಾರೆ. ರೈತರು ತಮ್ಮ ಪಹಣಿಯನ್ನು ಪರಿಶೀಲಿಸಿಕೊಳ್ಳಬೇಕು. ಅದರಲ್ಲಿ ವಕ್ಫ್ ಭೂಮಿ ಎಂದಿದ್ದರೆ ಭೂಮಿ ಸಿಗುವುದಿಲ್ಲ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದಲಿತರ ಹಣವನ್ನೂ ಕಾಂಗ್ರೆಸ್ ಬಿಡಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ 14 ಸೈಟುಗಳನ್ನು ಲೂಟಿ ಮಾಡಿದ್ದಾರೆ. ಬಡವರಿಗೆ ನಿವೇಶನ ನೀಡುವ ಬದಲು ತಾವೇ ಎಲ್ಲವನ್ನೂ ಲೂಟಿ ಮಾಡಿದ್ದಾರೆ. ಇವರಿಗೆ ಮತ ಹಾಕಿದರೆ ಲೂಟಿಗೆ ಬೆಂಬಲ ನೀಡಿದಂತಾಗುತ್ತದೆ ಎಂದು ಹೇಳಿದರು.

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!