ಪ್ರಧಾನಿ ನರೇಂದ್ರ ಮೋದಿಯವರು ಭೂ ಕಬಳಿಕೆ ತಪ್ಪಿಸಲು ಪ್ರತ್ಯೇಕ ಕಾನೂನು ತರುತ್ತಿದ್ದಾರೆ: ಆರ್‌.ಅಶೋಕ

ಚನ್ನಪಟ್ಟಣ; ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಚನ್ನಪಟ್ಟಣದ ಮನೆ ಮಗ ಎನ್ನುವುದಾದರೆ ಇಲ್ಲಿನ ಜಿಲ್ಲಾ ಉಸ್ತುವಾರಿಯ ಹೊಣೆ ಹೊತ್ತುಕೊಳ್ಳಲಿ. ಚುನಾವಣೆ ಬಂದಾಗ ನಾಟಕ ಮಾಡಲು ಮಾತ್ರ ಈ ರೀತಿಯ ಭಾವನಾತ್ಮಕ ಮಾತು ಆಡುತ್ತಾರೆ ಎಂದು ಪ್ರತಿಪಕ್ಷ ಆರ್‌.ಅಶೋಕ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್‌ ಕುಮಾರಸ್ವಾಮಿ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಎರಡೂ ಪಕ್ಷ ಇರುವುದರಿಂದ ಗೆಲುವು ಸಮೀಪದಲ್ಲಿದೆ. ಎಚ್‌.ಡಿ.ಕುಮಾರಸ್ವಾಮಿ ಅವರು ಈ ಹಿಂದೆ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿ ಬಿಜೆಪಿಯ ಸಾಂಪ್ರದಾಯಿಕ ಮತಗಳೂ ಸಿಗುವುದರಿಂದ ಗೆಲ್ಲುವ ಸಾಧ್ಯತೆ ಹೆಚ್ಚು. ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ, ಮುಡಾ ಹಗರಣ, ದಲಿತರ ಹಣವನ್ನು ಬೇರೆಡೆ ವರ್ಗಾಯಿಸಿರುವುದು ಮೊದಲಾದ ಕಾರಣಗಳಿಂದ ಜನರಿಗೆ ಕಾಂಗ್ರೆಸ್‌ ಮೇಲೆ ವಿಶ್ವಾಸವಿಲ್ಲ ಎಂದರು.

ಈ 16 ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚನ್ನಪಟ್ಟಣಕ್ಕಾಗಲೀ, ರಾಮನಗರಕ್ಕಾಗಲೀ ಭೇಟಿ ನೀಡಿಲ್ಲ. ಭೇಟಿ ನೀಡಲು ಕೂಡ ಸಮಯವಿಲ್ಲವೆಂದಾದರೆ ಅಭಿವೃದ್ಧಿ ಹೇಗೆ ಮಾಡುತ್ತಾರೆ? ಡಿಸಿಎಂ ಡಿಕೆ ಶಿವಕುಮಾರ್‌ ನಾನು ಮನೆ ಮಗ ಎಂದು ಜನರ ಕಿವಿ ಮೇಲೆ ಹೂ ಇಡಲು ನೋಡಿದ್ದರು. ನಂತರ ತಾಯಿ ಜಿಲ್ಲೆಯನ್ನು ಬಿಟ್ಟು ಬೆಂಗಳೂರಿನ ಉಸ್ತುವಾರಿ ಪಡೆದುಕೊಂಡರು.

ರಾಮಲಿಂಗಾರೆಡ್ಡಿ ಅವರನ್ನು ಇಲ್ಲಿನ ಜಿಲ್ಲಾ ಉಸ್ತುವಾರಿ ಮಾಡಿದ್ದರೂ, ಅವರಿಗೆ ಇಲ್ಲಿಗೆ ಬರಲು ಇಷ್ಟವಿಲ್ಲ. ಚುನಾವಣೆ ಬಂದಿರುವುದರಿಂದ ನಾಟಕ ಮಾಡಲು ಇಲ್ಲಿಗೆ ಬಂದಿದ್ದಾರೆ.

ಡಿಕೆ ಶಿವಕುಮಾರ್‌ ಅವರಿಗೆ ಅಷ್ಟೊಂದು ಪ್ರೀತಿ ಇದ್ದರೆ ಅವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಬೇಕಿತ್ತು. ಬೆಂಗಳೂರಿನಲ್ಲಿ ಸಮೃದ್ಧಿ ಮಾಡಲು ಹೊರಟಿದ್ದಾರೆ. ಆದರೆ ಚನ್ನಪಟ್ಟಣ ಅಭಿವೃದ್ಧಿಗೆ ಹತ್ತು ಪೈಸೆ ಹಣವಿಲ್ಲ ಎಂದು ದೂರಿದರು.

ಸರ್ಕಾರದಲ್ಲಿ ಸಂಬಳ ಕೊಡಲು ಕೂಡ ದುಡ್ಡಿಲ್ಲ. ರಾಮನಗರ ಜಿಲ್ಲೆಗೆ ಇವರೇನು ಮಾಡಿದ್ದಾರೆಂದು ತಿಳಿಸಬೇಕು. ಬಿಜೆಪಿ ಸರ್ಕಾರವಿದ್ದಾಗ ಇಲ್ಲಿಗೆ ವಿಶ್ವವಿದ್ಯಾಲಯ ತರಲಾಯಿತು. ನೀರಾವರಿ ಯೋಜನೆಗಳನ್ನು ತರಲಾಯಿತು.

ಸಿ.ಪಿ.ಯೋಗೇಶ್ವರ್‌ ತಾವೇ ನೀರಾವರಿ ಯೋಜನೆ ತಂದಿದ್ದೇನೆಂದು ಹೇಳಿಕೊಂಡರು ಕೂಡ, ಅನುದಾನ ಮಂಜೂರು ಮಾಡಿದ್ದು ಬಿಜೆಪಿ ಸರ್ಕಾರವೇ ಹೊರತು ಶಾಸಕರಲ್ಲ. ಅದಕ್ಕಿಂತ ಹೆಚ್ಚಾಗಿ ಇಲ್ಲಿ ಎಂಜಿನಿಯರ್‌ ಆಗಿದ್ದ ವೆಂಕಟೇಗೌಡ ನಮ್ಮ ಬಳಿ ಬಂದು ಅನುದಾನ ಮಂಜೂರು ಮಾಡಿಸಿಕೊಂಡಿದ್ದರು. ಯಾವುದೇ ಯೋಜನೆ ಬರಬೇಕೆಂದರೂ ಅದಕ್ಕೆ ಸರ್ಕಾರ ಕಾರಣ ಎಂದರು.

ಪಕ್ಷವನ್ನು ಬಿಟ್ಟು ಹೋಗುವವರು ಒಂದೇ ಡೈಲಾಗ್‌ ಹೊಡೆಯುತ್ತಾರೆ. ಬಿಜೆಪಿ ಜೊತೆ ಕಾರ್ಯಕರ್ತರ ಪಡೆ ಇದೆ. ಸಂಘಟನೆಯನ್ನು ಇನ್ನಷ್ಟು ಗಟ್ಟಿಯಾಗಿ ಬೆಳೆಸುತ್ತೇವೆ ಎಂದರು.

ಓಡಿಹೋದ ಡಿಕೆಶಿ

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ ಪಾಲ್ಗೊಂಡು ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಬಂದು 16 ತಿಂಗಳಾಗಿದೆ. ಮನಸ್ಸು ಮಾಡಿದರೆ ಸಿಎಂ ಸಿದ್ದರಾಮಯ್ಯನವರಿಗೆ ಎಲ್ಲ ಜಿಲ್ಲೆಗೆ ಹೋಗಬಹುದು. ಆದರೆ ಅವರು ಚನ್ನಪಟ್ಟಣಕ್ಕೆ ಬಂದು 500 ದಿನಗಳು ಕಳೆದಿವೆ. ಈಗಾಗಲೇ ಮುಡಾ ಹಗರಣದ ತನಿಖೆ ನಡೆಯುತ್ತಿದ್ದು, ಅದರ ಫಲಿತಾಂಶ ಬಂದರೆ ಶಾಶ್ವತವಾಗಿ ಈ ಕಡೆ ಬರುವುದಿಲ್ಲ. ಡಿಕೆ ಶಿವಕುಮಾರ್ ಇಲ್ಲಿ ಅಭ್ಯರ್ಥಿಯಾಗುತ್ತೇನೆಂದು ಹೇಳಿ ಓಡಿಹೋದರು.

ಮುಡಾ ಹಗರಣದ ತನಿಖೆಯ ವರದಿ ಬಂದರೆ ಸರ್ಕಾರವೇ ಬಿದ್ದು ಹೋಗಬಹುದು. ಹೀಗೆ ಮುಳುಗುವ ಪಕ್ಷಕ್ಕೆ ಮತ ಹಾಕಿದರೆ ಲಾಭವಿಲ್ಲ ಎಂದು ಜನರಿಗೆ ತಿಳಿಸಬೇಕು ಎಂದರು.

ಎಚ್.ಡಿ.ಕುಮಾರಸ್ವಾಮಿ ಅವರು ಭಾವನಾತ್ಮಕ ಜೀವಿ ಆದರೆ ಕಾಂಗ್ರೆಸ್ ನಾಯಕರು ಕಟುಕರು. ಕುಮಾರಸ್ವಾಮಿ ಕಾರಿನಲ್ಲಿ ಹೋಗುತ್ತಿರುವಾಗ ಬಡ ವ್ಯಕ್ತಿ ಕಂಡರೆ ಅವನ ಬಳಿ ಹೋಗಿ ಸಹಾಯ ಮಾಡುತ್ತಾರೆ. ಆದರೆ ಕಾಂಗ್ರೆಸ್ ನವರು ಈ ಭಾವನೆಯನ್ನೇ ತಮಾಷೆ ಮಾಡುತ್ತಾರೆ‌. ಜೊತೆಗೆ ದೇವೇಗೌಡರ ವಯಸ್ಸಿನ ಬಗ್ಗೆಯೂ ಟೀಕೆ ಮಾಡುತ್ತಾರೆ‌. ಯಾರಿಗೂ ರೋಗ ಬರುವುದಿಲ್ಲವೇ? ಔಷಧಿ ಸೇವಿಸುವುದಿಲ್ಲವೇ? ಎಂದು ಪ್ರಶ್ನಿಸಿದರು‌.

ರೈತರ ಆಸ್ತಿ ಲೂಟಿ

ರೈತರ ಸಾವಿರಾರು ಎಕರೆ ಭೂಮಿಯನ್ನು ವಕ್ಫ್ ಗೆ ಬರೆದುಕೊಟ್ಟಿದ್ದಾರೆ. ಜಮೀರ್ ಅಹ್ಮದ್ ಸಚಿವರಾದ ಬಳಿಕ ಲಕ್ಷಾಂತರ ಜಮೀನುಗಳನ್ನು ವಕ್ಫ್ ಗೆ ಸೇರಿಸಲು ಕ್ರಮ ವಹಿಸಲಾಗುತ್ತಿದೆ. ಆದರೆ ರೈತರು ಈ ವಿವಾದವನ್ನು ಕೋರ್ಟ್ ಗೆ ತೆಗೆದುಕೊಂಡು ಹೋಗಲು ಸಾಧ್ಯವಾಗುವುದಿಲ್ಲ. ಅದು ವಕ್ಫ್ ಬೋರ್ಡ್ ನಲ್ಲೇ ತೀರ್ಮಾನವಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿಯವರು ಈ ಕಬಳಿಕೆ ತಪ್ಪಿಸಲು ಪ್ರತ್ಯೇಕ ಕಾನೂನು ತರುತ್ತಿದ್ದಾರೆ. ರೈತರು ತಮ್ಮ ಪಹಣಿಯನ್ನು ಪರಿಶೀಲಿಸಿಕೊಳ್ಳಬೇಕು. ಅದರಲ್ಲಿ ವಕ್ಫ್ ಭೂಮಿ ಎಂದಿದ್ದರೆ ಭೂಮಿ ಸಿಗುವುದಿಲ್ಲ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದಲಿತರ ಹಣವನ್ನೂ ಕಾಂಗ್ರೆಸ್ ಬಿಡಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ 14 ಸೈಟುಗಳನ್ನು ಲೂಟಿ ಮಾಡಿದ್ದಾರೆ. ಬಡವರಿಗೆ ನಿವೇಶನ ನೀಡುವ ಬದಲು ತಾವೇ ಎಲ್ಲವನ್ನೂ ಲೂಟಿ ಮಾಡಿದ್ದಾರೆ. ಇವರಿಗೆ ಮತ ಹಾಕಿದರೆ ಲೂಟಿಗೆ ಬೆಂಬಲ ನೀಡಿದಂತಾಗುತ್ತದೆ ಎಂದು ಹೇಳಿದರು.

ರಾಜಕೀಯ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

[ccc_my_favorite_select_button post_id="119574"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮರದಲ್ಲಿ ನೇತಾಡುತ್ತಿದ್ದ ಮಾನವ ಬುರುಡೆಯ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಮರದಲ್ಲಿ ನೇತಾಡುತ್ತಿದ್ದ ಮಾನವ ಬುರುಡೆಯ ಗುರುತು ಪತ್ತೆ..!

ಕಳೆದ 6 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವನ ಬುರುಡೆ ಮರದಲ್ಲಿ ನೇತಾಡುವ ಸ್ಥಿತಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ (Doddaballapura) ನಗರದ ಹೊರವಲಯದಲ್ಲಿರುವ ಬ್ಯಾಂಕ್ ಸರ್ಕಲ್ ಬಳಿ ಬೆಳಕಿಗೆ ಬಂದಿದೆ.

[ccc_my_favorite_select_button post_id="119580"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!