kannada rajyotsava; ಎಂಎಸ್‌ವಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ದೊಡ್ದಬಳ್ಳಾಪುರ: ಇಲ್ಲಿನ ಪ್ರತಿಷ್ಠಿತ ಶಾಲೆಯಾದ ಎಂ ಎಸ್ ವಿ ಪಬ್ಲಿಕ್ ಶಾಲೆಯಲ್ಲಿ ಇಂದು ಅದ್ಧೂರಿಯ 69ನೇ ಕನ್ನಡ ರಾಜ್ಯೋತ್ಸವವನ್ನು (kannada rajyotsava) ಸಂಭ್ರಮದಿಂದ ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲರಾದ ಸತ್ಯನಾರಾಯಣ ಶಾಸ್ತ್ರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ನ್ಯಾಯವಾದಿ ಸತ್ಯನಾರಾಯಣ ಶಾಸ್ತ್ರಿ, “ಕನ್ನಡ ಕೇವಲ ಭಾಷೆಯಲ್ಲ, ಅದು ಜೀವನಾಮೃತ. ವಿದ್ಯಾರ್ಥಿ ಜೀವನದಲ್ಲಿ ಗುರುಗಳ ಪಾತ್ರ ಮಹತ್ವವಾದದ್ದು. ಮಕ್ಕಳು ವಿದ್ಯೆಯ ಜೊತೆಗೆ ವಿನಯವನ್ನೂ ಸಹ ಗಳಿಸಿಕೊಳ್ಳಬೇಕು ಎಂದರು.

ಇದನ್ನೂ ಓದಿ: ದೊಡ್ಡಬಳ್ಳಾಪುರ: ANT ಅಕಾಡೆಮಿಗೆ MSV ಶಾಲಾ ಮಕ್ಕಳ ಭೇಟಿ..!

ಪ್ರೊ. ಕೆ.ಆರ್. ರವಿಕಿರಣ್ ಮಾತನಾಡಿ, ಎಲ್ಲ ಭಾಷೆಗಳೂ ತಮ್ಮ ತಮ್ಮ ಮಾತೃಭಾಷೆಯಾಗಿದೆ. ಕನ್ನಡ ಭಾಷೆ ಅನನ್ಯ ಹಾಗೂ ಸೃಜನ ಶೀಲ ಭಾಷೆ. ನಮ್ಮ ದೈನಂದಿನ ಜೀವನದಲ್ಲಿ ಕನ್ನಡದ ಬಳಕೆಯಿಂದ ಮಾತ್ರ ಇದನ್ನು ಉಳಿಸಲು ಸಾಧ್ಯ.

ಮುಂದಿನ ಪೀಳಿಗೆಗೆ ಕನ್ನಡ ಭಾಷೆಯನ್ನು ಬೆಳೆಸಬೇಕೆಂದರೆ – ವಿಜ್ಞಾನ, ವೈದ್ಯಕೀಯ ವಿಷಯಗಳು ಕನ್ನಡ ಭಾಷೆಯಾದರೆ ಎಲ್ಲರೂ ಕೂಡ ಪಾಲ್ಗೊಳ್ಳಲು ಸಾಧ್ಯ. ಕನ್ನಡ ಭಾಷೆ ಕರುಳಿಗೂ, ಮನಸಿಗೂ, ಹೃದಯಕ್ಕೂ ಸಂಬಂಧಿಸಿದ ಭಾಷೆ. ನಾಳೆಯ ಬಗ್ಗೆ ಕನಸಿದ್ದರೆ ಮಾತ್ರ ಕನ್ನಡ ಉಳಿಸಲು ಸಾಧ್ಯ ಎಂದು ತಿಳಿಸಿದರು.

ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಸುಬ್ರಮಣ್ಯ ಮಾತನಾಡಿ, “ ಕನ್ನಡ ಭಾಷೆಗೆ ಸುಮಾರು 2000 ವರ್ಷಗಳ ಇತಿಹಾಸವಿದೆ. ಇಡೀ ಭಾರತದ ಎಲ್ಲಾ ರಾಜ್ಯಗಳು ಬೇರೆ ಬೇರೆ ಸಂಸ್ಕೃತಿಯನ್ನು ಹೊಂದಿದ್ದರೆ, ಅವೆಲ್ಲ ಸಂಸ್ಕೃತಿಯನ್ನು ಹೊಂದಿರುವ ರಾಜ್ಯ ನಮ್ಮ ಕರ್ನಾಟಕ. ಬೇರೆ ಯಾರೇ ಬಂದರೂ ನಮ್ಮ ನೆಲ ಅವರನ್ನು ನಮ್ಮವರು ಎಂದು ಅಪ್ಪಿ ಒಪ್ಪಿಕೊಳ್ಳುವ ಸಂಸ್ಕೃತಿ ನಮ್ಮ ನಾಡಿನದ್ದಾಗಿದೆ. ಅಂತಹ ಸಂಸ್ಕೃತಿಯನ್ನು ಹೊಂದಿರುವ ನಾವೇ ಪುಣ್ಯವಂತರು” ಎಂದರು.

ಇದನ್ನೂ ಓದಿ: ಅಬಾಕಸ್ ಸ್ಪರ್ಧೆಯಲ್ಲಿ MSV ಶಾಲೆಯ ಮಕ್ಕಳ ಸಾಧನೆ: ಆಡಳಿತ ಮಂಡಳಿಯಿಂದ ಅಭಿನಂದನೆ

ಕಾರ್ಯಕ್ರಮದಲ್ಲಿ ಮಕ್ಕಳು ಪ್ರಸ್ತುತಪಡಿಸಿದ, ಕರ್ನಾಟಕದ ಸಂಸ್ಕೃತಿಯನ್ನು ಬಿಂಬಿಸುವ ನೃತ್ಯ ಪೋಷಕರ ಮನಸೂರೆಗೊಂಡಿತು.

ಜನಪದ ಗೀತೆಗಳ ಮೂಲಕ ನಾಡಿನ ಇತಿಹಾಸ, ದೇವಾಲಯ, ಶಿಲ್ಪಕಲೆಗಳು, ನೃತ್ಯಗಳ ವಿವಿಧ ಪ್ರಾಕಾರಗಳನ್ನು ನೃತ್ಯದ ಮೂಲಕ ತಿಳಿಸಿಕೊಟ್ಟರು.

ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ “ಹಳ್ಳಿಯ ಸೊಗಡು” – ಪರಿಕಲ್ಪನೆಯಲ್ಲಿ ಹಳ್ಳಿಯ ಪರಿಸರ, ಆಹಾರ ಧಾನ್ಯಗಳು, ಸಸಿಗಳು, ಹಣ್ಣು ಹಂಪಲುಗಳ ಪ್ರದರ್ಶನ ಈ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗನ್ನು ನೀಡಿತು.

ಹಳ್ಳಿಯಲ್ಲಿ ರೈತರು ಬೆಳೆಯುವ ಬೆಳೆಗಳನ್ನು ಮಕ್ಕಳಿಂದ ಪೈರು ಬೆಳೆಸಿ, ದವಸ ಧಾನ್ಯಗಳು, ತರಕಾರಿ, ಹಣ್ಣು-ಹಂಪಲುಗಳ ಪ್ರದರ್ಶನವನ್ನು ಏರ್ಪಡಿಸಿ, ಬೆಳೆ ಬೆಳೆಯುವ ವಿಧಾನ, ಅವುಗಳ ಮಾಹಿತಿಯನ್ನು ಮಕ್ಕಳು ವಿವರಿಸಿದರು.

ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರುತ್ತ, ಪರಿಸರ ಸಂರಕ್ಷಣೆಯ ಹೊಣೆ ಹೊತ್ತು “ಹಸಿರು ದೀಪಾವಳಿ” ಆಚರಿಸೋಣ ಎಂಬ ಸಂಕಲ್ಪದೊಂದಿಗೆ ರಾಜ್ಯೋತ್ಸವ ಕಾರ್ಯಕ್ರಮವು ನೆರವೇರಿತು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ರೆಮ್ಯ.ಬಿ.ವಿ., ಉಪ ಪ್ರಾಂಶುಪಾಲರಾದ ಪ್ರತಿಮಾ ಪೈ ಹಾಗೂ ಶಿಕ್ಷಕರು, ಶಾಲಾ ಸಿಬ್ಬಂದಿವರ್ಗ ಮತ್ತು ಪೋಷಕರು ಉಪಸ್ಥಿತರಿದ್ದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]