ನಾನು ವೀಲ್ ಚೇರ್, ಆಂಬ್ಯುಲೆನ್ಸ್ ನಲ್ಲಿ ಬಂದಿದ್ದೇನೆಯೇ?; ಹೆಚ್.ಡಿ.ದೇವೇಗೌಡರು ಕಿಡಿ

ರಾಮನಗರ: ತಮ್ಮ ಆರೋಗ್ಯ ಹಾಗೂ ನಿಖಿಲ್ ಅವರ ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಕಟುಕರಿಗೆ ಕಣ್ಣೀರು ಬರುವುದಿಲ್ಲ, ಹೃದಯವಿರುವ ಭಾವುಕ ಜೀವಿಗಳಿಗೆ ಮಾತ್ರ ಕಣ್ಣೀರು ಬರುತ್ತದೆ ಎಂದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ವಿರೂಪಾಕ್ಷಪುರ, ಕೊಡಂಬಹಳ್ಳಿ ಗ್ರಾಮಗಳಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದ ಅವರು; ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಾನು ಆಂಬುಲೆನ್ಸ್ ನಲ್ಲಿ ಬಂದಿಲ್ಲ

ನನ್ನ ಆರೋಗ್ಯ ಚೆನ್ನಾಗಿದೆ. ನಾನು ಆಂಬುಲೆನ್ಸ್ ನಲ್ಲಿ ಬಂದಿಲ್ಲ, ವ್ಹೀಲ್ ಚೇರ್ ಮೇಲೆ ಬಂದಿಲ್ಲ. ನಾನು ನಿಮ್ಮೆಲ್ಲರ ಆಶೀರ್ವಾದದಿಂದ ಚೆನ್ನಾಗಿದ್ದೇನೆ. ಆರೋಗ್ಯವಾಗಿದ್ದೇನೆ. ಅದನ್ನು ತೋರಿಸಲು ಇಲ್ಲಿಗೆ ಬಂದಿದ್ದೇನೆ. ನೀವೇ ನನ್ನನ್ನು ನೋಡುತ್ತಿದ್ದೀರಿ, ಹೇಗೆ ಇದ್ದೇನೆ ಎಂದು ಗಮನಿಸುತ್ತಿದ್ದೀರಿ ಅಲ್ಲವೇ? ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಕಾಂಗ್ರೆಸ್‌ ನಾಯಕರು ನನ್ನ ಹೊರಗಿನವರು ಎನ್ನುತ್ತಿದ್ದಾರೆ. ನಾನು ಅವರಿಗೆ ಹೊರಗಿನವನು ಎಂದು ಈಗ ಅನ್ನಿಸುತ್ತಿದೆ. ಆದರೆ, ನಾನು ಈ ತಾಲ್ಲೂಕಿಗೆ ಶಾಶ್ವತ ನೀರಾವರಿ ಒದಗಿಸಲು ಇಗ್ಗಳೂರು ಬ್ಯಾರೇಜ್ ಕಟ್ಟಿಸಿದಾಗ ಹಾಗೆಂದು ಅನಿಸಲಿಲ್ಲವೇ? ರಾಜಕೀಯಕ್ಕಾಗಿ ಕಾಂಗ್ರೆಸ್ ನಾಯಕರು ಜನರಿಗೆ ಬರೀ ಸುಳ್ಳನ್ನೇ ಹೇಳುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನನಗೆ ಮಂಡಿ ನೋವು, ನಿಂತುಕೊಂಡು ಮಾತಾಡೋಕೆ ಆಗಲ್ಲ. ನನಗೀಗ 92 ವರ್ಷ, ಎಸ್.ಎಂ.ಕೃಷ್ಣ ಮತ್ತು ನಾನು ಒಂದೇ ವಯಸ್ಸಿನವರು. ಆದರೆ ನಾವು ಈಗಲೂ ಕೆಲಸ ಮಾಡುತ್ತಿದ್ದೇವೆ. ದೇಹಕ್ಕೆ ವಯಸ್ಸಾಗುತ್ತದೆ, ಇಚ್ಛಾಶಕ್ತಿಗೆ ಅಲ್ಲ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಮುದ್ದೆ ಸೊಪ್ಪಿನ ಸಾಂಬಾರು ಹಾಕಿ ಅಡುಗೆ ಮಾಡಿ ಬಡಿಸಿದ ತಾಯಂದಿರು ಇಲ್ಲಿದ್ದೀರಿ. ನಿಮ್ಮನ್ನು ಎಂದಿಗೂ ಮರೆಯೋಕೆ ಸಾಧ್ಯವಿಲ್ಲ. ನಿಮ್ಮ ಪಾದಕ್ಕೆ ನಾನು ನಮಸ್ಕಾರ ಮಾಡ್ತೀನಿ. ನಾನು ಈ ತಾಲೂಕಿಗೆ ಏನೇನು ಮಾಡಿದ್ದೇನೆ, ಹೇಗೆಲ್ಲಾ ಶ್ರಮಪಟ್ಟು ಇಗ್ಗಲೂರು ಅಣೆಕಟ್ಟು ಕಟ್ಟಿದ್ದೇನೆ, ಆ ಬಗ್ಗೆ ನಾನು ಚರ್ಚೆ ಮಾಡಲ್ಲ, ಆದರೆ ಇಗ್ಗಲೂರು ಅಣೆಕಟ್ಟು ನಿಮ್ಮ ಮುಂದೆ ಇದೆ ಎಂದರು ಅವರು.

ನಿಮ್ಮ ಆಶೀರ್ವಾದ ಇದ್ದರೆ ನೂರು ವರ್ಷ ಬದುಕುತ್ತೇನೆ

ನನಗೆ ನಿಮ್ಮ ಆಶೀರ್ವಾದ ಇದೆ. ನಾನು ಶತಾಯು ಆಗುತ್ತೇನೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಬದುಕಿರುತ್ತೇನೆ ಎನ್ನುವ ಭರವಸೆ ಹೊಂದಿದ್ದೇನೆ. ದೇವರ, ನಿಮ್ಮೆಲ್ಲರ ಆಶೀರ್ವಾದ ಇದ್ದರೆ ನೂರು ವರ್ಷ ಬದುಕುತ್ತೇನೆ. ಆದರೆ, ಕಾಂಗ್ರೆಸ್ ನಾಯಕರಿಗೆ ನನ್ನ ಆರೋಗ್ಯದ ಬಗ್ಗೆಯೇ ಚಿಂತೆಯಾಗಿದೆ ಎಂದು ಮಾಜಿ ಪ್ರಧಾನಿಗಳು ಅತೀವ ನೋವು ವ್ಯಕ್ತಪಡಿಸಿದರು.

ನನ್ನ ಮೊಮ್ಮಗ ಈ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತಾನೆ. ಅವರ ತಂದೆ ಕುಮಾರಸ್ವಾಮಿ ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ನನ್ನ ಅರವತ್ತು ವರ್ಷದ ರಾಜಕಾರಣದಲ್ಲಿ ಇಂತಹ ಕೆಟ್ಟ ರಾಜಕಾರಣವನ್ನು ನಾನು ನೋಡಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು ಮಾಜಿ ಪ್ರಧಾನಿಗಳು.

ನಿಮ್ಮ ಮುಂದೆ ಎದೆ ಚಾಚಿ ಮಾತನಾಡುತ್ತಿದ್ದೇನೆ

ಇಂತಹ ಕೆಟ್ಟ ರಾಜಕಾರಣ ಮತ್ತೆ ಈ ರಾಜ್ಯದಲ್ಲಿ ಇರಬಾರದು. ನಾನು ಇದನ್ನು ಅಸೂಯೆ ದ್ವೇಷದಿಂದ ಹೇಳುತ್ತಿಲ್ಲ. ವೈಯಕ್ತಿಕವಾಗಿ ನಾನು ಯಾರ ಬಗ್ಗೆಯೂ ಮಾತಾಡಲ್ಲ ಎಂದ ಅವರು; ನಾನು ‌11ನೇ ತಾರೀಕಿನ ವರೆಗೂ ಬರುತ್ತೇನೆ. ಮೊಮ್ಮಗನ ಗೆಲ್ಲಿಸೋಕೆ ಬರುತ್ತಿಲ್ಲ. ನನಗೆ ಜೀವನದಲ್ಲಿ ಒಂದೇ ಒಂದು ಗುರಿ ಇದೆ.

ಋಣಾನುಬಂಧವೋ ಏನೋ, ಈಗ ಯಾರ ಮನೆ ಅನ್ನ ತಿನ್ನುತ್ತೇನೆಯೋ ಗೊತ್ತಿಲ್ಲ. ಅನ್ನದ ಋಣ ಯಾರ ಮನೆಗೆ ಕರೆದುಕೊಂಡು ಹೋಗುತ್ತದೊ ಗೊತ್ತಿಲ್ಲ. ಮಾಧ್ಯಮದವರು ದೇವೇಗೌಡರು ಮಾತಾಡ್ತಾರಾ ಎಂದು ಕೇಳುತ್ತಿದ್ದರು.

ದೇವೇಗೌಡ್ರು ಏನು ಇಂಟರ್ ನ್ಯಾಶನಲ್ ಅಪರಾಧಿ ಆಗಿದ್ನಾ? ಮೂರು ತಿಂಗಳು ನನ್ನ ಮನೆ ಮುಂದೆ ಇದ್ದರಲ್ಲ. ಇವತ್ತು ನಿಮ್ಮ ಮುಂದೆ ಎದೆ ಚಾಚಿ ಮಾತನಾಡುತ್ತಿದ್ದೇನೆ. ಇನ್ನೂ ನಾಲ್ಕಾರು ವರ್ಷ ನಿಮ್ಮ ಆಶೀರ್ವಾದದಿಂದ ಇರುತ್ತೇನೆ. ನನ್ನ ಕೊನೆ ಉಸಿರು ಇರೋ ತನಕ ನನ್ನ‌ ಶರೀರ ಇರೋ ತನಕ ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಆಂಬ್ಯುಲೆನ್ಸ್ ನಲ್ಲಿ ಬಂದು ಪ್ರಚಾರ ಮಾಡುತ್ತಾರೆ ಎಂದಿದ್ದ ಡಿಕೆ ಸುರೇಶ್ ಮಾತಿಗೆ ತಿರುಗೇಟು ಕೊಟ್ಟರು ದೇವೇಗೌಡರು.

ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಅನೇಕರು ನಾಯಕರು ಸಭೆಯಲ್ಲಿ ಹಾಜರಿದ್ದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]