ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಇರಲ್ಲ: ಹೆಚ್.ಡಿ.ದೇವೇಗೌಡ

ಚನ್ನಪಟ್ಟಣ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಪೂರ್ಣಗೊಳಿಸುವುದಿಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ.

ಕ್ಷೇತ್ರದ ಎಸ್.ಎಂ.ಹಳ್ಳಿಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಪ್ರಚಾರ ನಡೆಸಿದ ಮಾಜಿ ಪ್ರಧಾನಿಗಳು, ನಿಖಿಲ್ ಕುಮಾರಸ್ವಾಮಿ ಅವರನ್ನು ಬೆಂಬಲಿಸುವ ಮೂಲಕ ಪ್ರಧಾನಿ ಮೋದಿ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರನ್ನು ಬಲಪಡಿಸಿ’ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ನ ನಡತೆ ಮತ್ತು ಸಂಸ್ಕೃತಿಯನ್ನು ಕಟುವಾಗಿ ಟೀಕಿಸಿದ ಅವರು; ಜನರನ್ನು ಈ ಸರ್ಕಾರ ಸುಲಿಗೆ ಮಾಡುತ್ತಿದೆ. ಎಲ್ಲಾ ರೀತಿಯಲ್ಲಿಯೂ ಜನತೆಯನ್ನು ಶೋಷಣೆ ಮಾಡುತ್ತಿದೆ. ಇಂಥ ಸರ್ಕಾರ ಇರಬಾರದು. ಇದ್ದರೆ ಜನರಿಗೆ ಒಳ್ಳೆಯದು ಆಗುವುದಿಲ್ಲ ಎಂದು ಅವರು ಗುಡುಗಿದರು.

ಮೇಕೆದಾಟು ಮಾಡಿಯೇ ತೀರುತ್ತೇವೆ

ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಯೋಜನೆ ಕಾರ್ಯಗತ ಮಾಡಲು ಸಾಧ್ಯವಿಲ್ಲ. ನಿಖಿಲ್ ಕುಮಾರಸ್ವಾಮಿ ಅವರು ಗೆದ್ದರೆ ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲೂ ಹೋರಾಟ ನಡೆಸಿ ಮೇಕೆದಾಟು ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ದೇವೇಗೌಡರು ಭರವಸೆ ನೀಡಿದರು.

ಐ.ಎನ್.ಡಿ.ಐ.ಎ. ಮೈತ್ರಿಕೂಟವನ್ನು ಟೀಕಿಸಿದ ದೇವೇಗೌಡರು, “ಅವರ ಮೈತ್ರಿಕೂಟದಲ್ಲಿ ಪ್ರಧಾನಿಯಾಗಬಲ್ಲ ಯಾವುದೇ ನಾಯಕ ಇದ್ದಾರೆಯೇ? ಸ್ಟಾಲಿನ್ ಅಥವಾ ಮಮತಾ ಬ್ಯಾನರ್ಜಿ ಪ್ರಧಾನಿಯಾಗಬಹುದೇ? ಎಂದು ಟಾಂಗ್ ನೀಡಿದರು.

ಅಲ್ಲದೆ, ಐದು ಗ್ಯಾರಂಟಿಳನ್ನು ಪ್ರಶ್ನಿಸಿದ ಮಾಜಿ ಪ್ರಧಾನಿಗಳು, ಮಾಡುವ ಕೆಲಸವನ್ನು ಅಚ್ಚುಕಟ್ಟಿನಿಂದ ಮಾಡಬೇಕು. ಜನರ ನಿರೀಕ್ಷೆ ತಲುಪುವಲ್ಲಿ ಇವು ವಿಫಲವಾಗಿವೆ. ಇವುಗಳನ್ನು ಬಹಳ ಕಾಲ ನಿಭಾಯಿಸಲು ಸರಕಾರದಿಂದ ಆಗುವುದಿಲ್ಲ ಎಂದರು.

ಅಗ್ಗದ ಭರವಸೆಗಳನ್ನು ಕೊಟ್ಟು ಜನರ ಭಾವನೆಗಳ ಜತೆ ಚೆಲ್ಲಾಟ ಆಡುವುದು ಸರಿಯಲ್ಲ. ಆದರೆ, ಸಾಮಾಜಿಕವಾಗಿ, ಆರ್ಥಿಕವಾಗಿ ದುರ್ಬಲ ಜನರನ್ನು ಬಲಪಡಿಸಬೇಕು. ನಾನು ಕಾಡುಗೊಲ್ಲ ಮತ್ತು ಬೆಸ್ತ ಸಮುದಾಯಗಳನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸುವ ಖಚಿತ ಪ್ರಯತ್ನ ಮಾಡುತ್ತೇನೆ. ಈಗಾಗಲೇ ಕಾಡುಗೊಲ್ಲ ಸಮುದಾಯವನ್ನು ಈ ಪ್ರವರ್ಗಕ್ಕೆ ಸೇರಿಸಲು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಅವರು ಹೇಳಿದರು.

ಸತತ ಐದನೇ ದಿನ ಪ್ರಚಾರ

ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಸತತ ಐದನೇ ದಿನ ಪ್ರಚಾರ ನಡೆಸಿದ ಮಾಜಿ ಪ್ರಧಾನಿಗಳು, ಶನಿವಾರ ಎಸ್ ಎಂ ಹಳ್ಳಿ, ಮಳೂರು ಪಟ್ಟಣ, ಚೆಕ್ಕರೆ ಹಾಗೂ ಮತ್ತಿಕೆರೆ ಭಾಗಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.

1957ರಲ್ಲಿ ಚನ್ನಪಟ್ಟಣ ರಾಜಕೀಯದಲ್ಲಿ ತಮ್ಮ ಆರಂಭಿಕ ಹೆಜ್ಜೆಗಳನ್ನು ನೆನಪಿಸಿಕೊಂಡ ಅವರು, “ಕಾಂಗ್ರೆಸ್ ವಿರುದ್ಧ ಸ್ಪರ್ಧಿಸಲು ನಾನು ಆಗ ವರದೇಗೌಡರನ್ನು ಸಂಪರ್ಕಿಸಿದ್ದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ; ದೇವೇಗೌಡ ಅವರನ್ನು ಬಡವರ ಬಂಧು ಮತ್ತು ರೈತ ಬಂಧು ಎಂದು ಶ್ಲಾಘಿಸಿದರು.

ಕರ್ನಾಟಕದಾದ್ಯಂತ ನಿರ್ಣಾಯಕ ಯೋಜನೆಗಳನ್ನು ಮುನ್ನಡೆಸುವಲ್ಲಿ ಗೌಡರ ಪಾತ್ರವನ್ನು ಅವರು ಕೊಂಡಾಡಿದರು. ಸ್ಥಳೀಯ ನೀರಾವರಿ ಯೋಜನೆ, ಅದರಲ್ಲಿಯೂ ಸತ್ತೇಗಾಲ ಯೋಜನೆಗೆ ಒತ್ತು ನೀಡಿದರು. ಈ ಪ್ರಯತ್ನದಲ್ಲಿ ಕುಮಾರಸ್ವಾಮಿ ಅವರ ದೂರದೃಷ್ಟಿಯನ್ನು ನಾವು ಸ್ಮರಿಸಲೇಬೇಕು ಎಂದರು.

ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹಾಗೂ ಬಿಜೆಪಿ ಮತ್ತು ಜೆಡಿಎಸ್ ನ ಹಿರಿಯ ಮುಖಂಡರು ಭಾಗವಹಿಸಿದ್ದರು.

ರಾಜಕೀಯ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್ ಟ್ರೈಲರ್ ಇಲ್ಲಿದೆ ನೋಡಿ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ನಟನೆಯ ‘ ದಿ ಡೆವಿಲ್’ (The Devil) ಸಿನಿಮಾ ಇದೇ ತಿಂಗಳ 11ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.

[ccc_my_favorite_select_button post_id="117049"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!