ಭ್ರಷ್ಟಾಚಾರ ಆರೋಪ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು..!

ಮೈಸೂರು; ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು 2140 ರೂಪಾಯಿಗಳಿಗೆ ಖರೀದಿ ಮಾಡಿದ್ದಾರೆ. ಇದಕ್ಕೆ ನರೇಂದ್ರ ಮೋದಿ ಏನು ಹೇಳುತ್ತಾರೆ? ಭ್ರಷ್ಟಾಚಾರ ಮಾ ಡಿರುವುದು ಅವರ ಸರ್ಕಾರ ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ. ಭ್ರಷ್ಟಾಚಾರ ಮಾಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ಕಾಂಗ್ರೆಸ್ ಪಕ್ಷ ಹಗಲು ದರೋಡೆ ಮಾಡುತ್ತಿದೆ. ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ ಎಂದಿರುವ ಬಗ್ಗೆ ಮಾಧ್ಯಮದವರಿಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ

ನರೇಂದ್ರ ಮೋದಿ ಅವರು ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು. ಅವರು ಪ್ರಧಾನ ಮಂತ್ರಿ ಸ್ಥಾನ ನೀಡಲು ಸಿದ್ಧರಿದ್ದಾರೆಯೇ ? ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದರು.

ಉಪಚುನಾವಣೆ: ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಗೆಲ್ಲಲಿದೆ

ಇಂದು ಮತದಾನ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಜನಸ್ಪಂದನೆ ನೋಡಿದರೆ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಬಂಡೀಪುರದಲ್ಲಿ ರಾತ್ರಿ ಸಂಚಾರ ಪ್ರಾರಂಭಿಸುವ ಬಗ್ಗೆ ಚರ್ಚೆ;ಪ್ರಸ್ತಾವನೆ ಇಲ್ಲ

ಬಂಡೀಪುರದಲ್ಲಿ ರಾತ್ರಿ ಸಂಚಾರ ಪುನ: ಪ್ರಾರಂಭಿಸುವ ಬಗ್ಗೆ ಚರ್ಚೆಯಾಗಿಲ್ಲ. ಸರ್ಕಾರದ ಮುಂದೆ ಈ ಕುರಿತ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಬಗ್ಗೆ ತಿಳಿಸಿರುವುದಾಗಿ ಸುದ್ದಿಗಾರರು ತಿಳಿಸಿದಾಗ ಈ ಬಗ್ಗೆ ಅವರನ್ನೇ ಕೇಳಿ. ನನಗೆ ತಿಳಿದ ಮಟ್ಟಿಗೆ ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ ಎಂದರು.

ಸಚಿವ ಸಂಪುಟಕ್ಕೆ ನಾಗೇಂದ್ರ

ಮಾಜಿ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಪುನಃ ಸೇರ್ಪಡೆಗೊಳ್ಳಿಸಲಾಗುವುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ನಿನ್ನೆ ಕೇಳಿದ್ದಾರೆ. ಚುನಾವಣೆ ಮುಗಿದ ಮೇಲೆ ಪರಿಶೀಲನೆ ಮಾಡೋಣ ಎಂದು ಹೇಳಿದ್ದೇನೆ ಎಂದರು.

ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯನವರನ್ನು ಗುರಿಯಾಗಿಸಿ ಪ್ರಧಾನಿ ಟೀಕೆ

ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರ ಸಭೆಗಳಲ್ಲಿ ಕರ್ನಾಟಕವನ್ನು ಗುರಿಯಾಗಿಸಿಕೊಂಡು ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕರ್ನಾಟಕ ದೊಡ್ಡ ರಾಜ್ಯವಾಗಿದ್ದು, ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆದಿರುವುದರಿಂದ, ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಪ್ರಧಾನಿಯವರು ಗುರಿಯಾಗಿಸಿ ಟೀಕೆ ಮಾಡುತ್ತಿದ್ದಾರೆ ಎಂದರು.

ಸುಳ್ಳು ಆರೋಪಗಳ ಮೇಲೆ ಇಡಿ ತನಿಖೆ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಯಿಸಿ, ಇಡಿಯವರು ಕಾನೂನು ಪ್ರಕಾರ ಮಾಡುವ ತನಿಖೆ ನಡೆಸಲಿ , ಅದಕ್ಕೆ ಯಾವುದೇ ರೀತಿಯ ಪ್ರತಿರೋಧವನ್ನು ನಾವು ಒಡ್ಡುವುದಿಲ್ಲ. ಇಡಿ ತನಿಖೆ ನಿಷ್ಪಪಕ್ಷಪಾತವಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಸುಳ್ಳು ಆರೋಪಗಳ ಮೇಲೆ ತನಿಖೆ ನಡೆಯುತ್ತಿದೆ ಎಂಬುದಷ್ಟೇ ಹೇಳಬಲ್ಲೇ ಎಂದರು.

ಸಿದ್ದರಾಮಯ್ಯನ ಸೊಕ್ಕು ಮುರಿಯುತ್ತೇವೆ’ ಎಂದಿರುವುದು ಸರಿಯೇ?

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಬಗ್ಗೆ ಸಚಿವ ಜಮೀರ್ ಅಹ್ಮದ್ ಅವರ ಹೇಳಿಕೆಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಮಾಜಿ ಪ್ರಧಾನಿ ದೇವೇಗೌಡರು ‘ಸಿದ್ದರಾಮಯ್ಯನ ಸೊಕ್ಕು ಮುರಿಯುತ್ತೇವೆ’ ಎಂದಿರುವುದು ಎಷ್ಟರ ಮಟ್ಟಿಗೆ ಸರಿ ? ಓರ್ವ ಮುಖ್ಯಮಂತ್ರಿಗೆ ಈ ರೀತಿ ಹೇಳುವುದು ಸರಿಯೇ ಎಂದು ಪ್ರಶ್ನಿಸಿ, ಜಮೀರ್ ಅಹ್ಮದ್ ಹಾಗೂ ಕುಮಾರಸ್ವಾಮಿಯವರು ಒಂದು ಕಾಲದಲ್ಲಿ ಆಪ್ತರಾಗಿದ್ದರು. ಆದರೆ ಪ್ರಸ್ತುತ ಅವರ ನಡುವಿನ ಸಂಬಂಧ ಹೇಗಿದೆ ಎಂಬ ಬಗ್ಗೆ ನನಗೆ ತಿಳಿದಿಲ್ಲ ಎಂದರು.

ಬಿಜೆಪಿಗೆ ಕೋಮುಗಳ ನಡುವೆ ಬೆಂಕಿ ಹಚ್ಚುವುದೇ ಕೆಲಸ

ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಬಗ್ಗೆ ಹಾಗೂ ಈ ಬಗ್ಗೆ ಬಿಜೆಪಿ ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಗಳಲ್ಲಿ ಮೀಸಲಾತಿ ನೀಡಿರುವಂತೆ ಮುಸ್ಲಿಮರಿಗೂ ಮೀಸಲಾತಿ ನೀಡಿ ಎಂದು ಬೇಡಿಕೆಯಿಟ್ಟಿದ್ದಾರೆ. ಆದರೆ ಈ ಬಗ್ಗೆ ಯಾವುದೇ ತೀರ್ಮಾನ ಸರ್ಕಾರ ತೆಗೆದುಕೊಂಡಿಲ್ಲ.

ಬಿಜೆಪಿಯವರಿಗೆ ಕೋಮುವಾದವನ್ನು ಸೃಷ್ಟಿಸುವುದೇ ಕಾಯಕವಾಗಿದೆ. ಕೋಮುಗಳ ನಡುವೆ ಬೆಂಕಿ ಹಚ್ಚುವ ಕೆಲಸದಲ್ಲಿ ಅವರು ನಿರತರಾಗಿದ್ದಾರೆ. ಬಿಜೆಪಿಯವರೆಂದೂ ಸಮಾಜದಲ್ಲಿ ಶಾಂತಿ, ಸೋದರತ್ವ ನೆಲೆಸಬೇಕೆಂದು ಬಯಸಿದವರೇ ಅಲ್ಲ ಎಂದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!