ನ.14 ರಿಂದ 17 ಕೃಷಿ ಮೇಳ: ನೂತನ ತಳಿಗಳ ಬಿಡುಗಡೆ

ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವತಿಯಿಂದ ನ.14 ರಿಂದ 17 ರವರೆಗೆ ಹವಾಮಾನ ಚತುರ ಡಿಜಿಟಲ್ ಕೃಷಿ ಎಂಬ ಘೋಷವಾಕ್ಯದೊಂದಿಗೆ ನಾಲ್ಕು ದಿನಗಳ ಕಾಲ ಜಿಕೆವಿಕೆ ಆವರಣದಲ್ಲಿ ಕೃಷಿಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್ ವಿ ಸುರೇಶ ಅವರು ತಿಳಿಸಿದರು.

ಜಿಕೆವಿಕೆ ಅವಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ , ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷಿ ಸಮಾಜ ಮತ್ತು ಕರ್ನಾಟಕ ಹಾಲು ಮಹಾಮಂಡಳಿಗಳ ಸಂಯುಕ್ತ ಆಶ್ರಯದಲ್ಲಿ ಕೃಷಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರತಿ ವರ್ಷ ನೂತನ ತಳಿಗಳ ಅಭಿವೃದ್ಧಿ, ತಂತ್ರಜ್ಞಾನ ಹಾಗೂ ಆವಿಷ್ಕಾರಗಳೊಂದಿಗೆ ಕೃಷಿ ಮೇಳವನ್ನು ಆಯೋಜಿಸಿಕೊಂಡು ಬರಲಾಗುತ್ತಿದ್ದು, ಅದೇ ರೀತಿ ಈ ಬಾರಿಯೂ ಸಹ ನಾಲ್ಕು ನೂತನ ತಳಿಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮುಸುಕಿನ ಜೋಳ ಸಂಕರಣ ಎಂ.ಎ.ಎಚ್ 15-84, ಹಲಸಂದೆ ಕೆಬಿಸಿ-12, ಸೂರ್ಯ ಕಾಂತಿ ಕೆ.ಬಿ.ಎಸ್.ಎಚ್-90 ಹಾಗೂ ಬಾಜ್ರ ನೇಪಿಯರ್ ಪಿ.ಬಿ.ಎನ್-242 ತಳಿಗಳನ್ನು ಅಭಿವೃದ್ಧಿಪಡಿಸಿದ್ದು, ಕೃಷಿಮೇಳದಲ್ಲಿ ಬಿಡುಗಡೆಮಾಡಲಾಗುವುದು ಎಂದರು.

ಡಿಜಿಟಲ್ ಕೃಷಿ ತಂತ್ರಜ್ಞಾನವನ್ನು ಬಳಸಿಕೊಂಡು ಕೃಷಿ ಚಟುವಟಿಕೆಗಳನ್ನು ಸರಳಗೊಳಿಸಲು ಒತ್ತು ನೀಡಲಾಗಿದೆ. ಮಣ್ಣು ಮತ್ತು ಬೆಳೆಗಳ ಆರೋಗ್ಯ ಪರಿವೀಕ್ಷಣೆಗೆ ಮಲ್ಟಿಸ್ಪೆಕ್ಟ್ರಲ್ ಡ್ರೋನ್, ಕೃಷಿ ಡ್ರೋನ್, ರೋಬೋಟಿಕ್ ಕೃಷಿ ಯಂತ್ರ, ಹಣ್ಣಿನ ವರ್ಗೀಕರಣ ಯಂತ್ರ, ಸ್ವಯಂಚಾಲಿತ ರಸಗೊಬ್ಬರ ಹರಡುವ ಯಂತ್ರ, ಆಳ ನಿಯಂತ್ರಕ ರೋಟವೇಟರ್, ಸ್ವಯಂಚಾಲಿತ ಬೂಮ್ ಸ್ಟೇಯರ್, ಸೌರಶಕ್ತಿ ಚಾಲಿತ ಬರ್ಡ್ ಸ್ಟೇರರ್ಗಳು ಕೃಷಿ ಮೇಳದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಕೃಷಿಮೇಳದಲ್ಲಿ ಸಮಗ್ರ ಬೇಸಾಯ ಪದ್ಧತಿ, ಖುಷಿ ಬೇಸಾಯ, ನೂತನ ತಳಿಗಳ ಪ್ರಾತಕ್ಷಿಕೆ, ರೇಷ್ಮೆ ಕೃಷಿ, ತೋಟಗಾರಿಕೆ, ಸಿರಿಧಾನ್ಯ, ಜಲಾನಯನ ನಿರ್ವಹಣೆ, ಸಾವಯವ ಕೃಷಿ. ಮಣ್ಣು ರಹಿತ ಕೃಷಿ ಪದ್ಧತಿ ಹೀಗೆ ಹಲವು ಪ್ರಾತಕ್ಷ್ಮತೆಗಳ ಮೂಲಕ ರೈತರಿಗೆ ಕೃಷಿಯ ಬಗ್ಗೆ ತಿಳಿಸಿಕೊಡಲಾಗುವುದು ಎಂದರು.

ಪ್ರತಿಬಾರಿಯು ಕೃಷಿ ಮೇಳದಲ್ಲಿ ಉತ್ತಮ ಕೃಷಿ ಸಾಧಕರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಬಾರಿ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ ಯುವ ರೈತ ಹಾಗೂ ಯುವ ರೈತ ಮಹಿಳೆಯರಿಗೆ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ಕೃಷಿಮೇಳದಲ್ಲಿ ಸುಮಾರು 700 ಮಳಿಗೆಗಳನ್ನು ತೆರೆಯಲಿದ್ದು, ಇಲ್ಲಿ ನೂತನ ತಂತ್ರ ಜ್ಞಾನ, ಕೃಷಿ ಸಮಸ್ಯೆಗಳಿಗೆ ತಜ್ಞರಿಂದ ವೈಜ್ಞಾನಿಕ ಸಲಹೆ, ಪರಿಹಾರ, ಪ್ರಾತಕ್ಷ್ಮತೆ ಇರಲಿದ್ದು. ಕೃಷಿ ಮೇಳಕ್ಕೆ ಆಗಮಿಸುವ ರೈತರು ಹಾಗೂ ಸಾರ್ವಜನಿಕರಾಗಿ ಜಿಕೆವಿಕೆಯ ಮಹಾದ್ವಾರದಿಂದ ಕೃಷಿಮೇಳದ ಸಭಾಂಗಣ ತಲುಪಲು ಉಚಿತ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ.

ಪ್ರತ್ಯೇಕ ವಾಹನ ನಿಲುಗಡೆ, ಉಚಿತ ಪ್ರವೇಶ, ರಿಯಾಯಿತಿ ದರದಲ್ಲಿ ಮುದ್ದೆ ಊಟದ ವ್ಯವಸ್ಥೆಯನ್ನು ಕಲ್ಲಿಸಲಾಗಿದ್ದು, ರೈತರುಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶಕರಾದ ಡಾ.ವೈ.ಎನ್.ಶಿವಲಿಂಗಯ್ಯ, ಸಂಶೋಧನಾ ನಿರ್ದೇಶಕರಾದ ಎಚ್.ಎಸ್.ಶಿವರಾಮು ಉಪಸ್ಥಿತರಿದ್ದರು. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!